Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Chamarajanagar

ಅವಧಿ ಮೀರಿ ವಾಸಗೃಹದಿಂದ ಕುಟುಂಬ ಹೊರಹಾಕಿದ್ದ ಪ್ರಕರಣ ಸುಖಾಂತ್ಯ – ಮೃತ ನೌಕರನ ಪುತ್ರನಿಗೆ ಗುತ್ತಿಗೆ ನೌಕರಿ

Public TV
Last updated: January 23, 2022 7:53 pm
Public TV
Share
2 Min Read
Malai Mahadeshwara Swamy Contractor
SHARE

ಚಾಮರಾಜನಗರ: ಅವಧಿ ಮೀರಿ ವಾಸವಿದ್ದ ಕಾರಣಕ್ಕೆ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ವಸತಿಗೃಹದಿಂದ ಕುಟುಂಬವೊಂದನ್ನು ಹೊರಹಾಕಲ್ಪಟ್ಟಿದ್ದ ಪ್ರಕರಣ ಸುಖಾಂತ್ಯಗೊಂಡಿದೆ. ಮೃತ ನೌಕರನ ಪುತ್ರನಿಗೆ ಗುತ್ತಿಗೆ ನೌಕರಿ ಕೊಡಲು ತೀರ್ಮಾನಿಸಲಾಗಿದೆ.

ಕಳೆದ ಎಂಟು ದಿನಗಳಿಂದ ಬೀದಿಗೆ ಬಿದ್ದಿದ್ದ ಕುಟುಂಬಕ್ಕೆ ತಾತ್ಕಾಲಿಕ ವಸತಿ ಗೃಹ ಸೌಲಭ್ಯ ನೀಡಲು ಹಾಗೂ ಮೃತ ನೌಕರನ ಪುತ್ರ ಶಾಂತಮಲ್ಲೇಶ್ ಅವರಿಗೆ ಗುತ್ತಿಗೆ ಆಧಾರದ ಮೇಲೆ ಕೆಲಸ ನೀಡಲು ತೀರ್ಮಾನಿಸಲಾಗಿದೆ. ಪ್ರಾಧಿಕಾರದ ನೌಕರ ಜಯಸ್ವಾಮಿ 2019 ರಲ್ಲಿ ಮೃತಪಟ್ಟಿದ್ದರು. ಆದರೆ ಅವರ ಕುಟುಂಬದವರು ಪ್ರಾಧಿಕಾರದ ವಸತಿಗೃಹದಲ್ಲೇ ವಾಸ ಮುಂದುವರಿಸಿದ್ದರು. ಇದನ್ನೂ ಓದಿ:  ನೇತಾಜಿ ಕಾರ್ಯಕ್ರಮದಲ್ಲಿ TMC, BJP ಬೆಂಬಲಿಗರ ನಡುವೆ ಘರ್ಷಣೆ – ಕಲ್ಲು ತೂರಾಟ, 2 ಕಾರು ಧ್ವಂಸ

Malai Mahadeshwara Swamy Contractor 2

ಜಯಸ್ವಾಮಿ ಅವರ ಮರಣಾನಂತರ ನೀಡಬೇಕಿದ್ದ ಬಾಕಿ ಇರುವ ಗ್ರಾಚ್ಯುಯಿಟಿ, ಪಿಎಫ್ ಹಣ ನೀಡಬೇಕು. ಅನುಕಂಪದ ಆಧಾರದ ಮೇಲೆ ನೌಕರಿ ನೀಡಬೇಕು ಎಂದು ಪಟ್ಟು ಹಿಡಿದಿದ್ದರು. ಆದರೆ ನಿಯಮಾನುಸಾರ ವಸತಿ ಗೃಹ ಖಾಲಿ ಮಾಡಬೇಕು. ನಂತರವಷ್ಟೇ ಇತ್ಯರ್ಥಪಡಿಸುವುದಾಗಿ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದರು. ಅಲ್ಲದೆ ವಸತಿಗೃಹ ಖಾಲಿ ಮಾಡುವಂತೆ ನೋಟೀಸ್ ಸಹ ನೀಡಿದ್ದರು.

