Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮತಾಂತರ ನಿಷೇಧ ಕಾಯ್ದೆ ಸಂವಿಧಾನಾತ್ಮಕ ಹಾಗೂ ಜನಪರ: ಬೊಮ್ಮಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಮತಾಂತರ ನಿಷೇಧ ಕಾಯ್ದೆ ಸಂವಿಧಾನಾತ್ಮಕ ಹಾಗೂ ಜನಪರ: ಬೊಮ್ಮಾಯಿ

Belgaum

ಮತಾಂತರ ನಿಷೇಧ ಕಾಯ್ದೆ ಸಂವಿಧಾನಾತ್ಮಕ ಹಾಗೂ ಜನಪರ: ಬೊಮ್ಮಾಯಿ

Public TV
Last updated: December 23, 2021 10:31 pm
Public TV
Share
2 Min Read
Belagavi Suvarna Soudha VidhanaSabhe 5
SHARE

ಬೆಳಗಾವಿ: ಮತಾಂತರ ನಿಷೇಧ ಕಾಯ್ದೆ ಜನಪರ ಹಾಗೂ ಸಂವಿಧಾನಬದ್ಧವಾದ ಕಾಯ್ದೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

BELAGAVI SESSION

ಬೆಳಗಾವಿಯ ಸುವರ್ಣಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಶೇಷವಾಗಿ ಎಸ್‍ಸಿ, ಎಸ್‍ಟಿ, ಬಡವರ ಪರವಾದ ಕಾಯ್ದೆಯಾಗಿದೆ. ಬರುವ ದಿನಗಳಲ್ಲಿ ಎಲ್ಲಾ ಜನಾಂಗಗಳ ರಕ್ಷಣೆ ಜೊತೆ ಅವರ ಸ್ವಾಭಿಮಾನವನ್ನು ಎತ್ತಿಹಿಡಿಯಲು ನೆರವಾಗುತ್ತದೆ. ಈ ಕಾಯ್ದೆಯನ್ನು ಜಾರಿಗೊಳಿಸುವಲ್ಲಿ ಸರ್ಕಾರದ ಸ್ಪಷ್ಟ ನೀತಿಯಿದೆ. ಬಡತನ, ನಿರುದ್ಯೋಗ, ಶಿಕ್ಷಣದ ಕೊರತೆಯಿರುವ ಜನರಿಗೆ ಆಸೆ ಆಮಿಷಗಳನ್ನು ಒಡ್ಡುವ ಮೂಲಕ ಮತಾಂತರಕ್ಕೆ ಒತ್ತಾಯ ಮಾಡುತ್ತಿರುವುದಕ್ಕೆ ಸರ್ಕಾರದ ವಿರೋಧವಿದೆ ಎಂದು ತಿಳಿಸಿದರು.

ಕಾಂಗ್ರೆಸ್‍ನ ದ್ವಿಮುಖ ನೀತಿ:
ಇಂದು ಮತಾಂತರ ನಿಷೇಧ ಕಾಯ್ದೆ ವಿಧಾನಮಂಡಲದಲ್ಲಿ ಸರ್ವಾನುಮತದಿಂದ ಪಾಸ್ ಮಾಡಲಾಗಿದೆ. ಇಂದಿನ ದಿನವನ್ನು ಕಾಯ್ದೆಯ ಬಗ್ಗೆ ಚರ್ಚಿಸಲು ಅವಕಾಶ ಮಾಡಿಕೊಡಲಾಗಿತ್ತು. ವಿರೋಧ ಪಕ್ಷದವರು ಮತಾಂತರ ನಿಷೇಧ ಕಾಯ್ದೆಯ ಬಗ್ಗೆ ಮಾತನಾಡದೇ ಕೇವಲ ರಾಜಕೀಯ ಭಾಷಣ ಮಾಡಿದ್ದಾರೆ. ಕಾಂಗ್ರೆಸ್ ಅವರ ಕಾಲದಲ್ಲಿಯೇ ಈ ಕಾಯ್ದೆಯ ರಚನೆಗೆ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಕಾನೂನು ಸಚಿವರ ಪರಿಶೀಲನೆಯ ನಂತರ ಸಚಿವ ಸಂಪುಟದಲ್ಲಿ ಕಾಯ್ದೆಯನ್ನು ಮಂಡಿಸಲು ಸ್ವತ: ಸಿದ್ದರಾಮಯ್ಯನವರೇ ಒಪ್ಪಿಗೆ ನೀಡಿದ್ದರು. ಸಚಿವ ಸಂಪುಟದಲ್ಲಿ ಮಂಡಿಸಲು ಒಪ್ಪಿಗೆ ನೀಡುವುದೆಂದರೆ ಕಾಯ್ದೆಯನ್ನು ಒಪ್ಪಿದಂತೆಯೇ ಅಲ್ಲವೇ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು. ನಂತರ ವಿಧಾನಮಂಡಲದಲ್ಲಿ ಅದೇ ಕಾಯ್ದೆಗೆ ಅವರು ವಿರೋಧ ವ್ಯಕ್ತಪಡಿಸಿದರು. ಇದು ಕಾಂಗ್ರೆಸ್ ನ ದ್ವಿಮುಖ ನೀತಿಯನ್ನು ತೋರುತ್ತದೆ ಎಂದು ತಿಳಿಸಿದರು.

