Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಮತ್ತೆ ಪ್ರೋ ಕಬಡ್ಡಿ ಹಬ್ಬ – ಇಂದಿನಿಂದ ಬೆಂಗಳೂರು ಬುಲ್ಸ್ ಅಭಿಯಾನ ಶುರು

Public TV
Last updated: December 22, 2021 2:45 pm
Public TV
Share
4 Min Read
bengaluru bulls 2
SHARE

ಬೆಂಗಳೂರು: ಕಬಡ್ಡಿ ಹಬ್ಬಕ್ಕೆ ವೇದಿಕೆ ಸಿದ್ಧವಾಗಿದೆ. ವಿವೋ ಪ್ರೋ ಕಬಡ್ಡಿ ಲೀಗ್ ಎರಡು ವರ್ಷಗಳ ನಂತರ ಮತ್ತೆ ರಂಜಿಸಲು ಬಂದಿದೆ. ಬೆಂಗಳೂರು ಬುಲ್ಸ್ ತಂಡ ಸಹ ಪ್ರಶಸ್ತಿ ಗೆಲ್ಲಲು ಸಕಲ ಸಿದ್ಧತೆ ಮಾಡಿಕೊಂಡಿದೆ .

ಕೊರೊನಾ ಕಾರಣದಿಂದ ಹಿಂದಿನ ಎರಡು ವರ್ಷಗಳ ಆವೃತ್ತಿ ನಡೆದಿರಲಿಲ್ಲ. ಸೀಸನ್ 6 ಚಾಂಪಿಯನ್ಸ್ ಮತ್ತು ಈ ವರ್ಷದ ಫೆವರೇಟ್ ತಂಡ ಬೆಂಗಳೂರು ಬುಲ್ಸ್ ಡಿಸೆಂಬರ್ 22 ರಿಂದ ತವರಿನಿಂದಲೇ ಅಭಿಯಾನ ಆರಂಭಿಸಲಿದೆ. ಕೊರೊನಾ ನಿಯಮಗಳನ್ನು ಪಾಲಿಸುತ್ತಾ ಕಟ್ಟುನಿಟ್ಟಾದ ಬಯೋ ಬಬಲ್ ವ್ಯವಸ್ಥೆಯಲ್ಲಿ ತಂಡಗಳು ಕಣಕ್ಕೆ ಇಳಿಯಲಿವೆ.

ಡಿಸೆಂಬರ್ 22 ರಂದು ರಾತ್ರಿ 7:30 ಗಂಟೆಗೆ ಯು ಮುಂಬಾ ತಂಡದೊಂದಿಗೆ ಬೆಂಗಳೂರು ಬುಲ್ಸ್ ಸೆಣೆಸಾಡಲಿದ್ದು ಪಂದ್ಯಾವಳಿಗೆ ಆರಂಭ ಸಿಗಲಿದೆ. ಎಲ್ಲ ಪಂದ್ಯಗಳು ಬೆಂಗಳೂರಿನ ವೈಟ್ ಫೀಲ್ಡ್ ಶೆರಾಟನ್ ಗ್ರ್ಯಾಂಡ್ ಹೋಟೆಲ್ ಮತ್ತು ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯಲಿವೆ.

bengaluru bulls 1

ಆಯೋಜಕರು ಪಂದ್ಯಾವಳಿಯ ಮೊದಲ ವೇಳಾಪಟ್ಟಿ ಬಿಡುಗಡೆ ಮಾಡಿದ್ದು ಬೆಂಗಳೂರು ಬುಲ್ಸ್ ತಂಡ ಡಿಸೆಂಬರ್ ನಲ್ಲಿ 4 ಮತ್ತು ಜನವರಿಯಲ್ಲಿ 7 ಪಂದ್ಯಗಳು ಸೇರಿ ಮೊದಲಾರ್ಧದಲ್ಲಿ ಬುಲ್ಸ್ 11 ಪಂದ್ಯಗಳನ್ನು ಆಡಲಿದೆ.

