Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಧಾನಿ ಮೋದಿ ಪ್ರಯಾಣದ ಮಾಹಿತಿಯನ್ನು ಸಂರಕ್ಷಿಸಲು ಸುಪ್ರೀಂಕೋರ್ಟ್ ಸೂಚನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪ್ರಧಾನಿ ಮೋದಿ ಪ್ರಯಾಣದ ಮಾಹಿತಿಯನ್ನು ಸಂರಕ್ಷಿಸಲು ಸುಪ್ರೀಂಕೋರ್ಟ್ ಸೂಚನೆ

Latest

ಪ್ರಧಾನಿ ಮೋದಿ ಪ್ರಯಾಣದ ಮಾಹಿತಿಯನ್ನು ಸಂರಕ್ಷಿಸಲು ಸುಪ್ರೀಂಕೋರ್ಟ್ ಸೂಚನೆ

Public TV
Last updated: January 7, 2022 2:30 pm
Public TV
Share
4 Min Read
supreme court 12
SHARE

– ಪ್ರಧಾನಿ ಭದ್ರತೆ ರಾಷ್ಟ್ರೀಯ ಭದ್ರತೆಯ ವಿಚಾರ
– ಅಂತರಾಷ್ಟ್ರೀಯ ಮಟ್ಟದಲ್ಲಿ ಮುಜುಗರಕ್ಕೆ ಕಾರಣವಾದ ವಿಶೇಷ ಪ್ರಕರಣ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಪಂಜಾಬ್ ಪ್ರಯಾಣ ಮಾಹಿತಿಯನ್ನು ಸಂರಕ್ಷಿಸಿಡುವಂತೆ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ರಿಜಿಸ್ಟರ್ ಜನರಲ್‍ಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಮೋದಿ ಪ್ರಯಾಣದ ವೇಳೆಯಲ್ಲಾದ ಭದ್ರತಾ ವೈಫಲ್ಯ ವಿಚಾರಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆಗೆ ಆಗ್ರಹಿಸಿ ಲಾಯರ್ಸ್ ವಾಯ್ಸ್ ಅಸೊಶಿಯೇಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ ನೇತೃತ್ವದ ತ್ರಿ ಸದಸ್ಯ ಪೀಠ ಈ ಸೂಚನೆ ನೀಡಿದೆ.

Solicitor General Tushar Mehta says the incident has caused international embarrassment.

Senior advocate DS Patwalia, AG of Punjab tells Supreme Court that Punjab is taking the issue very seriously. A committee was constituted by State govt on the same day of the incident.

— ANI (@ANI) January 7, 2022

ಇಂದು ನಡೆದ ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ಮಣಿಂದರ್ ಸಿಂಗ್, ಎಸ್‍ಪಿಜಿ ನಿಯಮಗಳ ಪ್ರಕಾರ ಪಿಎಂ ಭದ್ರತೆ ನಿರಾಕರಿಸುವಂತಿಲ್ಲ, ಪ್ರಧಾನಿ ಭದ್ರತೆ ಎನ್ನುವುದು ಕೇಂದ್ರ ಅಥವಾ ರಾಜ್ಯದ ವಿಚಾರವಲ್ಲ, ಇದು ರಾಷ್ಟ್ರೀಯ ಭದ್ರತೆಯ ವಿಚಾರ ಇದು ಸಂಸದೀಯ ವ್ಯಾಪ್ತಿಗೆ ಬರಲಿದೆ. ಪಿಎಂ ಕಾನ್ವೆ ನಡು ದಾರಿಯಲ್ಲಿ ನಿಂತಿದ್ದು ರಾಜ್ಯವೊಂದರ ಕಾನೂನು ಸುವ್ಯವಸ್ಥೆಯ ಸಮಸ್ಯೆಯಲ್ಲ, ಇದು ಬಹುದೊಡ್ಡ ಭದ್ರತಾ ವೈಫಲ್ಯವಾಗಿದೆ. ಈ ವೈಫಲ್ಯವನ್ನು ವೃತ್ತಿಪರವಾಗಿ ತನಿಖೆ ನಡೆಸಬೇಕಾಗಿದೆ. ಹೀಗಾಗಿ ರಾಜ್ಯ ಸರ್ಕಾರದಿಂದ ಈ ತನಿಖೆ ಸಾಧ್ಯವಿಲ್ಲ ಅಲ್ಲದೇ ಇದನ್ನು ತನಿಖೆ ನಡೆಸಲು ರಾಜ್ಯಕ್ಕೆ ಯಾವುದೇ ವಿಶೇಷ ಅಧಿಕಾರವಿಲ್ಲ ಎಂದರು. ಇದನ್ನೂ ಓದಿ: ಚರಣ್‍ಜಿತ್ ಸಿಂಗ್ ಚನ್ನಿ ದಲಿತ ಎಂಬ ಕಾರಣಕ್ಕೆ ಬಿಜೆಪಿ ಟಾರ್ಗೆಟ್ ಮಾಡ್ತಿದೆ: ಅಶೋಕ್ ಗೆಹ್ಲೋಟ್