ಕಾಂಗ್ರೆಸ್‍ನ ವೋಟ್ ಬ್ಯಾಂಕ್ ರಾಜಕಾರಣ:
ಯಡಿಯೂರಪ್ಪನವರು ಈ ಕಾಯ್ದೆಯ ಕರಡನ್ನು ಸಿದ್ಧಪಡಿಸಿದ್ದಲ್ಲ. ಮನವಿಯನ್ನು ಅವರು ನೀಡಿದ್ದರೂ ಕಾನೂನು ಆಯೋಗಕ್ಕೆ ಕಳಿಸಿದರು. 2014 ರಲ್ಲಿ ಆಯೋಗದಿಂದ ವರದಿ ಬಂದ ನಂತರ ನಂತರ ಕಾಂಗ್ರೆಸ್ ನವರು ಕರಡನ್ನು ಸಿದ್ಧಪಡಿಸಿದ್ದರು. ಆಯೋಗದ ವರದಿಯನ್ನು ನಿರಾಕರಿಸಿ ಕಾಯ್ದೆಯನ್ನು ವಿರೋಧಿಸಲು ಕಾಂಗ್ರೆಸ್ ಬಳಿ ಮೂರು ವರ್ಷದ ಅವಧಿಯಿತ್ತು. ವರದಿಯನ್ನು ಅನುಮೋದಿಸಿ ಕರಡು ಕಾಯ್ದೆಯನ್ನೂ ಸಿದ್ಧಪಡಿಸಿ ಸಚಿವ ಸಂಪುಟದಲ್ಲಿ ಮಂಡಿಸುವವರೆಗಿನ ಎಲ್ಲ ಪ್ರಕ್ರಿಯೆಗಳನ್ನೂ ಕೈಗೊಂಡಿದ್ದರು. ಆಗ ಕಾಯ್ದೆಯನ್ನು ಬೆಂಬಲಿಸಿದ್ದ ಕಾಂಗ್ರೆಸ್ ನವರು ಈಗ ಕೇವಲ ವೋಟ್ ಬ್ಯಾಂಕ್ ಹಾಗೂ ರಾಜಕಾರಣಕ್ಕಾಗಿ ಈ ಕಾಯ್ದೆಯನ್ನು ವಿರೋಧಿಸುತ್ತಿದ್ದಾರೆ ಎಂದು ತಿಳಿಸಿದರು.

ಕಾಂಗ್ರೆಸ್ ಎಸ್‍ಸಿ, ಎಸ್‍ಟಿ ವಿರೋಧಿ ನಿಲುವು:
ಕಾಂಗ್ರೆಸ್ ಪಕ್ಷದವರು ಮತಾಂತರ ನಿಷೇಧ ಕಾಯ್ದೆಯನ್ನು ರಾಜಕೀಯ ದಾಳವಾಗಿ ಬಳಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಜನತೆ ಅವರ ತಂತ್ರಗಳನ್ನು ಗಮನಿಸುತ್ತಿದ್ದಾರೆ. ಎಸ್‍ಸಿ, ಎಸ್‍ಟಿ ವಿರೋಧಿ ನಿಲುವನ್ನು ಕಾಂಗ್ರೆಸ್ ಇಂದು ಸದನದಲ್ಲಿ ಪ್ರದರ್ಶಿಸಿದೆ. ಈ ಸಮುದಾಯಕ್ಕೆ ಹೆಚ್ಚಿನ ರಕ್ಷಣೆ ಕೊಡುವ ಕೆಲಸವನ್ನು ಕಾಂಗ್ರೆಸ್ ಈ ಮೂಲಕ ವಿರೋಧಿಸುತ್ತಿದೆ. ಆರ್ಟಿಕಲ್ 46 ನಲ್ಲಿ ಕಾನೂನನ್ನು ಜಾರಿಗೊಳಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿರುವುದಾಗಿ ಸಂವಿಧಾನದಲ್ಲಿದೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.

