Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ರಾಜ್ಯದಲ್ಲಿ ಮುಂದುವರಿದ ವರುಣಾರ್ಭಟ – ದಾವಣಗೆರೆಯಲ್ಲಿ 20ಕ್ಕೂ ಹೆಚ್ಚು ಮನೆಗಳು ಜಲಾವೃತ

Public TV
Last updated: October 13, 2021 7:27 am
Public TV
Share
3 Min Read
DVG RAIN 2
SHARE

– ಹಲವು ಜಿಲ್ಲೆಗಳಲ್ಲಿ ಬೆಳೆ ಹಾನಿ ಭೀತಿ

ಬೆಂಗಳೂರು: ರಾಜ್ಯದಲ್ಲಿ ಮಳೆಯಬ್ಬರ ಮುಂದುವರಿದ್ದು, ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ. ಇಂದು ಕೂಡ ಮಳೆಯಾಗುವ ಸಾಧ್ಯತೆ ಇದೆ.

DVG RAIN 1

ಜಿಲ್ಲೆಗಳಲ್ಲಿ ಸುರಿದ ಭಾರೀ ಮಳೆಗೆ ಅವಾಂತರಗಳು ಕೂಡ ಮುಂದುವರಿದಿದೆ. ಮಳೆರಾಯನ ಅಬ್ಬರಕ್ಕೆ ದಾವಣಗೆರೆಯ ಜಿಲ್ಲೆಯ ರೈತರು ತತ್ತರಿಸಿದ್ದಾರೆ. ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯತ್ತಿರುವ ಭಾರೀ ಮಳೆಗೆ ಹರಿಹರ ತಾಲೂಕಿನ ಬಾನುವಳ್ಳಿ, ಕಮಲಾಪುರ, ಯಲವಟ್ಟಿ ಸೇರಿದಂತೆ ಹಲವು ಕಡೆ ರೈತರ ಜಮೀನುಗಳು ಮುಳುಗಡೆಯಾಗಿದ್ದು, ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಜೊತೆಗೆ 20ಕ್ಕೂ ಹೆಚ್ಚು ಮನೆಗಳು ಹಾನಿಯಾಗಿವೆ.

CKM RAIN 2

ಹಾವೇರಿ ಜಿಲ್ಲೆಯ ಹಲವೆಡೆ ಧಾರಾಕಾರ ಮಳೆರಾಗಿದೆ. ಹಾವೇರಿ ಆಲದಕಟ್ಟಿ, ಕರ್ಜಗಿ ಹಲವೆಡೆ ಮಳೆಯಾಗುತ್ತಿದ್ದು, ರಾಣೆಬೆನ್ನೂರು ತಾಲೂಕಿನ ಮೆಡ್ಲೇರಿ ಗ್ರಾಮದಲ್ಲಿ 15ಕ್ಕೂ ಅಧಿಕ ಮನೆಗಳಿಗೆ ನೀರು ನುಗ್ಗಿದೆ. ಮನೆಯಲ್ಲಿನ ದಿನಸಿ ವಸ್ತುಗಳು, ಬಟ್ಟೆ, ಹಾಸಿಗೆ ನೀರುಪಾಲಾಗಿವೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜೋರು ಮಳೆಯಾಗಿದೆ. ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯದಲ್ಲಿ ಮಳೆ ಸುರಿದಿದೆ. 2 ಗಂಟೆಗಳ ಸತತ ಮಳೆಗೆ ಮಂಗಳೂರು ನಗರದ ತಗ್ಗು ಪ್ರದೇಶಗಳು ಜಲಾವೃತವಾಗಿತ್ತು. ಕೊಟ್ಟಾರಚೌಕಿ, ಮಾಲೆಮಾರ್, ಪಡೀಲ್, ಕುಳೂರು ಪ್ರದೇಶದ ರಸ್ತೆಯಲ್ಲಿ ಸಂಚಾರ ಕಷ್ಟವಾಗಿತ್ತು. ಹಾಗಾಗಿ ಖುದ್ದು ಮೇಯರ್ ಪ್ರೇಮಾನಂದ ಶೆಟ್ಟಿ ರಸ್ತೆಗಳಿದು ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಇದನ್ನೂ ಓದಿ: ಮನೆಯಲ್ಲಿ ಐದು ಸದಸ್ಯರಿದ್ದರೂ ಒಂದೇ ಮತ ಪಡೆದ ಬಿಜೆಪಿ ಅಭ್ಯರ್ಥಿ