NARENDRA MODI CAR PUNJAB

ರಾಜ್ಯ ಸರ್ಕಾರ ಈಗಾಗಲೇ ಸಮಿತಿಯೊಂದನ್ನು ರಚಿಸಿದೆ. ಸರ್ಕಾರದಿಂದ ಸಮಿತಿಗೆ ನೇಮಕಗೊಂಡ ಸಮಿತಿಯ ಅಧ್ಯಕ್ಷರು ಈ ಹಿಂದೆ ಭಾರಿ ಸೇವಾ ಸಂಬಂಧಿತ ಹಗರಣದ ಭಾಗವಾಗಿದ್ದರು. ಈ ನ್ಯಾಯಾಧೀಶರ ನಡತೆಯ ಬಗ್ಗೆಯೂ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸಿದ್ದರು. ಹೀಗಾಗಿ ಇವರಿಂದ ನಿಷ್ಪಕ್ಷಪಾತ ತನಿಖೆ ಸಾಧ್ಯವಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಅಲ್ಲದೇ ಈ ಸಮಿತಿಯ ತನಿಖೆ ಬದಲು ಪ್ರಕರಣವನ್ನು ಭಟಿಂಡಾ ಜಿಲ್ಲಾ ನ್ಯಾಯಾಧೀಶರು ಮತ್ತು ಎನ್‍ಐಎ ಅಧಿಕಾರಿಗಳು ಪರಿಶೀಲಿಸಬಹುದು ಮತ್ತು ಪ್ರಧಾನಿ ಪ್ರಯಾಣದ ಸಾಕ್ಷ್ಯಗಳನ್ನು ಎನ್‍ಐಎ ಸಂರಕ್ಷಿಸಿ ಇಡಬೇಕು ಎಂದು ಸಲಹೆ ನೀಡಿದರು. ಇದನ್ನೂ ಓದಿ: ಮೋದಿ ಮೇಲೆ ಅಲ್ಲ ಇದು ಪ್ರತಿಯೊಬ್ಬ ಭಾರತೀಯನ ಮೇಲೆ ನಡೆದ ದಾಳಿ: ಕಂಗನಾ

The state is not exclusively empowered to probe (the breach of Prime Minister Narendra Modi’s security) and this is not a law & order issue. The chairman of the state-appointed Committee was a part of a huge service-related scam: Advocate Maninder Singh

