Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪರ್ಯಾಯ ಅಂದ್ರೆ ಏನು? ಮಧ್ವಾಚಾರ್ಯರು ಕೊಟ್ಟಿರುವ ಅಕ್ಷಯ ಪಾತ್ರೆ, ಸಟ್ಟುಗವೇ ಅಧಿಕಾರ ಹಸ್ತಾಂತರಕ್ಕೆ ಅಂಕಿತ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಪರ್ಯಾಯ ಅಂದ್ರೆ ಏನು? ಮಧ್ವಾಚಾರ್ಯರು ಕೊಟ್ಟಿರುವ ಅಕ್ಷಯ ಪಾತ್ರೆ, ಸಟ್ಟುಗವೇ ಅಧಿಕಾರ ಹಸ್ತಾಂತರಕ್ಕೆ ಅಂಕಿತ

Districts

ಪರ್ಯಾಯ ಅಂದ್ರೆ ಏನು? ಮಧ್ವಾಚಾರ್ಯರು ಕೊಟ್ಟಿರುವ ಅಕ್ಷಯ ಪಾತ್ರೆ, ಸಟ್ಟುಗವೇ ಅಧಿಕಾರ ಹಸ್ತಾಂತರಕ್ಕೆ ಅಂಕಿತ

Public TV
Last updated: January 18, 2022 3:10 pm
Public TV
Share
3 Min Read
udupi paryaya 5
SHARE

ಉಡುಪಿಯಲ್ಲಿ ಎರಡು ವರ್ಷಕ್ಕೊಮ್ಮೆ ಪರ್ಯಾಯೋತ್ಸವ ಅಂದರೆ ಉಡುಪಿ ಜನರಲ್ಲಿ ಹಬ್ಬದ ಸಡಗರ. ಎರಡು ವರ್ಷಗಳಿಗೆ ಒಮ್ಮೆ ಬರುವ ಈ ದ್ವಿವಾರ್ಷಿಕ ಉತ್ಸವದ ಸಂದರ್ಭ ಉಡುಪಿಯ ನಗರ ಸಿಂಗಾರಗೊಳ್ಳುತ್ತದೆ.ಜನವರಿ ತಿಂಗಳ ಚಳಿಗಾಲದ ರಾತ್ರಿಯಲ್ಲಿ ಬೀದಿಯ ತುಂಬೆಲ್ಲಾ ಜಗಮಗ ಬೆಳಕು ರಾರಾಜಿಸುತ್ತಾ ಕಣ್ಮನ ಸೆಳೆಯುತ್ತದೆ. ಈಗ ಪುನಃ ಉಡುಪಿಯಲ್ಲಿ ಸಂಭ್ರಮ ಮನೆ ಮಾಡಿದೆ. ಅಷ್ಟಕ್ಕೂ ಉಡುಪಿ ಪರ್ಯಾಯ ಎಂದರೆ ಏನು? ಪರ್ಯಾಯೋತ್ಸವ ಎಂದರೆ ಯಾವ ಉತ್ಸವ? ಈ ಉತ್ಸವವನ್ನು ಜನರು ಏಕೆ ಇಷ್ಟು ಸಂಭ್ರಮಿಸುತ್ತಾರೆ? ಉತ್ಸವದ ಇತಿಹಾಸ ಏನು? ಈ ಬಗ್ಗೆ ವಿವರಗಳು ಇಲ್ಲಿದೆ.

