Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿ ಶಾಸಕರನ್ನು ದುಡ್ಡಿಗೆ ಖರೀದಿಸಿ ಚುನಾವಣೆ ವ್ಯವಸ್ಥೆಯನ್ನು ಹಾಳು ಮಾಡಿದೆ: ಎಚ್‍ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಬಿಜೆಪಿ ಶಾಸಕರನ್ನು ದುಡ್ಡಿಗೆ ಖರೀದಿಸಿ ಚುನಾವಣೆ ವ್ಯವಸ್ಥೆಯನ್ನು ಹಾಳು ಮಾಡಿದೆ: ಎಚ್‍ಡಿಕೆ

Districts

ಬಿಜೆಪಿ ಶಾಸಕರನ್ನು ದುಡ್ಡಿಗೆ ಖರೀದಿಸಿ ಚುನಾವಣೆ ವ್ಯವಸ್ಥೆಯನ್ನು ಹಾಳು ಮಾಡಿದೆ: ಎಚ್‍ಡಿಕೆ

Public TV
Last updated: November 15, 2021 8:45 pm
Public TV
Share
4 Min Read
KUMARASWAMY
SHARE

ಬೆಂಗಳೂರು: ಭಾರತೀಯ ಸಂವಿಧಾನದಲ್ಲಿ ನಿರ್ಧಿಷ್ಟವಾಗಿ ಇಂಥವರೇ ರಾಜಕೀಯಕ್ಕೆ ಬರಬೇಕು ಎಂದು ಗೆರೆ ಎಳೆಯಲಾಗಿದೆಯಾ? ಬಿಜೆಪಿ ಪಕ್ಷ ಶಾಸಕರನ್ನು ದುಡ್ಡಿಗೆ ಖರೀದಿಸಿ ಚುನಾವಣೆ ವ್ಯವಸ್ಥೆಯನ್ನು ಹಾಳು ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‍.ಡಿ.ಕುಮಾರಸ್ವಾಮಿ ಅವರು ಬಿಜೆಪಿಯನ್ನು ನೇರವಾಗಿ ಪ್ರಶ್ನಿಸಿ ಕಿಡಿಕಾರಿದ್ದಾರೆ.

bjp congress 1

ಜೆಡಿಎಸ್ ಕುಟುಂಬ ರಾಜಕಾರಣ ಮಾಡುತ್ತಿದೆ, ಪಕ್ಷವು ದೇವೇಗೌಡರ ಕುಟುಂಬಕ್ಕೆ ಮಾತ್ರ ಸೀಮಿತವಾಗಿದೆ ಎಂದು ಟ್ವೀಟರ್ ನಲ್ಲಿ ಬಿಜೆಪಿ ಮಾಡಿದ್ದ ಟೀಕೆಗೆ ಮಾಧ್ಯಮಗೋಷ್ಠಿಯಲ್ಲಿ ತಿರುಗೇಟು ಕೊಟ್ಟ ಅವರು, ಬಿಜೆಪಿ ಕುಟುಂಬ ರಾಜಕಾರಣದಲ್ಲಿ ತೊಯ್ದಾಡುತ್ತಿದೆ. ತನ್ನ ಹುಳುಕನ್ನು ಮರೆಮಾಚಲು ಜೆಡಿಎಸ್ ಮೇಲೆ ಕೆಸರು ಎರಚುತ್ತಿದೆ. ಬಿಜೆಪಿಯಲ್ಲಿ ಕುಟುಂಬ ರಾಜಕಾರಣ ಇಲ್ಲವೇ? ನಾವೂ ಒಂದು ಪಟ್ಟಿ ಕೊಟ್ಟಿದ್ದೇವೆ. ಇನ್ನು ಬೇಕಾದಷ್ಟು ಪಟ್ಟಿಗಳಿವೆ. ಹೇಳುತ್ತಾ ಹೋದ್ದರೆ ಅದು ಮುಗಿಯದ ಕಥೆ ಆಗುತ್ತದೆ. ಸುಮ್ಮನೆ ನಮ್ಮ ಕುಟುಂಬದ ತಂಟೆಗೆ ಬರುವುದು ಬೇಡ ಎಂದು ಬಿಜೆಪಿಗೆ ಎಚ್ಚರಿಕೆ ನೀಡಿದರು. ಇದನ್ನೂ ಓದಿ: ನೇಪಾಳದಲ್ಲಿ ಭೂಕಂಪಕ್ಕೆ ಮನೆ ಕಳೆದುಕೊಂಡವರಿಗೆ 50 ಸಾವಿರ ಮನೆ ಕಟ್ಟಿಕೊಟ್ಟ ಭಾರತ