ಬಹುಮತದ ಕೊರತೆಯಿರುವುದರಿಂದ ವಿಧಾನಪರಿಷತ್ತಿನಲ್ಲಿ ಮತಾಂತರ ನಿಷೇದ ಕಾಯ್ದೆ ಪಾಸ್ ಆಗುವ ವಿಶ್ವಾಸವಿದೆಯೇ ಎಂಬುದಕ್ಕೆ ಪ್ರತಿಕ್ರಿಯಿಸಿ ಇಂದಿನ ಬೆಳವಣಿಗೆಗಳಿಂದ ಪರಿಷತ್ತಿನ ಸದಸ್ಯರ ಭಾವನೆಗಳು ಬದಲಾಗಿ ಮಸೂದೆಗೆ ಅಂಗೀಕಾರ ಸಿಗುವ ವಿಶ್ವಾಸವಿದೆ ಎಂದು ತಿಳಿಸಿದರು.

ಓಮಿಕ್ರಾನ್ ತಡೆಗೆ ಸಕಲ ಸಿದ್ಧತೆ:
ಒಮಿಕ್ರಾನ್ ತಡೆಗೆ ಈಗಾಗಲೇ ಸಭೆ ನಡೆಸಲಾಗಿದ್ದು, ಕೇಂದ್ರ ಹಾಗೂ ರಾಜ್ಯದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು. ಓಮಿಕ್ರಾನ್ ನಿಯಂತ್ರಣ ಹಾಗೂ ಚಿಕಿತ್ಸೆಗೆ ಆಸ್ಪತ್ರೆ, ಬೆಡ್, ಆಕ್ಸಿಜನ್ ಹಾಗೂ ಮೂಲಸೌಕರ್ಯಗಳ ಪೂರೈಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

TAGGED:Belgavi sessionsbjpCM Basavaraja Bommaiಬಸವರಾಜ ಬೊಮ್ಮಾಯಿಬೆಳಗಾವಿಮತಾಂತರ ಕಾಯ್ದೆ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories
Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories
Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories
Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories

You Might Also Like

Child Rights Protection Commission files complaint against Mallikarjuna Mutya for inappropriate behavior with minor girl
Bellary

ಬಾಲಕಿ ಜೊತೆ ಅನುಚಿತ ವರ್ತನೆ, ದೂರು ದಾಖಲು – ಮಲ್ಲಿಕಾರ್ಜುನ ಮುತ್ಯಾಗೆ ಸಂಕಷ್ಟ

Public TV
By Public TV
4 hours ago
Official India to host its first MotoGP race in 2023 at the Buddh International Circuit
Automobile

ಯುಪಿ ಸರ್ಕಾರದ ಜೊತೆ ಸಹಿ – 2027ಕ್ಕೆ ಭಾರತದಲ್ಲಿ MotoGP ರೇಸ್‌?

Public TV
By Public TV
4 hours ago
Mitchell Santner
Cricket

ವಿಶ್ವಕಪ್‌ನಿಂದ ಶ್ರೀಲಂಕಾ ಔಟ್‌ – ನ್ಯೂಜಿಲೆಂಡ್‌ ಸೆಮಿ ಆಸೆ ಜೀವಂತ

Public TV
By Public TV
5 hours ago
Narendra Modi Israel Parliament speech
Latest

ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತ ಇಸ್ರೇಲ್ ಜೊತೆ ಸದಾ ನಿಲ್ಲುತ್ತದೆ: ಮೋದಿ

Public TV
By Public TV
5 hours ago
Retired BBMP officer commits suicide due to fear of CBI
Bengaluru City

ಸಿಬಿಐ ಭಯಕ್ಕೆ ನಿವೃತ್ತ ಬಿಬಿಎಂಪಿ ಅಧಿಕಾರಿ ಆತ್ಮಹತ್ಯೆ?

Public TV
By Public TV
6 hours ago
Sirsi Marikamba Jatre
Districts

ಶಿರಸಿ ಮಾರಿಕಾಂಬಾ ದೇವಿಯ ಮಹಾ ರಥೋತ್ಸವಕ್ಕೆ ಅದ್ಧೂರಿ ಚಾಲನೆ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?