Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯಡಿಯೂರಪ್ಪ ಅವರನ್ನು ಯಾವ ಸಮುದ್ರಕ್ಕೆ ಎಸೆದಿದ್ದೀರಿ: ಬಿಜೆಪಿಗೆ ಡಿಕೆಶಿ ಪ್ರಶ್ನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಯಡಿಯೂರಪ್ಪ ಅವರನ್ನು ಯಾವ ಸಮುದ್ರಕ್ಕೆ ಎಸೆದಿದ್ದೀರಿ: ಬಿಜೆಪಿಗೆ ಡಿಕೆಶಿ ಪ್ರಶ್ನೆ

Districts

ಯಡಿಯೂರಪ್ಪ ಅವರನ್ನು ಯಾವ ಸಮುದ್ರಕ್ಕೆ ಎಸೆದಿದ್ದೀರಿ: ಬಿಜೆಪಿಗೆ ಡಿಕೆಶಿ ಪ್ರಶ್ನೆ

Public TV
Last updated: October 18, 2021 8:09 pm
Public TV
Share
3 Min Read
DKSHI 4
SHARE

– ಬಿಎಸ್‍ವೈ ಕಣ್ಣೀರು ಬಿಜೆಪಿಯವರನ್ನು ಸುಮ್ಮನೆ ಬಿಡುವುದಿಲ್ಲ

ಹಾವೇರಿ: ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದ ಯಡಿಯೂರಪ್ಪ ಅವರನ್ನು ಈಗ ಯಾವ ನದಿ, ಯಾವ ಡ್ಯಾಂ, ಯಾವ ಸಮುದ್ರಕ್ಕೆ ಎಸೆದಿದ್ದೀರಿ ಎಂದು ಬಿಜೆಪಿ ಮುಖಂಡರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ.

ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನಲ್ಲಿ ಕೆಲವರಕೊಪ್ಪದಲ್ಲಿ ಪ್ರಚಾರದಲ್ಲಿ ಮಾತನಾಡಿದ ಅವರು, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಚಾಮುಂಡೇಶ್ವರಿ ಕ್ಷೇತ್ರದ ಮತದಾರರು ಕಟ್ಟಿ ಕೆಆರೆಸ್ ಡ್ಯಾಂಗೆ ಎಸೆದಿದ್ದಾರೆ ಎಂದು ಅಭ್ಯರ್ಥಿ ಶಿವರಾಜ್ ಸಜ್ಜನ ಸೇರಿದಂತೆ ಬಿಜೆಪಿ ಮುಖಂಡರು ಟೀಕೆ ಮಾಡಿದ್ದ ಹಾನಗಲ್ ವಿಧಾನಸಭೆ ಕ್ಷೇತ್ರದಲ್ಲೇ ಅವರಿಗೆ ಡಿ.ಕೆ. ಶಿವಕುಮಾರ್ ಅವರು ಸೋಮವಾರ ತಿರುಗೇಟು ನೀಡಿದ್ದಾರೆ.

DKShivakumar 2

ದಕ್ಷಿಣ ಭಾರತದಲ್ಲಿ ಬಿಜೆಪಿ ಸರ್ಕಾರದ ಹೆಬ್ಬಾಗಿಲು ತೆರೆದಿದ್ದೇ ಯಡಿಯೂರಪ್ಪನವರು ಎಂದು ಹೇಳುತ್ತಿದ್ದ ಬಿಜೆಪಿಯವರು ಅವರನ್ನು ಈಗೇಕೆ ಹೀನಾಯವಾಗಿ ನಡೆಸಿಕೊಂಡರು? ಅವರನ್ಯಾಕೆ ಮೂಲೆಗುಂಪು ಮಾಡಿದರು? ಅವರು ಕಣ್ಣೀರು ಹಾಕಿಕೊಂಡು ಮನೆಗೆ ಹೋಗುವಂತೆ ಮಾಡಿದರು ಎಂದು ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಅವರ ಪರ ಚುನಾವಣೆ ಪ್ರಚಾರ ಸಭೆಯಲ್ಲಿ ಡಿಕೆಶಿ ಪ್ರಶ್ನಿಸಿದರು. ಇದನ್ನೂ ಓದಿ:  ನಟಿ ಶ್ರೀಲೀಲಾ ನನ್ನ ಮಗಳಲ್ಲ – ವಿವಾದಾತ್ಮಕ ಹೇಳಿಕೆ ಕೊಟ್ಟ ಉದ್ಯಮಿ