KUMARADWAMY

ಭಾರತೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಬೇಕಾದರೂ ರಾಜಕಾರಣಕ್ಕೆ ಬರಬಹುದು. ಎಲ್ಲ ವೃತ್ತಿಗಳಲ್ಲೂ ಇರುವಂತೆ ರಾಜಕೀಯದಲ್ಲೂ ಕುಟುಂಬ ಸದಸ್ಯರು ರಾಜಕಾರಣಕ್ಕೆ ಬರುವುದು ಹೊಸತೇನಲ್ಲ. ಚಿತ್ರರಂಗ, ವೈದ್ಯ ಕ್ಷೇತ್ರದಲ್ಲೂ ಇದೆಯಲ್ಲವೇ? ಕಾಂಗ್ರೆಸ್, ಬಿಜೆಪಿ ಸೇರಿದಂತೆ ಎಲ್ಲ ಪಕ್ಷಗಳಲ್ಲೂ ಕುಟುಂಬ ರಾಜಕಾರಣ ಇದೆ. ಬಿಜೆಪಿ ನಿರ್ದಿಷ್ಟವಾಗಿ ನಮ್ಮ ಕುಟುಂಬ ಮತ್ತು ನಮ್ಮ ಪಕ್ಷದ ಬಗ್ಗೆ ಮಾತನಾಡುವುದು ಏಕೆ? ಸುಖಾಸುಮ್ಮನೆ ಟ್ವೀಟ್ ಮಾಡುವುದು, ಮಾತನಾಡುವುದನ್ನು ನಿಲ್ಲಿಸದಿದ್ದರೆ ನಾವು ಕೂಡ ಅದೇ ಧಾಟಿಯಲ್ಲಿ ಉತ್ತರ ಕೊಡಬೇಕಾಗುತ್ತದೆ ಎಂದು ಕುಮಾರಸ್ವಾಮಿ ಅವರು ಎಚ್ಚರಿಕೆ ನೀಡಿದರು.

ದೇವೇಗೌಡರು ಸುದೀರ್ಘ ಅವಧಿಯಲ್ಲಿ ರಾಷ್ಟ್ರೀಯ ಅಧ್ಯಕ್ಷರಾಗಿದ್ದಾರೆ ನಿಜ. ನಾಳೆ ಯಾರಾದರೂ ಬಂದರೂ ಅವರಿಗೆ ಆ ಪದವಿ ಬಿಟ್ಟುಕೊಡಲು ಅವರು ಸಿದ್ಧರಿದ್ದಾರೆ. ನಮ್ಮದು ಪ್ರಾದೇಶಿಕ ಪಕ್ಷ. ನಮ್ಮ ವೈಯಕ್ತಿಕ ವರ್ಚಸ್ಸಿನಲ್ಲೇ ಪಕ್ಷ ನಡೆಯಬೇಕು ಎಂದ ಅವರು, ದೇವೇಗೌಡರ ಕಾಲದಲ್ಲಿ ಬಿಟ್ ಕಾಯಿನ್ ಹಗರಣ ನಡೆದಿತ್ತಾ? ಹೋಗಲಿ, ನಾನು ಸಿಎಂ ಆಗಿದ್ದಾಗ ಯಾವುದಾದರೂ ಹಗರಣ ಆಗಿತ್ತಾ? ಅದ್ಯಾವುದೋ 150 ಕೋಟಿ ರೂಪಾಯಿ ಆರೋಪ ಹೊರಿಸಿದ್ದರು. ಆ ಸುಳ್ಳು ಆರೋಪ ಎಲ್ಲಿಗೆ ಹೋಯಿತು ಎನ್ನುವುದು ರಾಜ್ಯದ ಜನರಿಗೆ ಗೊತ್ತಿದೆ ಎಂದು ಬಿಜೆಪಿಗೆ ಅವರು ಟಾಂಗ್ ಕೊಟ್ಟರು. ಇದನ್ನೂ ಓದಿ: ಇಡೀ ದೇಶದಲ್ಲೇ ಕಾಂಗ್ರೆಸ್ ಅಧೋಗತಿಗೆ ತಲುಪಿದೆ – ಕಾಂಗ್ರೆಸ್ ವಿರುದ್ಧ ಅಶೋಕ್ ವಾಗ್ದಾಳಿ

