ರೈತ ಹೋರಾಟಕ್ಕೆ ಬಿಜೆಪಿ ಸಂಸದ ಬೆಂಬಲ – ಮೋದಿಗೆ ಸೆಡ್ಡು ಹೊಡೆದ ವರುಣ್ ಗಾಂಧಿ

Public TV
1 Min Read
MODI AND VARUN GANDHI

ನವದೆಹಲಿ: ರೈತ ಹೋರಾಟಕ್ಕೆ ಬಿಜೆಪಿ ಸಂಸದ ವರುಣ್ ಗಾಂಧಿ ಬೆಂಬಲ ಘೋಷಿಸಿ ಪ್ರಧಾನಿ ನರೇಂದ್ರ ಮೋದಿಗೆ ಸೆಡ್ಡು ಹೊಡೆದಿದ್ದಾರೆ. ಹೋರಾಟದಲ್ಲಿ ಹುತಾತ್ಮರಾದ ರೈತ ಕುಟುಂಬಗಳಿಗೆ ತಲಾ 1 ಕೋಟಿ ಪರಿಹಾರ ನೀಡಿ, ಸಾಂತ್ವನ ಹೇಳಬೇಕು ಎಂದು ಆಗ್ರಹಿಸಿ ವರುಣ್ ಗಾಂಧಿ, ಮೋದಿಗೆ ಪತ್ರ ಬರೆದಿದ್ದಾರೆ.

farmers mahapanchayat

ಪತ್ರದಲ್ಲಿ ಏನಿದೆ?
ನರೇಂದ್ರ ಮೋದಿ ಅವರ ನಡೆಯನ್ನು ಸ್ವಾಗತಿಸಿದ ವರುಣ್ ಗಾಂಧಿ ಅವರು, 700ಕ್ಕೂ ಹೆಚ್ಚು ರೈತರು ಚಳವಳಿಯಲ್ಲಿ ಹುತಾತ್ಮರಾಗಿದ್ದಾರೆ. ಅವರು ಅತ್ಯಂತ ಕಷ್ಟದ ಪರಿಸ್ಥಿತಿಯಲ್ಲೂ ಶಾಂತ ರೀತಿಯಲ್ಲೇ ಪ್ರತಿಭಟನೆ ನಡೆಸಿದ್ದರು. ಈ ನಿರ್ಧಾರವನ್ನು ಮೊದಲೇ ಕೈಗೊಂಡಿದ್ದರೆ ಸಾವಿರಾರು ಅಮಾಯಕ ರೈತರ ಜೀವಗಳಿಗೆ ಹಾನಿಯಾಗುತ್ತಿರಲಿಲ್ಲ ಎಂದು ನಾನು ನಂಬಿದ್ದೇನೆ. ಈ ಆಂದೋಲನದ ಸಮಯದಲ್ಲಿ ರೈತರ ವಿರುದ್ಧವಾಗಿ ದಾಖಲಾದ ಸುಳ್ಳು ಹಾಗೂ ರಾಜಕೀಯ ಪ್ರೇರಿತ ಎಫ್‌ಐಆರ್‌ಗಳನ್ನು ವಜಾಗೊಳಿಸಬೇಕು. ಕೇಂದ್ರ ಸರ್ಕಾರ ಇದಕ್ಕೆ ಒಪ್ಪದೇ ಇದ್ದಲ್ಲಿ ಅನ್ನದಾತರ ಹೋರಾಟ ಮುಂದುವರೆಯಲಿದೆ. ರೈತರು ಯಾವುದೇ ಕಾರಣಕ್ಕೂ ಹೋರಾಟ ನಿಲ್ಲಿಸಲ್ಲ ಇದರೊಂದಿಗೆ ಲಖಿಂಪುರ ಹತ್ಯಾಕಾಂಡದ ರೂವಾರಿಗಳನ್ನು ಸುಮ್ಮನೆ ಬಿಡಬಾರದು ಅವರಿಗೆ ಶಿಕ್ಷೆ ಆಗಬೇಕು ಎಂದು ಪತ್ರದ ಮೂಲಕ ಮನವಿ ಸಲ್ಲಿಸಿದ್ದಾರೆ. ಇದನ್ನೂ ಓದಿ: ಪಾಕ್ ಪ್ರಧಾನಿ ಇಮ್ರಾನ್ ಖಾನ್ ನನ್ನ ದೊಡ್ಡಣ್ಣ – ಮತ್ತೆ ವಿವಾದ ಸೃಷ್ಟಿಸಿದ ನವಜೋತ್ ಸಿಂಗ್

ವರುಣ್ ಗಾಂಧಿ ಅವರು, ಉತ್ತರ ಪ್ರದೇಶದ ಲಖಿಂಪುರ ಖೇರಿ ಹಿಂಸಾಚಾರದಲ್ಲಿ ಪ್ರಜಾಪ್ರಭುತ್ವಕ್ಕೆ ಕಳಂಕ ಎಂದು ಟ್ವೀಟ್ ಮಾಡಿದ್ದರಿಂದ ಅವರನ್ನು ಬಿಜೆಪಿ ಕಾರ್ಯಕಾರಣಿಯಿಂದ ಕೈಬಿಡಲಾಗಿತ್ತು. ಅಕ್ಟೋಬರ್ ನಲ್ಲಿ ವರುಣ್ ಗಾಂಧಿ ಹಾಗೂ ಅವರ ತಾಯಿ ಮನೇಕಾ ಗಾಂಧಿ ಅವರನ್ನು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿಯಿಂದ ತೆಗೆದು ಹಾಕಲಾಗಿತ್ತು. ಇದನ್ನೂ ಓದಿ: ಉಪಚುನಾವಣೆಯಲ್ಲಿ ಹಿನ್ನಡೆ, ಪಂಚರಾಜ್ಯಗಳ ಚುನಾವಣೆಯ ಮೇಲೆ ಕಣ್ಣು – ಕೃಷಿ ಕಾಯ್ದೆ ವಾಪಸ್‌!

ಇತ್ತ ಮೂರು ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಪ್ರಧಾನಿ ಮೋದಿ ಘೋಷಿಸಿದರೂ ಕೂಡ ರೈತರು ಹೋರಾಟದಿಂದ ಹಿಂದೆ ಸರಿದಿಲ್ಲ. ಚಳಿಗಾಲದ ಸಂಸತ್ ಅಧಿವೇಶನ ವೇಳೆ ನಡೆಸಲು ಉದ್ದೇಶಿಸಲಾಗಿರುವ ಟ್ರ್ಯಾಕ್ಟರ್ ಜಾಥಾದಿಂದಲೂ ಹಿಂದೆ ಸರಿಯಲ್ಲ ಎಂದು ರೈತ ಸಂಘಟನೆಗಳು ಸ್ಪಷ್ಟಪಡಿಸಿವೆ.

Share This Article
Leave a Comment

Leave a Reply

Your email address will not be published. Required fields are marked *