bsy 123

ಯಡಿಯೂರಪ್ಪ ಅವರ ಕಣ್ಣೀರು ಬಿಜೆಪಿಯವರನ್ನು ಸುಮ್ಮನೆ ಬಿಡುವುದಿಲ್ಲ. ಈ ಸರ್ಕಾರ ಅವರ ಕಣ್ಣೀರಿನಲ್ಲೇ ಕೊಚ್ಚಿಕೊಂಡು ಹೋಗುತ್ತದೆ. ಕೇಂದ್ರ ಹಾಗೂ ರಾಜ್ಯದಲ್ಲಿರುವ ಬಿಜೆಪಿ ಸರ್ಕಾರಗಳು ನಾಡಿಗೆ ಒಂದು ಶಾಪ. ಕರ್ನಾಟಕದವರೇ ಕೇಂದ್ರದಲ್ಲಿ ಕಲ್ಲಿದ್ದಲು ಮಂತ್ರಿ ಆದರೆ ಇಲ್ಲಿ ಕಲ್ಲಿದ್ದಲ ಕೊರತೆ ಇದೆ. ಕರ್ನಾಟಕದವರೇ ಕೇಂದ್ರದಲ್ಲಿ ಗೊಬ್ಬರದ ಮಂತ್ರಿ ಆದರೆ ಕರ್ನಾಟಕದಲ್ಲಿ ಗೊಬ್ಬರದ ಕೊರತೆ ಇದೆ, ಜೊತೆಗೆ ಬೆಲೆಯೂ ಹೆಚ್ಚಳವಾಗಿದೆ. ಕರ್ನಾಟಕದಿಂದ ರಾಜ್ಯಸಭೆಗೆ ಹೋದ ನಿರ್ಮಲಾ ಸೀತಾರಾಮನ್ ಹಣಕಾಸು ಸಚಿವರು, ಆದರೆ ರಾಜ್ಯಕ್ಕೆ ಬರಬೇಕಾದ ಜಿಎಸ್‍ಟಿ ಪಾಲಾಗಲಿ, ಆರ್ಥಿಕ ಅನುದಾನವಾಗಲಿ, ನೆರೆ ಪರಿಹಾರವಾಗಲಿ ಬರಲಿಲ್ಲ. ಇದು ನಮ್ಮ ರಾಜ್ಯದ ಹಣೆಬರಹ ಎಂದು ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ:  ದೀಪಿಕಾರಂತೆ ಕ್ಯೂಟ್ ಮಗು ಬೇಕು: ರಣವೀರ್ ಸಿಂಗ್

