Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಶಿಕ್ಷಣ ಪಡೆಯದ ಜನರು ದೇಶಕ್ಕೆ ಹೊರೆ, ಉತ್ತಮ ಪ್ರಜೆಗಳಾಗಲು ಸಾಧ್ಯವಿಲ್ಲ: ಅಮಿತ್‌ ಶಾ

Public TV
Last updated: October 11, 2021 9:20 pm
Public TV
Share
2 Min Read
amith shah 1
SHARE

ನವದೆಹಲಿ: ಶಿಕ್ಷಣ ಪಡೆಯದ ಜನರು ದೇಶದ ಹೊರೆಯಾಗುತ್ತಾರೆ. ಅನಕ್ಷರಸ್ಥರು ಭಾರತದ ಉತ್ತಮ ಪ್ರಜೆಗಳಾಗಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.

ನರೇಂದ್ರ ಮೋದಿ ಅಧಿಕಾರ ಸ್ವೀಕರಿಸಿ 20 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಸಂಸದ್‌ ಟಿವಿಗೆ ಅಮಿತ್‌ ಶಾ ಸಂದರ್ಶನ ನೀಡಿದರು. ಈ ವೇಳೆ ಮೊದಲು ಗುಜರಾತ್ ಮುಖ್ಯಮಂತ್ರಿಯಾಗಿ ಮತ್ತು ನಂತರ ಭಾರತದ ಪ್ರಧಾನಿಯಾಗಿ ಶಾಲೆಗಳಲ್ಲಿ ದಾಖಲಾತಿಯನ್ನು ಹೆಚ್ಚಿಸಲು ಪ್ರಸ್ತುತ ಸರ್ಕಾರವು ಯಾವ ರೀತಿ ಕ್ರಮ ಕೈಗೊಂಡಿದೆ ಎಂಬುದರ ಕುರಿತು ಶಾ ಮಾತನಾಡಿದರು.

pm modi amit shah

ನೀವು ಸಾಕ್ಷರತೆಯನ್ನು ಮೌಲ್ಯಮಾಪನ ಮಾಡಿದಾಗ ಒಂದು ರಾಷ್ಟ್ರದ ಪ್ರಗತಿಗೆ ಅದರ ಕೊಡುಗೆ ಏನೆಂದು ನಿಮಗೆ ತಿಳಿಯುತ್ತದೆ. ಅನಕ್ಷರಸ್ಥ ವ್ಯಕ್ತಿ ದೇಶಕ್ಕೆ ಹೊರೆ. ಆತನಿಗೆ ಸಂವಿಧಾನ ನೀಡಿದ ಹಕ್ಕುಗಳು ತಿಳಿಯುವುದಿಲ್ಲ. ಅಥವಾ ಆತನಿಗೆ ಮಾಡಬೇಕಾದ ಕರ್ತವ್ಯಗಳು ಗೊತ್ತಿರುವುದಿಲ್ಲ. ಅಂತಹ ವ್ಯಕ್ತಿಯು ಉತ್ತಮ ಪ್ರಜೆ ಹೇಗೆ ಆಗುತ್ತಾನೆ ಎಂದು ಪ್ರಶ್ನಿಸಿದರು.

ನರೇಂದ್ರ ಮೋದಿ ಮುಖ್ಯಮಂತ್ರಿ ಅವಧಿಯ ಬಗ್ಗೆ ಪ್ರಸ್ತಾಪ ಮಾಡಿದ ಅವರು, ಆ ಸಮಯದಲ್ಲಿ ಗುಜರಾತ್‌ ಶಾಲೆಗಳಲ್ಲಿ ಡ್ರಾಪ್‌ಔಟ್‌ ಅತಿ ದೊಡ್ಡ ಸಮಸ್ಯೆಯಾಗಿತ್ತು. ಮೋದಿಯವರು ಒಂದು ಹಬ್ಬದಂತೆಯೇ ದಾಖಲಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಿದರು ಮತ್ತು ಅದನ್ನು ಶೇ.100ಕ್ಕೆ ತೆಗೆದುಕೊಂಡು ಹೋಗುವ ನಿಟ್ಟಿನಲ್ಲಿ ಪೋಷಕರ ಸಮಿತಿಯನ್ನು ರಚಿಸಿದರು. ಒಂದು ವೇಳೆ ವಿದ್ಯಾರ್ಥಿ ಶಾಲೆಗೆ ಬರದಿದ್ದರೆ ಆ ವಿದ್ಯಾರ್ಥಿಯ ಬಗ್ಗೆ ಯೋಚಿಸಲಾಯಿತು. ಶಿಕ್ಷಕರಿಗೂ ಜವಾಬ್ದಾರಿಯನ್ನು ನೀಡಲಾಯಿತು. ಈ ಎಲ್ಲ ಕ್ರಮಗಳಿಂದ ಡ್ರಾಪ್ಔಟ್ ದರವು ಶೇ.37% ರಿಂದ ಈಗ ಶೇ.1ಕ್ಕಿಂತಲೂ ಕಡಿಮೆಯಾಗಿದೆ ಎಂದರು.

