Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿ ಸರ್ಕಾರದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ಲ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಬಿಜೆಪಿ ಸರ್ಕಾರದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ಲ: ಸಿದ್ದರಾಮಯ್ಯ

Districts

ಬಿಜೆಪಿ ಸರ್ಕಾರದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ಲ: ಸಿದ್ದರಾಮಯ್ಯ

Public TV
Last updated: November 21, 2021 5:16 pm
Public TV
Share
3 Min Read
SIDDU 5
SHARE

– ಜನ ಶಕ್ತಿ ಮುಂದೆ ರಾಜ ಶಕ್ತಿ ಏನು ಮಾಡಲು ಆಗಲ್ಲ

ತುಮಕೂರು: ಬಿಜೆಪಿ ಸರ್ಕಾರದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ಲ ಎಂದು ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಟೀಕಿಸಿದರು.

ಬಿಜೆಪಿ ಸರ್ಕಾರ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ಲ. ಇವತ್ತು ದೇಶದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಇದೆ. ರೈತರು ಒಂದು ವರ್ಷದಿಂದ ಹೋರಾಟ ಮಾಡುತ್ತಿದ್ದಾರೆ. 700 ಜನ ರೈತರು ಪ್ರಾಣ ತ್ಯಾಗ ಮಾಡಿದ್ದಾರೆ. ಈಗ ಪ್ರಧಾನಿ ಮೋದಿ ಅವರಿಗೆ ಜ್ಞಾನೋದಯ ಆಗಿದೆ. ಅದಕ್ಕೆ ಕೃಷಿ ಕಾಯ್ದೆ ವಾಪಸ್ ಪಡೆಯುವ ಬಗ್ಗೆ ಹೇಳಿದ್ದಾರೆ. ಮುಂಚಿತವಾಗಿ ತಗೊಂಡ್ರೆ ರೈತರ ಪ್ರಾಣ ಉಳಿಯುತಿತ್ತು ಎಂದು ಆರೋಪಿಸಿದರು.

FARMERS PROTEST 4

ಪ್ರಾಣ ಹೋಗಲು ನೇರವಾಗಿ ಮೋದಿ ಮತ್ತು ಅವರ ಸರ್ಕಾರವೇ ಕಾರಣ. ರೈತ ಹೋರಾಟಕ್ಕೆ ಐತಿಹಾಸಿಕ ಜಯ ಸಿಕ್ಕಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ಆಕ್ರೋಶಕ್ಕೆ ಸರ್ಕಾರ ಮಣಿಯಬೇಕಾಗುತ್ತದೆ. ಜನ ಶಕ್ತಿ ಮುಂದೆ ರಾಜ ಶಕ್ತಿ ಏನೂ ಮಾಡಲು ಆಗಲ್ಲ. ಜನ ಶಕ್ತಿ ಅಂಕುಶದಲ್ಲಿ ರಾಜ ಶಕ್ತಿ ಇರಬೇಕು. ರೈತರಿಗೆ ದೊಡ್ಡ ನಮಸ್ಕಾರ, ಮೃತ ರೈತರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಕೊಡಬೇಕು. ಮೋದಿ ಜೀ ನೀವು ರೈತರ ವಿರುದ್ಧ ಇರಲು ಸಾಧ್ಯವಿಲ್ಲ. ಇದನ್ನು ಅನ್ನದಾತರು ಸಹಿಸಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ:  70 ವರ್ಷದ ದೇಶದ ಸಾಧನೆಯನ್ನು ಪ್ರಶ್ನಿಸುತ್ತಿರುವುದು ದುರದೃಷ್ಟಕರ: ಭೂಪೇಶ್ ಬಘೇಲ್

bommai modi1

ನರೇಂದ್ರ ಮೋದಿ ಜೀ, ಅಮಿತ್ ಶಾ ಜೀ, ಯಡಿಯೂರಪ್ಪ ಜೀ, ನಿಮಗೆ ನಾಚಿಕೆ ಆಗಲ್ವಾ. ಸಿಲಿಂಡರ್ ಬೆಲೆ ಜಾಸ್ತಿ ಆದಾಗ ಶೊಭಾ ಕರಂದ್ಲಾಜೆ ಅವರು ತಲೆ ಮೇಲೆ ಹೊತ್ತು ಹೋರಾಟ ಮಾಡಿದ್ರು. ಈಗ ಶೋಭಾ ಜೀ ಆಪ್ ಕಂಹಾ ಹೈ(ಎಲ್ಲಿದ್ದೀರಾ ನೀವು?) ಎಂದು ಹಾಸ್ಯ ಮಾಡಿದರು.