— ANI (@ANI) January 7, 2022

ಮಣಿಂದರ್ ಸಿಂಗ್ ಬಳಿಕ ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಅಂತರಾಷ್ಟ್ರೀಯ ಮಟ್ಟದಲ್ಲಿ ಮುಜುಗರಕ್ಕೆ ಕಾರಣವಾದ ವಿಶೇಷ ಪ್ರಕರಣವನ್ನು ವಿಚಾರಣೆಗೆ ಪರಿಗಣಿಸಿದಕ್ಕೆ ಸುಪ್ರೀಂಕೋರ್ಟ್ ಧನ್ಯವಾದ ಹೇಳಿದರು. ಪ್ರಧಾನ ಮಂತ್ರಿ ರಸ್ತೆ ಮಾರ್ಗವಾಗಿ ತೆರಳಲು ಸಂಬಂಧಿಸಿದ ರಾಜ್ಯದ ಡಿಜಿ ಅನುಮತಿ ನೀಡಬೇಕು. ಈ ಪ್ರಕರಣದಲ್ಲಿ ಡಿಜಿ ಅನುಮತಿ ನೀಡಿದ್ದಾರೆ, ಅನುಮತಿ ನೀಡದ ಬಳಿಕವಷ್ಟೆ ಪ್ರಧಾನಿ ರಸ್ತೆ ಮೂಲಕ ಹೊರಟಿದ್ದಾರೆ. ಇದನ್ನೂ ಓದಿ: ಪ್ರಧಾನಿಗೆ ಭದ್ರತಾ ವೈಫಲ್ಯ – ಸುಪ್ರೀಂ ಮೇಲ್ವಿಚಾರಣೆಯಲ್ಲಿ ತನಿಖೆಗೆ ಮನವಿ 

NARENDRA MODI SECURITY LAPS

ಪ್ರತಿಭಟನೆ ನಡೆಯುತ್ತಿದ್ದ ಪ್ರದೇಶದಲ್ಲಿ ಸ್ಥಳೀಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರತಿಭಟನಾಕಾರರ ಜೊತೆಗೆ ಚಹಾ ಹೀರುತ್ತಿದ್ದರು. ಭದ್ರತಾ ಸಮಸ್ಯೆ ಬಗ್ಗೆ ಪಿಎಂ ಸೆಕ್ಯುರಿಟಿ ಅಲರ್ಟ್ ವಾಹನಕ್ಕೆ ಕನಿಷ್ಠ ಮಾಹಿತಿಯನ್ನು ನೀಡಿಲ್ಲ. ಪಿಎಂ ಕಾನ್ವೆ ಪ್ಲೈವೋರ್ ಮೇಲಿದ್ದಾಗ ಪ್ರತಿಭಟನಾಕಾರರು ಹಿಂದೆ ದೊಡ್ಡ ಪ್ರಮಾಣದಲ್ಲಿ ಘೋಷಣೆ ಕೂಗುತ್ತಿದ್ದರು. ಪರಿಸ್ಥಿತಿ ಏನಾಗಬಹುದಿತ್ತು ಯೋಚಿಸಿ ಎಂದು ಆತಂಕ ವ್ಯಕ್ತಪಡಿಸಿದರು. ಇದಲ್ಲದೇ ಸಿಖ್ಸ್ ಫಾರ್ ಜಸ್ಟಿಸ್ ಸಂಘಟನೆಯ ಜನರು XYZ (ವಿವಾದಿತ ಪದಗಳನ್ನು ಬಳಸದೇ) ಕೆಲಸವನ್ನು ಮಾಡಲು ಕರೆ ನೀಡಿದ್ದರು. ಇದು ಗಡಿಯಾಚೆಗಿನ ಭಯೋತ್ಪಾದನೆಯ ಸಮಸ್ಯೆಯಾಗಿರಬಹುದು. ಆದ್ದರಿಂದ ಈ ಪ್ರಕರಣ ಜಿಲ್ಲಾ ನ್ಯಾಯಾಧೀಶರು ಮತ್ತು NIA ಅಧಿಕಾರಿಗಳ ಬಳಿ ಇರಲಿ ಎಂದು ಮನವಿ ಮಾಡಿದರು. ಇದನ್ನೂ ಓದಿ: ಮೋದಿ ಭದ್ರತಾ ಲೋಪಕ್ಕೆ ಪಂಜಾಬ್ ಪೊಲೀಸ್ ಇಲಾಖೆ ಕಾರಣ – ಕೇಂದ್ರ ಗೃಹ ಸಚಿವಾಲಯ

Senior advocate Maninder Singh says it is the duty of Centre & State/UT & other local authority to act in aid of director of any member of the SPG. Under the SPG Act, it is not issue of state subject or law & order.

