Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Karnataka

ಮೇಕೆದಾಟು ವಿಚಾರವಾಗಿ ʼಸುಳ್ಳಿನಯಾತ್ರೆʼ ಹೊರಟವರ ಜಾತಕ ಬೆತ್ತಲಾಗ್ತಿದೆ: ಹೆಚ್‌ಡಿಕೆ

Public TV
Last updated: January 3, 2022 11:54 am
Public TV
Share
3 Min Read
KUMARASWAMY
SHARE

ಬೆಂಗಳೂರು: ಮೇಕೆದಾಟು ಯೋಜನೆ ವಿಚಾರವಾಗಿ ಸತ್ಯಕ್ಕೆ ಸಮಾಧಿ ಕಟ್ಟಿ ʻಸುಳ್ಳಿನ ಯಾತ್ರೆ ಹೊರಟವರ ಜಾತಕವನ್ನು ದಾಖಲೆಗಳೇ ಬೆತ್ತಲು ಮಾಡುತ್ತಿವೆ ಎಂದು ಕಾಂಗ್ರೆಸ್‌ ನಾಯಕರ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹರಿಹಾಯ್ದಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ಚಾಮರಾಜನಗರದ ಶ್ರೀ ಚಾಮರಾಜೇಶ್ವರನ ಸನ್ನಿಧಿಯಲ್ಲಿ ಸಿದ್ದಹಸ್ತರು ʼಸತ್ಯʼ ನುಡಿಯಬೇಕಿತ್ತು. ಆದರೆ, ಆ ಶಿವನ ಶಿರದಲ್ಲಿ ನೆಲೆನಿಂತ ಗಂಗೆಯ ಸಾಕ್ಷಿಯಾಗಿ ʼಸುಳ್ಳು ಹೇಳಿ ಅಪಚಾರʼ ಎಸಗಿದ್ದಾರೆ. ತಪ್ಪಿಗೆ ಪ್ರಾಯಶ್ಚಿತ್ತ ತಪ್ಪಿದ್ದಲ್ಲ ಎಂದು ಎಚ್‌ಡಿಕೆ ಹೇಳಿದ್ದಾರೆ. ಇದನ್ನೂ ಓದಿ: ಮತಕ್ಕಾಗಿ ಮೇಕೆದಾಟು ಯೋಜನೆ ಮಾಡ್ತಿಲ್ಲ, ದಾಖಲೆ ಇದ್ರೆ ಬಿಡುಗಡೆ ಮಾಡಿ: ಬಿಜೆಪಿಗೆ ಸಿದ್ದು ಸವಾಲು

siddaramaiah

ಎಚ್‌ಡಿಕೆ ಟ್ವೀಟ್‌ನಲ್ಲೇನಿದೆ?..
ಕೇಂದ್ರದ ಅನುಮೋದನೆ ಎಂದರೆ, ಮತ್ತೆ ಮತ್ತೆ ಅರ್ಜಿ ಹಿಡಿದು ಕೇಂದ್ರದ ಮರ್ಜಿ ಕಾಯುವುದು. ಅದಕ್ಕೆ ಅಂದೇ ಸದನದಲ್ಲಿ ಜೆಡಿಎಸ್ ಆ ಭಾಷಣವನ್ನು ವಿರೋಧಿಸಿತ್ತು. ಕಾವೇರಿ ಐ ತೀರ್ಪಿನ ಭಾಗವಾಗಿ ನಮ್ಮ ಪಾಲಿನ ನೀರು ಬಳಕೆಗೆ ಕ್ರಮ ಕೈಗೊಳ್ಳುವುದು ನಮ್ಮ ಹಕ್ಕು. ಈ ಸರಳ ವಿಷಯವೂ ಆವತ್ತಿನ ಸಿಎಂಗೆ ಅರ್ಥವಾಗಲಿಲ್ಲ.