ಮೋದಿ ಒಬ್ಬ ನಿರಂಕುಶ ನಾಯಕ ಎಂಬ ಆರೋಪಗಳನ್ನು ತಿರಸ್ಕರಿಸಿದ ಅಮಿತ್‌ ಶಾ, ಪ್ರಧಾನಮಂತ್ರಿಯವರು ತಮ್ಮ ಹುದ್ದೆ ಅಥವಾ ಶ್ರೇಣಿಯನ್ನು ಲೆಕ್ಕಿಸದೇ ಯಾರೇ ನೀಡಿದ ಎಲ್ಲ ಯೋಗ್ಯ ಸಲಹೆಗಳನ್ನು ಸ್ವೀಕರಿಸುತ್ತಾರೆ. ರಾಷ್ಟ್ರೀಯ ಹಿತಾಸಕ್ತಿಗೆ ಸಂಬಂಧಿಸಿದ ನಿರ್ಧಾರಗಳಿಗಾಗಿ ರಾಜಕೀಯ ಅಪಾಯಗಳನ್ನು ತೆಗೆದುಕೊಳ್ಳಲು ಮೋದಿ ಎಂದಿಗೂ ಹಿಂಜರಿಯಲಿಲ್ಲ ಎಂದು ಅವರು ಹೇಳಿದರು.

ನಾನು ಮೋದಿ ಮತ್ತು ಅವರ ಕೆಲಸದ ಶೈಲಿಯನ್ನು ಹತ್ತಿರದಿಂದ ಗಮನಿಸಿದ್ದೇನೆ. ಅವರಂತಹ ತಾಳ್ಮೆಯ ಕೇಳುಗನನ್ನು ನಾನು ನೋಡಿಲ್ಲ. ಸಮಸ್ಯೆ ಏನೇ ಇರಲಿ ಅವರು ಎಲ್ಲರ ಮಾತನ್ನು ಆಲಿಸುತ್ತಾರೆ ಮತ್ತು ಕನಿಷ್ಠ ಮಾತನಾಡುತ್ತಾರೆ. ನಂತರ ಸರಿಯಾದ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ತಿಳಿಸಿದರು. ಇದನ್ನೂ ಓದಿ: ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ – ಸಾಕ್ಷ್ಯ ನೀಡಿ ಸ್ಪಷ್ಟನೆ ನೀಡಿದ ಸುಧಾಕರ್

Modi Shah

ಪಕ್ಷದ ಬೆಂಬಲಿಗರಿಗೆ ವಿರುದ್ಧವಾಗಬಹುದು ಎಂದು ಗೊತ್ತಿದ್ದರೂ ರಾಷ್ಟ್ರ ಮತ್ತು ಜನರ ಹಿತಾಸಕ್ತಿಗಾಗಿ ಕಠಿಣ ಮತ್ತು ಅಪಾಯಕಾರಿ ನಿರ್ಧಾರಗಳನ್ನು ತೆಗೆದುಕೊಳ್ಳಲು ಮೋದಿ ಹಿಂಜರಿಯುವುದಿಲ್ಲ. ಕಪ್ಪುಹಣ ನಿಯಂತ್ರಣ, ತೆರಿಗೆ ವಂಚನೆಯ ಎಲ್ಲ ಲೋಪದೋಷಗಳ ತಡೆದು ಆರ್ಥಿಕ ಸುಧಾರಣೆ ಮಾಡುವ ವೇಳೆ ಕೆಲವು ವರ್ಷಗಳಿಂದ ನಮಗೆ ಮತ ಹಾಕಿದವರು ಸೇರಿದಂತೆ ಕೆಲವರು ತೊಂದರೆ ಅನುಭವಿಸುತ್ತಾರೆ. ಹಾಗಿದ್ದರೂ ಮೋದಿ ಇದರಿಂದ ಏನೂ ಪ್ರಯೋಜನ ಪಡೆಯುವುದಿಲ್ಲ. ಈ ಕಠಿಣ ಕ್ರಮದಿಂದ ಅಂತಿಮವಾಗಿ ದೇಶಕ್ಕೆ ಪ್ರಯೋಜನವಾಗಲಿದೆ ಎನ್ನುವುದನ್ನು ಜನರು ಅರ್ಥಮಾಡಿಕೊಂಡಿದ್ದಾರೆ ಎಂದು ಹೇಳಿದರು.

