Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೊಗಳಿದರೆ ಮಾತು ಬೇರೆ ಟಾಪಿಕ್‌ಗೆ ಹೋಗುತ್ತಿತ್ತು, ಮೂಡಾಫ್ ಆಗಿದ್ದನ್ನು ನೋಡಿಲ್ಲ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹೊಗಳಿದರೆ ಮಾತು ಬೇರೆ ಟಾಪಿಕ್‌ಗೆ ಹೋಗುತ್ತಿತ್ತು, ಮೂಡಾಫ್ ಆಗಿದ್ದನ್ನು ನೋಡಿಲ್ಲ

Bengaluru City

ಹೊಗಳಿದರೆ ಮಾತು ಬೇರೆ ಟಾಪಿಕ್‌ಗೆ ಹೋಗುತ್ತಿತ್ತು, ಮೂಡಾಫ್ ಆಗಿದ್ದನ್ನು ನೋಡಿಲ್ಲ

Public TV
Last updated: October 29, 2021 10:23 pm
Public TV
Share
4 Min Read
parameshwar gundkal Puneeth Rajkumar
SHARE

– ಎಲ್ಲರೂ ದುಡ್ಡು ಗೆಲ್ಲಬೇಕು, ಎಲ್ಲರೂ ಖುಷಿಯಾಗಿರಬೇಕು
– ಅಪ್ಪು ವ್ಯಕ್ವಿತ್ವ, ಸರಳತೆಯ ಬಗ್ಗೆ ಪರಮೇಶ್ವರ್‌ ಗುಂಡ್ಕಲ್‌ ಪೋಸ್ಟ್‌

ಬೆಂಗಳೂರು: “ಕೋಟ್ಯಧಿಪತಿ ಎಪಿಸೋಡ್ ಶೂಟ್ ಆಗುವಾಗ ಪ್ರತೀ ಪ್ರಶ್ನೆಗೂ ಕಂಟೆಸ್ಟೆಂಟುಗಳಿಗಿಂತ ಹೆಚ್ಚು ಒತ್ತಡದಲ್ಲಿ ಇರುತ್ತಿದ್ದುದು ಸ್ವತಃ ಅಪ್ಪು. ಎಲ್ಲರೂ ದುಡ್ಡು ಗೆಲ್ಲಬೇಕು, ಎಲ್ಲರೂ ಖುಷಿಯಾಗಿರಬೇಕು ಎಂದು ಪ್ರಾಮಾಣಿಕವಾಗಿ ಆಸೆಪಡುತ್ತಿದ್ದ ಒಳ್ಳೆ ಮನಸ್ಸು. ಮೂರು ಲಕ್ಷ ಇಪ್ಪತ್ತು ಸಾವಿರದ ನಂತರ ಪ್ರತಿ ಪ್ರಶ್ನೆಯೂ ಅವರನ್ನು ಸಿಕ್ಕಾಪಟ್ಟೆ ನರ್ವಸ್ ಮಾಡುತ್ತಿತ್ತು” – ಇದು ಕಲರ್ಸ್‌ ವಾಹಿನಿಯ ಬಿಸಿನೆಸ್‌ ಹೆಡ್‌ ಪರಮೇಶ್ವರ್‌ ಗುಂಡ್ಕಲ್‌ ಅವರು ಅಪ್ಪು ಬಗ್ಗೆ ಬರೆದ ಸಾಲುಗಳು.

ಫೇಸ್‌ಬುಕ್‌ನಲ್ಲಿ ಪರಮೇಶ್ವರ್‌ ಗುಂಡ್ಕಲ್‌ ಅವರು ಪುನೀತ್‌ ಅವರ ಜೊತೆಗಿನ ಶೂಟಿಂಗ್‌ ಸಮಯ, ವ್ಯಕ್ವಿತ್ವ, ಸರಳತೆಯ ಬಗ್ಗೆ ಪೋಸ್ಟ್‌ ಮಾಡಿದ್ದು ಅದನ್ನು ಯಥಾವತ್ತಾಗಿ ನೀಡಲಾಗಿದೆ.


