Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಚ್ಛಿದ್ರಕಾರಿ ದುಷ್ಟಶಕ್ತಿಗಳ ನಿಗ್ರಹಿಸಲು ಕಠಿಣ ಕ್ರಮಕ್ಕೆ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಿಚ್ಛಿದ್ರಕಾರಿ ದುಷ್ಟಶಕ್ತಿಗಳ ನಿಗ್ರಹಿಸಲು ಕಠಿಣ ಕ್ರಮಕ್ಕೆ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಮನವಿ

Bengaluru City

ವಿಚ್ಛಿದ್ರಕಾರಿ ದುಷ್ಟಶಕ್ತಿಗಳ ನಿಗ್ರಹಿಸಲು ಕಠಿಣ ಕ್ರಮಕ್ಕೆ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಮನವಿ

Public TV
Last updated: December 19, 2021 9:36 pm
Public TV
Share
3 Min Read
Capt Ganesh Karnik
SHARE

ಬೆಂಗಳೂರು: ನಗರದ ಶಿವಾಜಿನಗರದಲ್ಲಿ ರಾಷ್ಟ್ರಭಕ್ತ ಮಹಾಪುರುಷರ ಪುತ್ಥಳಿಗೆ ಮಸಿ ಬಳಿದು ಅವಮಾನಗೊಳಿಸುವ ಮೂಲಕ ಹಿಂಸಾಚಾರಕ್ಕೆ ಆಸ್ಪದ ಕೊಟ್ಟು, ಕಾನೂನು ಮತ್ತು ಸುವ್ಯವಸ್ಥೆಯನ್ನು ಹದಗೆಡಿಸಿ ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಹಾಗೂ ರಾಜ್ಯದ ಕೆಲವು ಭಾಗಗಳಲ್ಲಿ ವಿನಾಕಾರಣ ಆತಂಕವನ್ನು ಸೃಷ್ಟಿಸಿರುವ ವಿಚ್ಛಿದ್ರಕಾರಿ ದುಷ್ಟಶಕ್ತಿಗಳನ್ನು ಮತ್ತು ಈ ಘಟನೆಗಳ ಹಿಂದಿರುವ ಷಡ್ಯಂತ್ರವನ್ನು ಪತ್ತೆ ಹಚ್ಚಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಬಿಜೆಪಿ ಮುಖ್ಯ ವಕ್ತಾರರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

Chhatrapati Shivaji Maharaj

ಬೆಂಗಳೂರಿನ ಶಿವಾಜಿನಗರದಲ್ಲಿರುವ ಛತ್ರಪತಿ ಶಿವಾಜಿ ಮಹಾರಾಜ್ ಅವರ ಪುತ್ಥಳಿಗೆ ಮಸಿ ಬಳಿದು ಬಂಧಿತರಾಗಿರುವ ಏಳು ವ್ಯಕ್ತಿಗಳನ್ನು ವಿಚಾರಿಸಿ ಈ ರೀತಿಯ ಹಿಂಸಾತ್ಮಕ ಮತ್ತು ಪ್ರಚೋದನಕಾರಿ ಚಟುವಟಿಕೆಗಳ ಹಿಂದೆ ಇರುವ ಷಡ್ಯಂತ್ರವನ್ನು ಪತ್ತೆ ಹಚ್ಚುವುದು ಅತ್ಯಂತ ಅನಿವಾರ್ಯವಾಗಿದೆ. ಸಮಾಜದ ಕಾನೂನು ಮತ್ತು ಸುವ್ಯವಸ್ಥೆಯನ್ನು ಹದಗೆಡಿಸುವ ಈ ಷಡ್ಯಂತ್ರ ಒಂದು ಖಂಡನಾರ್ಹ ಬೆಳವಣಿಗೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಬೆಳಗಾವಿಯಲ್ಲಿ MES ಪುಂಡರ ಅಟ್ಟಹಾಸ – ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಹಾನಿ, ಬಸ್ ಮೇಲೆ ಕಲ್ಲು ತೂರಾಟ

