Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಹಣದ ಹೊಳೆ – ಹೆಚ್‍ಡಿಕೆ ಗಂಭೀರ ಆರೋಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಹಣದ ಹೊಳೆ – ಹೆಚ್‍ಡಿಕೆ ಗಂಭೀರ ಆರೋಪ

Districts

ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಹಣದ ಹೊಳೆ – ಹೆಚ್‍ಡಿಕೆ ಗಂಭೀರ ಆರೋಪ

Public TV
Last updated: October 28, 2021 12:50 pm
Public TV
Share
2 Min Read
HDK
SHARE

– ಪ್ರತಿ ಹಳ್ಳಿಗೆ 30-40 ಲಕ್ಷ ರೂ. ರೆಸಾರ್ಟ್‍ನಲ್ಲೇ ಬೀಡುಬಿದ್ದ ಮಂತ್ರಿಗಳು
– ಸಚಿವ ಸೋಮಣ್ಣ ಕೊನೆ ಹಂತದ ಆಟ ಆರಂಭಿಸಿದ್ದಾರೆ

ವಿಜಯಪುರ: ಬಹಿರಂಗ ಪ್ರಚಾರ ಅಂತ್ಯವಾದ ಮೇಲೆಯೂ ಆಡಳಿತಾರೂಢ ಬಿಜೆಪಿಯು ಸಿಂದಗಿ ವಿಧಾನಸಭೆ ಕ್ಷೇತ್ರದಲ್ಲಿ ಮತದಾರರಿಗೆ ಹಣ ಹಂಚುವ ಹೀನ ಕೆಲಸಕ್ಕೆ ಮುಂದಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು.

BJP Flag Final 6

ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಿನ್ನೆಯಿಂದ ಸಚಿವರಾದ ವಿ.ಸೋಮಣ್ಣ, ಸಿಸಿ ಪಾಟೀಲ್, ಗೋವಿಂದ ಕಾರಜೋಳ ಸೇರಿದಂತೆ ಏಳೆಂಟು ಮಂತ್ರಿಗಳು ಇವತ್ತಿಗೂ ಸಮೀಪದ ರೆಸಾರ್ಟ್ ನಲ್ಲಿಯೇ ಇದ್ದಾರೆ. ಬುಧವಾರ ಸಂಜೆವರೆಗೂ ಕುಮಾರಸ್ವಾಮಿ ಅವರಿಗೆ ಸಿಂದಗಿಯಲ್ಲಿ ಓಡಾಡಲು ಫ್ರೀಯಾಗಿ ಬಿಟ್ಟಿದ್ದೇವೆ. ಗುರುವಾರದಿಂದ ನಮ್ಮ ಆಟ ತೋರಿಸುತ್ತೇವೆ ಎಂದು ಸೋಮಣ್ಣ ಅವರು ನಿನ್ನೆಯೇ ಹೇಳಿದ್ದರು. ಈಗ ಅವರು ತಮ್ಮ ಕೊನೆಯ ಹಂತದ ಆಟ ತೋರಿಸಲು ಹೊರಟಿದ್ದಾರೆ ಎಂದು ದೂರಿದರು.

2000

ನನಗೆ ಬಂದ ಮಾಹಿತಿ ಪ್ರಕಾರ ಪ್ರತಿ ಹಳ್ಳಿಗೆ 30ರಿಂದ 40 ಲಕ್ಷ ರೂಪಾಯಿ ಹಂಚಿಕೆ ಆಗಿದೆ. ಖುದ್ದು ಸಚಿವರೇ ಈ ಕೃತ್ಯದಲ್ಲಿ ತೊಡಗಿರುವ ಮಾಹಿತಿ ಬಂದಿದೆ. ಅದೇ ರೀತಿ ಕಾಂಗ್ರೆಸ್ ಪಕ್ಷದಿಂದಲೂ ದೊಡ್ಡ ಪ್ರಮಾಣದಲ್ಲಿ ಹಣ ಹಂಚುವ ಕೆಲಸ ನಡೆದಿದೆ ಎಂದು ಅವರು ಗಂಭೀರ ಆರೋಪ ಮಾಡಿದರು. ಇದನ್ನೂ ಓದಿ: ಟಿ-20 ವಿಶ್ವಕಪ್‍ನಲ್ಲಿ ಪಾಕ್ ಗೆಲುವನ್ನು ಆಚರಿಸುವವರು ದೇಶದ್ರೋಹ ಆರೋಪ ಎದುರಿಸಬೇಕಾಗುತ್ತದೆ: ಯೋಗಿ ಆದಿತ್ಯನಾಥ್

Congress flag 2 e1573529275338

ಮತಗಟ್ಟೆಗೆ ಐದು ಲಕ್ಷ, 1 ಮತಕ್ಕೆ 1 ಸಾವಿರ!
ಕೆಲ ಹಳ್ಳಿಗಳಲ್ಲಿ ಐದರಿಂದ ಆರು ಮತಗಟ್ಟೆಗಳಿವೆ. ಅಂದರೆ ಪ್ರತೀ ಮತಗಟ್ಟೆಗೆ ತಲಾ 5 ಲಕ್ಷ ರೂ. ನೀಡಲಾಗುತ್ತಿದೆ ಹಾಗೂ ಒಂದು ಮತಕ್ಕೆ 1,000 ರೂ. ಫಿಕ್ಸ್ ಮಾಡಿದ್ದಾರೆ ಎಂದಾಯಿತು. ಬಿಜೆಪಿ ರಾಜ್ಯದಲ್ಲಿ ಆಪರೇಷನ್ ಕಮಲದ ಮೂಲಕ ಸರ್ಕಾರ ರಚನೆ ಮಾಡಿದ ಮೇಲೆ ಎಲ್ಲ ಚುನಾವಣೆಗಳನ್ನು ಗೆದ್ದಿರುವುದು ಹಣದ ಹೊಳೆ ಹರಿಸಿಯೇ ಎಂದು ಕುಮಾರಸ್ವಾಮಿ ಹೇಳಿದರು.  ಇದನ್ನೂ ಓದಿ: ದೆಹಲಿ ವಿವಿಯ ನಿವೃತ್ತ ಪ್ರಾಧ್ಯಾಪಕ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ!

vote

ಸಾರ್ವತ್ರಿಕ ಚುನಾವಣೆ ಬಂದಾಗ ಹೀಗೆ ಹಣ ಹಂಚುವ ದಂಧೆ ಇಷ್ಟು ಸುಲಭವಾಗಿ ನಡೆಯಲ್ಲ ಎಂದ ಅವರು, ಮುಖ್ಯಮಂತ್ರಿಯವರು ಹಣದ ಚೀಲ ಹೊತ್ತು ಅಭ್ಯಾಸ ಇರುವುದು ಕಾಂಗ್ರೆಸ್ ನವರಿಗೆ ಅಂತಾರೆ. ಆದರೆ ನಂಜನಗೂಡು ಮತ್ತು ಗುಂಡ್ಲುಪೇಟೆ ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆದಾಗ ಸರ್ಕಾರಿ ಅಧಿಕಾರಿಯ ಕಾರಿನಲ್ಲೇ ಹಣ ಸಿಕ್ಕಿಬಿತ್ತು. ಆ ಹಣ ಸಿಕ್ಕಿದ್ದು ಗುಂಡ್ಲುಪೇಟೆಯಲ್ಲಿ. ಆಗ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದರು. ಆಗ ಕಾಂಗ್ರೆಸ್ ಪಕ್ಷದವರು ಮಾಡಿದ ತಂತ್ರಗಾರಿಕೆಯನ್ನೇ ಈಗ ಬಿಜೆಪಿಯವರು ಅಳವಡಿಸಿಕೊಂಡಿದ್ದಾರೆಂದು ದೂರಿದರು.

CONGRESS JDS BJP copy

ಇಷ್ಟಾದರೂ ಕ್ಷೇತ್ರದ ಮತದಾರರು ಹಣಕ್ಕಿಂತ ಹೆಚ್ಚಾಗಿ ತಮಗೆ ಬದುಕು ತೋರಿಸಿರುವ ಜೆಡಿಎಸ್ ಪಕ್ಷದ ಬಗ್ಗೆ ಒಲವು ಹೊಂದಿದ್ದಾರೆ. ದೇವೇಗೌಡರು ಹಾಗೂ ನಾನು ನೀಡಿರುವ ಕಾರ್ಯಕ್ರಮಗಳ ಬಗ್ಗೆ ಅವರಿಗೆ ಅಭಿಮಾನ ಇದೆ. ಈವರೆಗೂ ನಾನು ಎಂಬತ್ತಕ್ಕೂ ಹೆಚ್ಚು ಹಳ್ಳಿಗಳನ್ನು ಸುತ್ತಿದ್ದೇನೆ. ಎಲ್ಲೇ ಹೋದರೂ ಜನ ನಮ್ಮ ಪಕ್ಷ ನೀಡಿರುವ ಕೊಡುಗೆಗಳ ಬಗ್ಗೆಯೇ ಮಾತನಾಡಿದ್ದರು, ರಾಷ್ಟ್ರೀಯ ಪಕ್ಷಗಳು ಒಡ್ಡುವ ಆಮಿಷಗಳಿಗೆ ಜನರು ಒಳಗಾಗಬಾರದು ಎಂದು ಕುಮಾರಸ್ವಾಮಿ ಅವರು ಮನವಿ ಮಾಡಿದರು.