ಬೆಂಗಳೂರು ಬುಲ್ಸ್ ಶಕ್ತಿ: ಪ್ರೋ ಕಬಡ್ಡಿಯಲ್ಲಿ ಬೆಂಗಳೂರು ಬುಲ್ಸ್ ಸದಾ ಫೇವರೇಟ್ ತಂಡ. ಜನವರಿ 2019 ರಲ್ಲಿ ನಡೆದ ಫೈನಲ್‌ನಲ್ಲಿ ಗುಜರಾತ್ ಫಾರ್ಚೂನ್ ಜೈಂಟ್ಸ್ ಅನ್ನು ಸೋಲಿಸುವ ಮೂಲಕ ಸೀಸನ್ 6 ರಲ್ಲಿ ಚಾಂಪಿಯನ್ ಆಗಿತ್ತು. ಎರಡನೇ ಸೀಸನ್ ನಲ್ಲಿ ರನ್ನರ್ ಅಪ್ ಆಗಿದ್ದರೆ ಸೀಸನ್ 1 ಮತ್ತು 7 ರಲ್ಲಿ, ಸೆಮಿಫೈನಲ್ ಪ್ರವೇಶ ಮಾಡಿತ್ತು.

ಈ ಬಾರಿ ಬೆಸ್ಟ್‌ ತಂಡ: ಕಳೆದ ಬಾರಿಗಿಂತ ಈ ಬಾರಿ ಬುಲ್ಸ್ ತಂಡ ಮತ್ತಷ್ಟು ಬಲಿಷ್ಠವಾಗಿದೆ. ಬುಲ್ಸ್ ಅನುಭವಿ ಆಟಗಾರರನ್ನು ಉಳಿಸಿಕೊಳ್ಳುವುದರೊಂದಿಗೆ ವಿದೇಶಿ ಆಟಗಾರರ ಸೇರ್ಪಡೆ ಮಾಡಿಕೊಂಡಿದೆ. ಅಬೋಲ್ಫಾಜ್ಲ್ ಮಗ್ಸೋಡ್ಲೌ ಮಹಾಲಿ (ಇರಾನ್), ಡಾಂಗ್ ಜಿಯೋನ್ ಲೀ (ದಕ್ಷಿಣ ಕೊರಿಯಾ), ಜಿಯಾವುರ್ ರೆಹಮಾನ್ (ಬಾಂಗ್ಲಾದೇಶ) ಆಟಗಾರರು ತಂಡ ಸೇರಿಕೊಂಡಿದ್ದಾರೆ. ರೆಕಾರ್ಡ್ ಬ್ರೇಕಿಂಗ್ ರೈಡರ್ ಪವನ್ ಕುಮಾರ್ ಸೆಹ್ರಾವತ್ ನಾಯಕನಾಗಿ ಬುಲ್ಸ್ ತಂಡ ಮುನ್ನಡೆಸಲಿದ್ದಾರೆ.

bengaluru bulls pawan sherawat

ಮೂರನೇ ಸೀಸನ್ ನಿಂದ ಪವನ್ ಬೆಂಗಳೂರು ಬುಲ್ಸ್ ತಂಡದ ಪರವಾಗಿ ಆಡುತ್ತ ಬಂದಿದ್ದಾರೆ. ರಾಷ್ಟ್ರೀಯ ಮಟ್ಟದಲ್ಲಿಯೂ ಪವನ್ ಹೆಸರು ಮಾಡಿದ್ದಾರೆ. ದಕ್ಷಿಣ ಏಷ್ಯಾದ ಕ್ರೀಡಾಕೂಟದಲ್ಲಿ ಭಾರತೀಯ ತಂಡದ ಭಾಗವಾಗಿ ಚಿನ್ನಕ್ಕೆ ಕೊರಳು ಒಡ್ಡಿದ್ದರು. ಪ್ರೋ ಕಬಡ್ಡಿ ಸೀಸನ್ 6 ಮತ್ತು 7 ರಲ್ಲಿ ಕ್ರಮವಾಗಿ “ಅತ್ಯಂತ ಮೌಲ್ಯಯುತ ಆಟಗಾರ” ಮತ್ತು “ಅತ್ಯುತ್ತಮ ರೈಡರ್” ಪುರಸ್ಕಾರಕ್ಕೆ ಪಾತ್ರವಾಗಿದ್ದರು.

