ಬೆಂಗಳೂರು: ದೇಶದಲ್ಲಿ ರೂಪಾಂತರಿ ತಳಿ ಓಮಿಕ್ರಾನ್ ಭೀತಿ ಹೆಚ್ಚುತ್ತಿದೆ. ರಾಜ್ಯದಲ್ಲಿ ಕೂಡ ಓಮಿಕ್ರಾನ್ ಆತಂಕ ಪ್ರಾರಂಭವಾಗಿದೆ. ಇಂದು ಕರ್ನಾಟಕದಲ್ಲಿ ಒಟ್ಟು 301 ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, 7 ಮರಣ ಪ್ರಕರಣ ದಾಖಲಾಗಿದೆ.
ರಾಜ್ಯದಲ್ಲಿ 359 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 6,067 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,98,500 ಮಂದಿಗೆ ಕೊರೊನಾ ಬಂದಿದೆ. 29,53,067 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.2.32 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.34 ರಷ್ಟಿದೆ. ಇಂದು ಬೆಂಗಳೂರು ನಗರದಲ್ಲಿ ಒಟ್ಟು 162 ಕೇಸ್ ಪತ್ತೆಯಾಗಿದ್ದು, 116 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ, 3 ಮರಣ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ನೇಪಾಳದಲ್ಲಿ ಮೊದಲ ಬಾರಿಗೆ ಓಮಿಕ್ರಾನ್ ಪ್ರಕರಣ ಪತ್ತೆ – ಇಬ್ಬರಿಗೆ ಸೋಂಕು
ರಾಜ್ಯದಲ್ಲಿ ಇಂದು ಒಟ್ಟು 4,06,717 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 88,387 ಸ್ಯಾಂಪಲ್ (ಆರ್ಟಿ ಪಿಸಿಆರ್ 78,682 + 9,705 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಸೌದಿ ಅರೇಬಿಯಾದಲ್ಲಿ ಓಮಿಕ್ರಾನ್ ಮೊದಲ ಪ್ರಕರಣ ಪತ್ತೆ- ಉತ್ತರ ಆಫ್ರಿಕಾದಿಂದ ಬಂದ ವ್ಯಕ್ತಿಯಲ್ಲಿ ಸೋಂಕು!
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 5, ಬೆಳಗಾವಿ 5, ಬೆಂಗಳೂರು ಗ್ರಾಮಾಂತರ 5, ಬೆಂಗಳೂರು ನಗರ 162, ಬೀದರ್ 0, ಚಾಮರಾಜನಗರ 3, ಚಿಕ್ಕಬಳ್ಳಾಪುರ 6, ಚಿಕ್ಕಮಗಳೂರು 40, ಚಿತ್ರದುರ್ಗ 1, ದಕ್ಷಿಣ ಕನ್ನಡ 2, ದಾವಣಗೆರೆ 3, ಧಾರವಾಡ 11, ಗದಗ 0, ಹಾಸನ 12, ಹಾವೇರಿ 1, ಕಲಬುರಗಿ 0, ಕೊಡಗು 5, ಕೋಲಾರ 1, ಕೊಪ್ಪಳ 0, ಮಂಡ್ಯ 3, ಮೈಸೂರು 16, ರಾಯಚೂರು 0, ರಾಮನಗರ 0, ಶಿವಮೊಗ್ಗ 4, ತುಮಕೂರು 8, ಉಡುಪಿ 2, ಉತ್ತರ ಕನ್ನಡ 9, ವಿಜಯಪುರ ಮತ್ತು ಯಾದಗಿರಿಯಲ್ಲಿ ಶೂನ್ಯ ಪಾಸಿಟಿವ್ ಪ್ರಕರಣ ದಾಖಲಾಗಿದೆ.