Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಟ್ಯಾಬ್ಲೊ ವಿಚಾರದಲ್ಲಿ ದಕ್ಷಿಣ ಭಾರತಕ್ಕೆ ಅನ್ಯಾಯ – ಸಿಡಿದೆದ್ದ ರಾಜ್ಯಗಳು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಟ್ಯಾಬ್ಲೊ ವಿಚಾರದಲ್ಲಿ ದಕ್ಷಿಣ ಭಾರತಕ್ಕೆ ಅನ್ಯಾಯ – ಸಿಡಿದೆದ್ದ ರಾಜ್ಯಗಳು

Latest

ಟ್ಯಾಬ್ಲೊ ವಿಚಾರದಲ್ಲಿ ದಕ್ಷಿಣ ಭಾರತಕ್ಕೆ ಅನ್ಯಾಯ – ಸಿಡಿದೆದ್ದ ರಾಜ್ಯಗಳು

Public TV
Last updated: January 17, 2022 3:06 pm
Public TV
Share
3 Min Read
republic day Tableau 2
SHARE

ನವದೆಹಲಿ : ಗಣರಾಜೋತ್ಸವ ಪರೇಡ್ ನಲ್ಲಿ ಪ್ರದರ್ಶನಗೊಳ್ಳಲಿರುವ ಟ್ಯಾಬ್ಲೊ ವಿಚಾರವಾಗಿ ಈಗ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ಸಂಘರ್ಷ ಏರ್ಪಟ್ಟಿದೆ. ಕೇಂದ್ರ ಸರ್ಕಾರದ ವಿರುದ್ಧ ಬಹಿರಂಗವಾಗೇ ಕೇರಳ ಸಿಎಂ ಪಿಣರಾಯಿ ವಿಜಯನ್ ಮತ್ತು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ವಾಗ್ದಾಳಿ ನಡೆಸಿದ್ದಾರೆ.

ಪ್ರತಿ ವರ್ಷದಂತೆ ಈ ವರ್ಷವೂ ಗಣರಾಜೋತ್ಸವ ಪರೇಡ್‌ನಲ್ಲಿ ಭಾಗಿಯಾಗಲು ರಾಜ್ಯಗಳು ತಮ್ಮ ಟ್ಯಾಬ್ಲೊ ವಿಷಯಗಳನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಟ್ಟಿವೆ. ನೇತಾಜಿ ಸುಭಾಷ್ ಚಂದ್ರ ಬೋಸ್‌ರವರ 125ನೇ ಜನ್ಮದಿನದ ಹಿನ್ನಲೆ ಪಶ್ಚಿಮ ಬಂಗಾಳ ಅವರ ಐಎನ್‌ಎ ವಿಷಯಾಧಾರಿತ ಟ್ಯಾಬ್ಲೊ‌ವನ್ನು, ಕೇರಳ ಸರ್ಕಾರ ಬ್ರಹ್ಮಶ್ರೀ ನಾರಾಯಣ ಗುರುಗಳ ವಿಷಯವನ್ನು ಅಂತಿಮಗೊಳಿಸಿ ಕೇಂದ್ರಕ್ಕೆ ಕಳುಹಿಸಿಕೊಟ್ಟಿತ್ತು.