ಪ್ರೋ ಕಬಡ್ಡಿಯ ಅತ್ಯುತ್ತಮ ರೈಡರ್ ಗಳಲ್ಲಿ ಪವನ್ ಗೆ ಅಗ್ರಸ್ಥಾನವಿದೆ. ಇನ್ನು ಡಿಫೆಂಡರ್ ಮಹೇಂದರ್ ಸಿಂಗ್ ಬೆಂಗಳೂರು ಬುಲ್ಸ್ ಶಕ್ತಿ. ಕೋಚ್ ರಣಧೀರ್ ಸಿಂಗ್ ಸೆಹ್ರಾವತ್ ಅವರಿಂದ “ಬುಲ್ಡೋಜರ್” ಎಂದೇ ಕರೆಸಿಕೊಳ್ಳುತ್ತಾರೆ.

ಅರ್ಜುನ ಪ್ರಶಸ್ತಿ ವಿಜೇತ ರಣಧೀರ್ ಲೀಗ್ ಆರಂಭದಿಂದಲೂ ಬುಲ್ಸ್ ತರಬೇತುದಾರರಾಗಿದ್ದವರು. ಅನೇಕ ಯುವ ಆಟಗಾರರನ್ನು ತಮ್ಮ ಗರಡಿಯಲ್ಲಿ ಪಳಗಿಸಿ ಪರಿಚಯಿಸಿದ್ದಾರೆ. ಈ ಬಾರಿ ಬುಲ್ಸ್ ಗೆ ಅತ್ಯುತ್ತಮ ನಾಯಕ ಮತ್ತು ಅತ್ಯುತ್ತಮ ಕೋಚ್ ಸಂಯೋಜನೆ ಇದೆ. 2014 ರಲ್ಲಿ ಪ್ರಾರಂಭವಾದ ಪ್ರೊ ಕಬಡ್ಡಿ ಹೊಸ ಜನರನ್ನು ತನ್ನ ಕಡೆ ಸೆಳೆದುಕೊಂಡಿತು. ಕಬಡ್ಡಿ ಆಸ್ವಾದಿಸುವವರ ಸಂಖ್ಯೆಯೂ ಗಣನೀಯ ಪ್ರಮಾಣದಲ್ಲಿ ಏರಿಕೆ ಕಂಡಿತು.

When you are a legend
Leadership is only a matter of time…@pawan_kumar17#FullChargeMaadi #vivoProKabaddiIsBack #BengaluruBulls #kabaddi #VivoPKL8 #VivoProKabaddiLeague #Season8 #KhelKabaddi #prokabaddileague2021 pic.twitter.com/NMuMia18Gg

— Bengaluru Bulls (@BengaluruBulls) December 14, 2021

ಡಬ್ಲ್ಯುಎಲ್ ಲೀಗ್ ಪ್ರೈವೇಟ್ ಲಿಮಿಟೆಡ್ ಮಾಲೀಕತ್ವದ ಬುಲ್ಸ್, ಪ್ರೊ ಕಬಡ್ಡಿಯಲ್ಲಿ ಸ್ಥಿರ ಪ್ರದರ್ಶನ ನೀಡುತ್ತಲೇ ಬಂದಿದೆ. ಈಗ ಮತ್ತೊಮ್ಮೆ ಅಭಿಮಾನಿಗಳು ತಮ್ಮ ನೆಚ್ಚಿನ ತಂಡ ಮತ್ತು ಆಟಗಾರರನ್ನು ಬರಮಾಡಿಕೊಳ್ಳಲು ಸಿದ್ಧರಾಗಿದ್ದಾರೆ. ಇದನ್ನೂ ಓದಿ: ಐಪಿಎಲ್ 2022 – ಯಾರು ಯಾವ ತಂಡಕ್ಕೆ ನಾಯಕ? – ಇಲ್ಲಿದೆ ಪೂರ್ಣ ವಿವರ

