Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಹಾಮಂಗಳಾರತಿ ವೇಳೆ ಅಲುಗಾಡುತ್ತೆ 16 ಅಡಿ ಎತ್ತರದ ಹುತ್ತ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಮಹಾಮಂಗಳಾರತಿ ವೇಳೆ ಅಲುಗಾಡುತ್ತೆ 16 ಅಡಿ ಎತ್ತರದ ಹುತ್ತ

Chikkamagaluru

ಮಹಾಮಂಗಳಾರತಿ ವೇಳೆ ಅಲುಗಾಡುತ್ತೆ 16 ಅಡಿ ಎತ್ತರದ ಹುತ್ತ

Public TV
Last updated: November 19, 2021 7:41 am
Public TV
Share
3 Min Read
CKM FESTIVAL
SHARE

ಚಿಕ್ಕಮಗಳೂರು: ಮಹಾಮಂಗಳಾರತಿ ವೇಳೆ ಸುಮಾರು 16 ಅಡಿ ಎತ್ತರದ ಮಣ್ಣಿನ ಹುತ್ತವೊಂದು 10 ರಿಂದ 15 ಡಿಗ್ರಿ ಅಲುಗಾಡುವ ಮೂಲಕ ನೋಡುಗರಲ್ಲಿ ಆಶ್ಚರ್ಯ ಮೂಡಿಸಿ, ಭಕ್ತರನ್ನು ಮಂತ್ರಮುಗ್ಧರನ್ನಾಗಿಸುವ ನಮ್ಮ ಕಣ್ಣನ್ನು ನಾವೇ ನಂಬಲಾಗದಂತಹಾ ಅಪರೂಪದ ಜಾತ್ರೆಯೊಂದು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಬಾನಹಳ್ಳಿಯಲ್ಲಿ ಶತಮಾನಗಳಿಂದ ಸದ್ದಿಲ್ಲದೆ ನಡೆದುಕೊಂಡು ಬರುತ್ತಿದೆ.

CKM FESTIVAL 1

ಶತಮಾನಗಳಿಂದ ಆ ಹುತ್ತಕ್ಕೆ ಸೂರಿಲ್ಲ. ತಡೆಗೋಡೆಗಳು ಇಲ್ಲ. ಆದರೂ ಮಳೆ-ಗಾಳಿಗೆ ಒಂದಿಂಚು ಕರಗಿಲ್ಲ. ಹುತ್ತದ ಸುತ್ತಲೂ ಕಲ್ಲು-ಸಿಮೆಂಟ್‍ಗಳಿಂದ ಬಂದೋಬಸ್ತ್ ಮಾಡಿದ್ದರೂ ಕೂಡ ದೀಪಾವಳಿ ಅಮಾವಾಸ್ಯೆಯ ನಂತರದ ಮಕ್ಕಳ ಹುಣ್ಣಿಮೆಯ ದಿನ ಮಹಾಮಂಗಳಾರತಿ ವೇಳೆ ಇಲ್ಲಿ ನಡೆಯೋ ವಿಚಿತ್ರವನ್ನು ಕಂಡು ನಾಸ್ತಿಕರೂ ಕೂಡ ಆಸ್ತಿಕರಾಗುತ್ತಿದ್ದಾರೆ. ಸುಮಾರು ನಾಲ್ಕು ಶತಮಾನಗಳ ಹಿಂದೆ ದನ ಕಾಯುವ ಹುಡುಗರು ಕಟ್ಟಿದ ಮಣ್ಣಿನ ಗೂಡು ಇಂದು ಸಾವಿರಾರು ಭಕ್ತರ ಇಷ್ಟದೈವವಾಗಿದೆ. ಇದನ್ನೂ ಓದಿ: ತಿರುಪತಿಯಲ್ಲಿ ಪ್ರವಾಹ- ಜಲಪಾತದಂತೆ ಧುಮ್ಮಿಕ್ಕುತ್ತಿದೆ ಮಳೆ ನೀರು, ಕೊಚ್ಚಿ ಹೋಗ್ತಿವೆ ವಾಹನಗಳು!

