Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪುನೀತ್ ದೇವರ ಸ್ವರೂಪದಲ್ಲಿದ್ದರು, ಆದ್ರೆ ನಮಗೆ ತಿಳಿಯಲಿಲ್ಲ: ಸೋನು ಗೌಡ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪುನೀತ್ ದೇವರ ಸ್ವರೂಪದಲ್ಲಿದ್ದರು, ಆದ್ರೆ ನಮಗೆ ತಿಳಿಯಲಿಲ್ಲ: ಸೋನು ಗೌಡ

Bengaluru City

ಪುನೀತ್ ದೇವರ ಸ್ವರೂಪದಲ್ಲಿದ್ದರು, ಆದ್ರೆ ನಮಗೆ ತಿಳಿಯಲಿಲ್ಲ: ಸೋನು ಗೌಡ

Public TV
Last updated: November 15, 2021 12:28 pm
Public TV
Share
2 Min Read
sonu gowda
SHARE

ಬೆಂಗಳೂರು: ಪುನೀತ್ ಅವರು ದೇವರ ಸ್ವರೂಪದಲ್ಲಿದ್ದರು. ಆದರೆ ಅದು ನಮಗೆ ಗೊತ್ತಾಗಲಿಲ್ಲ. ಅವರಲ್ಲಿ ಈಶ್ವರನಂತಹ ನಟರಾಜನ ಕಲೆ, ಲಕ್ಷ್ಮೀ, ಸರಸ್ವತಿ, ಅನ್ನ ಪೂರ್ಣೇಶ್ವರಿ, ಗುರು ರಾಯರಂತಹ ತಾಳ್ಮೆ ಎಲ್ಲ ರೀತಿಯ ದೇವರ ಗುಣಗಳಿದ್ದವು ಎಂದು ನಟಿ ಸೋನು ಗೌಡ ಹೇಳಿದ್ದಾರೆ.

PUNEETH RAJ KUMAR 5

ಸ್ಯಾಂಡಲ್‍ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ ಅಗಲಿಕೆಯ ನೋವು ಚಿತ್ರರಂಗವನ್ನು ಕಾಡುತ್ತಿದೆ. ಈ ಮಧ್ಯೆ ಪುನೀತ್ ಜೊತೆ ನಟಿಸಿದ್ದ ನಟಿ ಸೋನುಗೌಡ ಅವರು, ಪುನೀತ್ ಜೊತೆಗಿನ ಒಡನಾಟವನ್ನು ಮೆಲುಕು ಹಾಕಿದ್ದಾರೆ. ಇದನ್ನೂ ಓದಿ: ಶೂಟಿಂಗ್, ತಿಂಡಿ ಬಿಟ್ಟು ಪುನೀತ್‍ಗೆ ಪ್ರಪಂಚವೇ ಗೊತ್ತಿರಲಿಲ್ಲ – ಅಪ್ಪು ನೆನೆದು ಸಹೋದರಿ ಲಕ್ಷ್ಮೀ ಕಣ್ಣೀರು

PUNEETH RAJKUMAR 7

ಪುನೀತ್ ಕುರಿತಂತೆ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಅಪ್ಪು ಸರ್ ಇನ್ನಿಲ್ಲ ಎಂದು ನನ್ನ ತಂಗಿ ಕರೆ ಮಾಡಿ ಹೇಳಿದಾಗ ನನಗೆ ನಂಬಲು ಸಾಧ್ಯವಾಗಲಿಲ್ಲ. ಇಂದಿಗೂ ಅವರ ಸಾವನ್ನು ನನಗೆ ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ. ನಾನು ಅಪ್ಪು ಅವರ ದೊಡ್ಡ ಅಭಿಮಾನಿ. ನನ್ನನ್ನು ನೀವು ಯಾರ ಜೊತೆ ನಟಿಸಲು ಇಷ್ಟಪಡುತ್ತೀರಾ ಎಂದು ಯಾರಾದರೂ ಕೇಳಿದರೆ ನಾನು ಮೊದಲು ಅಪ್ಪು ಸರ್ ಹೆಸರನ್ನು ಹೇಳುತ್ತಿದೆ. ಇದು ಅವರಿಗೂ ತಿಳಿದಿತ್ತು. ನಾನು ಅವರ ಬಳಿ ಅನೇಕ ಬಾರಿ ನಿಮ್ಮೊಂದಿಗೆ ಚಿತ್ರದಲ್ಲಿ ಕೆಲಸ ಮಾಡಲೇಬೇಕು ನೀವು ನನಗೊಂದು ಅವಕಾಶ ನೀಡಲೇಬೇಕೆಂದು ಹೇಳಿಕೊಂಡಿದ್ದೆ. ಆಗ ಹೊಸ ಸ್ಕ್ರೀಪ್ಟ್ ತೆಗೆದುಕೊಂಡು ಬನ್ನಿ ನಿಮಗೆ ಸೂಟ್ ಆಗುತ್ತದೆ ಎಂದರೆ ಖಂಡಿತ ಅವಕಾಶ ನೀಡುತ್ತೇನೆ ಎಂದಿದ್ದರು ಅಂತ ತಿಳಿಸಿದ್ದಾರೆ.

PUNEETH RAJKUMAR 8

ನನ್ನ ಮೊದಲ ಮೂವಿ ಇಂತಿ ನಿನ್ನ ಪ್ರೀತಿಯಗೆ ಅಪ್ಪು ಅವರು ಕ್ಲಾಪ್ ಮಾಡಿದ್ದರು. ಪರಮೇಶ ಪಾನವಾಲಾ ಸಿನಿಮಾದ ಶೂಟಿಂಗ್ ವೇಳೆ ಅವರನ್ನು ಸಾಕಷ್ಟು ಬಾರಿ ಭೇಟಿಯಾಗುತ್ತಿದೆ. ಆದಾದ ನಂತರ ಯುವರತ್ನ ಶೂಟಿಂಗ್ ಸಮಯದಲ್ಲಿ ಅವರ ಮನೆಗೆ ಊಟಕ್ಕೆ ಅಂತ ಹೋಗಿದ್ದೆ. ಪುನೀತ್ ಅವರು ತಿಂಡಿ ಪ್ರಿಯರು ಹಾಗಾಗಿ ಯಾವಾಗಲೂ ಏನಾದರೂ ಊಟ ತರಿಸಿಕೊಡುತ್ತಿದ್ದರು. ಯಾವತ್ತು ತಾನೊಬ್ಬ ಸ್ಟಾರ್ ನಟನಂತೆ ನಡೆದುಕೊಂಡಿಲ್ಲ. ಸದಾ ಸ್ನೇಹಿತರಂತೆ ಇರುತ್ತಿದ್ದರು. ಆದರೆ ಇಂದು ಅಪ್ಪು ಅವರು ನನ್ನನ್ನು ಎಲ್ಲಿದಲೋ ನೋಡುತ್ತಿದ್ದಾರೆ. ನಾನು ಮಾಡುತ್ತಿರುವ ಕೆಲಸದಲ್ಲಿದ್ದಾರೆ ಅನಿಸುತ್ತದೆ ಎಂದಿದ್ದಾರೆ. ಇದನ್ನೂ ಓದಿ: ಅಪ್ಪು ಇಷ್ಟೆಲ್ಲ ಸಮಾಜಕ್ಕೆ ದಾನ ಮಾಡಿದ್ದಾನೆ ಎಂದುಕೊಂಡಿರಲಿಲ್ಲ: ಗೋವಿಂದರಾಜು

PUNEETH RAJKUMAR

ಒಮ್ಮೆ ಯುವರತ್ನ ಸಿನಿಮಾದಲ್ಲಿ ಒಂದು ಲಾಯರ್ ಪಾತ್ರವಿದೆ ಅಭಿನಯಿಸುತ್ತೀರಾ ಎಂದು ಕರೆಬಂದಿತ್ತು. ನಂತರ ಆಡಿಶನ್‍ಗೆ ಹೋಗಿದ್ದೆ, ಆದ್ರೆ ನೇರವಾಗಿ ಫೋಟೋ ಶೂಟ್ ಮಾಡಿ ನೀವು ಸೆಲೆಕ್ಟ್ ಆಗಿದ್ದೀರಾ ಎಂದು ತಿಳಿಸಿದ್ದರು. ದೇವರ ಅನುಗ್ರಹದಿಂದ ಯುವರತ್ನ ಸಿನಿಮಾದಲ್ಲಿ ಅಪ್ಪು ಅವರೊಂದಿಗೆ ಕೊನೆಗೂ ಅಭಿನಯಿಸಲು ಅವಕಾಶ ಸಿಕ್ಕಿತು. ನನಗೆ ಅಪ್ಪು ಅವರ ಡ್ಯಾನ್ಸ್, ಫೈಟ್ ಅವರು ಮಾತನಾಡುವ ರೀತಿ ನನಗೆ ಬಹಳ ಇಷ್ಟ. ಪುನೀತ್ ಅವರ ಇಷ್ಟು ಸಮಾಜ ಸೇವೆ ಮಾಡಿದ್ದಾರೆ ಅಂತ ಗೊತ್ತಿರಲಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಅಪ್ಪು ಮರಕೋತಿ ಆಟವಾಡುತ್ತಿದ್ದನ್ನು ಸದಾ ನೆನಪಿಸಿಕೊಳ್ಳುವ ಬಾಲ್ಯದ ಗೆಳೆಯ