ನೋಟೀಸ್‍ಗೆ ಸ್ಪಂದಿಸದ ಕಾರಣ ಜ.14 ರಂದು ವಸತಿಗೃಹ ಖಾಲಿ ಮಾಡಿಸಿ ಬೀಗಮುದ್ರೆ ಹಾಕಲಾಗಿತ್ತು. ಇದಾದ ಬಳಿಕ ನಿರಾಶ್ರಿತರದ ಮೃತ ನೌಕರನ ಕುಟುಂಬದವರು ಪಾತ್ರೆಪಗಡಗಳೊಂದಿಗೆ ಬೀದಿಯಲ್ಲೇ ಕಾಲಕಳೆದಿದ್ದರು. ಈ ಸಂಬಂಧ ಪ್ರಾಧಿಕಾರದ ಅಧಿಕಾರಿಗಳು ಸಂತ್ರಸ್ತ ಕುಟುಂಬದವರು, ನೌಕರರ ಸಂಘದ ಪದಾಧಿಕಾರಿಗಳು ಹಾಗೂ ವೀರಶೈವ ಲಿಂಗಾಯತ ಜಿಲ್ಲಾ ಘಟಕದ ಪದಾಧಿಕಾರಿಗಳೊಂದಿಗೆ ಸಂಧಾನ ಸಭೆ ನಡೆಸಿದರು.

ಈ ಕುರಿತು ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಈ ಹಿಂದೆ ದಿವಂಗತ ಜಯಸ್ವಾಮಿ ಅವರ ಮಗ ಶಾಂತಮಲ್ಲೇಶ್ ಹೊರಗುತ್ತಿಗೆಯಲ್ಲಿ ಸುಮಾರು 3-4 ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದರು. ಆದರೆ ಸಮರ್ಪಕವಾಗಿ ಕೆಲಸ ನಿರ್ವಹಿಸದ ಹಾಗೂ ಕೆಲಸದ ಒತ್ತಡ ಇಲ್ಲದ್ದರಿಂದ ಕಳೆದ ಒಂದು ವರ್ಷದಲ್ಲಿ ಕೆಲವರನ್ನು ಕೆಲಸದಿಂದ ಕೈಬಿಡಲಾಗಿತ್ತು. ಅದರಲ್ಲಿ ಇವರೂ ಒಬ್ಬರಾಗಿದ್ದು, ಇದೀಗ ಅವರಿಗೆ ತಾತ್ಕಾಲಿಕವಾಗಿ ಹೊರಗುತ್ತಿಗೆ ಆಧಾರದಲ್ಲಿ ಸೇವೆ ಪಡೆಯಲಾಗುವುದು ಎಂದು ಭರವಸೆ ನೀಡಿದರು.

Malai Mahadeshwara Swamy Contractor 1

ಪಿಎಫ್ ಮೊತ್ತವನ್ನು ಪಡೆಯಲು ಬೇಕಾದ ದಾಖಲೆಗಳನ್ನು ಕುಟುಂಬಕ್ಕೆ ಕೋರಿದರೂ ಈವರೆಗೆ ಸಲ್ಲಿಸಿಲ್ಲ. ಅಗತ್ಯ ದಾಖಲೆಗಳನ್ನು ಸಲ್ಲಿಸಿದ ನಂತರ ಸಂಬಂಧಿತ ಸಂಸ್ಥೆಯಿಂದ ಆದಷ್ಟು ಬೇಗ ಬಿಡುಗಡೆ ಮಾಡಲು ಕೋರಿ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

ತಾತ್ಕಾಲಿಕ ನೆಲೆಗಟ್ಟಿನಲ್ಲಿ ಈ ಹಿಂದೆ ತಾತ್ಕಾಲಿಕ ವಸತಿ ಗೃಹವನ್ನು ದಿ.ಜಯಸ್ವಾಮಿ ಅವರ ಮಗನಿಗೆ ನೀಡಲಾಗಿತ್ತು. ಅದನ್ನು ತಿರಸ್ಕರಿಸಿದ್ದರು. ಈಗ ಮತ್ತೆ ತಾತ್ಕಾಲಿಕ ನೆಲೆಗಟ್ಟಿನಲ್ಲಿ ತಾತ್ಕಾಲಿಕ ವಸತಿ ಕಲ್ಪಿಸಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ಸಲ್ಮಾನ್ ಫಾರ್ಮ್‍ಹೌಸ್‍ನಲ್ಲಿ ಸೆಲೆಬ್ರಿಟಿಗಳ ಶವ, ಮಕ್ಕಳ ಕಳ್ಳ ಸಾಗಾಣಿಕೆ ನಡೆಯುತ್ತೆ ಎಂದ ನೆರೆಮನೆಯವ!