ಚಾಮರಾಜನಗರದ ಶ್ರೀ ಚಾಮರಾಜೇಶ್ವರನ ಸನ್ನಿಧಿಯಲ್ಲಿ ಸಿದ್ದಹಸ್ತರು ʼಸತ್ಯʼ ನುಡಿಯಬೇಕಿತ್ತು. ಆದರೆ, ಆ ಶಿವನ ಶಿರದಲ್ಲಿ ನೆಲೆನಿಂತ ಗಂಗೆಯ ಸಾಕ್ಷಿಯಾಗಿ ʼಸುಳ್ಳು ಹೇಳಿ ಅಪಚಾರʼ ಎಸಗಿದ್ದಾರೆ. ತಪ್ಪಿಗೆ ಪ್ರಾಯಶ್ಚಿತ್ತ ತಪ್ಪಿದ್ದಲ್ಲ. 12/12

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 3, 2022

2013ರಲ್ಲಿ ಇದೇ ‘ಸಿದ್ದಹಸ್ತರು’ ಸಿಎಂ ಆದ ಮೇಲೆ ನಡೆದ ವಿಧಾನಮಂಡಲ ಜಂಟಿ ಕಲಾಪದಲ್ಲಿ ರಾಜ್ಯಪಾಲರ ಭಾಷಣದಲ್ಲಿ; “ಕಾವೇರಿ ಐ ತೀರ್ಪಿನ ಭಾಗವಾಗಿ ಕಾವೇರಿ ವಿಸ್ತರಣಾ, ಮುಂದುವರಿದ ಹಾಗೂ ನವೀಕರಣ ಯೋಜನೆಗಳ ಜಾರಿಗೆ ಕೇಂದ್ರದ ಅನುಮೋದನೆ ಕೋರಲಾಗುವುದು” ಎಂದು ಹೇಳಿಸಿದ್ದರು. ಇದನ್ನೂ ಓದಿ: ಶೀಘ್ರವೇ ಮೇಕೆದಾಟು ಸ್ಫೋಟಕ ದಾಖಲೆ ರಿಲೀಸ್ ಮಾಡ್ತೀನಿ ಕಾರಜೋಳ ತಿರುಗೇಟು

ಹೋಗಲಿ, ಆ 9 ಟಿಎಂಸಿ ನೀರು ಬೆಂಗಳೂರಿಗೆ ತಂದವರು ಯಾರು? ಅದೇ ʼಸುಳ್ಳಯ್ಯʼನನ್ನು ವಿತ್ತಮಂತ್ರಿ, ಡಿಸಿಎಂ ಮಾಡಿದ ದೇವೇಗೌಡರೇ. ಬೆನ್ನಿಗಿರಿದು ಹೋದವರ ನಾಲಿಗೆಯ ಮೇಲೆ ಸತ್ಯಕ್ಕೆ ತಾವಿದೆಯೇ? ಸಾಧಿಸಿ ತೋರಿದ್ದನ್ನು ಹೇಳಿಕೊಳ್ಳದ ಆ ಹಿರಿಯ ಜೀವದ ತ್ಯಾಗವನ್ನೂ ʼಹೈಜಾಕ್ʼ ಮಾಡುವ ಹುನ್ನಾರಷ್ಟೇ ಇದು.

d.k.shivakumar

ಕ್ಷಣಕ್ಕೊಂದು ಬಣ್ಣ ಬದಲಿಸುವ ಇವರ ನಿಜ ಬಣ್ಣ ಪಿ.ವಿ.ನರಸಿಂಹರಾವ್ ಪ್ರಧಾನಿ ಆಗಿದ್ದಾಗಲೇ ಕನ್ನಡಿಗರಿಗೆ ಅರಿವಾಗಿತ್ತು. ಬೆಂಗಳೂರಿಗೆ ಕಾವೇರಿ 4ನೇ ಹಂತದಲ್ಲಿ ನ್ಯಾಯಸಮ್ಮತವಾಗಿ ಧಕ್ಕಬೇಕಿದ್ದ 9 ಟಿಎಂಸಿ ನೀರನ್ನು ತಮಿಳುನಾಡು ಒತ್ತಡಕ್ಕೆ ಮಣಿದು ಸಾರಾಸಗಟಾಗಿ ನಿರಾಕರಿಸಿತ್ತು ಇದೇ ಕಾಂಗ್ರೆಸ್!

2013ರಲ್ಲಿ ಇದೇ 'ಸಿದ್ದಹಸ್ತರು' ಸಿಎಂ ಆದ ಮೇಲೆ ನಡೆದ ವಿಧಾನಮಂಡಲ ಜಂಟಿ ಕಲಾಪದಲ್ಲಿ ರಾಜ್ಯಪಾಲರ ಭಾಷಣದಲ್ಲಿ; "ಕಾವೇರಿ ಐ ತೀರ್ಪಿನ ಭಾಗವಾಗಿ ಕಾವೇರಿ ವಿಸ್ತರಣಾ, ಮುಂದುವರಿದ ಹಾಗೂ ನವೀಕರಣ ಯೋಜನೆಗಳ ಜಾರಿಗೆ ಕೇಂದ್ರದ ಅನುಮೋದನೆ ಕೋರಲಾಗುವುದು" ಎಂದು ಹೇಳಿಸಿದ್ದರು. 10/12

