ಭೀಕರ ರಸ್ತೆ ಅಪಘಾತದಿಂದ ಮಗು ಸೇರಿ ಒಂದೇ ಕುಟುಂಬ 8 ಮಂದಿ ದಾರುಣ ಸಾವು

Public TV
1 Min Read
HARYANA

ಚಂಡೀಗಢ: ಭೀಕರ ರಸ್ತೆ ಅಪಘಾತದಲ್ಲಿ ಪುಟ್ಟ ಮಗು ಸೇರಿ 8 ಮಂದಿ ಮೃತಪಟ್ಟಿರುವ ಘಟನೆ ಹರಿಯಾಣದ ಜಜ್ಜರ್ ಜಿಲ್ಲೆಯ ಬಹದ್ದೂರ್ ಗಢ್ ನಲ್ಲಿ ನಡೆದಿದೆ.

ಈ ದುರಂತ ಕೆಎಂಪಿ ಎಕ್ಸ್ ಪ್ರೆಸ್ ವೇ ಹೈವೇಯಲ್ಲಿ ಸಂಭವಿಸಿದೆ. ಕಾರು ಮತ್ತು ಟ್ರಕ್ ನಡುವೆ ಡಿಕ್ಕಿಯಾಗಿ 8 ಮಂದಿ ದಾರುಣವಾಗಿ ಮೃತಪಟ್ಟರೆ ಓರ್ವ ಗಾಯಗೊಂಡಿದ್ದಾರೆ. ಕಾರಿನಲ್ಲಿ ಒಟ್ಟು 11 ಮಂದಿ ಇದ್ದು, ಉತ್ತರಪ್ರದೇಶದ ಕಡೆ ಪ್ರಯಾಣ ಬೆಳೆಸುತ್ತಿದ್ದರು. ಇದೀಗ ಕಾರಿನಲ್ಲಿದ್ದ 8 ಮಂದಿ ದುರ್ಮರಣಕ್ಕೀಡಾಗಿದ್ದಾರೆ.

Untitled

ಘಟನಾ ಸ್ಥಳಕ್ಕೆ ಬಹುದ್ದೂರ್ ಗಢ್ ಪೊಲೀಸರು ಭೇಟಿ ನೀಡಿ ಮೃತದೇಹಗಳ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆಯಲದ್ಲಿ ಮತ್ತೊಂದು ಮಗು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಬಳಿಕ ಟ್ರಕ್ ಚಾಲಕ ಪರಾರಿಯಾಗಿದ್ದು, ಪತ್ತೆಗೆ ಬಲೆ ಬೀಸಿದ್ದಾರೆ. ಇದನ್ನೂ ಓದಿ: ಯಾವೆಲ್ಲ ತಂಡಗಳು ಈವರೆಗೆ ಟಿ20 ವಿಶ್ವಕಪ್ ಮುಡಿಗೇರಿಸಿಕೊಂಡಿವೆ?

Share This Article
Leave a Comment

Leave a Reply

Your email address will not be published. Required fields are marked *