ಬಂಧಿತ ಆರೋಪಿ ನವೀನ್ ಗೌಡ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಸನ್ಮಾನ್ಯ ಡಿ.ಕೆ ಶಿವಕುಮಾರ್ ಮತ್ತು ಜಮೀರ್ ಅಹಮದ್ ಅವರ ನಿಕಟವರ್ತಿಯಾಗಿದ್ದು ಕಾಂಗ್ರೆಸ್ ಕಾರ್ಯಕರ್ತನಾಗಿರುತ್ತಾನೆ. ನವೀನ್ ಗೌಡನ ಕಾಂಗ್ರೆಸ್ ಜೊತೆಗಿನ ನಂಟು ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರ ಕೋಮುಗಲಭೆಯ ಟ್ವೀಟ್ ಈ ಘಟನೆಗಳ ಹಿಂದೆ ರಾಜ್ಯಾದ್ಯಂತ ಕೋಮುಗಲಭೆ ಸೃಷ್ಟಿಸಿ ಕ್ಷೋಭೆಯ ವಾತಾವರಣ ನಿರ್ಮಾಣ ಮಾಡುವ ಕಾಂಗ್ರೆಸ್‍ನ್ನು ಷಡ್ಯಂತ್ರದ ಭಾಗವಾಗಿರುವುದು ಕಂಡುಬರುತ್ತಿದೆ. ಇದಕ್ಕೆ ಪೂರಕವೆನ್ನುವಂತೆ ಕಾಂಗ್ರೆಸ್, ಎನ್‍ಸಿಪಿ ಮತ್ತು ಶಿವಸೇನೆಯ ಆಡಳಿತವಿರುವ ಮಹಾರಾಷ್ಟ್ರದಲ್ಲಿ ದುಷ್ಟ ಶಕ್ತಿಗಳು ಕನ್ನಡ ಧ್ವಜವನ್ನು ಸುಟ್ಟು ಹಾಕಿರುವುದು ಪರಿಸ್ಥಿತಿಯನ್ನು ಇನ್ನಷ್ಟು ಉದ್ವಿಗ್ನಗೊಳಿಸುವ ಷಡ್ಯಂತ್ರದ ಮುಂದುವರಿದ ಭಾಗವಾಗಿದೆ. ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದರೂ ದೇಶಕ್ಕೆ ಅಪಾಯ. ಅದು ವಿರೋಧ ಪಕ್ಷವಾಗಿದ್ದರೆ ದೇಶಕ್ಕೆ ಎರಡು ಪಟ್ಟು ಹೆಚ್ಚು ಅಪಾಯಕಾರಿಯಾಗಿರುತ್ತದೆ ಎನ್ನುವುದನ್ನು ನಾಡಿನ ಜನತೆ ಗಮನಿಸಬೇಕೆಂದು ವಿನಂತಿಸಿದ್ದಾರೆ. ಇದನ್ನೂ ಓದಿ: ಕರ್ನಾಟಕದಲ್ಲಿ ಮರಾಠಿಗರ ಮೇಲೆ ದಾಳಿ ನಡೆಯುತ್ತಿದೆ – ಸುಳ್ಳು ಆರೋಪ ಹೊರಿಸಿದ ಉದ್ಧವ್ ಠಾಕ್ರೆ

ಬ್ರಿಟಿಷರ ವಿರುದ್ಧ ಕೆಚ್ಚೆದೆಯ ಹೋರಾಟ ನಡೆಸಿ ಹುತಾತ್ಮರಾದ ಕನ್ನಡ ನಾಡಿನ ಹೆಮ್ಮಯ ಪುತ್ರ ಗಂಡುಗಲಿ ಸಂಗೊಳ್ಳಿ ರಾಯಣ್ಣ, ಬ್ರಿಟಿಷ್ ದುರಾಡಳಿತದ ವಿರುದ್ಧ ಸೆಟೆದು ನಿಂತು ಹೋರಾಟ ಮಾಡಿ ಮಾತೃಶಕ್ತಿಗೆ ಗೌರವ ತಂದುಕೊಟ್ಟಿರುವ ದೇಶಭಕ್ತೆ ವೀರರಾಣಿ ಕಿತ್ತೂರು ಚನ್ನಮ್ಮ, ಮೊಘಲ್ ದುರಾಡಳಿತ ಮತ್ತು ಆ ಸಮಯದಲ್ಲಿ ದೇಶಾದ್ಯಂತ ನಡೆದಿರುವಂಥ ಕ್ರೌರ್ಯ, ಅತ್ಯಾಚಾರ ಹಾಗೂ ಬಲಾತ್ಕಾರದ ಮತಾಂತರಗಳನ್ನು ಪ್ರತಿಭಟಿಸಿ ಮೊಘಲ್ ಸಾಮ್ರಾಜ್ಯಕ್ಕೆ ಸವಾಲನ್ನು ಹಾಕಿ ಹಿಂದೂ ಸಾಮ್ರಾಜ್ಯದ ಸ್ಥಾಪನೆಗೆ ಕಾರಣಕರ್ತರಾದ ಶಿವಾಜಿ ಮಹಾರಾಜ್ ಮುಂತಾದ ಮಹಾನ್ ದೇಶಭಕ್ತರುಗಳು ನಾಡಿನ ಜನತೆಗೆ ನಿತ್ಯ ನಿರಂತರ ದೇಶಪ್ರೇಮದ ಪ್ರೇರಣೆ ನೀಡುವ ಮಹಾಪುರುಷರು. ಈ ರಾಷ್ಟ್ರಭಕ್ತರಿಗೆ ಅವಮಾನವೆಸಗುವ ಕೃತ್ಯಗಳು ಇಡೀ ದೇಶಕ್ಕೆ ಮಾಡಿದ ಅಪಮಾನ. ಈ ಅಪಚಾರವನ್ನು ದೇಶದ ಜನತೆ ಎಂದಿಗೂ ಕ್ಷಮಿಸುವುದಿಲ್ಲ ಎಂದು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ಸ್ಥಾಪಿಸಲ್ಪಟ್ಟಿರುವ ಮಹಾ ಪುರುಷರ ಪುತ್ಥಳಿಗಳನ್ನು ಸಂರಕ್ಷಿಸಲು ಮತ್ತು ಕಿಡಿಗೇಡಿಗಳ ದುಷ್ಕೃತ್ಯಗಳಿಗೆ ಅವಕಾಶವಿಲ್ಲದಂತೆ ಮಾಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಎಂಇಎಸ್ ಪುಂಡಾಟ ನಿಲ್ಲಲಿ: ಡಾಲಿ ಧನಂಜಯ್