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 3, 2022

ನನ್ನ ಮನವಿ ಮೇರೆಗೆ ಅಂದು ಗಡ್ಕರಿ ಅವರು ತಕ್ಷಣವೇ DPR ಸಿದ್ಧಪಡಿಸಿ ಕಳಿಸಿ ಎಂದು ಹೇಳಿದ್ದರು. ಆ ಸಭೆಗೆ ಡಿ.ಕೆ.ಶಿವಕುಮಾರ್ ಬರಲೇ ಇಲ್ಲ. ಅಂದು ನಾನು ದೆಹಲಿಯಲ್ಲಿ ಮಾಧ್ಯಮಗಳ ಜತೆ ಮೇಕೆದಾಟು ಯೋಜನೆ ಬಗ್ಗೆ ಹಾಗೂ ಗಡ್ಕರಿ ಅವರ ಜತೆಗಿನ ಚರ್ಚೆಯ ವಿವರಗಳ ಕುರಿತು ಮಾತನಾಡಿದ್ದೆ. ಇದನ್ನೂ ಓದಿ: ಹೈಜಾಕ್ ಮಾಡೋದಕ್ಕೆ ಮೇಕೆದಾಟು ಯೋಜನೆಯನ್ನು ಹೆಚ್‌ಡಿಕೆ ಮಾಡಿದ್ರಾ: ಸಿದ್ದರಾಮಯ್ಯ ತಿರುಗೇಟು

ನನ್ನ ಸಂಪುಟದಲ್ಲಿ ಜಲಸಂಪನ್ಮೂಲ ಮಂತ್ರಿಯಾಗಿದ್ದವರು ಮೇಕೆದಾಟು ವಿಚಾರದಲ್ಲಿ ನಾನು ಮತ್ತು ನನ್ನ ಸಂಪುಟ ಸಹೋದ್ಯೋಗಿ ಹೆಚ್.ಡಿ.ರೇವಣ್ಣ ಅವರು ಆಗಿನ ಕೇಂದ್ರ ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿದ್ದಾಗ ಎಲ್ಲಿದ್ದರು? ಜನರಿಗೆ ತಿಳಿಯಬೇಕಲ್ಲವೆ?

mekedatu 1 1

ಅಬ್ಬಾ..! ʼಸಿದ್ದಸುಳ್ಳುಶೂರ!!ʼ. ಸುಳ್ಳು ಸೃಷ್ಟಿಗೊಂದು ಆಸ್ಕರ್ ಇರಬೇಕಿತ್ತು. ಮೇಕೆದಾಟು ಸಮಗ್ರ ಯೋಜನಾ ವರದಿ-DPR ಸಿದ್ಧವಾಗಿ ಕೇಂದ್ರಕ್ಕೆ ಸಲ್ಲಿಕೆ ಆಗಿದ್ದು 2018ರಲ್ಲಿ ನಾನು ಸಿಎಂ ಆಗಿದ್ದಾಗಲೇ. ಇದರಲ್ಲಿ ಡಿಕೆಶಿ ಪಾತ್ರವೇನೂ ಇರಲಿಲ್ಲ. ಈ ಸತ್ಯವನ್ನು ʼಸಿದ್ದಹಸ್ತರುʼ ಮುಚ್ಚಿಟ್ಟ ಪರಮಾರ್ಥವೇನು?

ನನ್ನ ಸಂಪುಟದಲ್ಲಿ ಜಲಸಂಪನ್ಮೂಲ ಮಂತ್ರಿಯಾಗಿದ್ದವರು ಮೇಕೆದಾಟು ವಿಚಾರದಲ್ಲಿ ನಾನು ಮತ್ತು ನನ್ನ ಸಂಪುಟ ಸಹೋದ್ಯೋಗಿ ಹೆಚ್.ಡಿ.ರೇವಣ್ಣ ಅವರು ಆಗಿನ ಕೇಂದ್ರ ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿದ್ದಾಗ ಎಲ್ಲಿದ್ದರು? ಜನರಿಗೆ ತಿಳಿಯಬೇಕಲ್ಲವೆ? 6/12

