Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಜಗ್ಗೇಶ್ ಅಭಿಮಾನಿಗಳಿಂದ ಪುನೀತ್ ಹೆಸರಲ್ಲಿ ವೃದ್ಧೆಗೆ ಸೂರು

Public TV
Last updated: December 1, 2021 10:17 pm
Public TV
Share
2 Min Read
old women puneeth and Jaggesh fan
SHARE

ತುಮಕೂರು: ಪವರ್‌ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಗಲಿ ಒಂದು ತಿಂಗಳು ಕಳೆದಿದೆ. ಆದರೆ ಅವರ ಮೇಲಿನ ಅಭಿಮಾನ ಮಾತ್ರ ಅಭಿಮಾನಿಗಳಲ್ಲಿ ಇನ್ನು ಹೆಚ್ಚಾಗುತ್ತಿದೆ. ಇದಕ್ಕೆ ಉದಾಹರಣೆ ಎಂದರೆ ನವರಸ ನಾಯಕ ಜಗ್ಗೇಶ್ ಅಭಿಮಾನಿಗಳು ಅಪ್ಪು ಅವರ ಹೆಸರಲ್ಲಿ ವೃದ್ಧೆಗೆ ಮನೆಯೊಂದನ್ನು ಕಟ್ಟಿಕೊಟ್ಟು ‘ಪರಮಾತ್ಮ’ನನ್ನು ಕಾಣುತ್ತಿದ್ದಾರೆ.

old women puneeth and Jaggesh fan 1

ಕನ್ನಡಿಗರ ಕಣ್ಮಣಿ, ಪುನೀತ್ ರಾಜ್‍ಕುಮಾರ್ ಮೇಲಿನ ಅಭಿಮಾನ ನಿರಂತರವಾಗಿ ವಿವಿಧ ಆಯಾಮದಲ್ಲಿ ವ್ಯಕ್ತವಾಗುತ್ತಿದೆ. ಕನ್ನಡ ಚಿತ್ರರಂಗದ ಎಲ್ಲ ನಾಯಕ ನಟರ ಅಭಿಮಾನಿಗಳು ಅಪ್ಪು ಅಗಲಿಕೆಗೆ ಕಂಬನಿ ಮಿಡಿದಿದ್ದು ನಮ್ಮ ಕಣ್ಣ ಮುಂದೆ ಇದೆ. ಇನ್ನು ಒಂದು ಹೆಜ್ಜೆ ಮುಂದಕ್ಕೆ ಹೋಗಿ ಜಗ್ಗೇಶ್ ಅವರ ಅಭಿಮಾನಿಗಳು ಪುನೀತ್ ಅವರ ಹೆಸರಲ್ಲಿ ಅನಾಥ ವೃದ್ಧೆಗೆ ಸೂರೊಂದನ್ನು ಕಲ್ಪಿಸಿ ಕೊಟ್ಟು ಅಪ್ಪು ಹೆಸರನ್ನು ಚಿರಸ್ಥಾಯಿಯಾಗಿ ಉಳಿಸುವ ಪ್ರಯತ್ನ ಮಾಡಿದ್ದಾರೆ. ಇದನ್ನೂ ಓದಿ: ಆಂಧ್ರಪ್ರದೇಶ ಪ್ರವಾಹ ಸಂತ್ರಸ್ತರಿಗೆ ಮಿಡಿದ ಟಾಲಿವುಡ್ ಸ್ಟಾರ್ಸ್

old women puneeth and Jaggesh fan 3

ತುಮಕೂರು ಜಿಲ್ಲೆ ಕೊರಟಗೆರೆ ಪಟ್ಟಣದಲ್ಲಿ ಫ್ರೆಂಡ್ಸ್ ಗ್ರೂಪ್ ಹಾಗೂ ಜಗ್ಗೇಶ್ ಅಭಿಮಾನಿಗಳು ಸೇರಿ ರಂಗಮ್ಮ ವೃದ್ಧೆಗೆ ಪುಟ್ಟ ಮನೆಯೊಂದನ್ನು ಕಟ್ಟಿಕೊಟ್ಟಿದ್ದಾರೆ. ಈ ಮನೆಗೆ ‘ಪುನೀತ್ ನಿಲಯ’ ಎಂದು ಹೆಸರಿಟ್ಟು ಅಭಿಮಾನ ಮೆರೆದಿದ್ದಾರೆ.