ವಿರೋಧ ಪಕ್ಷಗಳನ್ನು ತರಾಟೆಗೆ ತೆಗೆದುಕೊಂಡ ಶಾ, ನಮ್ಮ ವೈಫಲ್ಯಗಳನ್ನು ಜನರಿಗೆ ಬಹಿರಂಗಪಡಿಸಿ ಆದರೆ ರಾಜಕೀಯ ಗುಣಮಟ್ಟವನ್ನು ಕಡಿಮೆ ಮಾಡಿ ವೈಯಕ್ತಿಕ ದಾಳಿಯನ್ನು ನಡೆಸುವುದು ಸರಿಯಲ್ಲ ಎಂದರು.

TAGGED:Amit Shahbjpindiakannada newsnarendra modiಅನಕ್ಷರತೆಅಮಿತ್ ಶಾನರೇಂದ್ರ ಮೋದಿಬಿಜೆಪಿಭಾರತ
Share This Article
Facebook Whatsapp Whatsapp Telegram

Cinema Updates

pawan kalyan sharmista panoli
ಪುಣೆ ಕಾನೂನು ವಿದ್ಯಾರ್ಥಿನಿ ಪರ ನಿಂತ ಪವನ್‌ ಕಲ್ಯಾಣ್‌ – ದೀದಿ ಹೇಳಿಕೆಗೆ ಖಂಡನೆ
1 hour ago
Mukhyamantri Chandru
ಶಿವಣ್ಣನ ರೀತಿಯಲ್ಲಿ ಇನ್ಯಾರು ಕಮಲ್‌ ಪರವಾಗಿದ್ದಾರೋ ಅವರೆಲ್ಲ ನಾಡದ್ರೋಹಿಗಳು: ಮುಖ್ಯಮಂತ್ರಿ ಚಂದ್ರು
2 hours ago
Kamal Haasan Sudha rani
ಕರ್ನಾಟಕ, ಕನ್ನಡ ಭಾಷೆ ಬಗ್ಗೆ ಯಾರೇ ತಪ್ಪಾಗಿ ಮಾತಾಡಿದ್ರೂ ಒಪ್ಪಲ್ಲ: ಸುಧಾರಾಣಿ
3 hours ago
Rachita Ram
ಫೈನಲ್‌ಗೆ ಲಗ್ಗೆಯಿಟ್ಟ ಆರ್‌ಸಿಬಿ – `ಈ ಸಲ ಕಪ್‌ ನಮ್ದೇʼ ಎಂದ ಡಿಂಪಲ್ ಕ್ವೀನ್
4 hours ago

You Might Also Like

rinku singh priya saroj
Cricket

ರಾಜಕಾರಣಿ ಜೊತೆ ಎಂಗೇಜ್‌ಮೆಂಟ್‌ ಆಗ್ತಿದ್ದಾರೆ ರಿಂಕು ಸಿಂಗ್‌ – ಕ್ರಿಕೆಟಿಗನ ಕೈ ಹಿಡಿಯೋ ಚೆಲುವೆ ಯಾರು?

Public TV
By Public TV
14 minutes ago
Canadian Man Claims His Ex Girlfriend Stole CA5 Million Lottery Winnings Ran Away With Lover
Crime

ಗೆಳೆಯ ಲಾಟರಿಯಲ್ಲಿ ಗೆದ್ದ 30 ಕೋಟಿ ರೂ. ಕದ್ದು ಪ್ರಿಯಕರನೊಂದಿಗೆ ಪರಾರಿಯಾದ ಕೇಡಿ ಲೇಡಿ!

Public TV
By Public TV
16 minutes ago
Raichuru Hatti Gold Mine Blast
Crime

ಹಟ್ಟಿ ಚಿನ್ನದಗಣಿ | 2,800 ಅಡಿ ಆಳದಲ್ಲಿ ಏರ್ ಬ್ಲಾಸ್ಟ್ – ಕಾರ್ಮಿಕ ದುರ್ಮರಣ

Public TV
By Public TV
53 minutes ago
nigeria flood
Latest

ರೌದ್ರರೂಪ ತಾಳಿದ ನೈಜೀರಿಯಾ ನದಿಗಳು – ಜಲಪ್ರಳಯಕ್ಕೆ 150ಕ್ಕೂ ಅಧಿಕ ಮಂದಿ ಬಲಿ

Public TV
By Public TV
1 hour ago
Mandya 4
Districts

ಮಂಡ್ಯದಲ್ಲಿ ಬಾಲಕಿ ಸಾವು ಪ್ರಕರಣ – ಭುಗಿಲೆದ್ದ ಆಕ್ರೋಶ, ತನಿಖೆಗೆ ವೈದ್ಯರ ತಂಡ ರಚನೆ

Public TV
By Public TV
1 hour ago
Vidhyapeeta
Bengaluru City

ಪಬ್ಲಿಕ್ ಟಿವಿ ವಿದ್ಯಾಪೀಠ – ಮೊದಲ ದಿನವೇ ಬನ್ನಿ ಲ್ಯಾಪ್‌ಟಾಪ್‌ ಗೆಲ್ಲಿ!

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?