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 3, 2022

2017ರಲ್ಲೇ ಕಾಂಗ್ರೆಸ್ ಸರ್ಕಾರ DPR ಸಿದ್ಧಪಡಿಸಿ 5,912 ಕೋಟಿ ರೂ. ಯೋಜನಾ ವೆಚ್ಚ ನಿಗದಿ ಮಾಡಿತ್ತು. ಸಮ್ಮಿಶ್ರ ಸರ್ಕಾರದಲ್ಲಿ ಜಲ ಸಂಪನ್ಮೂಲ ಸಚಿವರಾಗಿದ್ದ ಡಿ.ಕೆ.ಶಿವಕುಮಾರ್ ಮತ್ತೆ 9,000 ಕೋಟಿ ರೂ. ಮೊತ್ತದ ವಿಸ್ತೃತ DPR ಸಿದ್ಧಪಡಿಸಿ ಕೇಂದ್ರಕ್ಕೆ ಕಳುಹಿಸಿದ್ದರಂತೆ.

2017ರಲ್ಲೇ ಕಾಂಗ್ರೆಸ್ ಸರಕಾರ DPR ಸಿದ್ಧಪಡಿಸಿ 5,912 ಕೋಟಿ ರೂ. ಯೋಜನಾ ವೆಚ್ಚ ನಿಗದಿ ಮಾಡಿತ್ತು. ಸಮ್ಮಿಶ್ರ ಸರಕಾರದಲ್ಲಿ ಜಲ ಸಂಪನ್ಮೂಲ ಸಚಿವರಾಗಿದ್ದ ಡಿ.ಕೆ.ಶಿವಕುಮಾರ್ ಮತ್ತೆ 9,000 ಕೋಟಿ ರೂ. ಮೊತ್ತದ ವಿಸ್ತೃತ DPR ಸಿದ್ಧಪಡಿಸಿ ಕೇಂದ್ರಕ್ಕೆ ಕಳುಹಿಸಿದ್ದರಂತೆ. 4/12

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 3, 2022

ಈಗ ʼಮಿ.ಸುಳ್ಳಯ್ಯʼ ಹೊಸ ಕಥೆ, ಚಿತ್ರಕಥೆ ಬರೆದಿದ್ದಾರೆ. 1968ರಲ್ಲೇ ಮೇಕೆದಾಟು ಯೋಜನೆಗೆ ಕಾಂಗ್ರೆಸ್ ಪ್ರಯತ್ನಿಸಿತ್ತಂತೆ ಎಂದು ಹೇಳಿದ್ದಾರೆ.

congress jds

1989ರಲ್ಲಿ ತಮಿಳುನಾಡು ಒತ್ತಡಕ್ಕೆ ಮಣಿದು ವಿ.ಪಿ.ಸಿಂಗ್ ಸರಕಾರ ಕಾವೇರಿ ಟ್ರಿಬ್ಯೂನಲ್ ರಚಿಸಿತ್ತು. ಆಗ ವೀರೇಂದ್ರ ಪಾಟೀಲರು ಸಿಎಂ ಆಗಿದ್ದರೆ, ಪುಟ್ಟಸ್ವಾಮಿ ಗೌಡರು ನೀರಾವರಿ ಮಂತ್ರಿ. ಈ ಟ್ರಿಬ್ಯೂನಲ್ ಬೇಡವೇ ಬೇಡ ಎಂದು ದನಿಯೆತ್ತಿದ ಏಕೈಕ ನಾಯಕರು ದೇವೇಗೌಡರು. ಆದರೆ, ಅವರ ಮಾತನ್ನು ಯಾರೂ ಕೇಳಲಿಲ್ಲ. ಇದನ್ನೂ ಓದಿ: ನಮ್ಮ ಭೂಮಿ ಹೋದರೂ ಪರವಾಗಿಲ್ಲ, ಮೇಕೆದಾಟು ಯೋಜನೆ ಬೇಗ ಆರಂಭವಾಗಬೇಕು: ಡಿಕೆಶಿ

