Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಎಂ ಕುರ್ಚಿ ಸ್ಪರ್ಧೆಗಾಗಿ ಕಾಂಗ್ರೆಸ್ ಪಾದಯಾತ್ರೆ: ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಟೀಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಸಿಎಂ ಕುರ್ಚಿ ಸ್ಪರ್ಧೆಗಾಗಿ ಕಾಂಗ್ರೆಸ್ ಪಾದಯಾತ್ರೆ: ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಟೀಕೆ

Karnataka

ಸಿಎಂ ಕುರ್ಚಿ ಸ್ಪರ್ಧೆಗಾಗಿ ಕಾಂಗ್ರೆಸ್ ಪಾದಯಾತ್ರೆ: ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಟೀಕೆ

Public TV
Last updated: January 13, 2022 11:29 pm
Public TV
Share
3 Min Read
N. Ravikumar
SHARE

ಬೆಂಗಳೂರು: ಮುಖ್ಯಮಂತ್ರಿ ಕುರ್ಚಿಯ ಸ್ಪರ್ಧೆಯಲ್ಲಿ ನಾ ಮುಂದೆ ತಾ ಮುಂದೆ ಎಂದು ಸ್ಪರ್ಧೆಗೆ ಇಳಿವಂತೆ ಕಾಂಗ್ರೆಸ್‍ನವರು ಭಂಡತನದ ಪಾದಯಾತ್ರೆ ಮಾಡುತ್ತಿದ್ದಾರೆ. ಕಾಂಗ್ರೆಸ್‍ನವರಿಗೆ ಸಾಮಾನ್ಯ ಜ್ಞಾನದ ಗುಲಗಂಜಿಯೂ ಇಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಮತ್ತು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಆಕ್ಷೇಪ ವ್ಯಕ್ತಪಡಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ʻಜಗನ್ನಾಥ ಭವನʼದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ಹೆಚ್ಚಳದ ನಡುವೆ ಪಾದಯಾತ್ರೆ ಬೇಡ ಎಂದು ಹೈಕೋರ್ಟ್ ಹೇಳಿದ ವಿಷಯವನ್ನು ಸರ್ಕಾರ ಮೊದಲೇ ತಿಳಿಸಿತ್ತು. ಮುಖ್ಯಮಂತ್ರಿಗಳು, ಸಚಿವರ ಮನವಿ, ಜನರ ಅಭಿಪ್ರಾಯವನ್ನು ಧಿಕ್ಕರಿಸಿ ಪತ್ರಿಕಾ ಸಂಪಾದಕೀಯದ ಸಲಹೆಯನ್ನೂ ಬದಿಗೊತ್ತಿ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ಮೇಕೆದಾಟು ಪಾದಯಾತ್ರೆ ಆರಂಭಿಸಿದರು ಎಂದು ಟೀಕಿಸಿದರು. ಇದನ್ನೂ ಓದಿ: ಕೋವಿಡ್ ಪ್ರಕರಣ ಹೆಚ್ಚಲು ಕಾಂಗ್ರೆಸ್ ಪಾದಯಾತ್ರೆಯೂ ಕಾರಣ‌: ಸಚಿವ ಸುಧಾಕರ್

