Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Karnataka

ಡಿಕೆಶಿ ಸಿಎಂ ಕನಸಿಗೆ ಎಳ್ಳು ನೀರು ಬಿಡಲು ಸಿದ್ದರಾಮಯ್ಯ ಸಿದ್ಧ: ಬಿಜೆಪಿ ವ್ಯಂಗ್ಯ

Public TV
Last updated: October 26, 2021 2:00 pm
Public TV
Share
3 Min Read
BJP - D.K.SHIVAKUMAR
SHARE

ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರೇ, ಸಿದ್ದರಾಮಯ್ಯ ಮತ್ತೆ ತಮ್ಮ ವರಸೆ ಶುರು ಮಾಡಿದ್ದಾರೆ. ನೀವು ಎಷ್ಟೇ ತಂತ್ರಗಾರಿಕೆ ನಡೆಸಿದರೂ ಪ್ರಯೋಜನವಿಲ್ಲ. ನಿಮ್ಮ ಮುಖ್ಯಮಂತ್ರಿ ಕನಸಿಗೆ ಎಳ್ಳು ನೀರು ಬಿಡಲು ಸಿದ್ದರಾಮಯ್ಯ ಸಿದ್ಧರಾಗಿದ್ದಾರೆ. ನಿಮ್ಮದೀಗ ‘ಬಗಲ್ ಮೆ ದುಷ್ಮನ್ ಪರಿಸ್ಥಿತಿ’ ಎಂದು ರಾಜ್ಯ ಬಿಜೆಪಿ ವ್ಯಂಗ್ಯವಾಡಿದೆ.

ಮಾನ್ಯ @DKShivakumar ಅವರೇ,

ಸಿದ್ದರಾಮಯ್ಯ ಮತ್ತೆ ತಮ್ಮ ವರಸೆ ಶುರು ಮಾಡಿದ್ದಾರೆ.

ನೀವು ಎಷ್ಟೇ ತಂತ್ರಗಾರಿಕೆ ನಡೆಸಿದರೂ ಪ್ರಯೋಜನವಿಲ್ಲ. ನಿಮ್ಮ ಮುಖ್ಯಮಂತ್ರಿ‌ ಕನಸಿಗೆ ಎಳ್ಳು ನೀರು ಬಿಡಲು @siddaramaiah ಸಿದ್ದರಾಗಿದ್ದಾರೆ.

ನಿಮ್ಮದೀಗ "ಬಗಲ್ ಮೆ ದುಷ್ಮನ್" ಪರಿಸ್ಥಿತಿ!#ಅಸಹಾಯಕಡಿಕೆಶಿ

— BJP Karnataka (@BJP4Karnataka) October 26, 2021

ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತಂದರೆ ಹಲವು ಉಚಿತ ಪಡಿತರ ಸೇರಿದಂತೆ ಅನೇಕ ಸೌಲಭ್ಯಗಳನ್ನು ನೀಡಲಾಗುವುದು ಎಂಬ ಸಿದ್ದರಾಮಯ್ಯ ಆಶ್ವಾಸನೆಗೆ, ಸರಣಿ ಟ್ವೀಟ್ ಮೂಲಕ ಬಿಜೆಪಿ ಟಾಂಗ್ ನೀಡಿದೆ. “ಡಿಕೆಶಿ ಕಾಸು-ಸಿದ್ದರಾಮಯ್ಯ ಬಾಸು” ಎಂಬಂತಾಗಿದೆ ಕರ್ನಾಟಕ ಕಾಂಗ್ರೆಸ್ ಪರಿಸ್ಥಿತಿ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಏನೇನು ಮಾಡುತ್ತೇವೆ ಎಂದು ಆಶ್ವಾಸನೆ ನೀಡುತ್ತಲೇ ಸಾಗುತ್ತಿರುವ ಸಿದ್ದರಾಮಯ್ಯ, ಪರೋಕ್ಷವಾಗಿ ನಾನೇ ಮುಂದಿನ ಮುಖ್ಯಮಂತ್ರಿ ಎಂದು ಬಿಂಬಿಸಿಕೊಳ್ಳುತ್ತಿದ್ದಾರೆ. ಡಿಕೆಶಿಯವರದ್ದು ಬರೇ ಕನಸೇ? ಎಂದು ಬಿಜೆಪಿ ಕುಟುಕಿದೆ.