ನಮ್ಮ ವೆಬ್ ತಾಣದಲ್ಲಿ ರಾಜ್ಯಾಧ್ಯಕ್ಷರ ಭಾವಚಿತ್ರ ಇಲ್ಲ ಎನ್ನುವ ಸುಳ್ಳನ್ನು ಬಿಜೆಪಿ ಹೇಳಿದೆ. ಮೊದಲು ನನ್ನ ಮತ್ತು ದೇವೇಗೌಡರ ಚಿತ್ರಗಳಿದ್ದು, ಹೆಚ್.ಕೆ. ಕುಮಾರಸ್ವಾಮಿ ಅವರ ಚಿತ್ರವೂ ಇದೆ. ಬಿಜೆಪಿ ವೆಬ್ ತಾಣಗಳಲ್ಲಿ ಮೊದಲು ಮೋದಿ ಅವರ ಚಿತ್ರ ಬಂದು ನಂತರ ಇತರೆ ನಾಯಕರ ಚಿತ್ರಗಳನ್ನು ಹಾಕಿಲ್ಲವೇ? ಬೇರೆಯವರ ತಟ್ಟೆಯತ್ತ ಬಿಜೆಪಿ ಕಣ್ಣೇಕೆ ಎಂದು ಅವರು ಪ್ರಶ್ನಿಸಿದರು.

ಬಿಜೆಪಿ ರಾಜಕೀಯ ಹಾಳು ಮಾಡಿದೆ:
ಬಿಜೆಪಿಯವರು ಎಂಥಾ ಹೀನ ರಾಜಕೀಯ ಮಾಡುತ್ತಿದ್ದಾರೆ ಎನ್ನುವುದು ದೇಶಕ್ಕೆ ಗೊತ್ತಿದೆ. ಶಾಸಕರನ್ನು ಖರೀದಿ ಮಾಡಿ ಚುನಾವಣೆ ಮತ್ತು ರಾಜಕೀಯ ವ್ಯವಸ್ಥೆಯನ್ನು ಹದಗೆಡಿಸುತ್ತಿದ್ದಾರೆ. ಇವತ್ತು ಆಪರೇಷನ್ ಕಮಲ ಇಡೀ ದೇಶವೆಲ್ಲಾ ಹಬ್ಬುತ್ತಿದೆ. ಇದು ಒಳ್ಳೆಯ ರಾಜಕಾರಣನ? ಎಂದು ಮಾಜಿ ಮುಖ್ಯಮಂತ್ರಿಗಳು ಪ್ರಶ್ನಿಸಿದರು. ಇದನ್ನೂ ಓದಿ: ದಲಿತರೊಂದಿಗೆ ಚಹಾ ಸೇವಿಸಿ, ಬಿಜೆಪಿಗೆ ಮತ ಹಾಕುವಂತೆ ಮನವೊಲಿಸಿ: ಸ್ವತಂತ್ರ ದೇವ್

