Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dharwad

ಅಪ್ಪು ಪ್ರೇರಣೆ – ಸಪ್ತಪದಿಗೂ ಮುನ್ನವೇ ನವ ದಂಪತಿ ನೇತ್ರದಾನದ ಶಪಥ!

Public TV
Last updated: November 11, 2021 8:02 am
Public TV
Share
2 Min Read
HBL COUPLE 1
SHARE

– ವಧು, ವರರ ಜೊತೆ 11 ಮಂದಿ ಐ ಡೊನೇಟ್‍ಗೆ ತೀರ್ಮಾನ

ಹುಬ್ಬಳ್ಳಿ: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಮ್ಮ ಮಧ್ಯೆ ಇಲ್ಲ. ಆದರೆ ಪುನೀತ್ ರಾಜ್ ಕುಮಾರ್ ಅವರ ಆದರ್ಶಗಳು ಇದೀಗ ನೂರಾರು ಜನರಿಗೆ ಮಾದರಿಯಾಗಿದೆ. ಅವರು ತಮ್ಮ ಕಣ್ಣುಗಳನ್ನ ದಾನ ಮಾಡಿ ನಾಲ್ವರ ಬಾಳಿಗೆ ಬೆಳಕಾಗಿದ್ದಾರೆ. ಹೀಗಾಗಿ ಅಪ್ಪು ನಿಧನದ ನಂತರ ಸಾವಿರಾರು ಜನರು ನೇತ್ರದಾನಕ್ಕೆ ಹೆಸರು ನೋಂದಾಯಿಸುತ್ತಿದ್ದಾರೆ. ಅದೇ ರೀತಿ ಹುಬ್ಬಳ್ಳಿಯಲ್ಲಿ ಹೊಸ ಜೀವನಕ್ಕೆ ಕಾಲ್ಟಿಟ್ಟ ನೂತನ ದಂಪತಿ ಸಪ್ತಪದಿಗೂ ಮುನ್ನ ನೇತ್ರದಾನದ ಶಪಥ ಮಾಡಿದ್ದು ವಿಶೇಷವಾಗಿದೆ.

HBL COUPLE 2

ಹುಬ್ಬಳ್ಳಿಯ ಅಂಗಡಿ ಕುಟುಂಬದ ಸುಚಿತ್ ಎಂ ಟೆಕ್ ಪದವೀಧರ. ಅಪ್ಪು ಅವರ ಕಟ್ಟಾ ಅಭಿಮಾನಿ. ಹೀಗಾಗಿ ಅಪ್ಪು ಅವರ ಆದರ್ಶಗಳೇ ಇವರಿಗೆ ಪ್ರೇರಣೆ. ಇತ್ತ ಬಿಇ ಪದವೀಧರೆ ಆಗಿರುವ ರಂಜನಿಯನ್ನ ಮದುವೆಯಾಗುವ ವೇಳೆ ಸುಚಿತ್ ಎಲ್ಲರಿಗೂ ಮಾದರಿಯಾಗುವಂತಹ ಕೆಲಸ ಮಾಡಿದ್ದಾರೆ. ಅದ್ದೂರಿಯಾಗಿ ಮದುವೆ ಆದರೂ ಸಪ್ತಪದಿಗೂ ಮುನ್ನ ದಂಪತಿ ನೇತ್ರದಾನ ಶಪಥ ಮಾಡಿ ಹೊಸ ಜೀವನಕ್ಕೆ ಕಾಲಿಟ್ಟಿರುವುದು ವಿಶೇಷವಾಗಿದೆ. ಇದನ್ನೂ ಓದಿ:ರಾಜ್ಯ ರಾಜಕೀಯದಲ್ಲಿ ಬಿಟ್ ಕಾಯಿನ್ ಬಿರುಗಾಳಿ – ಹ್ಯಾರಿಸ್, ಲಮಾಣಿ ಪುತ್ರರ ಹೆಸರು ಹೇಳಿರೋ ಹ್ಯಾಕರ್ ಶ್ರೀಕಿ

HBL COUPLE

ಇದೂವರೆಗೂ ಹಲವು ಬಾರಿ ರಕ್ತದಾನ ಮಾಡಿ ಮಾದರಿಯಾಗಿದ್ದ ಸುಚಿತ್, ತಮ್ಮ ಮದುವೆಯ ದಿನವೇ ಮನೆಯವರನ್ನ ಒಪ್ಪಿಸಿ ನೇತ್ರದಾನಕ್ಕೆ ನೋಂದಣಿ ಮಾಡಿಸಿದ್ದಾರೆ. ಅಲ್ಲದೇ ಕುಟುಂಬದ ಸದಸ್ಯರು ಸಹ ನೇತ್ರದಾನ ಶಪಥ ಮಾಡುವ ಮೂಲಕ ವಿನೂತನವಾಗಿ ಮದುವೆ ಸಮಾರಂಭ ಮಾಡಿರುವುದು ವಿಶೇಷವಾಗಿದೆ. ಇದೇ ರೀತಿ ಯುವಕರು ನೇತ್ರದಾನ ಶಪಥ ಮಾಡಿದ್ರೆ ಪುನೀತ್ ರಾಜ್ ಕುಮಾರ್ ಅವರ ಕನಸಿನಂತೆ ಕಂಗಳು ಇಲ್ಲದಿರುವವರ ಬಾಳಲ್ಲಿ ಬೆಳಕಾಗಬಹುದು ಎಂದು ವೈದ್ಯರು ಹೇಳುತ್ತಾರೆ.