ಗಿರಿನಗರ ನಿವಾಸಿ ರಂಗಮ್ಮ ಅವರು ಗುಡಿಸಲಿನಲ್ಲಿ ವಾಸ ಮಾಡುತ್ತಾ ಶೋಚನೀಯ ಸ್ಥಿತಿಯಲ್ಲಿ ಇದ್ದರು. ಇದನ್ನು ಮನಗಂಡ ಜಗ್ಗೇಶ್ ಅಭಿಮಾನಿಗಳು ಹಣ ಹೊಂದಿಸಿ ಸ್ವತಃ ತಾವೇ ಶ್ರಮದಾನ ಮಾಡಿ ರಂಗಮ್ಮಗೆ ಸೂರು ಕಲ್ಪಿಸಿ ಕೊಟ್ಟಿದ್ದಾರೆ. ಈ ಸೂರಿಗೆ ಪುನೀತ್ ನಿಲಯ ಎಂದು ಹೆಸರಿಟ್ಟು ಅಪ್ಪು ಮೇಲಿನ ಅಭಿಮಾನ ವ್ಯಕ್ತಪಡಿಸಿದ್ದಾರೆ.

old women puneeth and Jaggesh fan 2

ಮನೆ ನಿರ್ಮಾಣ ಕಳೆದ ನಾಲ್ಕು ತಿಂಗಳ ಹಿಂದೆಯೇ ಶುರುವಾದರೂ ಕೆಲ ಕಾರಣಗಳಿಂದ ಅರ್ಧಕ್ಕೆ ನಿಂತಿತ್ತು. ಅಪ್ಪು ಸಾವಿನ ಬಳಿಕ ಜಗ್ಗೇಶ್ ಅಭಿಮಾನಿಗಳು ಮತ್ತೆ ಕಾರ್ಯಪ್ರವರ್ತರಾದರು. ಅಪ್ಪು ಹೆಸರಲ್ಲಿ ಮನೆ ಕಟ್ಟಿ ಬಿಡೋಣ ಎಂದು ಅವರ ನಾಮಸ್ಮರಣೆ ಮಾಡುತ್ತಾ ಈ ಮನೆ ಸಂಪೂರ್ಣ ಮಾಡಿದರು. ಒಂದು ತಿಂಗಳಲ್ಲಿ ಮನೆ ನಿರ್ಮಾಣದ ಎಲ್ಲ ಕೆಲಸ ಮುಗಿಸಿ, ಸಿದ್ದರಬೆಟ್ಟ ವೀರಭದ್ರ ಶಿವಾಚಾರ್ಯ ಶ್ರೀಗಳ ದಿವ್ಯ ಸಾನಿಧ್ಯದಲ್ಲಿ ಇಂದು ಗೃಹ ಪ್ರವೇಶ ಮಾಡಲಾಯಿತು. ಇದನ್ನೂ ಓದಿ:  ಉತ್ತರ ಪ್ರದೇಶದ ಸರ್ಕಾರಿ ನೌಕರರು, ವಕೀಲರಿಗೆ 1 ರೂ.ಗೆ ಸಿಗಲಿದೆ ಮನೆ