— ANI (@ANI) January 7, 2022

ಬಳಿಕ ಪಂಜಾಬ್ ಸರ್ಕಾರದ ಪರ ವಾದ ಮಂಡಿಸಿದ ಅಡಿಷನಲ್ ಜನರಲ್, ಪಂಜಾಬ್ ಸರ್ಕಾರ ಈ ಪ್ರಕರಣವನ್ನು ಲಘುವಾಗಿ ಪರಿಗಣಿಸುತ್ತಿಲ್ಲ. ಜನವರಿ 5 ರಂದು ಘಟನೆ ಸಂಭವಿಸಿದಾಗ ಅದೇ ದಿನ ಸಮಿತಿಯನ್ನು ರಚಿಸಲಾಯಿತು. ನಿವೃತ್ತ ಹೈಕೋರ್ಟ್ ನ್ಯಾಯಾಧೀಶರನ್ನು ನೇಮಿಸಲಾಗಿದೆ, ನಿನ್ನೆ ಎಫ್‍ಐಆರ್ ಕೂಡ ದಾಖಲಿಸಿದ್ದೇವೆ. ಕೇಂದ್ರವು ಈ ವಿಷಯವನ್ನು ತನಿಖೆ ಮಾಡಲು ಸಮಿತಿಯನ್ನು ಸಹ ರಚಿಸಿದೆ. ಪ್ರಕರಣದ ತನಿಖೆಗೆ ಯಾವುದೇ ವ್ಯಕ್ತಿಯನ್ನು ನೇಮಿಸಬಹುದು ಒಂದು ವೇಳೆ ಲೋಪವಿದ್ದರೆ ತನಿಖೆಯ ಅಗತ್ಯವಿದೆ. ಮೋದಿ ನಮ್ಮ ಪ್ರಧಾನಿ ಎಂದು ಪಂಜಾಬ್ ಸಿಎಂ ಹೇಳಿದ್ದಾರೆ. ನಾವು ಪ್ರಕರಣವನ್ನು ರಾಜಕೀಯಗೊಳಿಸಿಲ್ಲ ಎಂದು ಸಮರ್ಥಿಸಿಕೊಂಡರು. ಇದನ್ನೂ ಓದಿ: ಭದ್ರತಾ ಲೋಪವಾಗಿಲ್ಲ, ಜನರಿಲ್ಲದೇ ಖಾಲಿ ಕುರ್ಚಿಗಳಿದ್ದ ಕಾರಣ ಪಿಎಂ ರ‍್ಯಾಲಿ ರದ್ದು: ಪಂಜಾಬ್‌ ಸಿಎಂ

NARENDRA MODI CAR

ವಾದ ಮಂಡನೆಯ ಬಳಿಕ ತುಷಾರ್ ಮೆಹ್ತಾರನ್ನು ಪ್ರಶ್ನಿಸಿದ ಸಿಜೆಐ ಎನ್‍ವಿ ರಮಣ, ನೀವೂ ಸ್ವತಂತ್ರ ತನಿಖೆಯನ್ನು ಬಯಸುತ್ತಿದ್ದಿರಾ ಎಂದು ಕೇಳಿದರು. ಇದಕ್ಕೆ ಉತ್ತರಿಸಿದ ತುಷಾರ್ ಮೆಹ್ತಾ, ದಾಖಲೆಗಳ ಸಂಗ್ರಹದೊಂದಿಗೆ ನಾಳೆ ನಮ್ಮ ವೈಯಕ್ತಿಕ ಕನಿಮ್ಮ ಮುಂದೆ ಇಡಲಿದ್ದೇವೆ. ಅದನ್ನು ಪರಿಶೀಲಿಸಿ ತಿರ್ಮಾನ ತೆಗೆದುಕೊಳ್ಳಿ ಎಂದು ಎಂದರು. ಇದನ್ನೂ ಓದಿ: ಭಾರೀ ಭದ್ರತಾ ಲೋಪ – ಪಂಜಾಬ್ ಫ್ಲೈ ಓವರ್‌ನಲ್ಲಿ 20 ನಿಮಿಷ ಸಿಲುಕಿದ ಮೋದಿ