puneeth 4

46 ಸಂಖ್ಯೆಗೂ ಪುನೀತ್ ಅವರಿಗೂ ಇರುವ ಸಂಬಂಧವನ್ನೆಲ್ಲಾ ನೋಡುತ್ತಿದ್ದರೆ, ಪುನೀತ್ ಅವರು ದೇವರ ಸ್ವರೂಪದಲ್ಲಿದ್ದರು. ಆದರೆ ಅದು ನಮಗೆ ಗೊತ್ತಾಗಲಿಲ್ಲ ಅನಿಸುತ್ತದೆ. ಅವರಲ್ಲಿ ಈಶ್ವರನಂತಹ ನಟರಾಜನ ಕಲೆ, ಲಕ್ಷ್ಮೀ, ಸರಸ್ವತಿ, ಅನ್ನ ಪೂರ್ಣೇಶ್ವರಿ, ಗುರು ರಾಯರಂತಹ ತಾಳ್ಮೆ ಎಲ್ಲ ರೀತಿಯ ದೇವರ ಗುಣಗಳಿದ್ದವು. ಯಾವತ್ತು ಅವರು ಯಾರಿಗೂ ಬೈದು ಮಾತನಾಡಿಸಲಿಲ್ಲ. ಅಪ್ಪು ಅವರು ಯಾವಾಗಲೂ ನಮ್ಮ ಜೊತೆಯಲ್ಲಿಯೇ ಇದ್ದಾರೆ ಎಂಬ ಭಾವನೆ ನನಗಿದೆ ಎಂದು ನುಡಿದಿದ್ದಾರೆ.

TAGGED:bengaluruPuneeth Rajkumarsandalwoodsonu gowdayuvaratnaಪುನೀತ್ ರಾಜ್‍ಕುಮಾರ್ಬೆಂಗಳೂರುಯುವರತ್ನಸೋನು ಗೌಡಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World

You Might Also Like

Kurubarahalli Accident
Bengaluru City

ಸ್ಟೀಲ್ ಸಾಗಿಸ್ತಿದ್ದ ಲಾರಿ ಕಾರಿಗೆ ಡಿಕ್ಕಿ – ಗುದ್ದಿದ ರಭಸಕ್ಕೆ ಗುಜರಿ ಗೋಡೌನ್ ಬೆಂಕಿಗಾಹುತಿ, ವ್ಯಕ್ತಿ ಸಾವು

Public TV
By Public TV
15 seconds ago
ಸಾಂದರ್ಭಿಕ ಚಿತ್ರ
Latest

ಕೇಂದ್ರ ಸರ್ಕಾರದಿಂದ ಗುಡ್‌ ನ್ಯೂಸ್‌ – ಪೆಟ್ರೋಲ್‌, ಡೀಸೆಲ್‌ ಮೇಲಿನ ಅಬಕಾರಿ ಸುಂಕ ಭಾರೀ ಇಳಿಕೆ!

Public TV
By Public TV
22 minutes ago
Shivamogga
Districts

ಆಗುಂಬೆ ಘಾಟ್‌ನಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಮರ: ಸಂಚಾರ ಬಂದ್

Public TV
By Public TV
34 minutes ago
Iran Foreign Minister Abbas Araghchi
Latest

ಶತ್ರುಗಳಿಗೆ ಹಾರ್ಮುಜ್‌ ಜಲಸಂಧಿ ನಿರ್ಬಂಧಿಸುವುದು ಇರಾನ್‌ನ ಕಾನೂನುಬದ್ಧ ಹಕ್ಕು: ವಿಶ್ವಸಂಸ್ಥೆಯಲ್ಲಿ ಅರಘ್ಚಿ ಮಾತು

Public TV
By Public TV
48 minutes ago
Fake Govt job
Districts

ಸರ್ಕಾರಿ ನೌಕರಿ ಕೊಡಿಸೋ ನಕಲಿ ನೇಮಕಾತಿ ಜಾಲ ಪತ್ತೆ – ಲಕ್ಷ ಲಕ್ಷ ಹಣ ನುಂಗಿ ಉದ್ಯೋಗಾಕಾಂಕ್ಷಿಗಳಿಗೆ ನಾಮ

Public TV
By Public TV
57 minutes ago
Kapila Tree Cut 2
Crime

ಕಪಿಲಾ ನದಿ ದಂಡೆಯಲ್ಲಿ 45 ಮರಗಳ ನಾಶ – ಆರೋಪಿ ಬಂಧನ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?