GDG RAIN

ಕಳೆದೆರಡು ದಿನಗಳ ಹಿಂದೆ ಸುರಿದ ಭಾರೀ ಮಳೆ ಗದಗ ಜಿಲ್ಲೆಯಲ್ಲಿ ಸಾಕಷ್ಟು ಅವಾಂತರ ಸೃಷ್ಟಿಸಿದೆ. ಜಿಲ್ಲೆಯ ಬೆಂತೂರ ಗ್ರಾಮದಲ್ಲಿ ಶೇಂಗಾ ಬೆಳೆ ನೀರಿನಲ್ಲಿ ಮುಳುಗಡೆಯಾಗಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಇದರಿಂದಾಗಿ ರೈತರು ಕಣ್ಣೀರಿನಲ್ಲಿ ಕೈತೊಳೆಯುವಂತಾಗಿದೆ. ಹಾಸನ ಜಿಲ್ಲೆಯಾದ್ಯಂತ ಸುರಿದ ಭಾರಿ ಮಳೆಗೆ ಅರಸೀಕೆರೆ, ಅರಕಲಗೂಡ ತಾಲೂಕಿನ ಹಲವು ಗ್ರಾಮಗಳಲ್ಲಿ ತತ್ತರಿಸಿಹೋಗಿವೆ. ಅರಸೀಕೆರೆಯ ಮುರುಂಡಿ ಬಿ.ತಾಂಡ್ಯಾದಲ್ಲಿ ಹಲವು ಮನೆಗಳಿಗೆ ಮಳೆ ನೀರು ನುಗ್ಗಿದ್ದು, ಮನೆಯೊಂದು ಕುಸಿದಿದೆ. ಜೊತೆಗೆ ಹಲವು ಹಳ್ಳಿಗಳಲ್ಲಿ ಜಮೀನುಗಳು ಸಂಪೂರ್ಣ ಜಲಾವೃತವಾಗಿದ್ದು, ರಸ್ತೆಗಳು ಕೆರೆಯಂತಾಗಿವೆ.

HSN RAIN

ಅರಕಲಗೂಡು ತಾ. ಕಾಳೇನಹಳ್ಳಿ ಗ್ರಾಮದ ಸುತ್ತಮುತ್ತ ಭಾರಿ ಮಳೆಯಿಂದಾಗಿ ಕೆರೆಕೋಡಿ ಬಿದ್ದಿದೆ. ಪರಿಣಾಮ ನೂತನವಾಗಿ ಸೇತುವೆ ನಿರ್ಮಿಸುತ್ತಿರುವ ಜಾಗದಲ್ಲಿ ನೀರು ಸರಾಗವಾಗಿ ಹರಿಯದೆ ನೂರಾರು ಎಕರೆ ಅಡಿಕೆ ತೋಟಕ್ಕೆ ನೀರು ನುಗ್ಗಿದೆ. ಕಳೆದೊಂದು ವಾರದಿಂದ ತೋಟದಲ್ಲಿ ನೀರು ನಿಂತಿರುವುದರಿಂದ ಅಡಿಕೆ ಮರಗಳು ಬುಡಸಮೇತ ಬೀಳುವ ಆತಂಕ ಎದುರಾಗಿದೆ. ಮಳೆಯಿಂದಾಗಿ ಇಷ್ಟೆಲ್ಲ ಅವಾಂತರ ಸೃಷ್ಟಿಯಾದ್ರೂ ಸಹ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ರೈತರು ಅಸಹಾಯಕತೆಯಿಂದ ಕೈಕಟ್ಟಿ ಕುಳಿತುಕೊಂಡಿದ್ದಾರೆ. ಹೀಗಾಗಿ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಮಳೆಹಾನಿಗೊಳಗಾದ ತೋಟದ ಸಮೀಕ್ಷೆ ನಡೆಸಿ ರೈತರಿಗೆ ಪರಿಹಾರ ದೊರಕಿಸಿಕೊಡಬೇಕು ಎಂಬ ಕೂಗು ಕೇಳಿಬರುತ್ತಿದೆ.