Supreme Court begins hearing of a plea seeking probe into PM Modi's security breach during his visit to Punjab pic.twitter.com/XeXyqcWuwo

— ANI (@ANI) January 7, 2022

ಬಳಿಕ ಮಧ್ಯಂತರ ಆದೇಶ ನೀಡಿದ ನ್ಯಾ.ಎನ್.ವಿ ರಮಣ, ದೇಶದ ಪ್ರಧಾನಿಯ ಭದ್ರತೆಗೆ ಸಂಬಂಧಿಸಿದ ಸಮಸ್ಯೆಯ ದೃಷ್ಟಿಯಿಂದ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‍ನ ರಿಜಿಸ್ಟ್ರಾರ್ ಜನರಲ್ ಸಾಕ್ಷ್ಯಗಳನ್ನು (PM ಪ್ರಯಾಣ ದಾಖಲೆಗಳು) ಸುರಕ್ಷಿತವಾಗಿರಿಸಲು ಮತ್ತು ಸಂರಕ್ಷಿಸಲು ನಿರ್ದೇಶಿಸುವುದು ಸೂಕ್ತವೆಂದು ನಾವು ಭಾವಿಸುತ್ತೇವೆ. ತಕ್ಷಣವೇ ಪಂಜಾಬ್ ಪೊಲೀಸ್ ಅಧಿಕಾರಿಗಳು ಮತ್ತು ಎಸ್‍ಪಿಜಿ ಮತ್ತು ಇತರ ಕೇಂದ್ರ ಮತ್ತು ರಾಜ್ಯ ಏಜೆನ್ಸಿಗಳಿಗೆ ಸಹಕರಿಸಲು ಮತ್ತು ರಿಜಿಸ್ಟ್ರಾರ್ ಜನರಲ್‍ಗೆ ಅಗತ್ಯ ನೆರವು ನೀಡಲು ನಿರ್ದೇಶಿಸುತ್ತೇವೆ. ಎಲ್ಲಾ ದಾಖಲೆಗಳನ್ನು ಅವರ ಸುರಕ್ಷಿತ ಕಸ್ಟಡಿಯಲ್ಲಿ ಇರಿಸಿಕೊಳ್ಳಲು ನಾವು ರಿಜಿಸ್ಟ್ರಾರ್ ಜನರಲ್ ಅವರಿಗೆ ನಿರ್ದೇಶಿಸುತ್ತೇವೆ ಎಂದು ಮೌಕಿಕವಾಗಿ ಹೇಳಿದರು. ಅಲ್ಲದೇ ಸೋಮವಾರದವರೆಗೂ ಕೇಂದ್ರ ಮತ್ತು ರಾಜ್ಯದಿಂದ ರಚನೆಯಾದ ಸಮಿತಿಗಳು ತನಿಖೆ ನಡೆಸದಂತೆ ಸೂಚನೆ ನೀಡಿದರು. ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆಯಾಗಿದ್ದು ಸೋಮವಾರ ಸುಪ್ರೀಂಕೋರ್ಟ್ ಮೇಲ್ವಿಚಾರಣೆಯಲ್ಲಿ ಸ್ವತಂತ್ರ ಸಮಿತಿ ರಚನೆ ಮಾಡುವ ಸಾಧ್ಯತೆಗಳಿದೆ.

