ಯಾದಗಿರಿ: ಪ್ರಿಯಾಂಕ್ ಖರ್ಗೆ ಅವರು ಅವರ ತಂದೆ ಮಾಡಿದ ಕೆಲಸ ಮರೆತಿದ್ದಾರೆ ಎಂದು ಹುಣಸಗಿ ತಾಲೂಕಿನ ಕೊಡೇಕಲ್ ನಲ್ಲಿ ಶಾಸಕ ರಾಜೂಗೌಡ ವಾಗ್ದಾಳಿ ಮಾಡಿದರು.
ರಾಜ್ಯದಲ್ಲಿ ಬಿಟ್ ಕಾಯಿನ್ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ ಅವರು ಅವರ ತಂದೆ ಮಾಡಿದ ಕೆಲಸ ಮರೆತಿದ್ದಾರೆ. ಅವರು ಯಾವ ಯಾವ ಖಾತೆ ನಿರ್ವಹಿಸುತ್ತಿದ್ದಾರೆ ಎನ್ನುವುದು ಮರೆತಿದ್ದಾರೆ. ಒಂದು ಬೆರಳು ನೀವು ನೇರ ಮಾಡಿದರೆ, ನಾಲ್ಕು ಬೆರಳು ನಿಮಗೆ ಉಲ್ಟಾ ತೋರಿಸುತ್ತವೆ. ದಯವಿಟ್ಟು ಬೀಟ್ ಕಾಯಿನ್ ಬಗ್ಗೆ ಇಲ್ಲಸಲ್ಲದ ಹೇಳಿಕೆ ಕೊಡಬೇಡಿ ಎಂದು ಕಿಡಿಕಾರಿದರು. ಇದನ್ನೂ ಓದಿ: ಯಾವುದೇ ಕಾರಣಕ್ಕೂ ನಾವು ಜೆಡಿಎಸ್ನಿಂದ ಪರಿಷತ್ಗೆ ಸ್ಪರ್ಧೆ ಮಾಡಲ್ಲ: ಜಿಟಿ ದೇವೇಗೌಡ
ಪ್ರಿಯಾಂಕ್ ಖರ್ಗೆ ಅವರು ಪೊಲೀಸ್ ಇಲಾಖೆ ವಿರುದ್ಧ ಗಂಭೀರ ಆರೋಪ ಮಾಡಿರುವ ಕುರಿತು ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೇ ಅವರೇ ನಿಮ್ಮ ತಂದೆಯವರು ಹೋಮ್ ಮಿನಿಸ್ಟರ್ ಆಗಿ ಕೆಲಸ ಮಾಡಿದ್ದಾರೆ. ಹೋಗಿ ಅವರನ್ನು ಕೇಳಿ ಪೊಲೀಸ್ ಇಲಾಖೆ ಏನು ಎಂದು ನಿಮ್ಮಪ್ಪನಿಗೆ ಹೋಗಿ ಕೇಳಿ, ಆಮೇಲೆ ಹೇಳಿಕೆ ಕೊಡಿ. ಅದು ಬಿಟ್ಟು ಬಿಟ್ ಕಾಯಿನ್ ಬಗ್ಗೆ ಸುಮ್ಮನೆ ಹೇಳಿಕೆ ಕೊಡಬೇಡಿ ಎಂದರು.
ವಿರೋಧ ಪಕ್ಷದಲ್ಲಿದ್ದೀವಿ ಅಂತ ಸುಮ್ಮನೆ ಆರೋಪ ಮಾಡುವುದು ಸರಿಯಲ್ಲ. ನೀವು ಮಾಡುವ ಆರೋಪಕ್ಕೆ ಘನತೆ ಇರಬೇಕು. ನಮ್ಮ ಮೇಲೆ ಆರೋಪ ಮಾಡಲು ಯಾವುದೇ ವಿಷಯ ಇಲ್ಲ. ಹೀಗಾಗಿ ಕಾಂಗ್ರೇಸ್ ಅವರು ಬಿಟ್ ಕಾಯಿನ್, ಬಿಟ್ ಕಾಯಿನ್ ಅಂತಿದ್ದಾರೆ. ಬಿಟ್ ಕಾಯಿನ್ ಬಗ್ಗೆ ಕಾಂಗ್ರೇಸ್ ಅವರಿಗೆ ಮಾಹಿತಿ ಇಲ್ಲ. ಬಿಟ್ ಕಾಯಿನ್ ಬಗ್ಗೆ ಬೇರೆಯವರನ್ನು ಕೇಳಿ ಹೇಳ್ತಾರೆ. ಜನರಿಗೆ ಬಿಟ್ ಕಾಯಿನ್ ಬಗ್ಗೆ ಗೊಂದಲ ಇದೆ. ಕಾಂಗ್ರೆಸ್ ಅವರು ಜನರ ತಲೆಯಲ್ಲಿ ಹುಳ ಬೀಡುವ ಕೆಲಸ ಮಾಡ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಗರಂ ಅದರು. ಇದನ್ನೂ ಓದಿ: ಅಪ್ಪು ಮರಕೋತಿ ಆಟವಾಡುತ್ತಿದ್ದನ್ನು ಸದಾ ನೆನಪಿಸಿಕೊಳ್ಳುವ ಬಾಲ್ಯದ ಗೆಳೆಯ