ಪೋಸ್ಟ್‌ನಲ್ಲಿ ಏನಿದೆ?
ಕೊನೆಯ ಸಲ ಮಾತಾಡಿದ್ದು ಸದಾಶಿವ ನಗರದ ಕಚೇರಿಯಲ್ಲಿ. ಆಫೀಸಿನ ಹೊರಗೆ, ಕೆಳಗಡೆ, ಮೇಲ್ಗಡೆ ಎಲ್ಲಾ ಕಡೆ ಹುಡುಗರು ಓಡಾಡ್ತಾ ಇದ್ದಿದ್ದು ನೋಡಿ ಆಶ್ಚರ್ಯವಾಗಿತ್ತು. “ಅಪ್ಪು ಸರ್‍, ಆಫೀಸೇನು ಇಷ್ಟು ಬ್ಯುಸಿಯಾಗಿದೆ’ ಎಂದು ಕೇಳಿದರೆ ನಕ್ಕರು. ಇದಕ್ಕಿಂತ ನಿಷ್ಕಲ್ಮಶವಾಗಿ ನಗೋದು ಸಾಧ್ಯವೇ ಇಲ್ಲ ಅನ್ನುವ ಹಾಗೆ ಇತ್ತು ಅವರ ನಗು.

ಮನೆಗೆ ಹೋದರೂ, ಆಫೀಸಿಗೆ ಹೋದರೂ, ಅವರ ಕಾರಾವಾನಲ್ಲಿ ಭೇಟಿಯಾದರೂ ಬಂದೇ ಬರುವ ಫಿಲ್ಟರ್‍ ಕಾಫೀ ಬಂತು. “ಮೂರು ಪ್ರೊಡಕ್ಷನ್ನುಗಳು ನಡೀತೀವೆ. ಅದಕ್ಕೇ ಆಫೀಸು ಇಷ್ಟು ಬ್ಯುಸಿ’ ಎಂದು ಉತ್ಸಾಹದಿಂದ ಮಾತಾಡಿದರು. ಕರ್ನಾಟಕದ ಬಗ್ಗೆ ಸುಮಾರು ದಿನಗಳಿಂದ ಅವರೊಂದು ಡಾಕ್ಯುಮೆಂಟರಿ ಮಾಡುತ್ತಿರುವುದರ ಬಗ್ಗೆ ಮಾತು ಬಂತು. ಇದನ್ನ ಥಿಯೇಟರಲ್ಲಿ ರಿಲೀಸ್ ಮಾಡಿದ್ರೆ ಹೇಗಿರುತ್ತೆ ಅಂತ ಕೇಳುತ್ತಾ ನಾಲ್ಕೈದು ನಿಮಿಷಗಳ ಕ್ಲಿಪ್ಪಿಂಗ್ ತೋರಿಸಿದರು. ರೋಮಾಂಚನ ಆಗುವಂಥ ವಿಷ್ಯುವಲ್ಲುಗಳು ಅದರಲ್ಲಿದ್ದವು. ’ಇದು ಅದ್ಭುತವಾಗಿದೆ” ಎಂದು ಹೇಳಿದಾಗ ಮತ್ತೆ ಅದೇ ನಿಷ್ಕಲ್ಮಷವಾದ ನಗು. ಹೊಗಳಿದರೆ ಸಂಕೋಚದಿಂದ ಅಪ್ಪು ಯಾವಾಗಲೂ ಮಾತು ಬದಲಾಯಿಸಿಬಿಡುತ್ತಿದ್ದರು.

