Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಬಿಎಂಪಿ ಎಫ್‍ಡಿಎ ನೌಕರನ ಬಳಿ ಕೋಟಿ ಕೋಟಿ ಆಸ್ತಿ – ಸರ್ಕಾರಕ್ಕೆ ಬರಬೇಕಿದೆ 125 ಕೋಟಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಬಿಎಂಪಿ ಎಫ್‍ಡಿಎ ನೌಕರನ ಬಳಿ ಕೋಟಿ ಕೋಟಿ ಆಸ್ತಿ – ಸರ್ಕಾರಕ್ಕೆ ಬರಬೇಕಿದೆ 125 ಕೋಟಿ

Bengaluru City

ಬಿಬಿಎಂಪಿ ಎಫ್‍ಡಿಎ ನೌಕರನ ಬಳಿ ಕೋಟಿ ಕೋಟಿ ಆಸ್ತಿ – ಸರ್ಕಾರಕ್ಕೆ ಬರಬೇಕಿದೆ 125 ಕೋಟಿ

Public TV
Last updated: November 24, 2021 1:01 pm
Public TV
Share
3 Min Read
ACB Conduct Raid On BBMP Clerk Mayanna 1
SHARE

– ಮತದಾರರಿಗೆ ಬೆಳ್ಳಿ ನಾಣ್ಯ ಗಿಫ್ಟ್

ಬೆಂಗಳೂರು: ಬಿಬಿಎಂಪಿ ನೌಕರ ಮಾಯಣ್ಣ ಅವರ ಮನೆ ಮೇಲೆ ಇಂದು ಎಸಿಬಿ ದಾಳಿ ನಡೆಸಿದೆ. ದಾಳಿಯಲ್ಲಿ ಭಾರೀ ಪ್ರಮಾಣದ ದಾಖಲೆಗಳು ದೊರೆತಿದ್ದು, ಇವರ ಬಗ್ಗೆ ಗಂಭೀರ ಆರೋಪಗಳು ಕೇಳಿಬರುತ್ತಿದೆ.

ಮಾಯಣ್ಣ ಅವರು ರಸ್ತೆ ಹಾಗೂ ಮೂಲಭೂತ ಸೌಕರ್ಯ ವಿಭಾಗದಲ್ಲಿ ಪ್ರಥಮ ದರ್ಜೆ ಸಹಾಯಕನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರು ಬಿಬಿಎಂಪಿ ಎಂಪ್ಲೈಯ್ ಅಸೋಸಿಯೇಷನ್ ಮೂಲಕ ಹಾಗೂ ಸಾಹಿತ್ಯ ಪರಿಷತ್‍ನಲ್ಲಿ ಹೆಚ್ಚಾಗಿ ಗುರುತಿಸಿಕೊಂಡಿದ್ದರು. ಅವರ ಹೆಸರು ಬಿಬಿಎಂಪಿ ನೌಕರಿಗಿಂತ ಹೆಚ್ಚಾಗಿ ಬಿಬಿಎಂಪಿ ಅಕ್ರಮಗಳಲ್ಲೇ ಕೇಳಿ ಬರುತ್ತಿತ್ತು.

ACB Conduct Raid On BBMP Clerk Mayanna 1

ಒಂದೇ ಪೋಸ್ಟ್: ಬಿಬಿಎಂಪಿ ಇತಿಹಾಸದಲ್ಲೇ 11 ವರ್ಷಗಳ ಕಾಲ ಒಂದೇ ಪೋಸ್ಟ್‌ ನಲ್ಲಿ  ದ್ದ ಏಕೈಕ ವ್ಯಕ್ತಿ ಮಾಯಣ್ಣ. 2009 ರಿಂದ 11 ವರ್ಷಗಳ ಕಾಲ ಒಂದೇ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಸಾಕಷ್ಟು ಬಾರಿ ಬಿಬಿಎಂಪಿಯ ಬೇರೆ ವಿಭಾಗಗಳಿಗೆ ವರ್ಗಾವಣೆಗಳಾದ್ದರೂ, ಮೇಲಾಧಿಕಾರಿಗಳಿಂದ ಒತ್ತಡ ತಂದು ಮತ್ತದೇ ಪೋಸ್ಟ್‌ನಲ್ಲಿ ಉಳಿದುಕೊಳ್ಳುತ್ತಿದ್ದರು. ಐದು ವರ್ಷದ ಹಿಂದೆ ಸಸ್ಪೆಂಡ್ ಆಗಿದ್ದರು. ಸಸ್ಪೆಂಡ್ ರಿವೋಕ್ ಮಾಡಿಸಿಕೊಂಡು ಮತ್ತೆ ಇದೇ ಹುದ್ದೆಯಲ್ಲೇ ಮುಂದುವರೆದಿದ್ದರು. ಇದನ್ನೂ ಓದಿ: ಅಂಬರೀಶ್ ಹೆಸರಲ್ಲಿ ಏನೂ ಮಾಡಿಲ್ಲ ಅನ್ನೋ ಬೇಸರ ಅಭಿಮಾನಿಗಳಲ್ಲಿದೆ: ಸುಮಲತಾ

