ಮೇಕೆದಾಟು ಪಾದಯಾತ್ರೆ ಬಳಿ ಬಂದಿದ್ದ ಎಡಿಸಿಗೆ ಕೊರೊನಾ ಪಾಸಿಟಿವ್

Public TV
1 Min Read
mekedatu padyatra dk shivakumar 2 covid test corona

ರಾಮನಗರ: ಕಳೆದ ಎರಡು ದಿನದಿಂದ ಮೇಕೆದಾಟು ಪಾದಯಾತ್ರೆ ಬಳಿ ಬಂದಿದ್ದ ಎಡಿಸಿ ಜವರೇಗೌಡಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ.

DKS 3

ಶನಿವಾರ ಪಾದಯಾತ್ರೆ ನಡೆಸಬೇಡಿ ಎಂದು ಮನವಿ ಮಾಡಲು ಎಡಿಸಿ ಬಂದಿದ್ದರು. ನಿನ್ನೆ ಬೆಳಗ್ಗೆಯೂ ಕೊರೊನಾ ನಿಯಮ ಪಾಲಿಸಿ ಎಂದು ಹೇಳಿದ್ದರು. ಬಳಿಕ ಸಂಜೆ ಡಿಕೆಶಿ ಬಳಿ ಬಂದು ಟೆಸ್ಟ್ ಮಾಡಿಸಿಕೊಳ್ಳಿ ಎಂದು ಕೂಡ ಹೇಳಿದ್ದರು. ಈ ವೇಳೆ ಎಡಿಸಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬೈದಿದ್ದರು. ಇದನ್ನೂ ಓದಿ: ನನ್ನನ್ನು ನೋಡಿದ್ರೆ ಕೊರೊನಾ ಇದೆ ಅಂತ ಅನ್ನಿಸುತ್ತಾ?: ಡಿ.ಕೆ. ಶಿವಕುಮಾರ್

CORONA 2

ಇತ್ತ ಪಾದಯಾತ್ರೆ ಬಳಿ ಹೋಗಿದ್ದ ಕಾರಣ ಎಡಿಸಿ ಇಂದು ಬೆಳಗ್ಗೆ ಟೆಸ್ಟ್ ಮಾಡಿಸಿಕೊಂಡಿದ್ದರು. ಇದೀಗ ಅವರಿಗೆ ಕೊರೊನಾ ಪಾಸಿಟಿವ್ ಎಂದು ವರದಿ ಬಂದಿದ್ದು, ಸದ್ಯ ಅವರು ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದಾರೆ. ಇದನ್ನೂ ಓದಿ: ಹಿರಿಯ ಸಾಹಿತಿ, ರಾಷ್ಟ್ರಪ್ರಶಸ್ತಿ ವಿಜೇತ ಎನ್.ಎಸ್.ದೇವಿಪ್ರಸಾದ್ ನಿಧನ

Share This Article
Leave a Comment

Leave a Reply

Your email address will not be published. Required fields are marked *