HVR RAIN

ಭಾರೀ ಮಳೆಯ ನಡುವೆಯೇ ಚಿಕ್ಕಮಗಳೂರಿನಲ್ಲಿ ಕಾಫಿ ಕಟಾವು ಮಾಡುವ ಪರಿಸ್ಥಿತಿ ಎದುರಾಗಿದೆ. ಜಿಲ್ಲೆಯಲ್ಲಿ ಸುಮಾರು ಒಂದು ಲಕ್ಷ ಹೆಕ್ಟೇರ್‍ನಲ್ಲಿ ಅರೇಬಿಕಾ ಹಾಗೂ ರೋಬೋಸ್ಟಾ ಕಾಫಿಯನ್ನು ಬೆಳೆಯಲಾಗಿದೆ. ನಿರಂತರ ಮಳೆಯಿಂದಾಗಿ ಗಿಡದಲ್ಲೇ ಕಾಫಿ ಹಣ್ಣಾಗುತ್ತಿದ್ದು, ಉದುರಿ ಮಣ್ಣು ಪಾಲಾಗುತ್ತಿವೆ. ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ, ಕಾರ್‍ಬೈಲ್ ಗ್ರಾಮದ ಸುತ್ತಮುತ್ತ ಕೂಲಿ ಕಾರ್ಮಿಕರು ಮಳೆಯಲ್ಲಿ ನೆನೆದುಕೊಂಡೇ ಕಾಫಿಯನ್ನ ಕುಯ್ಯುವಂತಾಗಿದೆ. ಈಗಾಗಲೇ ಸಾಕಷ್ಟು ಕಾಫಿ ಮಣ್ಣು ಪಾಲಾಗಿದೆ. ಇದನ್ನೂ ಓದಿ: ಬಿಎಸ್‍ವೈ ಆಪ್ತರ ಬಳಿ 765 ಕೋಟಿ ಅಕ್ರಮ ಆಸ್ತಿ

MNG RAIN 1

ಮಳೆ-ಗಾಳಿಗೆ ಕಾಯಿಗಳು ಉದುರಿದ್ದು, ಅಳಿದುಳಿದ ಕಾಫಿಗೆ ಈಗ ಮತ್ತೆ ಮಳೆ ಕಾಟ ಆರಂಭವಾಗಿದೆ. ಹೀಗಾಗಿ, ಬೆಳೆಗಾರರು ಮಳೆಯಲ್ಲೇ ಕಾಫಿಯನ್ನ ಕೊಯ್ಲು ಮಾಡುವಂತಾಗಿದೆ. ಕಳೆದ ಮೂರ್ನಾಲ್ಕು ವರ್ಷದಿಂದ ಭಾರೀ ಮಳೆಯಿಂದ ಬೆಳೆ ಕಳೆದುಕೊಂಡಿದ್ದ ಬೆಳೆಗಾರರು ಈ ವರ್ಷವೂ ಬೆಳೆಯನ್ನ ಕಳೆದುಕೊಳ್ಳುವ ಆತಂಕದಿದ್ದಾರೆ. ಮಧ್ಯಮ ವರ್ಗದ ಬೆಳೆಗಾರರು ಬದುಕು ಮತ್ತಷ್ಟು ಶೋಚನಿಯವಾಗಿದೆ. ಹಾಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೂಡಲೇ ಬೆಳೆಗಾರರ ನೆರವಿಗೆ ನಿಲ್ಲಬೇಕೆಂದು ಕಾಫಿ ಬೆಳೆಗಾರರು ಆಗ್ರಹಿಸಿದ್ದಾರೆ.

