Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Crime

ಮದುವೆಯಾಗಬೇಕೆಂದು ಹಠಕ್ಕೆ ಬಿದ್ದು ಪ್ರಾಣ ಬಿಟ್ಟ ಯುವಕ

Public TV
Last updated: October 9, 2021 10:08 pm
Public TV
Share
2 Min Read
wedding
SHARE

– ಹೆಣ್ಣು ಸಿಗುತ್ತಿಲ್ಲ ಎಂದು ಖಿನ್ನತೆಗೆ ಒಳಗಾಗಿದ್ದ

ಹೈದರಾಬಾದ್: ತನ್ನ ಸ್ನೇಹಿತರು ಹಾಗೂ ಜೊತೆಗೆ ಇದ್ದವರಿಗೆಲ್ಲ ಮದುವೆಯಾಗಿ ಮಕ್ಕಳಾಗಿದೆ. ನನಗೆ ಯಾಕೆ ಇನ್ನೂ ಹೆಣ್ಣು ಸಿಗುತ್ತಿಲ್ಲ ಎಂದು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‍ನಲ್ಲಿ ನಡೆದಿದೆ.

ಸೈಯದ್ ಅಮ್ಜದ್( 30) ಮೃತ ಯುವಕ. ಈತ ಹೈದರಾಬಾದ್ ಫಲಕ್ನುಮಾದ ಸಂಜಯ್ ಗಾಂಧಿ ನಗರದ ನಿವಾಸಿಯಾಗಿದ್ದಾನೆ. ಸ್ನೇಹಿತರಿಗೆಲ್ಲ ಮದುವೆಯಾಗಿದೆ, ಆದರೆ ನನಗೆ ಹೆಣ್ಣು ಸಿಗುತ್ತಿಲ್ಲ ಎಂದು ಮನನೊಂದು ಈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದನ್ನೂ ಓದಿ:   ಚಲಿಸುವ ರೈಲಿನಲ್ಲಿ ಸಾಮೂಹಿಕ ಅತ್ಯಾಚಾರ- ನಾಲ್ವರ ಬಂಧನ

love hand wedding valentine day together holding hand 38810 3580 medium

ಸೈಯದ್ ಅಮ್ಜದ್ ಸ್ವಂತ ಟೈಲರ್ ಶಾಪ್ ಇಟ್ಟುಕೊಂಡು ಜೀವನ ನಡೆಸುತ್ತಿದ್ದ. ಕಳೆದ ಕೆಲವರ್ಷಗಳಿಂದ ಈತನಿಗೆ ಮದುವೆ ಮಾಡಲು ಕುಟುಂಬಸ್ಥರು ಹುಡುಗಿಯನ್ನು ಹುಡುಕುತ್ತಿದ್ದರು. ಆದರೆ ಯಾವುದೇ ಹುಡುಗಿ ಈತನಿಗೆ ಇಷ್ಟವಾಗುತ್ತಿರಲಿಲ್ಲವಂತೆ. ಕೆಲವರು ಇವನನ್ನು ಇಷ್ಟಪಟ್ಟರೆ ಇವನು ಬೇಡವೆಂದು ಹೇಳುತ್ತಿದ್ದನಂತೆ. ಮತ್ತೆ ಕೆಲವರು ಈತನಿಗೆ ಇಷ್ಟವಾದರೆ ಅವರು ಬೇಡ  ಎನ್ನುತ್ತಿದ್ದರಂತೆ. ಹೀಗಾಗಿ ಮದುವೆ ಬಗ್ಗೆ ತುಂಬಾ ತಲೆಕೆಡಿಸಿಕೊಂಡಿದ್ದ ಸೈಯದ್ ಅಮ್ಜದ್, ಹೇಗಾದರೂ ಮಾಡಿ ಈ ವರ್ಷ ಮದುವೆಯಾಗಬೇಕೆಂದು ಹಠಕ್ಕೆ ಬಿದ್ದಿದ್ದ. ಇದನ್ನೂ ಓದಿ:  ಪ್ರಿಯಾಂಕಾ ಕಸ ಗುಡಿಸೋಕೆ ಲಾಯಕ್ಕು- ವೀಡಿಯೋ ವೈರಲ್‍ಗೆ ಯೋಗಿ ಪ್ರತಿಕ್ರಿಯೆ

marriage app

ಸ್ನೇಹಿತರು ಹಾಗೂ ಜೊತೆಗೆ ಇದ್ದವರಿಗೆಲ್ಲ ಮದುವೆಯಾಗಿ ಮಕ್ಕಳಾಗಿದೆ. ನನಗೆ ಯಾಕೆ ಇನ್ನೂ ಹೆಣ್ಣು ಸಿಗುತ್ತಿಲ್ಲ ಎಂಬ ಕೊರಗು ಸೈಯದ್ ಅಮ್ಜದ್ ತುಂಬಾ ಕಾಡುತ್ತಿತ್ತಂತೆ. ತನಗೆ ಪರಿಚಯ ಇರುವವರ ಬಳಿಯೆಲ್ಲಾ ಒಂದು ಹುಡುಗಿ ನೋಡಿ ಕೊಡುವಂತೆ ಮನವಿ ಮಾಡಿಕೊಂಡಿದ್ದ. ಮದುವೆ ವಿಚಾರದಲ್ಲಿ ತಲೆಕೆಡಿಸಿಕೊಂಡಿದ್ದ ಸೈಯದ್ ಅಮ್ಜದ್‌ಗೆ ತನ್ನ ಕೆಲಸದ ಕಡೆ ಗಮನ ಕೊಡಲು ಆಗುತ್ತಿರಲಿಲ್ಲ. ಮದುವೆ ವಿಚಾರದಿಂದಾಗಿ ಸೈಯದ್ ಖಿನ್ನತೆಗೆ ಒಳಗಾಗಿದ್ದ. ಸದಾ ಒಬ್ಬಂಟಿಯಾಗಿಯೇ ಇರುತ್ತಿದ್ದ ಈತನ ನಡವಳಿಕೆಯಿಂದ ಮನೆಯವರು ಬೇಸತ್ತು ಹೋಗಿದ್ದರು. ಗುರುವಾರ ರಾತ್ರಿ ಸೈಯದ್ ತನ್ನ ಅಂಗಡಿಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದನ್ನೂ ಓದಿ: ಏರ್ ಇಂಡಿಯಾ ನೌಕರರನ್ನು ಕನಿಷ್ಠ ಒಂದು ವರ್ಷ ಟಾಟಾ ಕಂಪನಿ ಮುಂದುವರಿಸಬೇಕು: ಕೇಂದ್ರ ಸರ್ಕಾರ