Mekedatu Padyatra DK Shivakumar Siddaramaiah

ಕೋವಿಡ್ ತೀವ್ರವಾಗುತ್ತಿರುವಾಗಲೇ ಈ ಪಾದಯಾತ್ರೆ ಬೇಕಿತ್ತೇ ಪ್ರಶ್ನಿಸಿರುವ ಹೈಕೋರ್ಟ್ ಪಾದಯಾತ್ರೆ ನಿಲ್ಲಿಸಿ ಎಂದು ಸೂಚಿಸಿದೆ. ಅದೇ ರೀತಿ ಪಾದಯಾತ್ರೆ ನಿಲ್ಲಿಸಬಾರದೇ ಎಂದು ರಾಜ್ಯ ಸರ್ಕಾರವನ್ನೂ ಪ್ರಶ್ನಿಸಿದೆ. ಮಾನವೀಯತೆಯ ಲವಲೇಶವಿಲ್ಲದೆ ಈ ಪಾದಯಾತ್ರೆ ಮಾಡಲಾಗುತ್ತಿದೆ. ಪಾದಯಾತ್ರೆಯಲ್ಲಿ ಭಾಗವಹಿಸಿದ ಮಲ್ಲಿಕಾರ್ಜುನ ಖರ್ಗೆ, ಮಾಜಿ ಶಾಸಕಿ ಮಲ್ಲಾಜಮ್ಮ, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಮಂಜುಳಾ ಮಾನಸ, ವಿಧಾನ ಪರಿಷತ್ ಹಿರಿಯ ಸದಸ್ಯ ಸಿ.ಎಂ.ಇಬ್ರಾಹಿಂ, ಮಾಜಿ ಸಿಎಂ ವೀರಪ್ಪ ಮೊಯಿಲಿ, ಮಾಜಿ ಸಚಿವ ರೇವಣ್ಣ ಅವರಿಗೆ ಈಗಾಗಲೇ ಕೋವಿಡ್ ಬಂದಿದೆ. ಇದರಲ್ಲಿ ಪಾಲ್ಗೊಂಡ ಬಹಳಷ್ಟು ಜನರಿಗೆ ಕೋವಿಡ್ ಬಂದಿದೆ ಎಂದು ತಿಳಿಸಿದರು.

ನಿನ್ನೆ ರಾಮನಗರದಲ್ಲಿ ಪರೀಕ್ಷೆ ಮಾಡಿದ 100 ಜನರ ಪೈಕಿ 30 ಜನರಿಗೆ ಕೋವಿಡ್ ಇದೆ. ಇದು ಇನ್ನೂ ಹೆಚ್ಚಾಗುತ್ತಿದೆ. ಕಾಂಗ್ರೆಸ್‍ನದ್ದು ಪಾದಯಾತ್ರೆಯಲ್ಲ, ಕೋವಿಡ್ ಹೆಚ್ಚಳದ ಜಾತ್ರೆ. ಪಾದಯಾತ್ರೆ ವಿಚಾರ ಹೈಕಮಾಂಡ್‍ಗೆ ಗೊತ್ತಿತ್ತು. ಆದರೆ, ಉಸ್ತುವಾರಿ ಸುರ್ಜೇವಾಲಾ ಅವರು ಪರಿಸ್ಥಿತಿ ಕೈಮೀರಿದರೆ ಪಾದಯಾತ್ರೆ ನಿಲ್ಲಿಸಿ ಎಂದು ಇವತ್ತು ಸೂಚನೆ ಕೊಡುತ್ತಿದ್ದಾರೆ. ಇನ್ನೂ ಎಷ್ಟು ಕೈಮೀರಬೇಕು. ರಾಜ್ಯದಲ್ಲಿ ಕೋವಿಡ್ ಪ್ರಮಾಣ ಹೆಚ್ಚಳದಲ್ಲಿ ಕಾಂಗ್ರೆಸ್ ಮತ್ತು ಆ ಪಕ್ಷದ ಹೈಕಮಾಂಡ್ ಪಾತ್ರ ದೊಡ್ಡದಾಗಿದೆ ಎಂದು ಟೀಕಿಸಿದರು. ಇದನ್ನೂ ಓದಿ: ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ ಕಾಂಗ್ರೆಸ್ ಬಗ್ಗೆ ನಮಗೆ ನಂಬಿಕೆ ಇಲ್ಲ: ಸುನಿಲ್ ಕುಮಾರ್

