ಬೆಂಗಳೂರು ನಗರ ಸೇರಿ 15 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

Public TV
1 Min Read
rain 3 3

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿಯಲ್ಲಿ ಅಕ್ಟೋಬರ್ 29 ಮತ್ತು 30ರಂದು ಹಿಂಗಾರು ಮಾರುತಗಳು ಪ್ರಬಲವಾಗಲಿದ್ದು, ಗುಡುಗು ಸಹಿತ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಸೇರಿದಂತೆ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

RAIN 3

ಅ.29ಕ್ಕೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಮೈಸೂರು, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ದಾವಣಗೆರೆ, ತುಮಕೂರು, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಇದನ್ನೂ ಓದಿ: ಬಿಜೆಪಿ ಜೊತೆ ಕ್ಷಮೆ ಕೇಳಿದ ಶಾಸಕ ಜಮೀರ್!

rain

ಅ.30ಕ್ಕೆ ಈ ಜಿಲ್ಲೆಗಳ ಜೊತೆಗೆ ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅ.27 ಮತ್ತು ಅ.28ರಂದು ಮಳೆಯ ಅಬ್ಬರ ಇರುವುದಿಲ್ಲ. ಉತ್ತರ ಕರ್ನಾಟಕದಲ್ಲಿ ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ಭರ್ಜರಿ ಬೌಲಿಂಗ್‌, ಬ್ಯಾಟಿಂಗ್‌- ಪಾಕಿಸ್ತಾನಕ್ಕೆ 5 ವಿಕೆಟ್‌ಗಳ ಜಯ

mng rain 2 3

ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡ ಕಳೆದ 24 ಗಂಟೆ ಅವಧಿಯಲ್ಲಿ ಬೀದರ್‍ನಲ್ಲಿ ಕನಿಷ್ಠ 12 ಡಿಗ್ರಿ ಸೆಲ್ಸಿಯಸ್ ಮತ್ತು ಶಿರಾಲಿಯಲ್ಲಿ ಗರಿಷ್ಠ 33.7 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ವಾಡಿಕೆಗಿಂತ ಕಡಿಮೆ ಉಷ್ಣತೆ ವರದಿಯಾಗುತ್ತಿದ್ದು ಚಳಿಯ ವಾತಾವರಣ ಇದೆ.

mng rain 2 web

ಬೆಳಗಾವಿಯ ಲೋಂಡಾ, ಶಿವಮೊಗ್ಗದ ಆಗುಂಬೆಯಲ್ಲಿ ತಲಾ 5 ಸೆಂ.ಮಿ. ಉತ್ತರ ಕನ್ನಡದ ಜಗಲ್‍ಬೆಟ್, ಮೈಸೂರಿನ ಕೆಆರ್ ನಗರ ತಲಾ 4, ದಕ್ಷಿಣ ಕನ್ನಡದ ಪುತ್ತೂರು, ಮೈಸೂರಿನ ಬಿಳಿಕೆರೆ, ಕೊಡಗಿನ ನಾಪೊಕ್ಲು, ಚಿಕ್ಕಮಗಳೂರಿನ ಕಳಸದಲ್ಲಿ ತಲಾ 3 ಸೆಂಮೀ ಮಳೆಯಾಗಿದೆ.

Share This Article
Leave a Comment

Leave a Reply

Your email address will not be published. Required fields are marked *