siddaramaiah

ಟ್ವೀಟ್‍ನಲ್ಲೇನಿದೆ..?
ಬಿಜೆಪಿ ಜಾತಿವಾರು ಸಮಾವೇಶಗಳನ್ನು ನಡೆಸಿ ವೋಟುಗಳಿಸಲು ತಂತ್ರ ರೂಪಿಸಿದೆ ಎಂಬ ಸಿದ್ದರಾಮಯ್ಯ ಟೀಕೆಗೆ ಪ್ರತಿಕ್ರಿಯಿಸಿರುವ ಬಿಜೆಪಿ, ಅಲ್ಪಸಂಖ್ಯಾತರಿಗೆ 3 ಸಾವಿರ ಕೋಟಿ, ಕಸೂತಿಗೆ 100 ಕೋಟಿ. ಅದಕ್ಕಿಷ್ಟು, ಇದಕ್ಕಿಷ್ಟು, ಸಂಪುಟದಲ್ಲಿ ಇಂತಿಂಥವರೇ ಇರುತ್ತಾರೆ. ಈ ರೀತಿ ಸಿದ್ದರಾಮಯ್ಯ ಸ್ವಯಂ ಘೋಷಣೆ ಮಾಡುತ್ತಲೇ ಇದ್ದಾರೆ. ಅಂದರೆ ತಾವೇ ಮುಂದಿನ ಸಿಎಂ ಎಂದು ಬಿಂಬಿಸಿಕೊಳ್ಳುತ್ತಿದ್ದಾರೆ. ಹಾಗಾದರೆ ನಿಮ್ಮ ಕಥೆಯೇನು ಡಿಕೆಶಿ ಎಂದು ಪ್ರಶ್ನಿಸಿದೆ.

ಯಡಿಯೂರಪ್ಪನವರು ಕುರ್ಚಿ ಉಳಿಸಿಕೊಳ್ಳುವುದಕ್ಕಾಗಿ ಮಠಾಧೀಶರನ್ನು ಮನೆಗೆ ಕರೆಸಿ ದುಡ್ಡು ಹಂಚಿದರು ಎನ್ನುವ ಮೂಲಕ @siddaramaiah ಮಠಾಧೀಶರಿಗೆ ಅವಮಾನ ಮಾಡಿದ್ದಾರೆ.

ಒಂದು ಸಮುದಾಯವನ್ನು ತಮ್ಮ ರಾಜಕೀಯ ಹಿತಾಸಕ್ತಿಗಾಗಿ ನಿಂದಿಸುವುದು ಹಾಗೂ ಒಡೆಯುವುದು ಸಿದ್ದರಾಮಯ್ಯ ಅವರಿಗೆ ಚಾಳಿಯಾಗಿಬಿಟ್ಟಿದೆ.#ಲಿಂಗಾಯತವಿರೋಧಿಸಿದ್ದರಾಮಯ್ಯ pic.twitter.com/R5HM4gZpTj

— BJP Karnataka (@BJP4Karnataka) October 26, 2021

ಯಡಿಯೂರಪ್ಪನವರು ಕುರ್ಚಿ ಉಳಿಸಿಕೊಳ್ಳುವುದಕ್ಕಾಗಿ ಮಠಾಧೀಶರನ್ನು ಮನೆಗೆ ಕರೆಸಿ ದುಡ್ಡು ಹಂಚಿದರು ಎನ್ನುವ ಮೂಲಕ ಸಿದ್ದರಾಮಯ್ಯ ಮಠಾಧೀಶರಿಗೆ ಅವಮಾನ ಮಾಡಿದ್ದಾರೆ. ಒಂದು ಸಮುದಾಯವನ್ನು ತಮ್ಮ ರಾಜಕೀಯ ಹಿತಾಸಕ್ತಿಗಾಗಿ ನಿಂದಿಸುವುದು ಹಾಗೂ ಒಡೆಯುವುದು ಸಿದ್ದರಾಮಯ್ಯ ಅವರಿಗೆ ಚಾಳಿಯಾಗಿಬಿಟ್ಟಿದೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ. ಇದನ್ನೂ ಓದಿ: ಸಮ್ಮಿಶ್ರ ಸರ್ಕಾರ ಪತನಗೊಂಡ ರಹಸ್ಯ ಬಿಚ್ಚಿಟ್ಟ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ

ಜಾತಿ ರಹಿತ, ವರ್ಗ ರಹಿತ ಸಮಾಜ ಸ್ಥಾಪನೆಯೇ ಬಿಜೆಪಿಯ ಉದ್ದೇಶ. ಆದರೆ ಹಾಲಿನಂಥ ಸಮಾಜವನ್ನು ಒಡೆಯುವುದು ಜಾತಿವಾದಿ ಸಿದ್ದರಾಮಯ್ಯ ಅವರ ಗುರಿ. ಗಡಿಗೆಯಲ್ಲಿ ತುಂಬಿರುವ ಹಾಲನ್ನು ಕೆಡಿಸುವುದಕ್ಕೆ ಒಂದು ಹನಿ ಹುಳಿ ಸಾಕಲ್ಲವೇ ? ಹಾಗೆಯೇ ಸಮಾಜ ವಿಭಜನೆಗೆ ಸಿದ್ದರಾಮಯ್ಯ ಅವರ ದ್ವೇಷದ ನುಡಿ ಸಾಕು ಎಂದು ಟೀಕಿಸಿದೆ.

bjp - congress

ರಾಜಕೀಯ ಏಳಿಗೆಗಾಗಿ ಸಿದ್ದರಾಮಯ್ಯ ಹಿಂದೂ ಧರ್ಮ ಒಡೆಯುವ ಪ್ರಯತ್ನ ನಡೆಸಿದರು. ಲಿಂಗಾಯತ ಪ್ರತ್ಯೇಕ ಧರ್ಮದ ಅಸ್ತ್ರ ಪ್ರಯೋಗಿಸಿ ಎಂ.ಬಿ.ಪಾಟೀಲರನ್ನು ಬಲಿಪಶುವಾಗಿಸಿದರು. ಸಿದ್ದರಾಮಯ್ಯನವರೇ, ವೀರಶೈವ- ಲಿಂಗಾಯಿತ ಸಮುದಾಯ ಬಿಜೆಪಿ ಜೊತೆ ನಿಲ್ಲುವುದನ್ನು ತಡೆಯುವುದಕ್ಕಾಗಿ ಧರ್ಮ ವಿಭಜನೆಗೆ ಮುಂದಾಗಿದ್ದಲ್ಲವೇ?

ಸಮಾಜವಾದದ ಹೆಸರಿನಲ್ಲಿ ಜಾತಿವಾದ ನಡೆಸುತ್ತಿರುವ @siddaramaiah ಅವರಿಗೆ ಈಗ ರಾಜ್ಯದ ಯಾವ ಕ್ಷೇತ್ರದಲ್ಲೂ ನೆಲೆಯಿಲ್ಲ.

ಮುಂದಿನ ವಿಧಾನಸಭಾ ಚುನಾವಣೆಯ ಹೊತ್ತಿಗೆ ಚಾಮರಾಜಪೇಟೆಗೆ ವಲಸೆ ಹೋಗಲು ಸಿದ್ದತೆ ನಡೆಸಿರುವ ಸಿದ್ದರಾಮಯ್ಯ ಈಗ ಒಂದು ವರ್ಗದ ಓಲೈಕೆಗಾಗಿ ಹಿಂದೂ ಧರ್ಮದ ಅವಹೇಳನಕ್ಕೆ ಮುಂದಾಗಿದ್ದಾರೆ.#ಲಿಂಗಾಯತವಿರೋಧಿಸಿದ್ದರಾಮಯ್ಯ

— BJP Karnataka (@BJP4Karnataka) October 26, 2021

ವೀರಶೈವ- ಲಿಂಗಾಯತ ಸಮುದಾಯದ ಸ್ವಾಮೀಜಿಗಳ ಬಗ್ಗೆ ಸಿದ್ದರಾಮಯ್ಯ ಎಂದಾದರೂ ಗೌರವ ವ್ಯಕ್ತಪಡಿಸಿದ ಉದಾಹರಣೆ ಇದೆಯೇ? ಧರ್ಮ ವಿಭಜನೆಯ ಪ್ರಯತ್ನ ಮಾಡುವಾಗ “ಲಿಂಗಾಯತ ಸ್ವಾಮೀಜಿಗಳು ನೀಡಿದ ಮನವಿ” ಪ್ರಕಾರ ಪ್ರತ್ಯೇಕ ಧರ್ಮದ ಪ್ರಸ್ತಾಪವನ್ನು ಕೇಂದ್ರಕ್ಕೆ ಕಳುಹಿಸಿದ್ದೆ ಎಂದು ಜಾರಿಕೊಂಡಿದ್ದು ನೆನಪಿಲ್ಲವೇ ಎಂದು ಪ್ರಶ್ನಿಸಿದೆ.

