ಭೋಪಾಲ್: ಆದಿವಾಸಿಗಳನ್ನು ಕಾಂಗ್ರೆಸ್ ಪಕ್ಷ ನಿರ್ಲಕ್ಷ ಮಾಡಿತ್ತು. ಅವರ ಇಂದಿನ ದುಸ್ಥಿತಿಗೆ ಕಾಂಗ್ರೆಸ್ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿ ದೂರಿದ್ದಾರೆ.
ಬುಡಕಟ್ಟು ಜನಾಂಗದ ಸ್ವಾತಂತ್ರ್ಯ ಯೋಧ ಬಿರ್ಸಾಮುಡಾ ಜನ್ಮ ದಿನೋತ್ಸವದಲ್ಲಿ ಗೌರವ ನಮನಸಲ್ಲಿಸಿದ ಮೋದಿ ಕಾಂಗ್ರೆಸ್ ಆಡಳಿತದಲ್ಲಿ ಸೌಲಭ್ಯ ಪಡೆಯಲು ಆದಿವಾಸಿಗಳು ದಶಕಗಳ ಕಾಲ ಕಾಯಬೇಕಿತ್ತು ಎಂದು ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಜಗತ್ತಿನಲ್ಲಿ ಮೊಟ್ಟ ಮೊದಲು ವಿಮಾನ ಹಾರಿಸಿದವನು ರಾವಣನೇ?- ಲಂಕಾ ಅಧ್ಯಯನ
Addressing the Janjatiya Gaurav Divas Mahasammelan in Bhopal. https://t.co/WrVPZrqni0
— Narendra Modi (@narendramodi) November 15, 2021
ಕಾಂಗ್ರೆಸ್ ಸರ್ಕಾರ ಬುಡಕಟ್ಟು ಜನರ 9ರಿಂದ 10 ಉತ್ಪನ್ನಗಳಿಗೆ ಮಾತ್ರ ಬೆಂಬಲ ಬೆಲೆ ನೀಡಿತ್ತು. ಆದರೆ ಬಿಜೆಪಿ ಸರ್ಕಾರ 90 ಉತ್ಪನ್ನಗಳಿಗೆ ಬೆಂಬಲ ಬೆಲೆ ನೀಡುತ್ತಿದೆ. ಆದಿವಾಸಿಗಳಿಗಾಗಿ 50 ಏಕಲವ್ಯ ಶಾಲೆಗಳ ಸ್ಥಾಪನೆಗೆ ಅವರು ಶಂಕುಸ್ಥಾಪನೆ ನೆರೆವೇರಿಸಿದರು. ಇದನ್ನೂ ಓದಿ: ದಲಿತರೊಂದಿಗೆ ಚಹಾ ಸೇವಿಸಿ, ಬಿಜೆಪಿಗೆ ಮತ ಹಾಕುವಂತೆ ಮನವೊಲಿಸಿ: ಸ್ವತಂತ್ರ ದೇವ್