mekedatu padayatra 1

ಡಿ.ಕೆ.ಶಿವಕುಮಾರ್‌ರನ್ನು ಸಿಎಂ ಮಾಡಲು ಮತ್ತು ಅವರ ಬೇಳೆ ಬೇಯಿಸಲು ಹೈಕಮಾಂಡ್ ಕೂಡ ಕೋವಿಡ್ ಹೆಚ್ಚಿಸಲು ಸಹಾಯ ಮಾಡುತ್ತಿದೆ. ಪಾದಯಾತ್ರೆ ಮುಂದೂಡಿಕೆಗೆ ಹೈಕಮಾಂಡ್ ಯಾಕೆ ಮುಂದಾಗಲಿಲ್ಲ? ಡಿ.ಕೆ.ಶಿವಕುಮಾರ್ ಒಬ್ಬರಿಗೇ ಪಾದಯಾತ್ರೆಯ ಲಾಭ ಸಿಗಬಾರದೆಂದು ಸಿದ್ದರಾಮಯ್ಯರು ತಮಗೆ ಅನಾರೋಗ್ಯವಿದ್ದರೂ ಕಷ್ಟಪಟ್ಟು ಪಾದಯಾತ್ರೆಯಲ್ಲಿ ಭಾಗವಹಿಸಿದ್ದಾರೆ ಎಂದರು.

ರಾಜ್ಯ ಸರ್ಕಾರ ನೂರಾರು ಜನರ ವಿರುದ್ಧ ಪ್ರಕರಣ ದಾಖಲಿಸಿದೆ. ಮಾಜಿ ಸಿಎಂ ಸಿದ್ದರಾಮಯ್ಯ, ಶಾಸಕರೇ ನಿಯಮಗಳನ್ನು ಉಲ್ಲಂಘಿಸಿದ್ದು ಸರಿಯೇ? ಎಂದು ಕೇಳಿದರು. ಮೇಕೆದಾಟು ವಿಳಂಬಕ್ಕೆ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರೇ ಕಾರಣ. 2013ರಿಂದ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಯಾವುದೇ ತಡೆಯಾಜ್ಞೆ ಇರಲಿಲ್ಲ. ಇದರ ಬಗ್ಗೆ ಕಾಂಗ್ರೆಸ್ ವಲಯದಲ್ಲೇ ಚರ್ಚೆ ನಡೆದಿದೆ. ಶಿವಕುಮಾರ್ ಮತ್ತು ಎಂ.ಬಿ.ಪಾಟೀಲರಿಗೆ ಮಂಪರು ಪರೀಕ್ಷೆ ಮಾಡಲಿ ಎಂದು ಆಗ್ರಹಿಸಿದರು. ಇದನ್ನೂ ಓದಿ: ನೋಟಿಸ್‍ಗೆ ಹೆದರಲ್ಲ, ಜನರ ಹಿತದೃಷ್ಟಿಯಿಂದ ಪಾದಯಾತ್ರೆ ರದ್ದು: ಸಿದ್ದರಾಮಯ್ಯ

mekedatu padayatra dk shivakumar saleem ahmed

ರಾಜ್ಯ ವಕ್ತಾರರು ಹಾಗೂ ವಿಧಾನಪರಿಷತ್ ಸದಸ್ಯರಾದ ತೇಜಸ್ವಿನಿ ಗೌಡ ಮಾತನಾಡಿ, ಕಾಂಗ್ರೆಸ್ ಪಕ್ಷವು ಮೇಕೆದಾಟು ವಿಚಾರದಲ್ಲಿ ಸಲಹೆಗಳನ್ನು ಸರ್ವಪಕ್ಷ ಸಭೆಯಲ್ಲಿ ತಿಳಿಸಬೇಕಿತ್ತು. ಇವರು ಪರಮ ಸ್ವಾರ್ಥಕ್ಕಾಗಿ ಮತ್ತು ರಾಜಕೀಯ ಲಾಭಕ್ಕಾಗಿ ಈ ಪಾದಯಾತ್ರೆ ಮಾಡಿದ್ದಾರೆ ಎಂದು ಟೀಕಿಸಿದರು. ಮೊದಲು ಕೋವಿಡ್ ಲಸಿಕೆ ಹಾಕಿಸಿಕೊಳ್ಳದಿರಿ ಎಂದರು. ಈಗ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಸೇರಿ ಪಾದಯಾತ್ರೆಯಲ್ಲಿ ಪಾಲ್ಗೊಂಡ ಎಲ್ಲರಿಗೂ ಕೋವಿಡ್ ತಗುಲಿದಂತೆ ಕಾಣುತ್ತದೆ ಎಂದರು.