old women puneeth and Jaggesh fan 4

ಫ್ರೆಂಡ್ಸ್ ಗ್ರೂಪ್ ಹಾಗೂ ಜಗ್ಗೇಶ್ ಅಭಿಮಾನಿ ಸಂಘದಲ್ಲಿ ಸರಿಸುಮಾರು 800ಕ್ಕೂ ಹೆಚ್ಚು ಸದಸ್ಯರಿದ್ದಾರೆ. ಅವರಲ್ಲಿ ಗಾರೆ ಕೆಲಸ, ಎಲೆಕ್ಟ್ರಿಕ್, ಪ್ಲಂಬಿಂಗ್ ಹೀಗೆ ಎಲ್ಲ ಕೆಲಸ ಮಾಡುವ ಸದಸ್ಯರಿದ್ದಾರೆ. ಅವರೆಲ್ಲರೂ ತಮ್ಮ-ತಮ್ಮ ಪಾಲಿನ ಕೆಲಸ ಮಾಡಿ, ದಾನಿಗಳಿಂದ ಹಣ ಸಂಗ್ರಹಿಸಿ ಕಡಿಮೆ ಅವಧಿ ಮತ್ತು ಕಡಿಮೆ ವೆಚ್ಚದಲ್ಲಿ ಮನೆ ನಿರ್ಮಿಸಿ ಕೊಟ್ಟಿದ್ದಾರೆ. 15*20 ಸುತ್ತಳತೆಯ ಸೈಟಿನಲ್ಲಿ ಮನೆಕಟ್ಟಿದ್ದಾರೆ. ಒಂದು ಹಾಲ್, ಅಡುಗೆ ಕೋಣೆ, ಅಟ್ಯಾಚ್ ಬಾತ್ ರೂಂ ಅನ್ನು ವ್ಯವಸ್ಥೆ ಮಾಡಿಕೊಡಲಾಗಿದೆ.

TAGGED:jaggeshKoratagerePuneet Rajkumartumkurಕೊರಟಗೆರೆಜಗ್ಗೇಶ್ತುಮಕೂರುಪುನೀತ್ ರಾಜ್‍ಕುಮಾರ್
Share This Article
Facebook Whatsapp Whatsapp Telegram

Cinema Updates

Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
1 hour ago
Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
20 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
21 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
21 hours ago

You Might Also Like

Raichur PDO
Districts

ಕಾಮಗಾರಿ, ಸಾಮಗ್ರಿಗಳ ಖರೀದಿ ಬಿಲ್‌ನಲ್ಲಿ ಲಕ್ಷ ಲಕ್ಷ ಹಣ ಗೋಲ್ಮಾಲ್‌ – ಇಬ್ಬರು ಪಿಡಿಓ ಅಮಾನತು

Public TV
By Public TV
37 minutes ago
Pratik Joshi Family
Latest

ಲಂಡನ್‌ನಲ್ಲಿ ಭವಿಷ್ಯದ ಕನಸು ಕಟ್ಟಿ ವಿಮಾನದಲ್ಲಿ ಹಾರಿದ್ದ ಒಂದೇ ಕುಟುಂಬದ ಐವರು ದುರಂತ ಅಂತ್ಯ

Public TV
By Public TV
47 minutes ago
Modi
Latest

Ahmedabad | ವಿಮಾನ ದುರಂತ ನಡೆದ ಸ್ಥಳಕ್ಕೆ ಇಂದು ಮೋದಿ ಭೇಟಿ

Public TV
By Public TV
2 hours ago
bus accident
Bengaluru Rural

ತಿರುಪತಿಯಿಂದ ಬರುತ್ತಿದ್ದ ಆಂಧ್ರ ಬಸ್‌, ಲಾರಿ ನಡುವೆ ಭೀಕರ ಅಪಘಾತ – ಮೂವರು ಸ್ಥಳದಲ್ಲೇ ಸಾವು

Public TV
By Public TV
2 hours ago
Ahmedabad Planecrash 5
Latest

ಅಹಮದಾಬಾದ್‌ ವಿಮಾನ ದುರಂತದಲ್ಲಿ 241 ಮಂದಿ ಸಾವು, ಪವಾಡ ಸದೃಶವಾಗಿ ಏಕೈಕ ಪ್ರಯಾಣಿಕ ಪಾರು: ಏರ್‌ ಇಂಡಿಯಾ

Public TV
By Public TV
2 hours ago
pat cummins
Cricket

ಕಮ್ಮಿನ್ಸ್‌ ಬೆಂಕಿ ಬೌಲಿಂಗ್‌ – 218 ರನ್‌ ಮುನ್ನಡೆಯಲ್ಲಿ ಆಸ್ಟ್ರೇಲಿಯಾ

Public TV
By Public TV
10 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?