CKM FESTIVAL 2

ಹೊಯ್ಸಳರ ಕಾಲದಿಂದಲೂ ನಡೆದು ಬರುತ್ತಿರುವ ಇಲ್ಲಿನ ಆಚರಣೆಗೆ 400 ವರ್ಷಗಳ ಇತಿಹಾಸವಿದೆ. ಪ್ರತಿ ವರ್ಷ ದೀಪಾವಳಿ ಅಮಾವಾಸ್ಯೆಯ ನಂತರದ ಮಕ್ಕಳ ಹುಣ್ಣಿಮೆಯಂದು ನಡೆಯೋ ಉತ್ಸವದಲ್ಲಿ ಮಹಾಮಂಗಳಾರತಿ ವೇಳೆ ಈ ಹುತ್ತಾ ಸುಮಾರು 10 ರಿಂದ 15 ಡಿಗ್ರಿ ಅಂತರದಲ್ಲಿ ಅಲುಗಾಡುತ್ತೆ. ಈ ಹುತ್ತ ಬರೀ ಮಣ್ಣಿನ ಗೂಡಲ್ಲ. ದೈವಿಶಕ್ತಿಯ ಗುಡಿ. 400 ವರ್ಷಗಳ ಹಿಂದೆ, ಚಿಕ್ಕದ್ದಿದ್ದ ಗೂಡು ಇಂದು 16 ಅಡಿಗೂ ಎತ್ತರ ಬೆಳೆದಿದೆ. ಈ ಹುತ್ತಕ್ಕೆ ಸೂರಿಲ್ಲ. ಮಳೆ-ಗಾಳಿಗೆ ಕರಗಿಲ್ಲ. ವರ್ಷಪೂರ್ತಿ ಮಣ್ಣಿನ ಗೊಂಬೆಯಂತೆ ನಿಂತ ಹುತ್ತ ವರ್ಷಕ್ಕೊಮ್ಮೆ ಭಕ್ತರನ್ನು ಮೂಕವಿಸ್ಮಿತರನ್ನಾಗಿಸುತ್ತೆ. ಈ ಪವಾಡವನ್ನ ನೋಡಲೆಂದು ಬಂದವರು ನಾಗಪ್ಪನ ಭಕ್ತರಾಗಿ ಪ್ರತಿ ವರ್ಷ ಈ ಉಣ್ಣಕ್ಕಿ ಉತ್ಸವಕ್ಕೆ ಬರುತ್ತಿದ್ದಾರೆ.

CKM FESTIVAL 3

ಉತ್ಸವದಂದು ಯಾವುದೇ ಗಾಯವಾಗದ ಕರುವಿನ ಕಿವಿಯನ್ನು ಕತ್ತರಿಸಿ ದೇವರ ಕರುವೆಂದು ಕಾಡಿಗೆ ಬಿಡುವ ವಾಡಿಕೆ ಇಂದಿಗೂ ಜೀವಂತವಿದೆ. ಇದರಿಂದ ಊರಿನ ದನಕರುಗಳು ಆರೋಗ್ಯದಿಂದ ಇದ್ದು ಯಾವುದೇ ಅನಾಹುತಗಳು ನಡೆಯೋದಿಲ್ಲ ಅನ್ನೋದು ನಂಬಿಕೆ. ದನ ಕಾಯುವ ಹುಡುಗರು ಕಟ್ಟಿದ ಹುತ್ತವಾದ್ದರಿಂದ ಕರುವನ್ನು ಕಾಡಿಗೆ ಬಿಡುವ ಆಚರಣೆ ಬೆಳೆದು ಬಂದಿದೆ. ಉತ್ಸವದ ದಿನ ಕರುವನ್ನು ಹುತ್ತಕ್ಕೆ ಸುತ್ತಿಸುವ ವೇಳೆ ಕರುವಿನ ಮೇಲೆ ಮಂಡಕ್ಕಿ (ಪುರಿ) ಹಾಕುತ್ತೇವೆ ಎಂದು ಹರಕೆ ಕಟ್ಟಿಕೊಳ್ಳುತ್ತಾರೆ. ಇಲ್ಲಿ ಹರಕೆ ಕಟ್ಟಿಕೊಂಡರೆ ಎಂತಹಾ ಕಷ್ಟವೂ ಕಳೆಯುತ್ತೆ ಅನ್ನೋದು ಭಕ್ತರ ನಂಬಿಕೆ. ಪ್ರತಿವರ್ಷ ದೀಪಾವಳಿಯ ನಂತರದ ಮಕ್ಕಳ ಹುಣ್ಣಿಮೆಯ ಗುರುವಾರ ಅಥವಾ ಭಾನುವಾರ ಈ ಉತ್ಸವ ನಡೆಯಲಿದೆ. ಚರ್ಮರೋಗ, ಮಕ್ಕಳಾಗದವರು, ದನಕರು ಸಾಯುತ್ತಿದ್ದರೆ ಅಥವಾ ಪದೇ ಪದೆ ಆರೋಗ್ಯ ಹದಗೆಡುತ್ತಿದ್ದರೆ ಇಲ್ಲಿಗೆ ಹರಕೆ ಕಟ್ಟಿದರೆ ಸಾಕು ವರ್ಷದೊಳಗೆ ಆ ಹರಕೆ ಈಡೇರುತ್ತಂತೆ. ಹಾಗಾಗಿ, ಸುತ್ತಮುತ್ತಲಿನ ಜಿಲ್ಲೆಯ ಜನರು ಈ ನಾಗಪ್ಪನ ಮಾಯೆಗೆ ಬೆರಗಾಗಿದ್ದಾರೆ. ಇದನ್ನೂ ಓದಿ: ಭಾರೀ ಮಳೆ- ಬೆಂಗಳೂರು ಸೇರಿ 6 ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ, ಅಲರ್ಟ್‌ ಆಗಿರಲು 13 ಜಿಲ್ಲೆಗಳಿಗೆ ಸೂಚನೆ