ಕೆಲಸಕ್ಕಿಂತ ಬೇರೆ ಬೇರೆ ಡೀಲ್‍ಗಳಲ್ಲೇ ಹೆಚ್ಚು ಬ್ಯುಸಿಯಾಗಿರುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. 2012-13 ರಲ್ಲಿ ಕಾನೂನು ಬಾಹಿರವಾಗಿ ಗುತ್ತಿಗೆದಾರರಿಗೆ 135 ಕೋಟಿ ಹಣವನ್ನು ಬಿಡುಗಡೆ ಮಾಡಿದ್ದರು. ಜೊತೆಗೆ 26 ಕೋಟಿ ರೂಪಾಯಿ ಹೆಚ್ಚಿನ ಹಣವನ್ನು ಗುತ್ತಿಗೆದಾರರಿಗೆ ಪಾವತಿಸಿದ್ದ ಎನ್ನುವುದರ ಬಗ್ಗೆಯೂ ಆರೋಪ ಇವರ ಮೇಲಿದೆ.

ACB Conduct Raid On BBMP Clerk Mayanna 2

ಬಿಬಿಎಂಪಿ ಲೆಕ್ಕಪರಿಶೋಧಕ ವರದಿಯಲ್ಲಿ ಮಾಯಣ್ಣ ಅಕ್ರಮ ಬಯಲಾದ ಹಿನ್ನೆಲೆಯಲ್ಲಿ ಮಾಯಣ್ಣ ಅವರ ಸ್ವಂತ ಅಕೌಂಟ್‍ನಿಂದ ಹಣ ವಸೂಲಿ ಮಾಡುವಂತೆ ನಗರಾಭಿವೃದ್ಧಿ ಇಲಾಖೆ ಆದೇಶಿಸಿತ್ತು. ಎಸಿಬಿ ಬೇಟೆಗೆ ಬಿದ್ದ ಮಾಯಣ್ಣ ಅವರು ಒಟ್ಟಾರೆಯಾಗಿ 135 ಕೋಟಿ ರೂ.ಗಳನ್ನು ಸರ್ಕಾರಕ್ಕೆ ನೀಡಬೇಕಿದೆ.

ಮಾಯಣ್ಣ ವಿರುದ್ಧ ಸಾಮಾಜಿಕ ಕಾರ್ಯಕರ್ತ ರಾಬರ್ಟ್ ಎಂಬುವವರು ಕೋರ್ಟ್ ಮೆಟ್ಟಿಲೇರಿದ್ದರು. ಕೋರ್ಟ್ ಸೂಚನೆ ಅನ್ವಯ ಮಾಯಣ್ಣರಿಂದ 135 ಕೋಟಿ ವಸೂಲಿ ಮಾಡಬೇಕೆಂದು ನಗರಾಭಿವೃದ್ಧಿ ಇಲಾಖೆಗೆ ಆದೇಶಿಸಲಾಗಿದೆ. ಆದರೆ, ಸರ್ಕಾರದ ಆದೇಶಕ್ಕೆ ಕ್ಯಾರೆ ಅನ್ನದೆ ಮಾಯಣ್ಣ ತಮ್ಮ ಹುದ್ದೆಯಲ್ಲಿ ಮುಂದುವರೆದಿದ್ದರು. ಇದನ್ನೂ ಓದಿ: ಮದುವೆ ವಾರ್ಷಿಕೋತ್ಸವಕ್ಕೆ ಪತ್ನಿಗೆ ವಿಶೇಷವಾಗಿ ವಿಶ್ ಮಾಡಿದ ಧ್ರುವ

ಬೆಳ್ಳಿ ನಾಣ್ಯ ಗಿಫ್ಟ್: ಮೊನ್ನೆ ನಡೆದ ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ರಾಜ್ಯಾಧ್ಯಕ್ಷ ಹುದ್ದೆಗೆ ಮಾಯಣ್ಣ ಸ್ಪರ್ಧಿಸಿದ್ದರು. ಚುನಾವಣೆಯಲ್ಲಿ ಮತ ನೀಡಲು ಸದಸ್ಯರಿಗೆ ಬೆಳ್ಳಿ ಕಾಯಿನ್ ಜೊತೆಗೆ ಸಾಕಷ್ಟು ಹಣಗಳ ಆಮಿಷ ಒಡ್ಡಿದ್ದರು. ಆದರೂ ಚುನಾವಣೆಯಲ್ಲಿ ನಾಲ್ಕನೇ ಸ್ಥಾನಕ್ಕೆ ಪಡೆದು ಸೋಲನ್ನು ಒಪ್ಪಿಕೊಂಡಿದ್ದರು.