TAGGED:bjpcongress padayatremekedatu padayatreMLC n.ravikumarಎಂಎಲ್‌ಸಿ ಎನ್‌.ರವಿಕುಮಾರ್‌ಕಾಂಗ್ರೆಸ್‌ ಪಾದಯಾತ್ರೆಬಿಜೆಪಿಮೇಕೆದಾಟು ಪಾದಯಾತ್ರೆ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda
ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Cinema Latest Top Stories
Actress Jayamala
ಫಿಲ್ಮ್ ಚೇಂಬರ್ ನೂತನ ಅಧ್ಯಕ್ಷೆಯಾಗಿ ಹಿರಿಯ ನಟಿ ಜಯಮಾಲಾ ಪದಗ್ರಹಣ
Cinema Latest Sandalwood Top Stories
Pushpa Arunkumar
ಸೈಟ್‌ ವಿಚಾರಕ್ಕೆ ಜಟಾಪಟಿ – ಕೆಡವಿದ್ದ ಕಾಂಪೌಂಡ್‌ ಕಟ್ಟಿಸಲು ಮುಂದಾದ ಯಶ್‌ ತಾಯಿ
Cinema Districts Hassan Karnataka Latest Sandalwood States Top Stories
Ram Charan
ಅವಳಿ ಮಕ್ಕಳಿಗೆ ಜನ್ಮ ನೀಡಿದ ರಾಮ್‌ಚರಣ್ ಪತ್ನಿ ಉಪಾಸನಾ
Bollywood Cinema Latest Top Stories

You Might Also Like

Budget 2026 1 1
Latest

ವಿಕಸಿತ ಭಾರತಕ್ಕೆ ಕೇಂದ್ರದ ಯುವಶಕ್ತಿ ಬಜೆಟ್ – ಜೀರಾಮ್‌ಜೀ ಯೋಜನೆಗೆ 95,692 ಕೋಟಿ ಮೀಸಲು; ಹಿಂದಿಗಿಂತಲೂ ಹೆಚ್ಚು!

Public TV
By Public TV
8 hours ago
Hassan Car Accident
Crime

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ – ಓರ್ವ ಸಾವು, ಇಬ್ಬರು ಗಂಭೀರ

Public TV
By Public TV
8 hours ago
Ind vs Pak U19 1
Cricket

U19 World Cup | ಭಾರತಕ್ಕೆ 58 ರನ್‌ಗಳ ಭರ್ಜರಿ ಜಯ – ಮೈದಾನದಲ್ಲೇ ಕಣ್ಣೀರಿಟ್ಟ ಪಾಕ್‌ ಕ್ರಿಕೆಟಿಗ

Public TV
By Public TV
8 hours ago
India vs Pakistan 1
Cricket

Boycott | ವಿಶ್ವಕಪ್‌ ಟೂರ್ನಿ ಆಡ್ತೀವಿ, ಭಾರತದ ವಿರುದ್ಧ ಆಡಲ್ಲ – ಪಾಕಿಸ್ತಾನ ಅಚ್ಚರಿ ನಿರ್ಧಾರ

Public TV
By Public TV
9 hours ago
Chaluvarayaswamy
Districts

ಕೃಷಿಯಾಧಾರಿತ ಕರ್ನಾಟಕಕ್ಕೆ ಕೇಂದ್ರ ಬಜೆಟ್‌ನಲ್ಲಿಲ್ಲ ಒತ್ತು: ಚಲುವರಾಯಸ್ವಾಮಿ

Public TV
By Public TV
9 hours ago
CJ Roy 6
Bengaluru City

ಬೆಲ್ಜಿಯಮ್ ದೇಶದ ಪಿಸ್ತೂಲ್‌ನಿಂದ ಸಿ.ಜೆ ರಾಯ್ ಶೂಟೌಟ್

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?