Bjp congress e1632896001688

ಸಿಎಂ ಬಸವರಾಜ ಬೊಮ್ಮಾಯಿ ಅವರು ವೀರಾವೇಶದಿಂದ ಮಾತಾಡಿದ್ದಾರೆ. ಕ್ಷೇತ್ರದಲ್ಲಾಗಿರೋ ಅಭಿವೃದ್ಧಿ ಕೆಲಸ ನೋಡಿ ಎಂದು ಸವಾಲು ಹಾಕಿದ್ದಾರೆ. ನೋಡೋಣ ಎಂದು ಈಗ ನಿಮ್ಮೂರಿಗೆ ಕಾರಿಳಿದು ನಡೆದುಕೊಂಡೇ ಬಂದೆ. ರೋಡ್ ಕಣಿವೆ ಇದ್ದಂತಿದೆ. ಅದಕ್ಕೆ ನೀವೇ ಸಾಕ್ಷಿ. ಇದೇನಾ ಅಭಿವೃದ್ಧಿ ಕೆಲಸ ಅಂದ್ರೆ? ಪ್ರಧಾನಿ ಮೋದಿ ಅವರು 20 ಲಕ್ಷ ಕೋಟಿ, ಹಿಂದಿನ ಸಿಎಂ ಯಡಿಯೂರಪ್ಪನವರು 1800 ಕೋಟಿ ರುಪಾಯಿ ಕೊರೋನಾ ಪ್ಯಾಕೇಜ್ ಅನೌನ್ಸ್ ಮಾಡಿದ್ದರು. ನಿಮ್ಮ ಅಕೌಂಟ್ ಗೇನಾದರೂ ಪರಿಹಾರದ ಹಣ ಬಂತಾ? ಸತ್ತವರ ಕುಟುಂಬಗಳಿಗೇನಾದರೂ ಪರಿಹಾರ ಬಂತಾ? ರೈತರಿಗೆ ಬೆಳೆ ಹಾನಿ ಹಣ ಬಂತಾ? ಹೆಕ್ಟೇರಿಗೆ 10 ಸಾವಿರ ರು ಪರಿಹಾರ ಘೋಷಣೆ ಮಾಡಿದ್ದರು. ಅಂದರೆ ಕುಂಟೆಗೆ 100 ರುಪಾಯಿ. ಇದಕ್ಕೆ ಯಾರಾದರೂ ಆನ್ ಲೈನ್ ನಲ್ಲಿ ಅರ್ಜಿ ಹಾಕ್ತಾರಾ? ಎಂಜಿನಿಯರಿಂಗ್ ಪದವೀಧರ ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಬೇಕು.

narendra modi 5

ದೇವರು ಸಿ.ಎಂ. ಉದಾಸಿ ಅವರನ್ನು ಬೇಗನೆ ಕರೆಸಿಕೊಂಡಿದ್ದಾನೆ. ನಾನು ಅವರನ್ನು ತಕ್ಕಮಟ್ಟಿಗೆ ಬಲ್ಲೆ. ಅವರನ್ನು ಆಗಾಗ್ಗೆ ಭೇಟಿ ಮಾಡುತ್ತಿದ್ದೆ. ಬಹಳ ಸಜ್ಜನ ವ್ಯಕ್ತಿತ್ವ ಅವರದು. ಅವರ ಮೇಲೆ ದೂಷಣೆ ಮಾಡಲು ನಾನಿಲ್ಲಿಗೆ ಬಂದಿಲ್ಲ. ಅವರ ವಿರುದ್ಧ ನಮ್ಮ ಶ್ರೀನಿವಾಸ ಮಾನೆ ಅವರು ಸೋತಿದ್ದರೂ ಸಹ ಆಗಾಗ್ಗೆ ಅವರ ಆರೋಗ್ಯ ವಿಚಾರಿಸುತ್ತಿದ್ದೆ. ಅವರೂ ಪ್ರೀತಿ, ವಿಶ್ವಾಸದಿಂದ ಕಾಣುತ್ತಿದ್ದರು. ನಮ್ಮ ಉದಾಸಿ ಅವರ ಮನಸ್ಸಿಗೆ ಇದ್ದ ನೋವೇನೆಂದರೆ, ಅಷ್ಟು ಹಿರಿಯ ನಾಯಕರಾದರೂ ತಮ್ಮನ್ನು ಯಡಿಯೂರಪ್ಪ ಅವರ ಸರ್ಕಾರದಲ್ಲಿ ಮಂತ್ರಿ ಮಾಡಲಿಲ್ಲವಲ್ಲಾ ಅಂತಾ. ಅವರನ್ನೇಕೆ ಮಂತ್ರಿ ಮಾಡಲಿಲ್ಲ ಎಂದು ಬೊಮ್ಮಾಯಿ ಅವರನ್ನು ಕೇಳಲು ಬಯಸುತ್ತೇನೆ. ಇದೇ ಕೊರಗಿನಲ್ಲಿ ಉದಾಸಿ ಅವರು ತಮ್ಮ ಕೊನೆಯುಸಿರೆಳೆದಿದ್ದಾರೆ ಎಂಬುದು ನನ್ನ ಭಾವನೆ. ವ್ಯಕ್ತಿ ಸತ್ತಮೇಲೆ ಅವರನ್ನು ಹೊಗಳುವುದಲ್ಲ, ಆತ ಬದುಕಿದ್ದಾಗ ನೀವು ಅವರನ್ನು ಯಾವ ರೀತಿ ಗೌರವಿಸಿದಿರಿ ಎಂಬುದು ಮುಖ್ಯ. ಎಂದು ಹೇಳಿದ್ದಾರೆ.