HBL COUPLE 3

ವಧು ವರರ ಜೊತೆ ಅಂಗಡಿ ಕುಟುಂಬದ 11 ಸದಸ್ಯರು ಮದುವೆ ದಿನದಂದೇ ನೇತ್ರದಾನಕ್ಕೆ ಹೆಸರು ನೋಂದಣಿ ಮಾಡಿಸಿದ್ರೆ. ನೂತನ ವಧು-ವರರಿಗೆ ಆರ್ಶಿವದಿಸಲು ಆಗಮಿಸಿದವರ ಪೈಕಿ 60 ಜನ ಸಹ ನೇತ್ರದಾನ ಶಪಥ ಮಾಡಿದ್ದಾರೆ. ಒಟ್ಟಿನಲ್ಲಿ ನಟ ಪುನೀತ್ ಇಂದು ನಮ್ಮೊಂದಿಗೆ ಇಲ್ಲದಿದ್ದರೂ ಅವರ ಆದರ್ಶಗಳು ಸಾವಿರಾರು ಜನರಿಗೆ ಮಾದರಿಯಾಗಿರುವುದಂತೂ ಸುಳ್ಳಲ್ಲ.

TAGGED:coupleeye donatehubballiPublic TVದಂಪತಿನೇತ್ರದಾನಪಬ್ಲಿಕ್ ಟಿವಿಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema Updates

Mangli 2
ಬರ್ತ್‌ಡೇ ಪಾರ್ಟಿಯಲ್ಲಿ ಇದ್ದಿದ್ದು ಬರೀ ಲೋಕಲ್‌ ಡ್ರಿಂಕ್ಸ್‌ ಮಾತ್ರ – ಮಂಗ್ಲಿ ಸ್ಪಷ್ಟನೆ
2 hours ago
Singer Mangli
ಮಂಗ್ಲಿ ಬರ್ತ್‍ಡೇ ಪಾರ್ಟಿ ಮೇಲೆ ದಾಳಿ – ಮಾದಕ ವಸ್ತು ಪತ್ತೆ, ಪೊಲೀಸರಿಗೆ ಆವಾಜ್ ಹಾಕಿದ ಗಾಯಕಿ!
18 hours ago
Katrina Kaif
ಭಾರತದ ಜೊತೆ ಸಂಘರ್ಷ ನಡೆಸಿದ್ದ ಮಾಲ್ಡೀವ್ಸ್‌ ಪ್ರವಾಸೋದ್ಯಮಕ್ಕೆ ಕತ್ರಿನಾ ಕೈಫ್‌ ರಾಯಭಾರಿ
1 day ago
ZEE Kannada 2
ಹೊಸ ಅಧ್ಯಾಯಕ್ಕೆ ʻಜೀ ಕನ್ನಡʼ ಮುನ್ನುಡಿ…
2 days ago

You Might Also Like

Hubballi Rain Death 1
Crime

ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆ – ಚರಂಡಿ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ

Public TV
By Public TV
11 minutes ago
Pradeep Eshwar 1 2
Bengaluru City

ಮೋದಿ 11 ವರ್ಷದಲ್ಲಿ ಸಾಧನೆಗಳನ್ನ ಕಡಿದು ಕಟ್ಟೆ ಹಾಕಿದ್ದಾರೆ – ದೇಶದ ಭದ್ರತೆ, ರೈತರ ವಿಚಾರದಲ್ಲಿ ಕೇಂದ್ರ ಫೇಲ್: ಪ್ರದೀಪ್‌ ಈಶ್ವರ್‌

Public TV
By Public TV
17 minutes ago
Siddaramaiah and Chandrababu Naidu
Bengaluru City

ರಾಜ್ಯದ ತೋತಾಪುರಿ ಮಾವು ಬೆಲೆ ಕುಸಿತ – ಆಂಧ್ರ ಸಿಎಂಗೆ ಸಿದ್ದರಾಮಯ್ಯ ಪತ್ರ

Public TV
By Public TV
1 hour ago
USA Pakistan
Latest

ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಪಾಕ್‌ ಮಹಾನ್‌ ಪಾಲುದಾರ; ಪಾಕ್‌ ಹೊಗಳಿದ ಅಮೆರಿಕ

Public TV
By Public TV
1 hour ago
sambhajinagar
Latest

ಮಹಾರಾಷ್ಟ್ರ | ಭಾರೀ ಮಳೆ ಗಾಳಿಗೆ ಪ್ರವೇಶ ದ್ವಾರ ಕುಸಿದು ಮೂವರು ಬಲಿ

Public TV
By Public TV
2 hours ago
Weather 1
Bengaluru City

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ – ಜೂ.15 ರವರೆಗೆ ಭಾರೀ ಮಳೆ ಮುನ್ಸೂಚನೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?