ಸುದೀಪ್ ಕೊಂಡಾಡಿದ ತಂಡ: ಸ್ಯಾಂಡಲ್ ವುಡ್ ಅಭಿನಯ ಚಕ್ರವರ್ತಿ ಸುದೀಪ್ ತಂಡವನ್ನು ಹುರಿದುಂಬಿಸಿದ್ದಾರೆ. ‘ನಮ್ಮ ಊರು, ನಮ್ಮ ಆಟ, ನಮ್ಮ ಹುಡುಗರು, ನಮ್ಮ ಬುಲ್ಸ್’ ಎನ್ನುತ್ತ ಎಲ್ಲರೂ ಬೆಂಬಲ ನೀಡಲು ಕೇಳಿಕೊಂಡಿದ್ದಾರೆ. ಪಕ್ಕಾ ಹಳ್ಳಿ ಸೊಗಡಿನಲ್ಲಿ ಎಂಟ್ರಿ ಕೊಡುವ ಕಿಚ್ಚ, ಸಖತ್ ಡೈಲಾಗ್ ಹೊಡೆದು ಬೆಂಗಳೂರು ಬುಲ್ಸ್ ತಂಡಕ್ಕೆ ಬೆಂಬಲ ನೀಡಿದ್ದಾರೆ. ಸುದೀಪ್ ಟ್ವಿಟ್ಟರ್ ನಲ್ಲಿ ಪ್ರೋಮೋ ಹಂಚಿಕೊಂಡಿದ್ದಾರೆ. ಗುರಾಯ್ಸೋಕೆ ರೆಡಿಯಾಗಿದೆ ನಮ್ಮೂರ ಬುಲ್ಸ್.. ಸಪೋರ್ಟ್ ಮಾಡೋಕೆ ರೆಡಿಯಾಗಿ ಕಬಡ್ಡಿ ಫ್ಯಾನ್ಸ್.. ನಿಮ್ಮ ಜೊತೆ ಬೆಂಗಳೂರು ಬುಲ್ಸ್ ಟೀಮ್ ಗೆ ಬೆಂಬಲ ನೀಡೋಕೆ ನಾನೂ ಕೂಡ ಇರ್ತಿನಿ ಎಂದು ಸುದೀಪ್ ಹೇಳಿದ್ದಾರೆ.

ಬುಲ್ಸ್ ಟೈಟಲ್ ಪ್ರಾಯೋಜಕರಾಗಿ 1xnews ಜವಾಬ್ದಾರಿ ತೆಗೆದುಕೊಂಡಿದ್ದರೆ, ಹರ್ಬಲೈಫ್ ನ್ಯೂಟ್ರೇಶನ್ ಜವಾಬ್ದಾರಿ ಹೊತ್ತುಕೊಂಡಿದೆ . ನಿಪ್ಪಾನ್ ಪೇಂಟ್, ಬಿಗ್ ಎಫ್‌ಎಂ ಮತ್ತು ಪಿಕೆ ಕಾನ್ಷಿಯಸ್‌ನೆಸ್ ಕೂಡ ಬುಲ್ಸ್ ನೊಂದಿಗೆ ಬಾಂಧ್ಯವ್ಯ ಬೆಸೆದುಕೊಂಡಿವೆ. ಕೊರೊನಾ ಕಾರಣಕ್ಕೆ ಪಂದ್ಯಾವಳಿ ವೀಕ್ಷಣೆಗೆ ಪ್ರೇಕ್ಷಕರಿಗೆ ಅವಕಾಶ ಇರುವಿದಿಲ್ಲ. ಇದನ್ನೂ ಓದಿ: ಐಪಿಎಲ್ 2022 ಹರಾಜು – 5 ವಿದೇಶಿ ವಿಕೆಟ್ ಕೀಪರ್‌ಗಳ ಮೇಲೆ ಫ್ರಾಂಚೈಸಿಗಳ ಕಣ್ಣು

ಬೆಂಗಳೂರು ಬುಲ್ಸ್ ತಂಡ: ಪವನ್ ಕುಮಾರ್ ಸೆಹ್ರಾವತ್ (ನಾಯಕ), ಮಹೇಂದರ್ ಸಿಂಗ್ (ಉಪನಾಯಕ), ಅಬೋಲ್ಫಜಲ್ ಮಗ್ಸೋಡ್ಲೌ ಮಹಾಲಿ, ಡಾಂಗ್ ಜಿಯೋನ್ ಲೀ, ಜಿಯಾವುರ್ ರೆಹಮಾನ್, ಅಮಿತ್ ಶೆರಾನ್, ಸೌರಭ್ ನಂದಲ್, ಮೋಹಿತ್ ಸೆಹ್ರಾವತ್, ಚಂದ್ರನ್ ರಂಜಿತ್, ದೀಪಕ್ ನರ್ವಾಲ್ ಜಿಬಿ , ಮಯೂರ್ ಜಗನ್ನಾಥ್ ಕದಮ್, ವಿಕಾಸ್, ಭರತ್ ಹೂಡಾ, ಅಮನ್ ಅಂತಿಲ್, ನಸೀಬ್, ರೋಹಿತ್ ಕುಮಾರ್, ಅಂಕಿತ್, ರೋಹಿತ್ ಸಾಂಗ್ವಾನ್. ಕೋಚ್: ರಣಧೀರ್ ಸಿಂಗ್ ಸೆಹ್ರಾವತ್.

ಬೆಂಗಳೂರು ಬುಲ್ಸ್ ತಂಡದ ಮೊದಲಾರ್ಧದ ವೇಳಾಪಟ್ಟಿ
1. ಯು ಮುಂಬಾ ಡಿ. 22 ಬುಧವಾರ ಸಂಜೆ 7:30
2. ತಮಿಳ್ ತಲೈವಾಸ್ ಡಿ. 24 ಶುಕ್ರವಾರ ರಾತ್ರಿ 8:30
3. ಬಂಗಾಲ್ ವಾರಿಯರ್ಸ್ ಡಿ. 26 ಭಾನುವಾರ ರಾತ್ರಿ 8:30
4. ಹರ್ಯಾಣ ಸ್ಟೀಲರ್ಸ್ ಡಿ. 30 ಗುರುವಾರ ರಾತ್ರಿ 8:30
5. ತೆಲುಗು ಟೈಟಾನ್ಸ್ ಜ. 1 ಶನಿವಾರ ರಾತ್ರಿ 8:30
6. ಪುಣೇರಿ ಪಲ್ಟಾನ್ ಜ. 2 ಭಾನುವಾರ ರಾತ್ರಿ 8:30
7 ಜೈಪುರ್ ಪಿಂಕ್ ಪ್ಯಾಂಥರ್ಸ್ ಜ. 6 ಗುರುವಾರ ರಾತ್ರಿ 8:30
8. ಯುಪಿ ಯೋದ್ಧಾ ಜ. 9 ಭಾನುವಾರ ರಾತ್ರಿ 8:30
9. ದಬಾಂಗ್ ಡೆಲ್ಲಿ ಜ. 12 ಬುಧವಾರ ರಾತ್ರಿ 8:30
10. ಗುಜರಾತ್ ಜೈಂಟ್ಸ್ ಜ. 14 ಶುಕ್ರವಾರ ರಾತ್ರಿ 8:30
11. ಪಾಟ್ನಾ ಪೈರೇಟ್ಸ್ ಜ. 16 ಭಾನುವಾರ ರಾತ್ರಿ 8:30

TAGGED:Bengaluru BullsbengluruPKLPro Kabaddiಪ್ರೊ ಕಬಡ್ಡಿಬೆಂಗಳೂರು ಬುಲ್ಸ್
Share This Article
Facebook Whatsapp Whatsapp Telegram

Cinema Updates

madenur manu
ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್
3 hours ago
Akhil Akkineni Zainab Ravdjee
ಗರ್ಲ್ ಫ್ರೆಂಡ್ ಝೈನಬ್ ಮದ್ವೆಯಾದ ನಾಗಾರ್ಜುನ ಪುತ್ರ ಅಖಿಲ್
20 hours ago
shivani swamy
‘ಸರಿಗಮಪ ಸೀಸನ್‌ 21’ರ ವಿನ್ನರ್‌ ಆದ ಬೀದರ್‌ ಪ್ರತಿಭೆ ಶಿವಾನಿ ಸ್ವಾಮಿ
1 day ago
Kamal Haasan
ಕರ್ನಾಟಕದಲ್ಲಿ ಥಗ್‌ ಲೈಫ್‌ ರಿಲೀಸ್‌ಗಾಗಿ ಸುಪ್ರೀಂಗೆ PIL
2 days ago

You Might Also Like

CID Team Chinnaswamy Stadium Stampede
Bengaluru City

ಚಿನ್ನಸ್ವಾಮಿ ಸ್ಟೇಡಿಯಂಗೆ ಸಿಐಡಿ ತಂಡ ಭೇಟಿ – ಕಾಲ್ತುಳಿತ ಸ್ಥಳದಲ್ಲಿ ಪರಿಶೀಲನೆ

Public TV
By Public TV
10 minutes ago
Uttarakhand Rudraparayag Helicopter Emergency Landing
Latest

ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಹೆದ್ದಾರಿಯಲ್ಲಿ ತುರ್ತು ಭೂಸ್ಪರ್ಶ

Public TV
By Public TV
60 minutes ago
kanachur hospital mangaluru
Dakshina Kannada

ಮಂಗಳೂರು| ಸೆಮಿನಾರ್ ತಪ್ಪಿಸಲು ವಿದ್ಯಾರ್ಥಿನಿಯಿಂದಲೇ ಮೆಡಿಕಲ್ ಕಾಲೇಜಿಗೆ ಬಾಂಬ್ ಬೆದರಿಕೆ

Public TV
By Public TV
2 hours ago
Madhavi Latha Chenab Railway Bridge Project
Latest

ಚೆನಾಬ್ ರೈಲ್ವೆ ಸೇತುವೆ ನಿರ್ಮಾಣ ಕಾರ್ಯದಲ್ಲಿ 17 ವರ್ಷ ಕಳೆದ IISC ಪ್ರೊಫೆಸರ್ ಮಾಧವಿ ಲತಾ

Public TV
By Public TV
3 hours ago
HD Kumaraswamy
Districts

ಪಹಲ್ಗಾಮ್‌ ದಾಳಿಗೂ ಕಾಲ್ತುಳಿತಕ್ಕೂ ಏನ್‌ ಸಂಬಂಧ? ಮನಮೋಹನ್ ಸಿಂಗ್‌ ಪ್ರಧಾನಿಯಾಗಿದ್ದಾಗ ಎಷ್ಟು ಅಟ್ಯಾಕ್ ಆಗಿದ್ವು – ಹೆಚ್‌ಡಿಕೆ ಪ್ರಶ್ನೆ

Public TV
By Public TV
3 hours ago
BJP MP Govind Karjol slams Waqf Board for claiming rights over 15000 acres of ancestral land of farmers
Bengaluru City

Stampede Case | ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು: ಗೋವಿಂದ ಕಾರಜೋಳ

Public TV
By Public TV
4 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?