udupi paryaya

ಮಧ್ವಾಚಾರ್ಯರು ಉಡುಪಿಯಲ್ಲಿ ಕೃಷ್ಣಮಠವನ್ನು ಸ್ಥಾಪನೆ ಮಾಡಿದರು. ಶ್ರೀಕೃಷ್ಣನಿಗೆ ಪೂಜೆ ಮಾಡಲು ಎಂಟು ಮಂದಿ ಯತಿಗಳನ್ನು ನೇಮಿಸಿದ್ದರು. ಆರಂಭದಲ್ಲಿ ಪ್ರತಿ ಎರಡು ತಿಂಗಳಿಗೊಮ್ಮೆ ಪೂಜಾ ಅಧಿಕಾರ ಎಂಟು ಮಠಗಳ ನಡುವೆ ಹಸ್ತಾಂತರವಾಗುತ್ತಿತ್ತು ನಂತರ ಎರಡು ವರ್ಷಕ್ಕೆ ವಿಸ್ತರಣೆ ಆಯ್ತು.

udupi paryaya 3

ಅದಮಾರು ಮಠ ಎರಡು ವರ್ಷ ಪರ್ಯಾಯ ಅಧಿಕಾರ ಪೂರೈಸಿದ್ದು, ಇನ್ನು 14 ವರ್ಷದ ನಂತರ ಶ್ರೀಗಳು ಮತ್ತೆ ಕೃಷ್ಣನ ಪೂಜಾಧಿಕಾರ ವಹಿಸಿಕೊಳ್ಳಲಿದ್ದಾರೆ. ನಡುರಾತ್ರಿ ಆರಂಭವಾಗುವ ಅಧಿಕಾರ ಹಸ್ತಾಂತರ ಪ್ರಕ್ರಿಯೆ ಬೆಳಗಿನ ಜಾವ ಸಾಂಪ್ರದಾಯಿಕ ಪ್ರಕ್ರಿಯೆಗಳು ಮುಗಿದುಬಿಡುತ್ತದೆ. ಫೋಟೋಗಳ ಮೂಲಕ ಪರ್ಯಾಯ ಮಹೋತ್ಸವದ ಎಲ್ಲ ಪ್ರಕ್ರಿಯೆಗಳನ್ನು ಇಲ್ಲಿ ವಿವರಿಸಲಾಗುವುದು. ಇದನ್ನೂ ಓದಿ: ಎರಡು ವರ್ಷ ಕೃಷ್ಣನಿಗೆ ಲಕ್ಷ ತುಳಸಿ ಅರ್ಚನೆ – ಕೃಷ್ಣಾಪುರ ಸ್ವಾಮೀಜಿ ಘೋಷಣೆ

udupi paryaya 7

ಹೇಗೆ ನಡೆಯಿತು?
ಕಾಪು ತಾಲೂಕಿನ ದಂಡ ತೀರ್ಥದಲ್ಲಿ ಶ್ರೀ ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ರಾತ್ರಿ 1:30 ಕ್ಕೆ ಪವಿತ್ರ ಸ್ನಾನ ಮಾಡಿದರು. ಈ ಸಂದರ್ಭ ಹತ್ತಾರು ಭಕ್ತರು ಸ್ವಾಮೀಜಿಗಳ ಜೊತೆ ತೀರ್ಥಸ್ನಾನದಲ್ಲಿ ಜೊತೆಯಾದರು. ಉಡುಪಿ ನಗರಕ್ಕೆ ಆಗಮಿಸಿ ಜೋಡುಕಟ್ಟೆಯಲ್ಲಿ ಪಟ್ಟದ ದೇವರಿಗೆ ಮಂಗಳಾರತಿ ಮಾಡುವ ಮೂಲಕ ದೀಪ ಬೆಳಗಿಸಿ ಪರ್ಯಾಯ ಮೆರವಣಿಗೆ ಆರಂಭವಾಯಿತು. ಉಡುಪಿ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಸಾಗಿತು. ಸೀಮಿತ ಟ್ಯಾಬ್ಲೋ ಕಲಾತಂಡಗಳ ಜೊತೆಗೆ ಪಲ್ಲಕ್ಕಿ ಟ್ಯಾಬ್ಲೋದಲ್ಲಿ ಕೂತು ಸ್ವಾಮೀಜಿಗಳು ಮಠದತ್ತ ಸಾಗಿದರು.

udupi paryaya 4

ರಥಬೀದಿಗೆ ಬಿಳಿ ಹಾಸು ಹಾಸಲಾಗಿತ್ತು. ಅದರ ಮೇಲೆ ಎಲ್ಲ ಸ್ವಾಮೀಜಿಗಳು ನಡೆದುಕೊಂಡು ಬಂದು ಕನಕನ ಕಿಂಡಿಯಲ್ಲಿ 4:30ಕ್ಕೆ ಶ್ರೀ ಕೃಷ್ಣದೇವರ ದರ್ಶನ ಮಾಡಿ ನವಗ್ರಹ ದಾನ ನೀಡಿ ಚಂದ್ರಮೌಳೀಶ್ವರ ಮತ್ತು ಅನಂತೇಶ್ವರ ದೇವರ ದರ್ಶನ ಪಡೆದರು. ಅನಂತೇಶ್ವರದಲ್ಲಿ ಶ್ರೀ ಮಧ್ವಾಚಾರ್ಯರ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಸಿದರು. ಶ್ರೀ ಕೃಷ್ಣ ಮಠದ ಮುಂಭಾಗದಲ್ಲಿ 5:25 ಕ್ಕೆ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಎಲ್ಲ ಶ್ರೀಗಳನ್ನು ಸ್ವಾಗತಿಸಿದರು.

udupi paryaya 6

ಶ್ರೀಕೃಷ್ಣ ದೇವರ ದರ್ಶನ ಪಡೆದು ಕೃಷ್ಣಾಪುರ ಮಠದ ಪಟ್ಟದ ದೇವರಿಗೆ ಮಂಗಳಾರತಿ ಬೆಳಗಿ ಚಂದ್ರಶಾಲೆಯಲ್ಲಿ ಪರ್ಯಾಯ ಅದಮಾರು ಮಠದ ವತಿಯಿಂದ ಮಾಲಿಕೆ ಮಂಗಳಾರತಿ ನಡೆಯಿತು. ಮಧ್ವಾಚಾರ್ಯರ ಸನ್ನಿಧಿಯ ಎದುರು ಅದಮಾರು ಮಠಾಧೀಶರು ಕೃಷ್ಣಾಪುರ ಮಠಾಧೀಶರಿಗೆ 5:45 ಕ್ಕೆ ಅಕ್ಷಯ ಪಾತ್ರೆ, ಸಟ್ಟುಗ ಹಸ್ತಾಂತರ ಮಾಡಿದರು. ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ಚತುರ್ಥ ಬಾರಿ ಸರ್ವಜ್ಞ ಪೀಠಾರೋಹಣ ಮಾಡಿದರು. ಪರ್ಯಾಯ ಶ್ರೀಗಳಿಂದ ಬಡಗುಮಾಳಿಗೆಯ ಅರಳು ಗದ್ದುಗೆ ವಿಧಿ ನಡೆಯಿತು. ಇದನ್ನೂ ಓದಿ: ಕೋವಿಡ್ ಕಾಲಘಟ್ಟದಲ್ಲಿ ಸರಳ ಪರ್ಯಾಯ: ಕೃಷ್ಣಾಪುರ ವಿದ್ಯಾಸಾಗರ ತೀರ್ಥ ಸ್ವಾಮೀಜಿ

udupi paryaya 1

ಅರಳಿನ ಗದ್ದಿಗೆ ಮೇಲೆ ಪರಸ್ಪರ ಸ್ವಾಮಿಗಳು ಗಂದಾದ್ಯುಪಚಾರ, ಅಷ್ಟ ಮಠಾಧೀಶರಿಂದ ಪಟ್ಟಕಣಿಕೆ ಹಾಗೂ ಮಾಲಿಕೆ ಮಂಗಳಾರತಿ ನಡೆಯಿತು. ಈ ಸಂದರ್ಭ ಎಲ್ಲ ಸ್ವಾಮೀಜಿಗಳು ಉಭಯ ಕುಶಲೋಪರಿಯಲ್ಲಿ ತೊಡಗಿದರು. 6:45 ಕ್ಕೆ ಸರಿಯಾಗಿ ಪರ್ಯಾಯ ದರ್ಬಾರ್ ನಡೆಯಿತು. ಸಾರ್ವಜನಿಕರು ಮಠದ ಭಕ್ತರು ದರ್ಬಾರ್ ಸಭೆಯಲ್ಲಿ ಭಾಗಿಯಾದರು. ನಾಲ್ಕನೇ ಸುತ್ತಿನ ಪರ್ಯಾಯ ಪೀಠಾಧಿಪತಿ ಕೃಷ್ಣಾಪುರ ಸ್ವಾಮೀಜಿ ದರ್ಬಾರ್ ಸಭೆ ಮುಗಿಸಿ ನೂತನ ಶ್ರೀಕೃಷ್ಣನಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಿದರು.

TAGGED:AlternateKrishna MathaMadhvacharyaSri Krishnaudupiಉಡುಪಿಕೃಷ್ಣಮಠಪರ್ಯಾಯಮಧ್ವಾಚಾರ್ಯರುಶ್ರೀಕೃಷ್ಣ
Share This Article
Facebook Whatsapp Whatsapp Telegram

Cinema news

darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru City Cinema Court Latest Main Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories

You Might Also Like

aadhaar has only photo and qr code pib calls this report fake news
Latest

ಆಧಾರ್‌ನಲ್ಲಿ ಕೇವಲ ಫೋಟೋ, ಕ್ಯೂಆರ್‌ ಕೋಡ್‌ – ಈ ವರದಿ ಫೇಕ್‌ ನ್ಯೂಸ್‌ ಎಂದ ಪಿಐಬಿ

Public TV
By Public TV
10 minutes ago
Hassan Illicit Relation Murder
Crime

ಲೈಂಗಿಕ ಕ್ರಿಯೆಗೆ ಒಪ್ಪದಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ – ಕಳ್ಳಸಂಬಂಧ ಕೊಲೆಯಲ್ಲಿ ಅಂತ್ಯ

Public TV
By Public TV
29 minutes ago
Kolar Forest Fire
Crime

ಕೋಲಾರದ ಅಂತರಗಂಗೆ ತಪ್ಪಲಿನಲ್ಲಿ ಬೆಂಕಿ – ಅಪಾರ ಪ್ರಮಾಣದ ಅರಣ್ಯ ನಾಶ

Public TV
By Public TV
39 minutes ago
DK Shivakumar
Districts

ಡಿಕೆಶಿ, ಕಿಚ್ಚ ಸುದೀಪ್‌ ಭಾಗವಹಿಸಿದ್ದ ಕಾರ್ಯಕ್ರಮದ ವೇದಿಕೆಯಲ್ಲಿ ಬೆಂಕಿ ಅವಘಡ – ತಪ್ಪಿದ ದುರಂತ

Public TV
By Public TV
58 minutes ago
Sudeep 2
Districts

ಡಿಕೆಶಿ ಲ್ಯಾಂಡ್‌ ಆಗಬೇಕಿದ್ದ ಸ್ಥಳದಲ್ಲಿ ಸುದೀಪ್ ಹೆಲಿಕಾಪ್ಟರ್ ಲ್ಯಾಂಡಿಗ್‌ – ಅಧಿಕಾರಿಗಳಲ್ಲಿ ಕೆಲಕಾಲ ಆತಂಕ

Public TV
By Public TV
1 hour ago
BWSSB Bengaluru Water Board
Bengaluru City

ಜಲಮಂಡಳಿಯ ಒನ್ ಟೈಮ್ ಸೆಟಲ್ಮೆಂಟ್ ಯೋಜನೆಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?