wedding1

ಬೆಳಗ್ಗೆ ಅಂಗಡಿಗೆ ಬಂದ ಅಕ್ಕಪಕ್ಕದ ಅಂಗಡಿಯವರು ಕಿಟಕಿಯಲ್ಲಿ ಇಣುಕಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಪೊಲೀಸರು ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರ ಬಳಿ ಆತನ ಮನೆಯವರೇ, ಮದುವೆಯಾಗಿಲ್ಲ ಎಂಬ ಕಾರಣಕ್ಕೆ ಸೈಯದ್ ಅಮ್ಜದ್‌ ಕೆಲದಿನಗಳಿಂದ ಖಿನ್ನತೆಗೆ ಒಳಗಾಗಿದ್ದ. ಇದಕ್ಕಾಗಿಯೇ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಹೇಳಿದ್ದಾರೆ. ಫಲಕ್ನುಮಾ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

TAGGED:bridehospitalHyderabadpolicepublictvweddingಪಬ್ಲಿಕ್ ಟಿವಿಪೊಲೀಸ್ಮದುವೆವಧುವರಹೈದರಾಬಾದ್
Share This Article
Facebook Whatsapp Whatsapp Telegram

Cinema Updates

Mangli 2
ಬರ್ತ್‌ಡೇ ಪಾರ್ಟಿಯಲ್ಲಿ ಇದ್ದಿದ್ದು ಬರೀ ಲೋಕಲ್‌ ಡ್ರಿಂಕ್ಸ್‌ ಮಾತ್ರ – ಮಂಗ್ಲಿ ಸ್ಪಷ್ಟನೆ
7 minutes ago
Singer Mangli
ಮಂಗ್ಲಿ ಬರ್ತ್‍ಡೇ ಪಾರ್ಟಿ ಮೇಲೆ ದಾಳಿ – ಮಾದಕ ವಸ್ತು ಪತ್ತೆ, ಪೊಲೀಸರಿಗೆ ಆವಾಜ್ ಹಾಕಿದ ಗಾಯಕಿ!
16 hours ago
Katrina Kaif
ಭಾರತದ ಜೊತೆ ಸಂಘರ್ಷ ನಡೆಸಿದ್ದ ಮಾಲ್ಡೀವ್ಸ್‌ ಪ್ರವಾಸೋದ್ಯಮಕ್ಕೆ ಕತ್ರಿನಾ ಕೈಫ್‌ ರಾಯಭಾರಿ
1 day ago
ZEE Kannada 2
ಹೊಸ ಅಧ್ಯಾಯಕ್ಕೆ ʻಜೀ ಕನ್ನಡʼ ಮುನ್ನುಡಿ…
2 days ago

You Might Also Like

Bellary ED Raid
Bellary

ಗಣಿ ನಾಡಲ್ಲಿ ‘ಕೈ’ ನಾಯಕರ ಬೆವರಿಳಿಸಿದ ಇಡಿ – ಮಹತ್ವದ ದಾಖಲೆಗಳು ವಶಕ್ಕೆ

Public TV
By Public TV
8 minutes ago
KRS Toll Price Hike
Districts

ಕೆಆರ್‌ಎಸ್ ವೀಕ್ಷಣೆಗೆ ಬರುವ ಪ್ರವಾಸಿಗರ ಜೇಬಿಗೆ ಕತ್ತರಿ – 500 ಮೀ. ಸೇತುವೆ ದಾಟಲು 200 ರೂ.

Public TV
By Public TV
47 minutes ago
weather
Chikkamagaluru

ಕರಾವಳಿ ಭಾಗದಲ್ಲಿ ಮಳೆಯ ಆರ್ಭಟ – ಉತ್ತರ ಕನ್ನಡದಲ್ಲಿ ಇಂದು ಶಾಲೆಗಳಿಗೆ ರಜೆ

Public TV
By Public TV
1 hour ago
Electronic City Flyover Accident copy
Bengaluru City

ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಸರಣಿ ಅಪಘಾತ – ಬೈಕ್ ಸವಾರನಿಗೆ ಗಾಯ

Public TV
By Public TV
1 hour ago
Raichuru
Districts

ಧಾರಾಕಾರ ಮಳೆಗೆ 101 ಬಾಗಿಲುಗಳುಳ್ಳ 160 ವರ್ಷಗಳ ಕಟ್ಟಡ ಕುಸಿತ

Public TV
By Public TV
9 hours ago
Rain Landslide Udupi
Districts

ಉಡುಪಿ | ಭಾರೀ ಮಳೆಗೆ ರೈಲ್ವೇ ಸೇತುವೆ ಬಳಿಯೇ ಭೂಕುಸಿತ

Public TV
By Public TV
9 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?