ತರ್ಕಕ್ಕೆ ನಿಲುಕದ ಈ ಗ್ರಾಮದ ಉತ್ಸವ ಇಂದಿಗೂ ಪ್ರಶ್ನಾತೀತ. ಹುತ್ತ ಅಲುಗಾಡೋದ್ರ ಹಿಂದೆ ವೈಜ್ಞಾನಿಕ ಕಾರಣವಿದ್ಯೋ ಅಥವಾ ದೈವಿಶಕ್ತಿಯ ಪ್ರಭಾವವಿದ್ಯೋ ಅನ್ನೋದು ಇಂದಿಗೂ ನಿಗೂಢ. ದನ ಕಾಯೋ ಹುಡುಗರ ಭಕ್ತಿಯ ಹಿಂದಿರೋ ಈ ಹುತ್ತಾ ಅಲುಗಾಡುತ್ತ ಪವಾಡವನ್ನೇ ಸೃಷ್ಟಿಸಿದ್ರೆ, ಹುತ್ತ ಅಲುಗಾಡೋದ್ರ ಬಗ್ಗೆ ಆಸ್ತಿಕ ಹಾಗೂ ನಾಸ್ತಿಕರಲ್ಲಿ ಹಲವು ವಾದ-ವಿವಾದಗಳು ಇವೆ. ಆದರೆ, ನೋಡುಗರ ಕಣ್ಮುಂದೆ ನಡೆಯೋ ಈ ವಿಚಿತ್ರ ಹಾಗೂ ವಿಶಿಷ್ಠ ಪವಾಡ ಮಾತ್ರ ಎಲ್ಲರನ್ನು ಮಂತ್ರಮುಗ್ಧರನ್ನಾಗಿಸಿದೆ. ಭೂಗರ್ಭದ ಒಡಲಾಳದಲ್ಲಿ ಅಡಗಿರೋ ಒದೊಂದು ಸತ್ಯ ಹೊರಬಂದಾಗಲೂ ದೇವರಿರೋದು ಸತ್ಯ ಅನಿಸುತ್ತದೆ. ಜನ ಅದನ್ನು ನಂಬಿದ್ದಾರೆ.

TAGGED:chikmagalurupoojatempleಚಿಕ್ಕಮಗಳೂರುದೀಪಾವಳಿದೇವಸ್ಥಾನಭಕ್ತರು
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

Elephant
Chikkamagaluru

ಚಿಕ್ಕಮಗಳೂರು | ತೋಟದಲ್ಲಿ ಹೋಗ್ತಿದ್ದ ಕಾರ್ಮಿಕನನ್ನು ಕೊಂದು ಹಾಕಿದ ಕಾಡಾನೆ

Public TV
By Public TV
3 minutes ago
Sabarimala Womens Entry 2
Court

ಶಬರಿಮಲೆಗೆ ಮಹಿಳೆಯರ ಪ್ರವೇಶ – ಏ.7 ರಿಂದ 9 ನ್ಯಾಯಾಧೀಶರ ಪೀಠದಲ್ಲಿ ಮರುಪರಿಶೀಲನಾ ಅರ್ಜಿ ವಿಚಾರಣೆ

Public TV
By Public TV
4 minutes ago
BK Hariprasad
Bengaluru City

ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ: ಬಿ.ಕೆ ಹರಿಪ್ರಸಾದ್‌

Public TV
By Public TV
24 minutes ago
Chitradurga Student Suicide In Residential School
Chitradurga

ಚಿತ್ರದುರ್ಗ | ವಸತಿ ಶಾಲೆಯ 3ನೇ ಮಹಡಿಯಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ

Public TV
By Public TV
48 minutes ago
ULLA SHIVAMOGGA
Crime

ಶಿವಮೊಗ್ಗದಲ್ಲಿ ಅವೈಜ್ಞಾನಿಕ ಹಂಪ್‌ಗೆ ಯುವಕ ಬಲಿ

Public TV
By Public TV
59 minutes ago
Solar eclipse 1
Latest

ಮಂಗಳವಾರ ವರ್ಷದ ಮೊದಲ ʻಕಂಕಣ ಸೂರ್ಯಗ್ರಹಣʼ – ಎಲ್ಲೆಲ್ಲಿ ಗೋಚರ?

Public TV
By Public TV
59 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?