ಮೋದಿ ಅವರು ಒಳ್ಳೆ ದಿನ ಬರುತ್ತೆ ಅಂದರು. ಎಲ್ಲಿ ಮೋದಿ ಜೀ ಒಳ್ಳೆ ದಿನ. ಬಿಜೆಪಿ ಜನ ಸ್ವರಾಜ್ ಎಂದು ಶಂಖ, ಕೊಂಬು ಊದಿಕೊಂಡು ಹೊರಟಿದ್ದಾರೆ. ಶಂಖಕ್ಕೆ ಕೊಂಬುಗೆ ಮರ್ಯಾದೆ ಇದೆ. ಅದರ ಮರ್ಯಾದೆ ತೆಗೆಯಲು ಇವರು ಹೊರಟಿದ್ದಾರೆ. ಬಿಜೆಪಿಯವರಿಗೆ ಮಾನ ಮರ್ಯಾದೆ ಏನೂ ಇಲ್ಲ, ಲಜ್ಜೆಗೆಟ್ಟವರು. ಗ್ರಾಮ ಸ್ವರಾಜ್ ಯಾತ್ರೆ ಮಾಡಲು ಹೊರಟಿದ್ದಾರೆ. ಅಧಿಕಾರ ವಿಕೇಂದ್ರೀಕರಣಕ್ಕೆ ವಿರೋಧ ಬಿಜೆಪಿ ಅಂಥವರು ಗ್ರಾಮ ಸ್ವರಾಜ್ ಮಾಡಲು ಹೊರಟಿದ್ದಾರೆ ಎಂದು ವ್ಯಂಗ್ಯವಾಡಿದರು.

AMIT MODI

ಸಚಿವ ಈಶ್ವರಪ್ಪ ಒಬ್ಬ ಪೆದ್ದ. ಜನರಿಗೆ ನೀವು ಮತ ಕೊಟ್ಟರೆ ನಾವು ಗ್ಯಾರಂಟಿ ಕೊಡ್ತೀವಿ ಅಂದಿದ್ದಾರೆ. ಜನರ ದುಡ್ಡು ಜನರಿಗೆ ಕೊಡಲು ಈ ರೀತಿ ಹೇಳುತ್ತಾರೆ. ಕಳೆದ ಬಾರಿ ಪರಿಷತ್ ನಲ್ಲಿ ತುಮಕೂರಿನಲ್ಲಿ ಸೋತಿದ್ದಿವಿ. ಆದರೆ ಈ ಬಾರಿ ಗೆಲ್ತೀವಿ, ಆರ್. ರಾಜೇಂದ್ರ ಅವರು ಇಲ್ಲಿ ಅಭ್ಯರ್ಥಿಯಾಗಿದ್ದಾರೆ. ನೂರಕ್ಕೆ ನೂರು ಈ ಬಾರಿ ರಾಜೇಂದ್ರ ಗೆಲ್ಲುತ್ತಾರೆ. ಮಳೆಯಿಂದಾಗಿ 1 ಲಕ್ಷ ಹೆಕ್ಟೆರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಆ ಸಿಎಂ ಬೊಮ್ಮಾಯಿ ಚಲನಚಿತ್ರ ಬಿಡುಗಡೆ ಮಾಡೋದ್ರಲ್ಲಿ ಬ್ಯುಸಿಯಾಗಿದ್ದಾರೆ. ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದಾರೆ. ಬೊಮ್ಮಾಯಿ ಅವರಿಗೆ ರೈತರ ಬಗ್ಗೆ ಕನಿಕರ ಇಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ನಡುಗಡ್ಡೆಯಲ್ಲಿ ಸಿಲುಕಿದ 500 ದನಕರುಗಳು – ಹಸುಗಳನ್ನು ಕಾಪಾಡುವಂತೆ ಡಿಸಿಗೆ ಮನವಿ

BJP - CONGRESS

5 ಟ್ರಿಲಿಯನ್ ಆದಾಯ ಮಾಡ್ತೀನಿ ಅಂದರು. ಇನ್ನೂ ಮೋದಿ ಅವರ ಹೆಸರಲ್ಲಿ ಬದುಕುತ್ತಿದ್ದಾರೆ. ಬಿಜೆಪಿಗೆ ಅವರಿಗೆ ಧಮ್ ಇಲ್ಲ. ಹಾಗಾಗಿ ಮೋದಿ ಅವರ ಹೆಸರಲ್ಲೇ ಬದುಕುತಿದ್ದಾರೆ. ಕಾಂಗ್ರೆಸ್ ಸರ್ಕಾರ 10 ಪರ್ಸೆಂಟ್ ಸರ್ಕಾರ ಎಂದು ಮೋದಿ ಹೇಳಿದ್ರು. ಈಗ ಗುತ್ತಿಗೆದಾರರ ಅಧ್ಯಕ್ಷ ಕೆಂಪಣ್ಣ ಮೋದಿ ಅವರಿಗೆ ಪತ್ರ ಬರೆದು ರಾಜ್ಯ ಸರ್ಕಾರದ ಶೇಕಡಾವಾರು ತಿಳಿಸಿದ್ದಾರೆ. ಬೊಮ್ಮಾಯಿ ನಿಮಗೆ ಮಾನ ಮರ್ಯಾದೆ ಇದ್ರೆ, ಶೇ.30-40 ಲಂಚ ಪಡೀತಿದ್ದಾರೆ. ಇಂಥಹ ಸರ್ಕಾರ ಕಿತ್ತೊಗೆಯಬೇಕು. ಭ್ರಷ್ಟಾಚಾರ, ಕಪಟತನ ಬಯಲಿಗೆ ತಂದು ಅವರನ್ನು ಬೆತ್ತಲೆ ಮಾಡುವ ಕೆಲಸ ಮಾಡುತ್ತೇವೆ. ರೈತರಿಗೆ ಪರಿಹಾರ ಕೊಡಬೇಕು ಎಂದು ಒತ್ತಾಯ ಮಾಡುತ್ತೇವೆ ಎಂದು ಭರವಸೆಯನ್ನು ನೀಡಿದರು.

TAGGED:BJP governmentCM Basavaraja Bommainarendra modisiddaramaiahtumkurತುಮಕೂರುನರೇಂದ್ರ ಮೋದಿಬಿಜೆಪಿ ಸರ್ಕಾರಸಿಎಂ ಬಸವರಾಜ ಬೊಮ್ಮಾಯಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories

You Might Also Like

7 Dogs Kidnapped Outsmart Thieves And Walk 17 km Back Home In Incredible True Story
Latest

ಮಾಂಸದ ವ್ಯಾಪಾರಿಗಳಿಂದ ಪಾರಾಗಿ 17 ಕಿ.ಮೀ. ಕ್ರಮಿಸಿ ಮರಳಿ ಹಳ್ಳಿ ಸೇರಿದ 7 ನಾಯಿಗಳು

Public TV
By Public TV
2 minutes ago
Supreme Court
Court

ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್

Public TV
By Public TV
3 minutes ago
Delhi Assembly Bomb Threat
Crime

ದೆಹಲಿ ವಿಧಾನಸಭೆ, ಮೆಟ್ರೋ ಸ್ಟೇಷನ್‌ಗೆ ಬಾಂಬ್ ಬೆದರಿಕೆ

Public TV
By Public TV
12 minutes ago
Mudigere Police Station
Chikkamagaluru

PUC ಹುಡ್ಗ, SSLC ಹುಡ್ಗಿ ಪ್ರೇಮಕ್ಕೆ ಲವ್ ಜಿಹಾದ್ ಆರೋಪ, ಹಲ್ಲೆ – ದೂರಿಗೆ ಪ್ರತಿದೂರು

Public TV
By Public TV
35 minutes ago
Gold
Bengaluru City

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Public TV
By Public TV
43 minutes ago
Bidar Medical Student Suicide
Bidar

ನೇಣು ಬಿಗಿದು ಎಂಬಿಬಿಎಸ್‌ ವಿದ್ಯಾರ್ಥಿ ಆತ್ಮಹತ್ಯೆ

Public TV
By Public TV
52 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?