ಸಣ್ಣ ಸಣ್ಣ ವಿಷಯಗಳಿಗೇ ಸಿಕ್ಕಾಪಟ್ಟೆ ಖುಷಿ ಪಡುತ್ತಿದ್ದ ದೊಡ್ಡ ಮನಸ್ಸು. ಸೆಟ್ಟಲ್ಲಿ ಅವರು ಟೆನ್ಶನ್ ಮಾಡಿಕೊಂಡಿದ್ದನ್ನು ಅಷ್ಟು ದಿನಗಳಲ್ಲಿ ಒಂದು ಸಲವೂ ನೋಡಿಲ್ಲ. ಚೆನ್ನಾಗಿ ಊಟ ಮಾಡಿ ಅಂತ ಯಾವಾಗಲೂ ಹೇಳ್ತಿದ್ರು. ಸೀಸನ್ನಲ್ಲಿ ಒಂದು ಸಲವಾದ್ರೂ ಚಿತ್ರೀಕರಣ ತಂಡದಲ್ಲಿರೋ ಎಲ್ಲರಿಗೂ ಅವರ ಕಡೆಯಿಂದ ಒಂದು ಊಟ ಬರಲೇಬೇಕು. ಎಲ್ಲರಿಗೂ ಅವರ ಕಡೆಯಿಂದ ಒಂದು ಗಿಫ್ಟ್ ಕೊಡಲೇಬೇಕು. ಇದನ್ನೆಲ್ಲಾ ಅವರು ತುಂಬಾ ಸಹಜವಾಗಿ, ಇದೊಂದು ವಿಷಯವೇ ಅಲ್ಲ ಅನ್ನುವ ಹಾಗೆ ಸದ್ದಿಲ್ಲದೇ ಮಾಡುತ್ತಿದ್ದರು. ಆಡಂಬರವೇ ಇಲ್ಲದೇ ಒಬ್ಬ ಸ್ಟಾರ್‍ ಹೇಗೆ ಆಗೋದಕ್ಕೆ ಸಾಧ್ಯ ಎನ್ನುವ ಪ್ರಶ್ನೆಗೆ ಉತ್ತರದ ಥರ ಇದ್ದರು ಅಪ್ಪು.

ಕೋಟ್ಯಧಿಪತಿ ಎಪಿಸೋಡ್ ಶೂಟ್ ಆಗುವಾಗ ಪ್ರತೀ ಪ್ರಶ್ನೆಗೂ ಕಂಟೆಸ್ಟೆಂಟುಗಳಿಗಿಂತ ಹೆಚ್ಚು ಒತ್ತಡದಲ್ಲಿ ಇರುತ್ತಿದ್ದುದು ಸ್ವತಃ ಅಪ್ಪು. ಎಲ್ಲರೂ ದುಡ್ಡು ಗೆಲ್ಲಬೇಕು, ಎಲ್ಲರೂ ಖುಷಿಯಾಗಿರಬೇಕು ಎಂದು ಪ್ರಾಮಾಣಿಕವಾಗಿ ಆಸೆಪಡುತ್ತಿದ್ದ ಒಳ್ಳೆ ಮನಸ್ಸು. ಮೂರು ಲಕ್ಷ ಇಪ್ಪತ್ತು ಸಾವಿರದ ನಂತರ ಪ್ರತಿ ಪ್ರಶ್ನೆಯೂ ಅವರನ್ನು ಸಿಕ್ಕಾಪಟ್ಟೆ ನರ್ವಸ್ ಮಾಡುತ್ತಿತ್ತು. ತಪ್ಪು ಉತ್ತರ ಕೊಟ್ಟಾಗ ಕಂಟೆಸ್ಟೆಂಟುಗಳಿಗಿಂತ ಹೆಚ್ಚು ನಿರಾಶೆ ಆಗುತ್ತಿದ್ದದ್ದು ಅಪ್ಪುಗೆ. ಸರಿ ಉತ್ತರ ಕೊಟ್ಟಾಗ ಅವರ ದನಿಯಲ್ಲಿ ಸಿಕ್ಕಾಪಟ್ಟೆ ಎಕ್ಸೈಟ್ಮೆಂಟ್. ಯಾರಾದ್ರೂ ಕೋಟಿ ಗೆಲ್ಲಬೇಕು ಎಂದು ಸಾವಿರ ಸಲ ಹೇಳುತ್ತಿದ್ದರು. ತಪ್ಪು ಉತ್ತರ ಕೊಟ್ಟು ಯಾರಾದರೂ ದುಡ್ಡು ಸೋತರೆ ಶೂಟಿಂಗ್ ಮುಗಿದ ಮೇಲೆ ಸಿಕ್ಕಾಪಟ್ಟೆ ಬೇಜಾರು ಮಾಡಿಕೊಳ್ಳುತ್ತಿದ್ದರು. ಗೆಲ್ಲದ ಎಷ್ಟೋ ಜನರಿಗೆ ತಾವೇ ದುಡ್ಡು ಕೊಡುತ್ತಿದ್ದರು ಮತ್ತು ಅದು ಎಲ್ಲೂ ಸುದ್ದಿಯಾಗದ ಹಾಗೆ ನೋಡಿಕೊಳ್ಳುತ್ತಿದ್ದರು. ಎಲ್ಲರಿಗೂ ಸಿಕ್ಕಾಪಟ್ಟೆ ದುಡ್ಡು ಸಿಗಬೇಕು, ಯಶಸ್ಸು ಸಿಗಬೇಕು, ಎಲ್ಲರೂ ದೇಶ ಸುತ್ತಬೇಕು, ಖುಷಿಯಾಗಿರಬೇಕು ಅಂತ ಬಹಳ ಪ್ರಾಮಾಣಿಕವಾಗಿ ಆಸೆ ಪಡುತ್ತಿದ್ದ ವ್ಯಕ್ತಿ.