ಬೊಮ್ಮಾಯಿ ಜಾತಿಯವರು ಕಂಬಳಿ ನೇಯ್ತಾರಾ? ಕಾಗೇರಿ ಜಾತಿಯವರು ಕುರಿ ಕಾಯ್ತಾರಾ? ಎಂದು ಪ್ರಶ್ನಿಸುವ ಮೂಲಕ ಸಮಾಜವನ್ನು ಯಾವ ದಿಕ್ಕಿನತ್ತ ಕೊಂಡೊಯ್ಯುತ್ತಿದ್ದೀರಿ ಸಿದ್ದರಾಮಯ್ಯ? ಹಾಲಿನಂಥ ಸಮಾಜದಲ್ಲಿ ಜಾತಿ ಹುಳಿ ಹಿಂಡಿ ಒಡೆಯುವುದೇ ನಿಮ್ಮ ರಾಜಕೀಯ ಧರ್ಮ. ಸಮಾಜ ಒಟ್ಟಾಗಿದ್ದರೆ ಈ ಮಜವಾದಿಗೆ ಸಂಕಟವಾಗುತ್ತದೆ. ಸಿದ್ದರಾಮಯ್ಯ ಅವರೇ, ವೀರಶೈವ – ಲಿಂಗಾಯತ ಸಮುದಾಯದ ಮೇಲೆ ನಿಮಗೇಕೆ ದ್ವೇಷ? ಹಿಂದೆ ಧರ್ಮ ಒಡೆಯಲು ಹೋಗಿ ಆ ಸಮುದಾಯದ ಭಾವನೆ ಕೆರಳಿಸಿದಿರಿ. ಈಗ ಬೊಮ್ಮಾಯಿ ಜಾತಿಯವರು ಕಂಬಳಿ ನೇಯುತ್ತಾರಾ ಎಂದು ಪ್ರಶ್ನಿಸುವ ಮೂಲಕ ಕಾಯಕ ಧರ್ಮವನ್ನು ಅಪಮಾನ ಮಾಡುತ್ತಿದ್ದೀರಿ. ಇದನ್ನೂ ಓದಿ: ರಾಜ್ಯದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೇ ಸಿದ್ದರಾಮಯ್ಯ: ಬಿಜೆಪಿ ವಾಗ್ದಾಳಿ

ಸಮಾಜವಾದದ ಹೆಸರಿನಲ್ಲಿ ಜಾತಿವಾದ ನಡೆಸುತ್ತಿರುವ ಸಿದ್ದರಾಮಯ್ಯ ಅವರಿಗೆ ಈಗ ರಾಜ್ಯದ ಯಾವ ಕ್ಷೇತ್ರದಲ್ಲೂ ನೆಲೆಯಿಲ್ಲ. ಮುಂದಿನ ವಿಧಾನಸಭಾ ಚುನಾವಣೆಯ ಹೊತ್ತಿಗೆ ಚಾಮರಾಜಪೇಟೆಗೆ ವಲಸೆ ಹೋಗಲು ಸಿದ್ದತೆ ನಡೆಸಿರುವ ಸಿದ್ದರಾಮಯ್ಯ ಈಗ ಒಂದು ವರ್ಗದ ಓಲೈಕೆಗಾಗಿ ಹಿಂದೂ ಧರ್ಮದ ಅವಹೇಳನಕ್ಕೆ ಮುಂದಾಗಿದ್ದಾರೆ ಎಂದು ಟೀಕಾಪ್ರಹಾರ ನಡೆಸಿದೆ.

