ಪುನೀತ್ ಭೇಟಿಯಾಗುವ ಸೌಭಾಗ್ಯ ನನಗೆ ಸಿಕ್ಕಿಲ್ಲ: ವಿಜಯ್ ಸೇತುಪತಿ

Public TV
1 Min Read
VIJAY SETHU PATHI 1

ಬೆಂಗಳೂರು: ಸ್ಯಾಂಡಲ್‍ವುಡ್ ನಟ ದಿವಂಗತ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಸಮಾಧಿಗೆ ಕಾಲಿವುಡ್ ಸ್ಟಾರ್ ನಟ ವಿಜಯ್ ಸೇತುಪತಿ ನಮನ ಸಲ್ಲಿಸಿದರು.

vijay

ಪುನೀತ್ ರಾಜ್‍ಕುಮಾರ್ ಅಗಲಿ ಇಂದಿಗೆ 7 ದಿನಕಳೆದಿದ್ದು, ಬುಧವಾರ ತಮಿಳಿನ ಖ್ಯಾತ ನಟ ವಿಜಯ್ ಸೇತುಪತಿ ಬೆಂಗಳೂರಿನ ಕಂಠೀರವ ಸ್ಟೇಡಿಯಂಗೆ ಭೇಟಿ ನೀಡಿ ಪುನೀತ್ ಸಮಾಧಿ ದರ್ಶನ ಪಡೆದರು. ಇದೇ ವೇಳೆ ಪುನೀತ್ ಸಾವಿನ ಬಗ್ಗೆ ನೋವು ತೋಡಿಕೊಂಡರು. ಇದನ್ನೂ ಓದಿ: ಶಿರವಾಳ ಗ್ರಾಮದ ವೃತ್ತಕ್ಕೆ ಪುನೀತ್ ಹೆಸರು ನಾಮಕರಣ

PUNEETH RAJKUMAR

ಪುನೀತ್ ರಾಜ್‍ಕುಮಾರ್ ಫ್ಯಾನ್ ನಾನು. ಅವರನ್ನು ಇದುವರೆಗೆ ಭೇಟಿ ಆಗಿಲ್ಲ. ಆ ಸೌಭಾಗ್ಯ ನನಗೆ ಸಿಕ್ಕಿಲ್ಲ. ಆದರೆ ನನ್ನ ಸಿನಿಮಾ ನೋಡಿ ಒಂದು ಸಲ ಫೋನ್ ಮಾಡಿದ್ದರು. ಆಗ ಬಹಳ ಪ್ರೀತಿಯಿಂದ ಮಾತಾಡಿದರು. ಅವರಿಲ್ಲ ಎನ್ನುವುದನ್ನು ಅರಗಿಸಿಕೊಳ್ಳೋಕೆ ಆಗುತ್ತಿಲ್ಲ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸಂತಾಪ ಸೂಚಿಸಿದರು. ಇದನ್ನೂ ಓದಿ: ನನಗೆ ಅರ್ಥ ಮಾಡಿಕೊಳ್ಳಲು, ಈ ಸತ್ಯವನ್ನ ಅರಗಿಸಿಕೊಳ್ಳಲು ಆಗ್ತಿಲ್ಲ: ರಾಮ್ ಚರಣ್ ತೇಜಾ

RAM CHARAN TEJA SHIVANNA

ಬುಧವಾರ ಟಾಲಿವುಡ್ ನಟ ರಾಮ್‍ಚರಣ್ ತೇಜ ಅವರು ಶಿವರಾಜ್ ಕುಮಾರ್ ಅವರ ಮನೆಗೆ ಭೇಟಿ ನೀಡಿ ಸಾಂತ್ವಾನ ಹೇಳಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನಗೆ ತುಂಬಾ ದುಃಖವಾಗುತ್ತಿದೆ. ನನಗೆ ಅರ್ಥ ಮಾಡಿಕೊಳ್ಳಲು ಆಗುತ್ತಿಲ್ಲ, ಈ ಸತ್ಯವನ್ನ ಅರಗಿಸಿಕೊಳ್ಳಲು ಆಗುತ್ತಿಲ್ಲ. ಯಾರಿಗೆ ಏನಾದರೂ ಆದರೆ ನಮಗೆ ಅರ್ಥವಾಗುತ್ತೆ. ಆದರೆ ಪುನೀತ್ ಅವರಿಗೆ ಈ ರೀತಿಯಾಗಿದ್ದು, ನನಗೆ ನಿಜವಾಗಿಯೂ ತುಂಬಾ ದುಃಖ ತಂದಿದೆ ಎಂದು ಸಂತಾಪ ಸೂಚಿಸಿದರು.

Share This Article
Leave a Comment

Leave a Reply

Your email address will not be published. Required fields are marked *