republic day Tableau 1

ಮೊದಲ ಹಂತದಲ್ಲಿ ಆಯ್ಕೆಯಾಗಿದ್ದ ಈ ವಿಷಯಗಳಿಗೆ ಏಕಾಏಕಿ ತಡೆ ನೀಡಲಾಗಿದೆ. ಈ ಟ್ಯಾಬ್ಲೊ‌ಗಳ ಪ್ರದರ್ಶನಕ್ಕೆ ಕೇಂದ್ರ ಸರ್ಕಾರ ನಿರಾಕರಿಸಿದೆ. ತನ್ನ ನಿರ್ಧಾರದ ಹಿಂದಿನ ಕಾರಣವೇನು ಎನ್ನುವುದನ್ನು ಈವರೆಗೂ ಸ್ಪಷ್ಟಪಡಿಸಿಲ್ಲ. ಇದರಿಂದ ಕೇರಳ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿಗಳು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ತಮ್ಮ ಪತ್ರದಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಮಮತಾ, ಕೇಂದ್ರ ಸರ್ಕಾರದ ಈ ಮನೋಭಾವದಿಂದ ಬಂಗಾಳಿ ಜನರಿಗೆ ಅತೀವ ನೋವಾಗಿದೆ, ನೇತಾಜಿ ಅವರ ಟ್ಯಾಬ್ಲೋ ತಿರಸ್ಕರಿಸುವ ಮೂಲಕ ಕೇಂದ್ರ ಸರ್ಕಾರ ನೇತಾಜಿ ಅವರ ಹೋರಾಟವನ್ನು ಕಡೆಗಣಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:  ಮಾನ್ಯ ಡಿಕೆಶಿ ಅವರೇ, ನಿಮ್ಮ ಆರೋಗ್ಯ ಹೇಗಿದೆ?: ಬಿಜೆಪಿ

ದಕ್ಷಿಣದ ರಾಜ್ಯಗಳಿಗೂ ಅನ್ಯಾಯ: ಈ ಬಾರಿ ಕೇಂದ್ರ ಸರ್ಕಾರ 12 ರಾಜ್ಯಗಳಿಗೆ ಮಾತ್ರ ಟ್ಯಾಬ್ಲೊ ಪ್ರದರ್ಶನಕ್ಕೆ ಅವಕಾಶ ನೀಡಿದೆ. ದಕ್ಷಿಣ ಭಾರತದಿಂದ ಕರ್ನಾಟಕ ಮಾತ್ರ ಟ್ಯಾಬ್ಲೊ ಪ್ರದರ್ಶನಕ್ಕೆ ಆಯ್ಕೆಯಾಗಿದೆ. ಮಹಾರಾಷ್ಟ್ರ, ತಮಿಳುನಾಡು, ಗೋವಾ, ಆಂಧ್ರಪ್ರದೇಶ ಕೂಡಾ ತಮ್ಮ ವಿಷಯಗಳ ಪ್ರಸ್ತಾಪವನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿದ್ದವು, ಆದರೆ ಈ ನಾಲ್ಕು ರಾಜ್ಯಗಳ ಪ್ರಸ್ತಾಪವನ್ನು ಕೇಂದ್ರ ತಿರಸ್ಕರಿಸಿದೆ‌. ಮಾಹಿತಿಗಳ ಪ್ರಕಾರ ಈ ಬಾರಿ ತೆಲಂಗಾಣ ಯಾವುದೇ ಪ್ರಸ್ತಾಪ ಕಳುಹಿಸಿಲ್ಲ.

republic day 2020

ತಮ್ಮ ಟ್ಯಾಬ್ಲೊ ವಿಷಯಗಳನ್ನು ನಿರಾಕರಿಸಿರುವುದಕ್ಕೆ ದಕ್ಷಿಣದಲ್ಲಿ ಕೇರಳ ಹೊರತುಪಡಿಸಿ ಮಹಾರಾಷ್ಟ್ರ, ತಮಿಳುನಾಡು, ಗೋವಾ, ಆಂಧ್ರಪ್ರದೇಶ ಯಾವುದೇ ಆಕ್ಷೇಪ ವ್ಯಕ್ತಪಡಿಸಿಲ್ಲ. ಆದರೆ ಕರ್ನಾಟಕ ಹೊರತುಪಡಿಸಿ ದಕ್ಷಿಣ ಭಾರತದ ಪ್ರಮುಖ ರಾಜ್ಯಗಳನ್ನು ಟ್ಯಾಬ್ಲೊ ಪ್ರದರ್ಶನದಿಂದ ಏಕಕಾಲದಲ್ಲಿ ಕೈಬಿಟ್ಟಿರುವುದಕ್ಕೆ ಜನ ಸಾಮಾನ್ಯರಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಕೇಂದ್ರ ಸರ್ಕಾರದ ನಡೆಯಿಂದ ಈ ಬಾರಿ ಗಣರಾಜೋತ್ಸವ ಪರೇಡ್ ನಲ್ಲಿ ದಕ್ಷಿಣ ಭಾರತದ ಅನುಪಸ್ಥಿತಿ ದೊಡ್ಡ ಪ್ರಮಾಣದಲ್ಲಿ ಕಾಣಲಿದೆ ಎಂದು ಸಮಾಜಿಕ ಜಾಲತಾಣಗಳಲ್ಲಿ ಜನರು ಬೇಸರ ವ್ಯಕ್ತಪಡಿಸಿದ್ದಾರೆ.

ಕಾರಣ ನೀಡದ ಕೇಂದ್ರ: ಇನ್ನು ರಾಜ್ಯಗಳು ನೀಡಿದ ಟ್ಯಾಬ್ಲೊ‌ಗಳ ವಿಷಯಗಳನ್ನು ಯಾಕೆ ನಿರಾಕರಿಸಿದೆ ಎಂದು ಈವರೆಗೂ ಕೇಂದ್ರ ಸರ್ಕಾರ ಎಲ್ಲೂ ಹೇಳಿಲ್ಲ. ನಿಯಮಗಳ ಪ್ರಕಾರ ರಾಜ್ಯಗಳು ಮೂರು ವಿಷಯಗಳನ್ನು ಕೇಂದ್ರದ ಆಯ್ಕೆ ಸಮಿತಿಗೆ ಕಳುಹಿಸಿಕೊಡಲಾಗಿರುತ್ತದೆ. ಅಲ್ಲದೇ ಆ ವಿಷಯದ ಮಹತ್ವವನ್ನು ವಿವರಿಸಲಾಗಿರುತ್ತದೆ. ಒಂದು ವೇಳೆ ರಾಜ್ಯದ ಮೊದಲ ಆದ್ಯತೆಯ ವಿಷಯ ಕೇಂದ್ರದ ತಕರಾರುಗಳಿದ್ದಲ್ಲಿ ಎರಡು ಅಥಾವ ಮೂರನೇ ವಿಷಯವನ್ನು ಆಯ್ಕೆ ಮಾಡುವ ಅವಕಾಶಗಳಿರುತ್ತದೆ. ಇದನ್ನೂ ಓದಿ: ಒಬಿಸಿ ನಾಯಕರಿಂದ ಬಿಜೆಪಿಗೆ ರಾಜೀನಾಮೆ – ದಲಿತರ ಮನೆಯಲ್ಲಿ ಊಟ ಮಾಡಿದ ಯೋಗಿ

Delhi Republic Day 2

ಆದರೆ ಕೇಂದ್ರ ಸರ್ಕಾರ ಮಾತ್ರ ಈ ನಿಯಮ ಪಾಲಿಸದೇ ಏಕಾಏಕಿ ಕರ್ನಾಟಕ ಹೊರತುಪಡಿಸಿ ದಕ್ಷಿಣ ಭಾರತದ ಎಲ್ಲ ರಾಜ್ಯಗಳ ಟ್ಯಾಬ್ಲೊಗಳ ವಿಷಯಗಳನ್ನು ನಿರಾಕರಿಸಿದೆ. ರಾಜ್ಯಗಳ ವಿಷಯಗಳನ್ನು ನಿರಾಕರಿಸಿದ್ದೇಕೆ? ಇದರ ಹಿಂದಿನ ಕಾರಣ ಏನು ಈವರೆಗೂ ತಿಳಿದು ಬಂದಿಲ್ಲ ಮತ್ತು ಕೇಂದ್ರ ಸರ್ಕಾರವೂ ಈವರೆಗೂ ಯಾವುದೇ ಸ್ಪಷ್ಟನೆ ನೀಡಿಲ್ಲ. ಇದನ್ನೂ ಓದಿ:  ಪಕ್ಷದಿಂದ ಸಚಿವನ ಉಚ್ಛಾಟಿಸಿದ ಬಿಜೆಪಿ – ಮತ್ತೆ ‘ಕೈ’ ಹಿಡೀತಾರಾ ಹರಕ್ ಸಿಂಗ್ ರಾವತ್?