1989ರಲ್ಲಿ ತಮಿಳುನಾಡು ಒತ್ತಡಕ್ಕೆ ಮಣಿದು ವಿ.ಪಿ.ಸಿಂಗ್ ಸರಕಾರ ಕಾವೇರಿ ಟ್ರಿಬ್ಯೂನಲ್ ರಚಿಸಿತ್ತು. ಆಗ ವೀರೇಂದ್ರ ಪಾಟೀಲರು ಸಿಎಂ ಆಗಿದ್ದರೆ, ಪುಟ್ಟಸ್ವಾಮಿ ಗೌಡರು ನೀರಾವರಿ ಮಂತ್ರಿ. ಈ ಟ್ರಿಬ್ಯೂನಲ್ ಬೇಡವೇ ಬೇಡ ಎಂದು ದನಿಯೆತ್ತಿದ ಏಕೈಕ ನಾಯಕರು ದೇವೇಗೌಡರು. ಆದರೆ, ಅವರ ಮಾತನ್ನು ಯಾರೂ ಕೇಳಲಿಲ್ಲ. 2/12

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 3, 2022

ಮಾಜಿ ಸಿಎಂ, ಹಾಲಿ ಪ್ರತಿಪಕ್ಷ ನಾಯಕರ ನಾಲಿಗೆ ಮೇಲೆ ರಾಜ್ಯ ನೀರಾವರಿ ಬಗ್ಗೆ ಸೃಷ್ಟಿ ಆಗುತ್ತಿರುವ ʼಸುಳ್ಳಿನ ಸರಮಾಲೆʼಯು ಜನತೆಗೆ ಯಾಮಾರಿಸಿ ಬೇಳೆ ಬೇಯಿಸಿಕೊಳ್ಳುವ ʼರಾಜಕೀಯ ಹುಂಬತನʼವಲ್ಲದೆ ಮತ್ತೇನೂ ಅಲ್ಲ. ಸತ್ಯಕ್ಕೆ ಸಮಾಧಿ ಕಟ್ಟಿ ʼಸುಳ್ಳಿನಯಾತ್ರೆʼಗೆ ಹೊರಟವರ ಜಾತಕವನ್ನು ದಾಖಲೆಗಳೇ ಬೆತ್ತಲು ಮಾಡುತ್ತಿವೆ ಎಂದು ಎಚ್‌ಡಿಕೆ ಹರಿಹಾಯ್ದಿದ್ದಾರೆ.

TAGGED:congressh d kumaraswamyjdsmekedatutweetಕಾಂಗ್ರೆಸ್ಜೆಡಿಎಸ್ಟ್ವೀಟ್ಮೇಕೆದಾಟು ಯೋಜನೆಹೆಚ್‌.ಡಿ.ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema Updates

Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
8 hours ago
Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
1 day ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
1 day ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
1 day ago

You Might Also Like

Air India Bird Hit Ahmedabad Plane Crash
Latest

ವಿಮಾನ ದುರಂತ | ನಾನು ನನ್ನ ಪ್ರೀತಿ ಕಳೆದುಕೊಂಡೆ – ಆಸ್ಪತ್ರೆ ಮುಂದೆ ಯುವಕನ ಕಣ್ಣೀರು

Public TV
By Public TV
11 minutes ago
Kerala taluk officer suspended for casteist slur at nurse Ranjitha killed in Air India crash
Latest

ರಂಜಿತಾ ಸಾವಿಗೆ ವ್ಯಂಗ್ಯ – ಕೇರಳ ಉಪ ತಹಶೀಲ್ದಾರ್ ಅಮಾನತು

Public TV
By Public TV
13 minutes ago
pm modi visits plane crash site ahmedabad
Latest

Photo Gallery: ಅಹಮದಾಬಾದ್‌ನಲ್ಲಿ ವಿಮಾನ ದುರಂತ ನಡೆದ ಸ್ಥಳಕ್ಕೆ ಮೋದಿ ಭೇಟಿ

Public TV
By Public TV
17 minutes ago
Mandya 2 1
Crime

ಐಪಿಎಲ್ ಬೆಟ್ಟಿಂಗ್ ಆಡಲು ಮನೆಗಳ್ಳತನ ಮಾಡುತ್ತಿದ್ದ ಖದೀಮ ಪೊಲೀಸರ ಅತಿಥಿ

Public TV
By Public TV
21 minutes ago
M B Patil 1
Bengaluru City

ಎರಡು ವರ್ಷಗಳಲ್ಲಿ 6 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆ: ಎಂ.ಬಿ ಪಾಟೀಲ್

Public TV
By Public TV
28 minutes ago
Air Hostess Roshni
Latest

Ahmedabad Plane Crash- ಆಕಾಶದಲ್ಲಿ ಹಾರಾಡುವ ಕನಸು ಕಂಡಿದ್ದ ಗಗನಸಖಿಯ ದುರಂತ ಅಂತ್ಯ

Public TV
By Public TV
26 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?