ಅಷ್ಟೊಂದು ದಿನಗಳಲ್ಲಿ ಒಂದು ದಿನವೂ ಅವರ ಮೂಡಾಫ್ ಆಗಿದ್ದನ್ನ ನೋಡಲಿಲ್ಲ. ಟೆನ್ಶನ್ ಮಾಡಿಕೊಂಡಿದ್ದನ್ನ ನೋಡಲಿಲ್ಲ. ಬೇರೆಯವರ ಬಗ್ಗೆ ಮಾತಾಡಿದ್ದು ಕೇಳಿಲ್ಲ. ಬೇಡದ್ದನ್ನು ಮಾತಾಡಿದ್ದು ನೆನಪಿಲ್ಲ. ಅವರನ್ನು ಹೊಗಳಿದರೆ ಮಾತು ಬೇರೆ ಟಾಪಿಕ್ಕಿಗೆ ಹೋಗುತ್ತಿತ್ತು. ಬೇರೆ ಬೇರೆ ವೆಬ್ ಸೀಸನ್ನುಗಳ ಬಗ್ಗೆ ಮಾತಾಡುತ್ತಿದ್ದರೆ ಅವರ ಕಣ್ಣುಗಳು ಹೊಳೆಯುತ್ತಿದ್ದವು. ಅವರು ನೋಡಿದ ಅದ್ಭುತವಾದ ಟೆಕ್ನಿಷಿಯನ್ನುಗಳ ಬಗ್ಗೆ, ಬೇರೆ ಬೇರೆ ದೇಶಗಳ ಜಾಗಗಳ ಬಗ್ಗೆ, ಅಲ್ಲಿ ಓಡಿಸಿದ ಸೈಕಲ್ಲುಗಳ ಬಗ್ಗೆ, ತಿಂಡಿ ಬಗ್ಗೆ ಖುಷಿಯಿಂದ ಮಾತಾಡುತ್ತಿದ್ದರೆ ಅವರಿಗೆ ಸುಸ್ತಾಗುತ್ತಲೇ ಇರಲಿಲ್ಲ.

ಇಂದು ಮಧ್ಯಾಹ್ನ ಸುದ್ದಿ ಬಂದು ಮನಸ್ಸಿಗೆ ಸಿಕ್ಕಾಪಟ್ಟೆ ಕಳವಳ ಆಗಿ ವಿಕ್ರಮ್ ಆಸ್ಪತ್ರೆಗೆ ಹೋದರೆ ಅಲ್ಲಿಯೂ ಅವರು ಅದೇ ನೆಮ್ಮದಿಯಿಂದ ಮಲಗಿದ್ದಾರೆ ಅನಿಸಿತು. ಅವರು ಮಲಗಿದ್ದನ್ನು ಯಾವತ್ತೂ ನೋಡಿರಲಿಲ್ಲ. ಯಾರಿಗೋ ಒಳ್ಳೆಯದಾಗಿದ್ದರ ಬಗ್ಗೆ ಮಾತಾಡಿದರೆ, ಯಾವುದೋ ತಿಂಡಿ ಬಗ್ಗೆ ಮಾತಾಡಿದರೆ ಎದ್ದು ಕುಳಿತುಕೊಳ್ಳುತ್ತಾರೆ ಅನಿಸಿತು. ಯಾರಾದರೂ ಕೋಟಿ ಗೆಲ್ಲಬೇಕು ಎಂದು ಆಸೆಪಟ್ಟು ಮಾತಾಡುತ್ತಾರೆ ಅನಿಸಿತು. ಇತ್ತೀಚೆಗೆ ನೋಡಿದ ಒಂದು ಒಳ್ಳೆಯ ಸಿನಿಮಾ ಅಥವಾ ಕ್ಯಾರೆಕ್ಟರ್‍ ಬಗ್ಗೆ ಚರ್ಚೆ ಮಾಡುತ್ತಾರೆ ಅಂತ ಅನಿಸಿತು. ಇತ್ತೀಚೆಗೆ ಭೇಟಿಯಾದ ಒಳ್ಳೆಯ ಬರಹಗಾರ ಅಥವಾ ಕೇಳಿದ ಸ್ಕ್ರಿಪ್ಟ್ ಬಗ್ಗೆ ಮಾತಾಡುತ್ತಾರೆ ಎಂದು ಸುಮಾರು ನಿಮಿಷ ಕಾದೆ.