ಸ್ಕೂಟರ್‌ಗೆ ಪೆಟ್ರೋಲ್ ಹಾಕಿಸಲು ದುಡ್ಡು ಇಲ್ಲದವರು ಈಗ ಹೇಗಿದ್ದಾರೆ ಗೊತ್ತಾ?:
ನಾವು ಯಾರ ತಲೆ ಹೊಡೆದು ಹಣ ಸಂಪಾದಿಸಿಲ್ಲ. ಪಕ್ಷ ಸಂಘಟಿಸಲು ಸಾಲಸೋಲ ಮಾಡಿ ಒದ್ದಾಡುತ್ತಿದ್ದೇವೆ. ಎಲ್ಲವನ್ನೂ ನಾವೇ ಮಾಡಬೇಕು ಎಂದ ಅವರು, ಬಿಜೆಪಿಯವರು ಈ ಹಿಂದೆ ಯಾವ ರೀತಿ ಇದ್ದರು? ಈಗ ಹೇಗಿದ್ದಾರೆ ಎಂಬುದು ಗೊತ್ತಿದೆ. ಸ್ಕೂಟರ್‍ಗೆ ಪೆಟ್ರೋಲ್ ಹಾಕಿಸಲು ದುಡ್ಡು ಇಲ್ಲದೆ ಇದ್ದವರು ಈಗ ಹೇಗಿದ್ದಾರೆ ಎನ್ನುವುದೂ ಗೊತ್ತಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ನನಗೆ ನೋಟಿಸ್ ಕೊಟ್ಟು ಏನ್ಮಾಡ್ತಾರೆ?:
ಬಿಟ್ ಕಾಯಿನ್ ಮತ್ತು ಜನಧನ್ ಖಾತೆಗಳ ಹಗರಣಗಳ ಬಗ್ಗೆ ಹೇಳಿಕೆ ನೀಡಿರುವ ಕುಮಾರಸ್ವಾಮಿ ಅವರಿಗೆ ಜಾರಿ ನಿರ್ದೇಶನಾಲಯ ನೋಟಿಸ್ ನೀಡಿ ತನಿಖೆಗೆ ಸಹಕಾರ ಪಡೆಯಲಿ ಎಂದು ಸಂಸದ ಪ್ರತಾಪ್ ಸಿಂಹ ನೀಡಿರುವ ಹೇಳಿಕೆಯ ಬಗ್ಗೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ ಅವರು, ಜನಧನ್ ಖಾತೆಯಿಂದ ಹಣ ಎತ್ತಿರುವ ವಿಚಾರವನ್ನು ನಾನು ಹೇಳಿದ್ದೇನೆ. ಆ ಮಾಹಿತಿ ಎಲ್ಲ ಕಡೆ ವ್ಯಾಪಕವಾಗಿ ಚರ್ಚೆ ಆಗುತ್ತಿದೆ. ಈ ಬಗ್ಗೆ ತನಿಖೆ ನಡೆಸಿ ಜನರಿಗೆ ಸತ್ಯ ತಿಳಿಸಬೇಕಾದ ಕರ್ತವ್ಯ ಸರ್ಕಾರದ್ದು. ಅವರು ನನಗೆ ನೋಟಿಸ್ ಕೊಟ್ಟು ಏನು ಮಾಡುತ್ತಾರೆ? ಎರಡು ಬಾರಿ ಸಂಸದರಾದವರು ಸ್ವಲ್ಪ ಜವಾಬ್ದಾರಿಯಿಂದ ಮಾತನಾಡಬೇಕು. ದೇಶದಲ್ಲಿ ನಡೆದ ದೊಡ್ಡ ದೊಡ್ಡ ಹಗರಣಗಳು ಏನಾದವು? ಯಾವ ಹಗರಣವನ್ನಾದರೂ ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಿದ್ದಾರಾ? ಇಲ್ಲ, ಸಣ್ಣಪುಟ್ಟದವರಿಗೆ ಮಾತ್ರ ಶಿಕ್ಷೆ ಕೊಡಿಸಿದ್ದಾರೆ ಅಷ್ಟೇ ಎಂದರು. ಇದನ್ನೂ ಓದಿ: ಕಾಂಗ್ರೆಸ್‍ನವರನ್ನ ಜನ ಕ್ಯಾಕರಿಸಿ ಉಗಿಯೋಕೆ ಪ್ರಾರಂಭ ಮಾಡ್ತಾರೆ: ಸದಾನಂದ ಗೌಡ

ಕಾಂಗ್ರೆಸ್ ದಾಖಲೆ ಸಮೇತ ಹೇಳಿಕೆ ಕೊಟ್ಟು ಹೋರಾಡಲಿ:
ಬಿಟ್ ಕಾಯಿನ್ ಹಗರಣದ ಬಗ್ಗೆ ಮಾತನಾಡುತ್ತಿರುವ ಕಾಂಗ್ರೆಸ್ ಪಕ್ಷ ದಾಖಲೆಗಳೊಂದಿಗೆ ಸ್ಪಷ್ಟವಾದ ಹೋರಾಟ ಮಾಡಬೇಕು. ವಿನಾಕಾರಣ ಮಾತಾನಾಡಿದರೆ ಪ್ರಯೋಜನ ಇಲ್ಲ. ಅವರು ಯಾರನ್ನು ಬೇಕಾದರೂ ಮುಳುಗಿಸುತ್ತಾರೆ. ಯಾರನ್ನು ಬೇಕಾದರೂ ತೇಲಿಸುತ್ತಾರೆ ಎಂದು ವ್ಯಂಗ್ಯವಾಡಿದರು.