BSY 2 medium

ಕೋವಿಡ್ ಸಮಯದಲ್ಲಿ ರೈತರಿಗೆ ಬೆಂಬಲ ಬೆಲೆ ಕೊಟ್ಟರಾ? ಬೀದಿ ವ್ಯಾಪಾರಿಗಳಿಗೆ ಪರಿಹಾರ ಕೊಟ್ಟರಾ? ಚಿಕಿತ್ಸೆಯಿಂದ ಆಕ್ಸಿಜನ್ ವರೆಗೂ ಎಲ್ಲದಕ್ಕೂ ಕ್ಯೂ ನಿಲ್ಲುವಂತೆ ಮಾಡಿದರು. ಚಾಮರಾಜನಗರದಲ್ಲಿ ಆಕ್ಸಿಜನ್ ಇಲ್ಲದೆ 36 ಜನ ಇಲಿಗಳಂತೆ ವಿಲ, ವಿಲ ಒದ್ದಾಡಿ ಪ್ರಾಣ ಬಿಟ್ಟರು. ಒಬ್ಬ ಶಾಸಕ, ಮಂತ್ರಿ ಅವರನ್ನು ಭೇಟಿ ಮಾಡಿ ಸಹಾಯ ಮಾಡಲಿಲ್ಲ. ನಾನು, ಸಿದ್ದರಾಮಯ್ಯ ಹಾಗೂ ಧೃವನಾರಾಯಣ್ ಅವರು ಹೋಗಿ ನಮ್ಮ ಕೈಲಾದಷ್ಟು ಸಹಾಯ ಮಾಡಿದ್ದೇವೆ. ರಾಜ್ಯ ಸರಕಾರದವರು ಕೇಂದ್ರಕ್ಕೆ ಆಕ್ಸಿಜನ್ ಸಮಸ್ಯೆಯಿಂದ ಒಬ್ಬರೂ ಸತ್ತಿಲ್ಲ ಎಂದು ವರದಿ ಕೊಟ್ಟಿದ್ದಾರೆ. ನಾವು ನಿಮ್ಮ ಪರವಾಗಿ ಮನೆ, ಮನೆಗೂ ಹೋಗಿ ಅವರಿಗೆ 1 ಲಕ್ಷ ರು. ನೆರವು ನೀಡಿ, ಸಾಂತ್ವನ ಹೇಳಿದ್ದೇವೆ. ರಾಜ್ಯದುದ್ದಗಲಕ್ಕೂ ನಮ್ಮ ಪಕ್ಷದ ಕಾರ್ಯಕರ್ತರು ಸತ್ತವರ ಮನೆಗೆ ಹೋಗಿ ಸಾಂತ್ವನ ಹೇಳಿದ್ದಾರೆ.

