ಅಪ್ಪು ಸಾವಿನ ಬೆನ್ನಲ್ಲೇ ಎಚ್ಚೆತ್ತ ಕೇರಳ ಸರ್ಕಾರ

Public TV
1 Min Read
puneeth rajkuma 2

ತಿರುವನಂತಪುರಂ: ಸ್ಯಾಂಡಲ್‍ವುಡ್‍ನ ಯುವರತ್ನ, ನಟ ಪುನೀತ್ ರಾಜ್‍ಕುಮಾರ್ ಅವರ ನಿಧನದ ಬೆನ್ನಲ್ಲೇ ಕೇರಳ ಸರ್ಕಾರ ಜಿಮ್‍ಗಳಲ್ಲಿ ಎಇಡಿ ಕಡ್ಡಾಯ ಮಾಡುವಂತೆ ನಿರ್ಧಾರ ತೆಗೆದುಕೊಂಡಿದೆ.

ಕೇರಳ ಸರ್ಕಾರ ರಾಜ್ಯಾದ್ಯಂತ ಇರುವ ಎಲ್ಲ ಜಿಮ್ನಾಷಿಯಂಗಳು, ಕ್ರೀಡಾಂಗಣಗಳು, ಒಳಾಂಗಣಗಳಲ್ಲಿ ಮೂಲಭೂತ ಪ್ರಥಮ ಚಿಕಿತ್ಸಾ ಕಿಟ್‍ಗಳು ಸೇರಿದಂತೆ ಸ್ವಯಂಚಾಲಿತ ಬಾಹ್ಯ ಡಿಫಿಬ್ರಿಲೇಟರ್(ಎಇಡಿ-ಆಟೋಮೇಟೆಡ್ ಎಕ್ಸ್ಟರ್ನಲ್ ಟಿಫಿಬ್ರಿಲೇಟರ್)ಗಳನ್ನು ಬಳಕೆಗೆ ಸಿದ್ಧವಾಗಿಟ್ಟುಕೊಳ್ಳುವ ಅವಶ್ಯಕತೆಯನ್ನು ಎತ್ತಿಹಿಡಿದಿದೆ. ಇದನ್ನೂ ಓದಿ: ನನ್ನ ಮಗುವನ್ನು ಕಳೆದುಕೊಂಡಿದ್ದೇನೆ – ಬಿಕ್ಕಿ ಬಿಕ್ಕಿ ಅತ್ತ ಶಿವಣ್ಣ

ನಗರದ ರಾಯಲ್ ಬ್ಯಾಡ್ಮಿಂಟನ್ ಕೋರ್ಟ್‍ನಲ್ಲಿ ಶನಿವಾರ ಪ್ರಥಮ ಚಿಕಿತ್ಸಾ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಾರಿಗೆ ಸಚಿವ ಅಂಟೋನಿ ರಾಜು, ಕೇರಳದ ಕ್ರೀಡಾ ಸಚಿವ ವಿ. ಆಬ್ದುರೆಹಮಾನ್ ಅವರೊಂದಿಗೆ ಚರ್ಚಿಸಿ ರಾಜ್ಯದಲ್ಲಿ ಇದನ್ನು ತುರ್ತಾಗಿ ಜಾರಿಗೆ ತರುವ ಭರವಸೆಯನ್ನು ನೀಡಿದರು. ನಟ ಪುನೀತ್ ಅಕಾಲ ನಿಧನದ ಬಗ್ಗೆ ಬೇಸರ ಹೊರಹಾಕಿದ್ದಾರೆ. ಇದನ್ನೂ ಓದಿ: ಪುನೀತ್ ಸಾವು ದೊಡ್ಡ ಅನ್ಯಾಯ: ಸೃಜನ್ ಲೋಕೇಶ್ 

ಹೃದಯ ಸ್ತಂಭನದಿಂದ ಮೃತಪಟ್ಟ ನಟ ಪುನೀತ್ ರಾಜ್‍ಕುಮಾರ್ ಅವರ ಅಂತ್ಯಕ್ರಿಯೆ ಈಡಿಗ ಸಂಪ್ರದಾಯದಂತೆ ನೆರವೇರಿದೆ. ಅಭಿಮಾನಿಗಳು ಪ್ರೀತಿಯ ಅಪ್ಪುನನ್ನು ಕಳೆದುಕೊಂಡಿರುವ ದುಃಖದಲ್ಲಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *