ಈಗ ರದ್ದಾಗಿದ್ರೂ ಅಗತ್ಯ ಎನಿಸಿದ್ರೆ ಮತ್ತೆ ಕೃಷಿ ಕಾಯ್ದೆ ಜಾರಿ: ರಾಜಸ್ಥಾನ ರಾಜ್ಯಪಾಲ

Public TV
1 Min Read
rajasthan governor Kalraj Mishra and modi

ಲಕ್ನೋ: ಕೃಷಿ ಕಾನೂನುಗಳನ್ನು ಸರ್ಕಾರ ಈಗ ರದ್ದುಗೊಳಿಸಿದ್ದರೂ ಅಗತ್ಯವೆಂದೆನಿಸಿದಲ್ಲಿ ಮರು ಜಾರಿಗೊಳಿಸಬಹುದು ಎಂದು ರಾಜಸ್ಥಾನ ರಾಜ್ಯಪಾಲ ಕಲ್‌ರಾಜ್ ಮಿಶ್ರಾ ಹೇಳಿದ್ದಾರೆ.

ಮೂರು ಕೃಷಿ ಕಾಯ್ದೆಯನ್ನು ರದ್ದುಗೊಳಿಸುವ ನಿರ್ಧಾರವನ್ನು ಸ್ವಾಗತಿಸಿದ ಅವರು, ಸರ್ಕಾರವು ರೈತರಿಗೆ ಕೃಷಿ ಕಾನೂನಿನ ಸಾಧಕಗಳನ್ನು ವಿವರಿಸಲು ಪ್ರಯತ್ನಿಸಿತು. ಆದರೆ ರೈತರು ರದ್ದುಪಡಿಸುವಂತೆ ಹಠ ಹಿಡಿದಿದ್ದರು ಎಂದರು.

ಕಾಯ್ದೆಗಳ ಪ್ರಯೋಜನಗಳನ್ನು ರೈತರು ಅರ್ಥಮಾಡಿಕೊಳ್ಳಬಹುದು ಎಂದು ಸರ್ಕಾರ ಭಾವಿಸಿತ್ತು. ಆದರೆ, ರೈತರು ಪ್ರತಿಭಟನೆಯನ್ನು ಮುಂದುವರಿಸಿದ್ದರು ಎಂದು ಪ್ರತಿಕ್ರಿಯಿಸಿದರು. ಇದನ್ನೂ ಓದಿ: 1.5 ಕೋಟಿ ರೂ. ಮೌಲ್ಯದ ಹಾವಿನ ವಿಷ ಮಾರಾಟ – ಇಬ್ಬರು ಅರೆಸ್ಟ್

ರೈತರ ಪ್ರತಿಭಟನೆಗೆ ಮಣಿದ ಪ್ರಧಾನಿ ನರೇಂದ್ರ ಮೋದಿ ಮೂರು ಕೃಷಿ ಕಾಯ್ದೆಯನ್ನು ವಾಪಸ್‌ ಪಡೆಯುವುದಾಗಿ ಶುಕ್ರವಾರ ಪ್ರಕಟಿಸಿದ್ದರು. ಮುಂದಿನ ಸಂಸತ್‌ ಅಧಿವೇಶನದಲ್ಲಿ ಕಾಯ್ದೆಗಳ ರದ್ದು ಪ್ರಕ್ರಿಯೆ ಪೂರ್ಣಗೊಳಿಸುವುದಾಗಿ ತಿಳಿಸಿದ್ದರು. ಇದನ್ನೂ ಓದಿ:  ರಾಜ್ಯದಲ್ಲಿ ಅಕಾಲಿಕ ಮಳೆಗೆ ಜನಜೀವನ ಅಸ್ತವ್ಯಸ್ತ – ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಕಟ್ಟೆಚ್ಚರ

ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿಕೊಂಡಿದ್ದರೂ ರೈತರು ಪ್ರತಿಭಟನೆಯಿಂದ ಹಿಂದಕ್ಕೆ ಸರಿದಿಲ್ಲ. ಚಳಿಗಾಲದ ಅಧಿವೇಶನದ ವೇಳೆ ಟ್ರ್ಯಾಕ್ಟರ್‌ ರ‍್ಯಾಲಿ ನಡೆಸುವುದಾಗಿ ಹೇಳಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *