ದೇವರಹಿಪ್ಪರಗಿ ಬಿಜೆಪಿ ಶಾಸಕನ ಜೊತೆಗೆ ವಾಗ್ವಾದ – ನಮಗೆ ಸ್ಪಂದಿಸ್ತಿಲ್ಲ ಎಂದು ಕಾರ್ಯಕರ್ತರ ಆಕ್ರೋಶ

Public TV
1 Min Read
BIJ BJP 1

ವಿಜಯಪುರ: ದೇವರಹಿಪ್ಪರಗಿ ಮತಕ್ಷೇತ್ರದ ಬಿಜೆಪಿಯಲ್ಲಿ ಆಂತರಿಕ ಕಲಹ ಸ್ಫೋಟವಾಗಿದೆ.

BIJ BJP 2

ದೇವರಹಿಪ್ಪರಗಿ ಕ್ಷೇತ್ರದ ಬಿಜೆಪಿ ಶಾಸಕ ಸೋಮನಗೌಡ ಪಾಟೀಲ್ ಸಾಸನೂರ ಹಾಗೂ ಬಿಜೆಪಿ ಮಂಡಳ ಉಪಾಧ್ಯಕ್ಷ ಹಾಗೂ ಶಾಸಕರ ಬೆಂಬಲಿಗರ ನಡುವೆ ನಡುರಸ್ತೆಯಲ್ಲೆ ವಾಗ್ವಾದ ನಡೆದಿದೆ. ಮಂಗಳವಾರ ಸಂಜೆ ಈ ಘಟನೆ ನಡೆದಿದೆ. ಇದನ್ನೂ ಓದಿ: ಮಂಗಳೂರು ಕಾಂಗ್ರೆಸ್ ಸಭೆಯಲ್ಲಿ ಹೈಡ್ರಾಮಾ – ಸದಸ್ಯರನ್ನೇ ಹೊರಹಾಕಿದ ನಾಯಕರು

BIJ BJP 3

ವಾಗ್ವಾದದ ನಂತರ ಕೈ ಕೈ ಮೀಲಾಯಿಸೋ ಹಂತಕ್ಕೂ ಹೋಗಿದೆ. ಶಾಸಕ ಸೋಮನಗೌಡ ಸ್ಥಳೀಯ ಬಿಜೆಪಿ ಕಾರ್ಯಕರ್ತರನ್ನು ಪರಿಗಣನೆಗೆ ತೆಗೆದುಕೊಳ್ಳುತ್ತಿಲ್ಲ. ನಮ್ಮ ಕರೆಗಳನ್ನು ಸ್ವೀಕರಿಸಲ್ಲ ಎಂದು ಮುತ್ತುರಾಜ ಆರೋಪ ಮಾಡಿದ್ದಾನೆ. ಬಿಜೆಪಿ ಮಂಡಲ ಉಪಾಧ್ಯಕ್ಷ ಮುತ್ತುರಾಜ ಹಾಲಿಹಾಳನ ಈ ಮಾತಿಗೆ ಶಾಸಕರ ಬೆಂಬಲಿಗರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಆಗ ಪರಸ್ಪರ ಮಾತಿನ ಚಕಮಕಿ, ವಾಗ್ವಾದ ನಡೆದಿದೆ.

BIJ BJP

ಕೆಲಕಾಲ ಸಹನೆ ಕಳೆದುಕೊಂಡ ಶಾಸಕ ಸೋಮನಗೌಡ ಪಾಟೀಲ್ ಸಾಸನೂರ ಕೂಡ ವಾಗ್ವಾದಕ್ಕೆ ಇಳಿದಿದ್ದಾರೆ. ನಂತರ ಪರಿಸ್ಥಿತಿಯನ್ನು ಸ್ಥಳದಲ್ಲಿದ್ದ ಮುಖಂಡರು ತಿಳಿಗೊಳಿಸಿದ್ದಾರೆ. ಇದನ್ನೂ ಓದಿ: ಮುದ್ದಿನ ಮಗಳು ಸಮನ್ವಿಯ ಲಾಸ್ಟ್ ಕಿಸ್ ಹಂಚಿಕೊಂಡ ನಟಿ ಅಮೃತಾ

Share This Article
Leave a Comment

Leave a Reply

Your email address will not be published. Required fields are marked *