ಬೆಂಗಳೂರು ಉಸ್ತುವಾರಿಗಾಗಿ ಸೋಮಣ್ಣ-ಅಶೋಕ್ ಮಧ್ಯೆ ಕೋಲ್ಡ್ ವಾರ್ – ಸಿಎಂಗೆ ಸಂಕಟ

Public TV
1 Min Read
Karnataka administered 29.5 Lakh covid vaccine doses in a single day CM Bommai Thanks Modi

ಬೆಂಗಳೂರು: ಶೀಘ್ರದಲ್ಲಿಯೇ ಅಧಿಕೃತವಾಗಿ ಜಿಲ್ಲಾ ಉಸ್ತುವಾರಿಗಳ ಹಂಚಿಕೆಗೆ ಪ್ಲಾನ್ ಮಾಡಿದ್ದ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಹೊಸ ಸಂಕಷ್ಟ ಎದುರಾಗಿದೆ. ಬೆಂಗಳೂರು ನಗರದ ಜಿಲ್ಲಾ ಉಸ್ತುವಾರಿ ಆಗಲು ಸಚಿವ ವಿ. ಸೋಮಣ್ಣ ಹಾಗೂ ಆರ್. ಅಶೋಕ್ ಮಧ್ಯೆ ಪೈಪೋಟಿ ಏರ್ಪಟ್ಟಿದೆ.

somanna

ಆರ್. ಅಶೋಕ್‍ಗೆ ಜಿಲ್ಲಾ ಉಸ್ತುವಾರಿ ಆಗುವ ಅವಕಾಶ ತಪ್ಪಿಸಲು ಹಲವಾರು ತಂತ್ರಗಳು ನಡೆಯುತ್ತಿದ್ದು, ಸೋಮಣ್ಣಗೆ ಕೆಲ ಬಿಜೆಪಿ ಶಾಸಕರಿಂದಲೇ ಬೆಂಬಲ ದೊರೆಯುತ್ತಿದೆ. ಅಶೋಕ್ ಅವರಿಗೆ ಶತಾಯಗತಾಯ ಬೆಂಗಳೂರು ಉಸ್ತುವಾರಿಯನ್ನು ಕೈ ತಪ್ಪಿಸಬೇಕೆಂದು ವಿರೋಧಿ ಬಣಗಳು ಒಂದಾಗಿದ್ದು, ವಿ. ಸೋಮಣ್ಣ ಪರವಾಗಿ ಬ್ಯಾಟ್ ಬೀಸಿದ್ದಾರೆ. ಇದರಿಂದಾಗಿ ಸರ್ಕಾರದಲ್ಲಿ ಆಂತರಿಕ ಕಚ್ಚಾಟ ಭುಗಿಲೆದಿದ್ದೆ. ಸದ್ಯ ಅಶೋಕ್ ಅವರು ಒಬ್ಬಂಟಿಯಾಗಿ ಹೋರಾಡುತ್ತಿದ್ದಾರೆ. ಇದನ್ನೂ ಓದಿ: ನಾನು ಎಲ್ಲರಿಗಿಂತ ಸೀನಿಯರ್, ಅರ್ಧ ಬೆಂಗಳೂರು ಉಸ್ತುವಾರಿ ಕೊಡಲಿ: ಸೋಮಣ್ಣ

Tumakuru R Ashoka3 medium

ಹೀಗಾಗಿ ಇಬ್ಬರ ನಡುವೆ ಇರುವ ಮನಸ್ತಾಪವನ್ನು ಬಗೆಹರಿಸಲು ಬಸವರಾಜ್ ಬೊಮ್ಮಾಯಿಯವರು ಇಂದು ಚರ್ಚೆ ನಡೆಸಲಿದ್ದು, ಬೆಂಗಳೂರು ಅಷ್ಟೇ ಅಲ್ಲದೇ ಉಳಿದ ಜಿಲ್ಲೆಗಳಲ್ಲಿ ಇಂಥ ಸಂಘರ್ಷ ಆಗದಂತೆ ಗಮನ ವಹಿಸುತ್ತಿದ್ದಾರೆ. ಒಟ್ಟಾರೆ ಇವರಿಬ್ಬರ ಸಂಧಾನ ಮಾಡಿಸುವಲ್ಲಿ ಸಕ್ಸಸ್ ಆಗ್ತಾರಾ ಸಿಎಂ? ಬೆಂಗಳೂರು ಉಸ್ತುವಾರಿ ಯಾರಾಗ್ತಾರೆ? ಈ ಎಲ್ಲ ಗೊಂದಲಗಳು ಬಗೆಹರಿಯುತ್ತಾ ಅಥವಾ ಮತ್ತಷ್ಟು ಜಟಿಲ ಆಗುತ್ತಾ? ಎಂಬುವುದಕ್ಕೆ ಕಾದು ನೋಡಬೇಕಾಗಿದೆ. ಇದನ್ನೂ ಓದಿ: ಬೆಂಗಳೂರು ಉಸ್ತುವಾರಿ: ಸಿಎಂ ನಿರ್ಧಾರಕ್ಕೆ ಬದ್ಧ ಎಂದ ಸಚಿವ ಅಶೋಕ್

Share This Article
Leave a Comment

Leave a Reply

Your email address will not be published. Required fields are marked *