MNG RAIN

ಒಟ್ಟಿನಲ್ಲಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮಳೆ ಹಿನ್ನೆಲೆ ಹಿರಿಯ ಅಧಿಕಾರಿಗಳ ಜೊತೆ ಸಿಎಂ ಬೊಮ್ಮಾಯಿ ಸಭೆ ನಡೆಸಿದ್ರು. ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳ ಜೊತೆ ಸಭೆ ಬಳಿಕ ಮಾತನಾಡಿದ ಸಿಎಂ, ಅಕ್ಟೋಬರ್ ತಿಂಗಳಲ್ಲಿ 30% ಹೆಚ್ಚುವರಿ ಮಳೆಯಾಗಿದೆ. ಮಳೆಗೆ ಈವರೆಗೆ 21 ಜನ ಸಾವನ್ನಪ್ಪಿದ್ದಾರೆ. 4.71 ಲಕ್ಷ ಹೆಕ್ಟೇರ್ ಪ್ರದೇಶದ ಬೆಳೆ ಹಾನಿಯಾಗಿದೆ. ವಿದ್ಯುತ್ ಕಂಬ, ರಸ್ತೆ, 2 ಸಾವಿರಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದ್ದು ಕೂಡಲೇ ಪರಿಹಾರ ಕೊಡಲು ಸೂಚಿಸಿದ್ದೇನೆ ಅಂತ ತಿಳಿಸಿದ್ರು.

TAGGED:bengalurukarnatakaPublic TVrainಕರ್ನಾಟಕಪಬ್ಲಿಕ್ ಟಿವಿಬೆಂಗಳೂರುಮಳೆ
Share This Article
Facebook Whatsapp Whatsapp Telegram

Cinema Updates

Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
37 minutes ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
54 minutes ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
2 hours ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
3 hours ago

You Might Also Like

r ashok
Districts

ಸಿಎಂಗೆ ಮಾನಸಿಕ ಸ್ಥಿತಿ ಸರಿ ಇಲ್ಲ: ಅಶೋಕ್

Public TV
By Public TV
32 minutes ago
01 7
Big Bulletin

ಬಿಗ್‌ ಬುಲೆಟಿನ್‌ 11 June 2025 ಭಾಗ-1

Public TV
By Public TV
53 minutes ago
CRIME
Crime

ಇಂದೋರ್| ಹಣಕ್ಕಾಗಿ ಅಜ್ಜಿಯನ್ನು ಕೊಂದು ಬೆಡ್‌ನ ಬಾಕ್ಸ್‌ನಲ್ಲಿ ಬಚ್ಚಿಟ್ಟ ಮೊಮ್ಮಗ

Public TV
By Public TV
58 minutes ago
Punjab Social Media Influencer Kamal Kaur Dead
Crime

ಪಂಜಾಬ್ | ಸೋಷಿಯಲ್ ಮೀಡಿಯಾ ಸ್ಟಾರ್ ಕಾರಿನೊಳಗೆ ಶವವಾಗಿ ಪತ್ತೆ – ಕೊಲೆ ಶಂಕೆ

Public TV
By Public TV
1 hour ago
Chinnaswamy Stampede 1
Bengaluru City

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – ಗಾಯಾಳು ಮಕ್ಕಳ ವಿವರ ಕೋರಿ ಸಿಐಡಿಗೆ ಮಕ್ಕಳ ಹಕ್ಕುಗಳ ಆಯೋಗ ನೋಟಿಸ್

Public TV
By Public TV
1 hour ago
Traffic Police 2
Crime

ತಪಾಸಣೆ ವೇಳೆ ಪೊಲೀಸರಿಗೆ ಗುದ್ದಿದ ಕಾರು – ಓರ್ವ ಮಹಿಳಾ ಕಾನ್‌ಸ್ಟೆಬಲ್ ಸಾವು, ಇಬ್ಬರು ಅಧಿಕಾರಿಗೆ ಗಾಯ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?