TAGGED:bjpBS YediyurappaDK Shivakumarhaveripublictvಡಿ.ಕೆ.ಶಿವಕುಮಾರ್ಪಬ್ಲಿಕ್ ಟಿವಿಯಡಿಯೂರಪ್ಪಸರ್ಕಾರಹಾವೇರಿ
Share This Article
Facebook Whatsapp Whatsapp Telegram

Cinema news

Gilli 1
ದೇಶ ಕಾಯುವ ಯೋಧರಿಂದ ಹಿಡಿದು ಎಲ್ರೂ ಪ್ರೀತಿ ಕೊಟ್ಟು, ಸಪೋರ್ಟ್ ಮಾಡಿದ್ದೀರಿ: ಗಿಲ್ಲಿ ನಟ
Cinema Latest Main Post Sandalwood TV Shows
Bigg Boss runner up Rakshita Shetty gets a grand welcome in Padubidri
ತೆರೆದ ವಾಹನದಲ್ಲಿ ಮೆರವಣಿಗೆ – ಬಂಗುಡೆ ಮೀನು ಹಿಡಿದು ಸಂಭ್ರಮಿಸಿದ ರಕ್ಷಿತಾ
Cinema Districts Karnataka Latest Main Post TV Shows Udupi
kantara chapter 1
ಜೀ ಕನ್ನಡ ವಾಹಿನಿಯಲ್ಲಿ ಬರಲಿದೆ ಕಾಂತಾರ ಚಾಪ್ಟರ್ 1
Cinema Latest Sandalwood Top Stories
Udaya Kannadiga 2025
ವರ್ಣರಂಜಿತ ಉದಯ ಕನ್ನಡಿಗ-2025 ಪುರಸ್ಕಾರದಲ್ಲಿ ತಾರಾಮೇಳ
Cinema Latest Sandalwood Top Stories TV Shows

You Might Also Like

Ramanath Rai
Dakshina Kannada

ದೇವಸ್ಥಾನದಲ್ಲಿ ಕೇಸರಿ ಸೇರಿದಂತೆ ಯಾವುದೇ ಧ್ವಜ ಹಾರಿಸಬೇಡಿ – ರಮಾನಾಥ ರೈ ವಿವಾದಾತ್ಮಕ ಹೇಳಿಕೆ

Public TV
By Public TV
3 minutes ago
College student dies after car hits bicycle in Channarayapatna
Crime

ಚನ್ನರಾಯಪಟ್ಟಣ | ಸೈಕಲ್‌ಗೆ ಕಾರು ಡಿಕ್ಕಿ – ಕಾಲೇಜು ವಿದ್ಯಾರ್ಥಿ ದುರ್ಮರಣ

Public TV
By Public TV
35 minutes ago
The Panchayat gave the site to the Ritti family who handed over the Treasure to the government
Districts

ಪಬ್ಲಿಕ್‌ ಟಿವಿ ಇಂಪ್ಯಾಕ್ಟ್‌ – ನಿಧಿಯನ್ನು ಸರ್ಕಾರಕ್ಕೆ ಹಸ್ತಾಂತರಿಸಿದ ರಿತ್ತಿ ಕುಟುಂಬಕ್ಕೆ ಪಂಚಾಯತ್‌ನಿಂದ ಸೈಟ್‌

Public TV
By Public TV
37 minutes ago
Bengaluru Airport
Chikkaballapur

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಶೌಚಾಲಯಕ್ಕೆ ಕರೆದೊಯ್ದು ವಿದೇಶಿ ಮಹಿಳೆಗೆ ಕಿರುಕುಳ!

Public TV
By Public TV
37 minutes ago
Bengaluru Traffic 1
Bengaluru City

ಪ್ರಪಂಚದಲ್ಲಿ ಸೆಕೆಂಡ್‌, ದೇಶದಲ್ಲಿ Top-1 – ಅತೀ ಹೆಚ್ಚು ಟ್ರಾಫಿಕ್ ಹೊಂದಿರುವ ನಗರ ಬೆಂಗಳೂರು

Public TV
By Public TV
1 hour ago
Bhojshala site
Court

ಮಧ್ಯಪ್ರದೇಶದ ಧಾರ್‌ನ ಭೋಜ್‌ಶಾಲಾದಲ್ಲಿ ಪ್ರಾರ್ಥನೆ ವಿವಾದ; ಹಿಂದೂ-ಮುಸ್ಲಿಮರ ಪ್ರಾರ್ಥನೆಗೆ ‘ಸುಪ್ರೀಂ’ ಅವಕಾಶ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?