TAGGED:bjpd k shivakumarPublic TVsiddaramaiahtweetಟ್ವೀಟ್ಡಿ.ಕೆ.ಶಿವಕುಮಾರ್ಪಬ್ಲಿಕ್ ಟಿವಿಬಿಜೆಪಿಸಿದ್ದರಾಮಯ್ಯ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Abhiman Studio
ರಾತ್ರೋರಾತ್ರಿ ವಿಷ್ಣು ಸಮಾಧಿ ನೆಲಸಮ – ಅಭಿಮಾನಿಗಳಿಂದ ತೀವ್ರ ಆಕ್ರೋಶ
Bengaluru City Cinema Districts Karnataka Latest Main Post Sandalwood
Lankasura film team gave good news Vinod Prabhakar 1
ಮಾದೇವ ನಂತರ ಲಂಕಾಸುರನಾಗಿ ಮರಿ ಟೈಗರ್ ಅಬ್ಬರ
Cinema Latest
Manoranjan Ravichandran New Movie
ಮನೋರಂಜನ್ ರವಿಚಂದ್ರನ್ ಐದನೇ ಸಿನಿಮಾಗೆ ಮುಹೂರ್ತ
Cinema Latest Sandalwood Top Stories
Actor Milind
`ಅನ್‌ಲಾಕ್ ರಾಘವ’ ಖ್ಯಾತಿಯ ಮಿಲಿಂದ್‌ಗೆ ಲಾಟ್ರಿ; ನಾಲ್ಕು ಚಿತ್ರಗಳಿಗೆ ಸಹಿ ಮಾಡಿದ ನಟ
Cinema Latest Sandalwood Top Stories
Kantara Chapter 1 First look of Kanakavati Rukmini Vasanth unveiled on Varamahalakshmi
ಕಾಂತಾರ ಚಾಪ್ಟರ್ 1| ಕನಕವತಿಯ ಮೊದಲ ನೋಟ ವರಮಹಾಲಕ್ಷ್ಮಿಯಂದು ಅನಾವರಣ
Cinema Latest Top Stories

You Might Also Like

CHALUVARAYASWAMY
Bengaluru City

ಕೃಷಿ, ತೋಟಗಾರಿಕೆ ಉತ್ಪನ್ನಗಳಿಗೆ ಬೆಂಬಲ ಬೆಲೆ; ರೈತರಿಗೆ ಸಿಗಲಿದೆ 8 ಸಾವಿರ ಕೋಟಿ: ಚಲುವರಾಯಸ್ವಾಮಿ

Public TV
By Public TV
2 minutes ago
Uttarakhand Cloudburst
Bengaluru City

ಉತ್ತರಕಾಶಿಯಲ್ಲಿ ಮೇಘಸ್ಫೋಟ – ಕರ್ನಾಟಕದ 6 ಪ್ರವಾಸಿಗರ ರಕ್ಷಣೆ

Public TV
By Public TV
3 minutes ago
Bengaluru Police Uniform weared Theft
Bengaluru City

ಹೆಂಡತಿಗಾಗಿ ಕಳ್ಳ ಪೊಲೀಸ್ ಆದ, ಕಾನ್‌ಸ್ಟೇಬಲ್ ಸಸ್ಪೆಂಡ್‌ ಆದ!

Public TV
By Public TV
39 minutes ago
Trump Modi
Latest

ಟ್ರಂಪ್‌ ಸುಂಕ ಸಮರಕ್ಕೆ ಭಾರತ ತಿರುಗೇಟು – ಅಮೆರಿಕದ ಶಸ್ತ್ರಾಸ್ತ್ರ, ವಿಮಾನ ಖರೀದಿಸುವ ಯೋಜನೆ ಸ್ಥಗಿತ

Public TV
By Public TV
41 minutes ago
Pralhad Joshi 2
Karnataka

ರಾಹುಲ್ ಗಾಂಧಿ ಚುನಾವಣಾ ಆಯೋಗದ ಮೇಲೆ ಆರೋಪ ಮಾಡಿ, ಉತ್ತರ ಕೊಡೋಕೆ ಇನ್ಯಾರನ್ನೋ ಕಳಿಸಿದ್ದಾರೆ: ಜೋಶಿ ಕಿಡಿ

Public TV
By Public TV
48 minutes ago
CT Ravi
Chikkamagaluru

ಚಿಪ್ಪಲ್ಲಿ ಕಾಫಿ ಕೊಡೋ ಕಾಲದಲ್ಲಿ ಸಹಪಂಕ್ತಿ ಭೋಜನ ಎತ್ತಿಹಿಡಿದಿದ್ದು ವಿರೇಂದ್ರ ಹೆಗ್ಗಡೆಯವ್ರು: ಸಿ.ಟಿ ರವಿ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?