ದಕ್ಷಿಣ ಭಾರತ ಪ್ರತಿನಿಧಿಸಲಿರುವ ಕರ್ನಾಟಕ: ದಕ್ಷಿಣ ಭಾರತದಿಂದ ಕರ್ನಾಟಕ ಏಕೈಕ ಟ್ಯಾಬ್ಲೊ ಆಯ್ಕೆಯಾಗಿದ್ದು ರಾಜಪಥ್ ನಲ್ಲಿ ಇಡೀ ದಕ್ಷಿಣ ಭಾರತವನ್ನು ಕರ್ನಾಟಕ ಪ್ರತಿನಿಧಿಸಲಿದೆ. ಕರ್ನಾಟಕ ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು ವಿಷಯ ಆಧಾರಿತ ಟ್ಯಾಬ್ಲೊ ಕರ್ನಾಟಕದಿಂದ ಆಯ್ಕೆಯಾಗಿದೆ. ಸತತವಾಗಿ 13 ನೇ ಬಾರಿ ಟ್ಯಾಬ್ಲೊ ಪ್ರದರ್ಶನಕ್ಕೆ ಅವಕಾಶ ಸಿಕ್ಕಿದೆ.

TAGGED:paraderepublic daySouth Indiatableauಕೇಂದ್ರ ಸರ್ಕಾರಗಣರಾಜೋತ್ಸವಟ್ಯಾಬ್ಲೊನವದೆಹಲಿಪರೇಡ್ಮಮತಾ ಬ್ಯಾನರ್ಜಿ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Congress BJP
Bagalkot

ದಾವಣಗೆರೆ, ಬಾಗಲಕೋಟೆ ಉಪಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ

Public TV
By Public TV
59 minutes ago
ipl 2026 Vaibhav Sooryavanshi stuns Jasprit Bumrah with first ball six Mumbai Indiansace can only smile
Cricket

ಬುಮ್ರಾಗೆ 2 ಸಿಕ್ಸ್‌ – ಮತ್ತೆ 5 ಸಿಕ್ಸ್‌ ಸಿಡಿಸಿದ ಸೂರ್ಯವಂಶಿ

Public TV
By Public TV
1 hour ago
IPL match Rain
Cricket

IPL 2026 | ರಾಜಸ್ಥಾನ ರಾಯಲ್ಸ್‌ Vs ಮುಂಬೈ ಇಂಡಿಯನ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ

Public TV
By Public TV
2 hours ago
JD Vance
Latest

ಇರಾನ್‌ ಮೇಲೆ ಪರಮಾಣು ದಾಳಿಯಾಗುತ್ತಾ?- ವ್ಯಾನ್ಸ್‌ ಹೇಳಿಕೆಯಿಂದ ಬಿಸಿ ಬಿಸಿ ಚರ್ಚೆ

Public TV
By Public TV
2 hours ago
Bandipura Vulture
Chamarajanagar

ಬಂಡೀಪುರದಲ್ಲಿ ಸಫಾರಿ ಹೋಗಿದ್ದ ಪ್ರವಾಸಿಗರಿಗೆ ರಣಹದ್ದುಗಳ ದರ್ಶನ – ಸಂತತಿ ಹೆಚ್ಚಳ

Public TV
By Public TV
2 hours ago
Mallikarjun kharge
Latest

RSS, BJP ಕಾರ್ಯಕರ್ತರನ್ನು ಕೊಲ್ಲಲು ಮುಸ್ಲಿಮರಿಗೆ ಮಲ್ಲಿಕಾರ್ಜುನ ಖರ್ಗೆ ಕರೆ ಆರೋಪ – ಬೆಂಗ್ಳೂರಲ್ಲಿ ದೂರು ದಾಖಲು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?