ಮಲಗಿದ್ದ ಅವರು ಏಳಲಿಲ್ಲ
ಹೊರಗೆ ಅವರ ಸ್ಟಾಫ್ ಬಿಕ್ಕಿಬಿಕ್ಕಿ ಅಳುತ್ತಿರುವುದು ನೋಡಿದಾಗ ಸಂಕಟವಾಯಿತು. ಕರುಳು ಕಿವುಚುವಂತೆ ಸದ್ದು ಮಾಡುತ್ತಾ ಮಿಲ್ಲರ್ಸ್ ರಸ್ತೆಯಲ್ಲಿ ಇವತ್ತು ಹೊರಟ ಆಂಬುಲೆನ್ಸ್ ನೋಡಿದಾಗ ಅದೇ ರಸ್ತೆಯಲ್ಲಿ ಸ್ವತಃ ಅವರೇ ಡ್ರೈವ್ ಮಾಡಿಕೊಂಡು ಬಂದು ನಮ್ಮ ಆಫೀಸಿನ ಮುಂದೆ ಕಾರು ನಿಲ್ಲಿಸಿದ್ದು, ಕೇಳಿದವರಿಗೆಲ್ಲಾ ಸಿಟ್ಟು ಮಾಡಿಕೊಳ್ಳದೇ ಫೋಟೋ ಕೊಟ್ಟಿದ್ದು, ಲಿಫ್ಟಲ್ಲಿ ಸಿಕ್ಕವರ ಕಷ್ಟ ಸುಖ ಕೇಳಿದ್ದು, ಆಫೀಸಿನಲ್ಲಿ ಸಣ್ಣ ಹುಡುಗನ ಬೇಡಿಕೆಗೂ ಸ್ಪಂದಿಸಿದ್ದೆಲ್ಲಾ ನೆನಪಾಗಿ ದೇವರ ಮೇಲೆ ಸಿಟ್ಟು ಬಂತು.

ತಿರುಪತಿ ಬೆಟ್ಟವನ್ನು ಕೇವಲ 98 ನಿಮಿಷದಲ್ಲಿ ಹತ್ತಿದ್ದರ ಬಗ್ಗೆ ಸಂಭ್ರಮದಿಂದ ಮಾತಾಡುತ್ತಾ ಮುಂದಿನ ಸಲ ಹೋಗುವಾಗ ಖಂಡಿತಾ ಕಾಲ್ ಮಾಡುತ್ತೇನೆ ಎಂದಿದ್ದು ನೆನಪಾಯಿತು. ಪ್ರತಿಕ್ಷಣವನ್ನೂ ಇವರು ಹೇಗೆ ಇಷ್ಟು ಪ್ರೀತಿಯಿಂದ ಬದುಕುತ್ತಾರೆ ಎನ್ನುವುದು ಅಪ್ಪುವನ್ನು ನೋಡಿದ ಎಲ್ಲರಿಗೂ ಕಾಡಿರಬಹುದಾದ ಪ್ರಶ್ನೆ. ಬೇಗ ಹೋಗಬೇಕು ಎಂದು ಗೊತ್ತಿದ್ದರಿಂದಲೇ ಅವರು ಇದ್ದಷ್ಟು ದಿನವನ್ನು ಇಷ್ಟು ಜೀವನಪ್ರೀತಿಯ ಜೊತೆ ಬದುಕಿದರಾ? ಇನ್ನೊಂದಿಷ್ಟು ನಿಮಿಷಗಳು ಇದ್ದಿದ್ದರೆ ಏನೂ ಆಗುತ್ತಿರಲಿಲ್ಲ. ಮೇಲೆ ಹೋಗಲು ಅಷ್ಟೊಂದು ಅವಸರ ಬೇಕಾಗಿರಲಿಲ್ಲ. ಮತ್ತೆ ಬನ್ನಿ!