ಈ ಹಿಂದೆ ಬೆಂಗಳೂರು ನಗರ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರಾಗಿ ಮಾಯಣ್ಣ ಕರ್ತವ್ಯ ನಿರ್ವಹಿಸುತ್ತಿದ್ದರು. ಬಿಬಿಎಂಪಿಯಲ್ಲಿ ಕನ್ನಡ ಸಾಹಿತ್ಯದ ಕಾರ್ಯಕ್ರಮ ಮಾಡಿ ಸಾಕಷ್ಟು ಹಣವನ್ನು ಗುಳುಂ ಮಾಡಿದ್ದಾರೆ ಎಂಬ ಆರೋಪಗಳೂ ಈಗ ಕೇಳಿ ಬರುತ್ತಿವೆ.

ಈ ಎಲ್ಲಾ ಮಾಹಿತಿಯನ್ನು ಸಂಗ್ರಹಿಸಿದ್ದ ಎಸಿಬಿ ಇಂದು ದಾಳಿ ನಡೆಸಿದ್ದು, ಮಾಯಣ್ಣನ ಅಕ್ರಮ ಆಸ್ತಿಯ ಬಗ್ಗೆ ಹಲವು ದಾಖಲೆಗಳು ಲಭ್ಯವಾಗುತ್ತಿದೆ. ಮಾಯಣ್ಣ ಪತ್ನಿ ಹೆಸರಲ್ಲಿ ಬೆಲೆಬಾಳೋ ಬೆನ್ಜ್ ಹಾಗೂ ಇನ್ನೋವಾ ಕಾರುಗಳಿದೆ. ಮಾಯಣ್ಣ ಕುಣಿಗಲ್, ಮಾಗಡಿ, ಬೆಂಗಳೂರು ಸೇರಿದಂತೆ ಹತ್ತಾರು ಕಡೆ ಇಪ್ಪತ್ತಕ್ಕೂ ಹೆಚ್ಚು ಆಸ್ತಿ-ಪಾಸ್ತಿ ಹೊಂದಿದ್ದಾರೆ. ಅಷ್ಟೇ ಅಲ್ಲದೇ ತನ್ನ ಹೆಂಡತಿ- ಮಕ್ಕಳ ಹೆಸರಲ್ಲೇ ಕೋಟಿ ಕೋಟಿ ರೂ. ಬೆಲೆ ಬಾಳುವ ಆಸ್ತಿ ಮಾಡಿರುವುದು ಪತ್ತೆಯಾಗಿದೆ. ಈ ಎಲ್ಲಾ ದಾಖಲೆಗಳನ್ನು ಚಾಮರಾಜಪೇಟೆಯಲ್ಲಿರುವ ಕಚೇರಿಯಲ್ಲಿ ಶೇಖರಿಸಿ ಇಟ್ಟಿದ್ದರು.

ಎಸಿಬಿ ದಾಳಿಯಾದ ಮೇಲಾದರೂ 135 ಕೋಟಿ ರೂ. ನಗರಾಭಿವೃದ್ಧಿ ಇಲಾಖೆ ವಸೂಲಿ ಮಾಡುತ್ತಾ ಎನ್ನುವುದನ್ನು ಕಾದು ನೋಡಬೇಕಿದೆ.

TAGGED:ACB AttacksbbmpcorruptionMayannaಎಸಿಬಿ ದಾಳಿಬಿಬಿಎಂಪಿಭ್ರಷ್ಟಾಚಾರಮಾಯಾಣ್ಣ
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

Hassan Lady Missing
Crime

ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ – ಚಿನ್ನಾಭರಣಕ್ಕಾಗಿ ಕೊಲೆ ಶಂಕೆ

Public TV
By Public TV
2 minutes ago
Anti India Terror Accused
Latest

ಭಾರತ ವಿರೋಧಿ ಭಯೋತ್ಪಾದನಾ ಆರೋಪಿಗಳಿಗೆ ಬಾಂಗ್ಲಾ ಚುನಾವಣೆಯಲ್ಲಿ ಗೆಲುವು

Public TV
By Public TV
9 minutes ago
Basanagouda Patil Yatnal
Bengaluru City

ಚುನಾವಣೆಯಲ್ಲಿ ಅಕ್ರಮ ಆರೋಪ – ಯತ್ನಾಳ್ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ

Public TV
By Public TV
16 minutes ago
Mumbai metro
Crime

ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್ ಕುಸಿತ – ಓರ್ವ ಸಾವು, ಮೂವರು ಗಂಭೀರ

Public TV
By Public TV
26 minutes ago
DK Shivakumar Siddaramaiah
Haveri

ನಮ್ಮ ಸರ್ಕಾರದ ಸಾಧನೆ ಹೇಳೋಕೆ ಒಂದು ದಿನ ಸಾಲೋದಿಲ್ಲ: ಸಿದ್ದರಾಮಯ್ಯ

Public TV
By Public TV
1 hour ago
Rahul Gandhi Narendra Modi
Latest

ಪುಲ್ವಾಮಾ ದಾಳಿಗೆ 7 ವರ್ಷ – ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ ಮೋದಿ, ರಾಹುಲ್ ಗಾಂಧಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?