Vote

ಎರಡೂ ರಾಷ್ಟ್ರೀಯ ಪಕ್ಷಗಳು ಹಣ ಬಲದಿಂದ ಚುನಾವಣೆ ಗೆಲ್ಲಬೇಕು ಎಂದು ಹೊರಟಿವೆಯೇ ವಿನಾ ಅಭಿವೃದ್ಧಿಯಿಂದಲ್ಲ ಎಂದ ಅವರು, ಕ್ಷೇತ್ರದ ಜನರಿಗೆ ನಾವು ಅಭಿವೃದ್ಧಿ ವಿಷಯಗಳನ್ನಷ್ಟೇ ಹೇಳಿದ್ದೇವೆ. ಆ ಮೂಲಕ ನಾವು ಸಿಂದಗಿ ಕ್ಷೇತ್ರದಲ್ಲಿ ಜಯ ಸಾಧಿಸುತ್ತೇವೆ ಎಂದು ಮಾಜಿ ಮುಖ್ಯಮಂತ್ರಿಗಳು ವಿಶ್ವಾಸ ವ್ಯಕ್ತಪಡಿಸಿದರು.

TAGGED:bjphd kumaraswamymoneyPublic TVSindagi By Electionvijayapuraಪಬ್ಲಿಕ್ ಟಿವಿಬಿಜೆಪಿವಿಜಯಪುರಸಿಂದಗಿ ಉಪಚುನಾವಣೆಹಣಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Rakshita Shetty 2
ಮನೆಮಗಳು ತರ ನೋಡಿದ್ದೀರಿ, ಇದಕ್ಕಿಂತ ಹೆಚ್ಚೇನು ಬೇಕಿಲ್ಲ: ರಕ್ಷಿತಾ ಶೆಟ್ಟಿ
Cinema Latest Main Post Sandalwood TV Shows
Pavithra Gowda 1
ಪವಿತ್ರಗೌಡಗೆ ಮನೆ ಊಟ ನಿರಾಕರಿಸಿದ್ದು ಒಳ್ಳೆಯದು – ಅಲೋಕ್ ಕುಮಾರ್
Cinema Districts Karnataka Latest Sandalwood Shivamogga States Top Stories
CM Siddaramaiah congratulates Gilli Nata on winning Kannada Bigg Boss
ಬಿಗ್‌ಬಾಸ್‌ ಗೆದ್ದ ಗಿಲ್ಲಿಯನ್ನು ಅಭಿನಂದಿಸಿದ ಸಿಎಂ
Bengaluru City Cinema Districts Karnataka Latest Top Stories TV Shows
Payal Changappa
ʻಅಮೃತ ಅಂಜನ್‌ʼ ಸಿನಿಮಾದ ಫೀಲಿಂಗ್‌ ಸಾಂಗ್‌ ರಿಲೀಸ್‌
Cinema Latest Sandalwood

You Might Also Like

WHO Donald Trump
Latest

ವಿಶ್ವ ಆರೋಗ್ಯ ಸಂಸ್ಥೆಯಿಂದ ಹೊರಬಂದ ಅಮೆರಿಕ

Public TV
By Public TV
48 minutes ago
delhi rain snowfall in kashmir
Latest

ದೆಹಲಿ ಸೇರಿ NCR ಪ್ರದೇಶದಾದ್ಯಂತ ಮಳೆ; ಕಾಶ್ಮೀರದಲ್ಲಿ ಹಿಮಪಾತ

Public TV
By Public TV
2 hours ago
AIR INDIA
Latest

ಅಹಮದಾಬಾದ್ ವಿಮಾನ ದುರಂತ ಬಳಿಕ ಏರ್ ಇಂಡಿಯಾಗೆ 15,000 ಕೋಟಿ ರೂ. ನಷ್ಟ

Public TV
By Public TV
2 hours ago
bengaluru auto driver
Bengaluru City

ಮಹಿಳೆ ಬಿಟ್ಟು ಹೋಗಿದ್ದ ಪರ್ಸ್, ಐಫೋನ್ ಮರಳಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ

Public TV
By Public TV
2 hours ago
Gold Silver
Bengaluru City

ಚಿನ್ನ, ಬೆಳ್ಳಿ ಪ್ರಿಯರಿಗೆ ಗುಡ್‌ನ್ಯೂಸ್ – ಒಂದೇ ದಿನ ದರದಲ್ಲಿ ಭಾರೀ ಇಳಿಕೆ

Public TV
By Public TV
3 hours ago
Jharkhand Maoist Killed
Latest

ಜಾರ್ಖಂಡ್‌ನಲ್ಲಿ ತಲೆಗೆ 1 ಕೋಟಿ ಬಹುಮಾನ ಹೊಂದಿದ್ದ ಮಾವೋವಾದಿ ಸೇರಿ 15 ನಕ್ಸಲರ ಹತ್ಯೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?