“ಆಂಧ್ರ-ತೆಲಗು ರಾಜ್ಯಕ್ಕೆ ಕೇಡು” – ಮತ್ತೆ ನಿಜವಾಯ್ತು ಬಬಲಾದಿ ಮಠದ ಭವಿಷ್ಯ

Public TV
1 Min Read
babaladi math

ವಿಜಯಪುರ: ವಿಜಯಪುರ ಜಿಲ್ಲೆಯ ಬಬಲಾದಿ ಮಠದ ಸದಾಶಿವ ಅಜ್ಜ ನುಡಿದಿದ್ದ ಭವಿಷ್ಯ ಇದೀಗ ನಿಜವಾಗಿದೆ ಎಂದು ಭಕ್ತರು ಮಾತನಾಡಿಕೊಳ್ಳುತ್ತಿದ್ದಾರೆ.

2021ರಲ್ಲಿ ತೆಲಗು ಮಾತನಾಡುವ ರಾಜ್ಯಕ್ಕೆ ಜಲಕಂಟಕ ಅಂದರೆ “ಆಂಧ್ರ ಪ್ರದೇಶ ರಾಜ್ಯಕ್ಕೆ ಕೇಡು” ಎಂದು ಸಿದ್ದು ಮುತ್ಯಾ ಅವರು ಹೇಳಿದ್ದರು. ಹೀಗಾಗಿ ವಾಯುಭಾರ ಕುಸಿತದಿಂದ ತಿರುಪತಿಯಲ್ಲಿ ಜಲಪ್ರಳಯ, ಸೃಷ್ಟಿಯಾಗಿದ್ದು ಬಬಲಾದಿ ಮಠದ ಶ್ರೀಗಳ ಭವಿಷ್ಯ ಸತ್ಯವಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

tirupati rain

ಅದೇ ರೀತಿ ರಾಜ್ಯದಲ್ಲಿ ಭೂಮಿ ಕಂಪಿಸಲಿದೆ ಎಂದು ಶ್ರೀಗಳು ತಿಳಿಸಿದ್ದರು. ಅದರಂತೆ ಕಳೆದ ಎರಡು ತಿಂಗಳಿಂದ ಜಿಲ್ಲೆಯಲ್ಲಿ ಭೂಮಿ ಕಂಪಿಸುತ್ತಿದೆ. ಈ ಮೂಲಕ ಬಬಲಾದಿ ಮಠದ ಸದಾಶಿವ ಅಜ್ಜನ ಭವಿಷ್ಯ ನಿಜವಾಯ್ತು ಎನ್ನಲಾಗುತ್ತಿದೆ. ಸದ್ಯ 2021ರ ಶಿವರಾತ್ರಿಯ ದಿನ ಸಿದ್ದು ಮುತ್ಯಾ ನುಡಿದ ಭವಿಷ್ಯದ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಇದನ್ನೂ ಓದಿ: ಭಾರತ-ಮ್ಯಾನ್ಮಾರ್ ಗಡಿಯಲ್ಲಿ 6.1 ತೀವ್ರತೆಯ ಭೂಕಂಪ

500 ವರ್ಷಗಳ ಹಿಂದೆ ಚಿಕ್ಕಯ್ಯಪ್ಪನವರು ಬರೆದಿಟ್ಟಿರುವ ಕಾಲಜ್ಞಾನವನ್ನು ಪ್ರತಿ ವರ್ಷ ಶಿವರಾತ್ರಿಯಂದು ಓದಲಾಗುತ್ತದೆ. ರಾಜ್ಯದಲ್ಲೇ ಬಬಲಾದಿ ಮಠ ಅತ್ಯಂತ ವಿಶಿಷ್ಟವಾಗಿದ್ದು, ಇಲ್ಲಿಗೆ ಬರುವ ಭಕ್ತರಿಗೆ ಮದ್ಯವನ್ನು ಪ್ರಸಾದ ರೂಪದಲ್ಲಿ ನೀಡಲಾಗುತ್ತದೆ ಮತ್ತು ಭಕ್ತರು ಸಹ ಮದ್ಯವನ್ನೇ ನೈವೇದ್ಯಕ್ಕಾಗಿ ತರುತ್ತಾರೆ. ಇದನ್ನೂ ಓದಿ:  ಭಾರತದಲ್ಲಿ ಜನಸಂಖ್ಯಾ ಪ್ರಮಾಣ ಕುಸಿತ – ಗಂಡು ಮಕ್ಕಳಿಗಿಂತ ಹೆಣ್ಮಕ್ಕಳ ಜನನ ಅಧಿಕ

Share This Article
Leave a Comment

Leave a Reply

Your email address will not be published. Required fields are marked *