ಪರಿಷತ್ ಅಭ್ಯರ್ಥಿಗಳು ಅಂತಿಮವಾಗಿಲ್ಲ:
ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‍ಗೆ ನಡೆಯುತ್ತಿರುವ ಚುನಾವಣೆಗೆ ನಮ್ಮ ಪಕ್ಷದಿಂದ ಅಭ್ಯರ್ಥಿಗಳನ್ನು ಇನ್ನು ಅಂತಿಮಗೊಳಿಸಿಲ್ಲ. ಪಕ್ಷ ಗೆಲ್ಲುವ ಅವಕಾಶ ಇರುವ 6-8 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಹಾಕುವ ಬಗ್ಗೆ ಚರ್ಚಿಸಲಾಗುತ್ತಿದೆ. ಈಗಾಗಲೇ ಮಂಡ್ಯ, ಚಿಕ್ಕಾಬಳ್ಳಾಪುರ, ಕೋಲಾರ, ತುಮಕೂರು ಕ್ಷೇತ್ರಗಳ ಬಗ್ಗೆ ನಾನೇ ಚರ್ಚೆ ನಡೆಸಿದ್ದೇನೆ. ಆದಷ್ಟು ಬೇಗ ಹೆಸರುಗಳನ್ನು ಅಂತಿಮಗೊಳಿಸುತ್ತೇವೆ. ಹಾಸನದಲ್ಲಿ ಅಭ್ಯರ್ಥಿ ಯಾರಾಗುತ್ತಾರೆ ಎನ್ನುವ ವಿಚಾರ ಇನ್ನೂ ನನ್ನವರೆಗೂ ಬಂದಿಲ್ಲ. ಜಿಲ್ಲೆಯಲ್ಲಿ ನಮ್ಮ ಪಕ್ಷದ ಆರು ಶಾಸಕರು ಇದ್ದು, ಇತ್ತೀಚೆಗೆ ಎಲ್ಲರೂ ಸೇರಿ ಸಭೆ ನಡೆಸಿದ್ದಾರೆ. ಆದಷ್ಟು ಬೇಗ ಅಲ್ಲಿಯೂ ಅಭ್ಯರ್ಥಿ ಹೆಸರನ್ನು ಅಂತಿಮಗೊಳಿಸುತ್ತೇವೆ ಎಂದರು.

TAGGED:bitcoinbjpcongresshd kumaraswamyಎಚ್ ಡಿ ಕುಮಾರಸ್ವಾಮಿಕಾಂಗ್ರೆಸ್ಜನ್‍ಧನ್ಜೆಡಿಎಸ್ಬಿಜೆಪಿಬಿಟ್ ಕಾಯಿನ್
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

MC SUDHAKAR
Bengaluru City

ಹಿಜಬ್‌, ಜನಿವಾರದಿಂದ ಸಮಸ್ಯೆಗೊಳಗಾದ ಪರೀಕ್ಷಾರ್ಥಿಗಳಿಗೆ ಸಿಟಿಇ ಮರುಪರೀಕ್ಷೆ: ಎಂ.ಸಿ ಸುಧಾಕರ್‌

Public TV
By Public TV
17 minutes ago
SUPREME COURT
Latest

ಅವಳ ನೋವು, ಅವಮಾನ ಊಹಿಸಿ – ಅತ್ಯಾಚಾರ ಕೇಸಲ್ಲಿ 20 ವಾರ ಮೀರಿದ ಗರ್ಭಪಾತಕ್ಕೆ ಅವಕಾಶ ನೀಡಿ: ಕೇಂದ್ರಕ್ಕೆ ಸುಪ್ರೀಂ ತರಾಟೆ

Public TV
By Public TV
22 minutes ago
Google Gemini Misused in AI Deepfake Loan Scam Ahmedabad Police Expose Aadhaar OTP Bypass four arrested Cyber Crime
Crime

ಒಟಿಪಿ ಬರಲ್ಲ ಆದ್ರೂ ಬ್ಯಾಂಕ್‌ ಖಾತೆ ಓಪನ್‌| AI, ಡೀಪ್‌ಫೇಕ್‌ ಬಳಸಿ ಆಧಾರ್‌ ಬೈಪಾಸ್‌ – ಕೊನೆಗೂ ಹೈಟೆಕ್‌ ಕಳ್ಳರು ಅರೆಸ್ಟ್‌

Public TV
By Public TV
37 minutes ago
grapes
Chikkaballapur

ದ್ರಾಕ್ಷಿಗೆ ಬಂಪರ್ ಬೆಲೆ – ರೈತರ ಮೊಗದಲ್ಲಿ ನಗು, ಕೈಗೆ ಕಾಂಚಾಣ ತಂದ ಬೆಳೆ

Public TV
By Public TV
58 minutes ago
ipac vinesh chandel
Court

ಪಶ್ಚಿಮ ಬಂಗಾಳ ಕಲ್ಲಿದ್ದಲು ಹಗರಣ| I-PAC ನಿರ್ದೇಶಕನಿಗೆ ಜಾಮೀನು ಮಂಜೂರು

Public TV
By Public TV
3 hours ago
Narendra Modi 1 2
Latest

ಪ್ರಧಾನಿ ನರೇಂದ್ರ ಮೋದಿ ಜಾತಿ ಸಮೀಕ್ಷೆಯನ್ನು ಮುಂದೂಡಲು ಬಯಸಿದ್ದಾರೆ: ಕಾಂಗ್ರೆಸ್ ಆರೋಪ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?