TAGGED:narendra modinewdelhiprime ministerpunjabsecurity breachSupreme Courtನರೇಂದ್ರ ಮೋದಿನವದೆಹಲಿಪಂಜಾಬ್ಪ್ರಧಾನಿಭದ್ರತಾ ಲೋಪಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

vidnyan mane and palash smriti
ಬೇರೊಬ್ಬಳೊಂದಿಗೆ ಏಕಾಂತದಲ್ಲಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಪಾಲಶ್ – ಸ್ಮೃತಿ ಮಂಧಾನ ಗೆಳೆಯ ವಿಧ್ಯಾನ್ ಮಾನೆ
Bollywood Cricket Latest National Sports Top Stories
Kamal R Khan
ವಸತಿ ಕಟ್ಟಡದ ಮೇಲೆ ಫೈರಿಂಗ್ – ಬಾಲಿವುಡ್ ನಟ ಕಮಲ್ ಆರ್ ಖಾನ್ ಅರೆಸ್ಟ್
Bollywood Cinema Crime Latest Top Stories
Karunya Ram 1
ಸಿಸಿಬಿಯಿಂದ ನನಗೆ ನ್ಯಾಯ ಸಿಕ್ಕಿದೆ: ಕಾರುಣ್ಯ ರಾಮ್‌
Cinema Latest Sandalwood Top Stories
indira film 1
ಇಂದಿರಾ ಇದು ಗಾಂಧಿ ಕಥೆಯಲ್ಲ: ಕುತೂಹಲ ಮೂಡಿಸಿದ ಸಿನಿಮಾ
Cinema Latest Sandalwood

You Might Also Like

Yalahanka
Bengaluru City

ಪಾರ್ಕಿಂಗ್‌ ವಿಚಾರಕ್ಕೆ ಯಲಹಂಕ ʻಕೈʼ ಮುಖಂಡನ ಅಳಿಯ & ಸ್ಥಳೀಯರ ನಡುವೆ ಕಿರಿಕ್‌

Public TV
By Public TV
10 minutes ago
Faridabad Father Kills Daughter Over Home Work
Crime

ಹೋಂ ವರ್ಕ್ ಸರಿಯಾಗಿ ಬರೆದಿಲ್ಲವೆಂದು 4 ವರ್ಷದ ಮಗಳನ್ನು ಕೊಂದ ತಂದೆ

Public TV
By Public TV
36 minutes ago
Greater Noida B.Tech Student Suicide
Crime

ಮದ್ಯ ಸೇವಿಸಿದ್ದಕ್ಕೆ ಬೈಗುಳ – ಹಾಸ್ಟೆಲ್ ಕಟ್ಟಡದಿಂದ ಜಿಗಿದು ಬಿ.ಟೆಕ್ ವಿದ್ಯಾರ್ಥಿ ಆತ್ಮಹತ್ಯೆ

Public TV
By Public TV
1 hour ago
Jammu Kashmir
Latest

ಜಮ್ಮು-ಕಾಶ್ಮೀರದಲ್ಲಿ ನಿರಂತರ ಹಿಮಪಾತ – ಶ್ರೀನಗರ ಏರ್‌ಪೋರ್ಟ್‌ನಲ್ಲಿ ಹಿಮ ತೆರವು ಕಾರ್ಯ

Public TV
By Public TV
1 hour ago
shidlaghatta City Municipal Council Commissioner Amrutha Gowda receives death threat from Congress Leader Rajeev Gowda 1
Bengaluru City

ನಗರಸಭೆ ಪೌರಾಯುಕ್ತೆಗೆ ಬೆದರಿಕೆ – ರಾಜೀವ್ ಗೌಡ ನಿವಾಸದ ಮೇಲೆ ಪೊಲೀಸರ ದಾಳಿ

Public TV
By Public TV
2 hours ago
Indian Man Shoot
Latest

ಅಮೆರಿಕದಲ್ಲಿ ಪತ್ನಿ, ಮೂವರು ಸಂಬಂಧಿಕರನ್ನ ಗುಂಡಿಟ್ಟು ಕೊಂದ ಭಾರತೀಯ ವ್ಯಕ್ತಿ – 12 ಕೇಸ್‌ ದಾಖಲು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?