TAGGED:kannadaParameshwar GundkalPuneeth Rajkumarsandalwoodಅಪ್ಪುಪುನೀತ್ ರಾಜ್‍ಕುಮಾರ್ಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Kavya Shaiva BBK 12
ಬಿಗ್‌ಬಾಸ್ ಮನೆಗೆ ಹೋಗಲು ಕಾವ್ಯ ಖರ್ಚು ಮಾಡಿದ್ದೆಷ್ಟು ಗೊತ್ತಾ?
Cinema Latest Top Stories TV Shows
pavithra gowda 1
ಕಾನೂನು ಎಲ್ಲರಿಗೂ ಒಂದೇ – ಮನೆ ಊಟಕ್ಕೆ ಬೇಡಿದ್ದ ಪವಿತ್ರಾಗೆ ಶಾಕ್‌
Bengaluru City Cinema Court Karnataka Latest Main Post
BBK12 Kavya Shaiva congratulates Bigg Boss winner Gilli Nata
ಬಡವರ ಮಕ್ಕಳು ಬೆಳಿಬೇಕು ಕಣ್ರಯ್ಯ – ಗಿಲ್ಲಿಯನ್ನು ಅಭಿನಂದಿಸಿದ ಕಾವ್ಯ
Cinema Latest Main Post TV Shows
AR Rahman 2
ರೆಹಮಾನ್ ಕೋಮುರಾಗ – ಪುತ್ರಿಯರ ಬೆಂಬಲ
Cinema Latest Top Stories

You Might Also Like

Lakkundi Excavation The Archeology Department has fully excavated the Panipeeth of Shivalinga 1
Districts

ಲಕ್ಕುಂಡಿ ಉತ್ಕನನ – ಶಿವಲಿಂಗದ ಪಾಣಿಪೀಠವನ್ನು ಸಂಪೂರ್ಣ ಹೊರತೆಗೆದ ಪುರಾತತ್ವ ಇಲಾಖೆ

Public TV
By Public TV
11 minutes ago
team india pakistan surykumar yadav
Cricket

‌ಬಾಂಗ್ಲಾಕ್ಕೆ ಫುಲ್‌ ಸಪೋರ್ಟ್ – ವಿಶ್ವಕಪ್‌ನಿಂದ ಹಿಂದೆ ಸರಿಯುವುದಾಗಿ ಪಾಕಿಸ್ತಾನ ಬೆದರಿಕೆ

Public TV
By Public TV
47 minutes ago
Indian Rural Village
Belgaum

ಅಕ್ಕನ ಹಿಂದೆ ಬಿದ್ದ ಲವ್ವರ್‌ಗೆ ದೇವಸ್ಥಾನದಲ್ಲೇ ಚಟ್ಟ ಕಟ್ಟಿದ ಅಪ್ರಾಪ್ತ ಸಹೋದರ!

Public TV
By Public TV
54 minutes ago
Nitin Nabin 3
Latest

ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್‍ಗೆ Z ಶ್ರೇಣಿಯ ಭದ್ರತೆ

Public TV
By Public TV
2 hours ago
01 18
Latest

ಲೀಟರ್‌ ಹಾಲು 175 ರೂ., ಕೆಜಿ ಟೊಮೆಟೊ 185 – ಭಾರತಕ್ಕಿಂತ 3 ಪಟ್ಟು ಕುಸಿದ ಕರೆನ್ಸಿ, ವೆನೆಜುವೆಲಾಗೆ ತೈಲ ಸಂಪತ್ತು ಅರೆಯಬಹುದೇ ಮದ್ದು?

Public TV
By Public TV
2 hours ago
Haveri Accident
Crime

ಲಾರಿ, ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಸವಾರ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?