ಮಹಾನ್ ದೇಶಭಕ್ತರ ಪುತ್ಥಳಿಗಳನ್ನು ಅಗೌರವಿಸುವುದರ ಮೂಲಕ ನಾಡಿನಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕದಡಿಸಿ, ಕ್ಷೋಭೆ ಉಂಟು ಮಾಡುವ ದುಷ್ಕೃತ್ಯವನ್ನು ಖಂಡಿಸುತ್ತಾ, ಈ ಕೃತ್ಯದ ಹಿಂದಿರುವ ಷಡ್ಯಂತ್ರವನ್ನು ಬಯಲಿಗೆಳೆದು ಷಡ್ಯಂತ್ರದಲ್ಲಿ ಭಾಗವಹಿಸಿದ ಎಲ್ಲ ರಾಷ್ಟ್ರದ್ರೋಹಿಗಳನ್ನು ಬಂಧಿಸಿ ಕಟ್ಟುನಿಟ್ಟಿನ ಕಾನೂನು ಕ್ರಮವನ್ನು ಕೈಗೊಳ್ಳುವಂತೆ ಭಾರತೀಯ ಜನತಾ ಪಾರ್ಟಿಯ ಮುಖ್ಯಮಂತ್ರಿ ಮತ್ತು ಗೃಹ ಮಂತ್ರಿಗಳನ್ನು ಒತ್ತಾಯಿಸುತ್ತಾ, ಮುಂದಿನ ದಿನಗಳಲ್ಲಿ ಈ ರೀತಿಯ ದುಷ್ಕೃತ್ಯಗಳು ನಡೆಯದಿರುವಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

TAGGED:Basavaraj BommaibjpCaptain Ganesh Karnikಕ್ಯಾಪ್ಟನ್ ಗಣೇಶ್ ಕಾರ್ಣಿಕ್ಬಸವರಾಜ ಬೊಮ್ಮಾಯಿಬಿಜೆಪಿ
Share This Article
Facebook Whatsapp Whatsapp Telegram

Cinema news

Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post
KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood

You Might Also Like

Javaramma
Districts

ಮಾಜಿ ಪ್ರಧಾನಿ ದೇವೇಗೌಡರ ಸಹೋದರಿ ನಿಧನ

Public TV
By Public TV
8 minutes ago
plastics industry
Dakshina Kannada

ಇರಾನ್‌ ಯುದ್ಧ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಪ್ಲಾಸ್ಟಿಕ್ ಉದ್ಯಮಕ್ಕೆ ಬಂದ್ ಭೀತಿ

Public TV
By Public TV
9 minutes ago
Flights
Latest

ಮಧ್ಯಪ್ರಾಚ್ಯ ಸಂಘರ್ಷ – ಭಾರತದ ಪ್ರವಾಸೋದ್ಯಮ, ವಿಮಾನಯಾನ ಕ್ಷೇತ್ರಕ್ಕೆ ಆತಂಕ

Public TV
By Public TV
22 minutes ago
Indian Origin Men Fined Rs 1.7 Lakh Each In for Spitting Paan On Streets
Latest

ಲಂಡನ್‌ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರಿಗೆ ತಲಾ 1.7 ಲಕ್ಷ ದಂಡ

Public TV
By Public TV
30 minutes ago
Pralhad Joshi 1
Latest

ನವೀಕರಿಸಬಹುದಾದ ಇಂಧನದಲ್ಲಿ ಭಾರತ 3ನೇ ಅತಿದೊಡ್ಡ ರಾಷ್ಟ್ರ: ಪ್ರಹ್ಲಾದ್ ಜೋಶಿ

Public TV
By Public TV
1 hour ago
Droupadi Murmu Ram Temple
Ayodhya Ram Mandir

ಅಯೋಧ್ಯೆ ರಾಮಮಂದಿರಕ್ಕೆ ದ್ರೌಪದಿ ಮುರ್ಮು ಭೇಟಿ – 150 ಕೆಜಿ ತೂಕದ ಚಿನ್ನ ಲೇಪಿತ ಲೋಹದ ತಟ್ಟೆ ಪ್ರತಿಷ್ಠಾಪನೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?