vlcsnap 2022 01 23 19h12m44s926

ಸಂತ್ರಸ್ತ ಕುಟುಂಬಸ್ಥರು ಇದಕ್ಕೆ ಒಪ್ಪಿಗೆ ಸೂಚಿಸಿದ್ದು, ವಸ್ತುಗಳನ್ನು ಸ್ಥಳಾಂತರಿಸಿ ಪ್ರಾಧಿಕಾರದ ತಾತ್ಕಾಲಿಕ ವಸತಿ ಗೃಹಕ್ಕೆ ಇಂದು ತೆರಳಿದ್ದಾರೆ. ಈಗಾಗಲೇ ಗ್ರಾಚುಯಿಟಿ ಹಣದಲ್ಲಿ ರೂ.3.11 ಲಕ್ಷ ಪಾವತಿಸಲಾಗಿದೆ. ಉಳಿಕೆ ಹಣ ರೂ. 1.35 ಲಕ್ಷದಲ್ಲಿ ಬಾಡಿಗೆ ಹಣ ತೆಗೆದುಕೊಂಡು ಉಳಿದ ಹಣವನ್ನು ಪಾವತಿಸಲು ಕೊರಿದ್ದು, ಕೂಡಲೇ ಕ್ರಮವಹಿಸಲಾಗುವುದು ಎಂದರು.

ಈ ಪ್ರಕರಣದಲ್ಲಿ ಪ್ರಾಧಿಕಾರವು ನಿಯಮಾನುಸಾರ ಕ್ರಮ ಕೈಗೊಂಡಿದೆ. ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಅಕ್ರಮವಾಗಿ ವಾಸವಿರುವವರನ್ನು ಖಾಲಿ ಮಾಡುವ ವಿಚಾರದಲ್ಲಿ ಪ್ರಾಧಿಕಾರದ ಗಮನಕ್ಕೆ ತರಲಾಗುವುದು. ನೌಕರರ ಸಂಘದವರೊಡನೆ ಸಹಾ ಚರ್ಚಿಸಿ ಇತ್ಯರ್ಥ ಪಡಿಸಲಾಗುವುದು ಹಾಗೂ ಖಾಯಂ ವಸತಿ ಗೃಹಗಳನ್ನು ಖಾಯಂ ನೌಕರರಿಗೆ ಹಂಚಿಕೆ ಮಾಡಲಾಗುವುದು ಎಂದು ವಿವರಿಸಿದರು.

TAGGED:chamarajanagarcontractorMalai Mahadeshwara Swamyಗುತ್ತಿಗೆ ನೌಕರಿಚಾಮರಾಜನಗರಮಲೈ ಮಹದೇಶ್ವರಸ್ವಾಮಿ
Share This Article
Facebook Whatsapp Whatsapp Telegram

Cinema Updates

rakshak bullet
ಸತ್ಯ ಒಪ್ಪಿಕೊಂಡ ರಕ್ಷಕ್: ಆಡಿಯೋ ವೈರಲ್ ಬಗ್ಗೆ ಹೇಳಿದ್ದೇನು?
Bengaluru City Cinema Districts Latest Top Stories
ramya 5 2
ನಿಮ್ಮಿಂದಲೇ ಹೆಣ್ಮಕ್ಕಳಿಗೆ ದೌರ್ಜನ್ಯ – ದರ್ಶನ್‌ ಫ್ಯಾನ್ಸ್‌ ವಿರುದ್ಧ ರಮ್ಯಾ ಕೆಂಡಾಮಂಡಲ
Bengaluru City Cinema Latest Main Post
Rashmika Mandannas New Film Mysaa Launched with a Traditional Pooja Muhurta program 2
ರಶ್ಮಿಕಾ ಮಂದಣ್ಣ ನಟನೆಯ ಮೈಸಾ ಚಿತ್ರಕ್ಕೆ ಮುಹೂರ್ತ- ಗೋಂಡ್ ಹಾಡಿಗೆ ಡಾನ್ಸ್
Cinema Latest South cinema
Darshan The Devil
ʼದಿ ಡೆವಿಲ್ʼ ಶೂಟಿಂಗ್ ಮುಕ್ತಾಯ : ಪೋಸ್ಟ್ ಪ್ರೊಡಕ್ಷನ್ ವರ್ಕ್ ಶುರು
Cinema Latest Sandalwood Top Stories
just married
ಶೈನ್ ಶೆಟ್ಟಿಯ ಜಸ್ಟ್ ಮ್ಯಾರೀಡ್‌ಗೆ ಡೇಟ್ ಫಿಕ್ಸ್
Cinema Latest Sandalwood Top Stories

You Might Also Like

IND vs ENG 4th test Ben Stokes offers a draw India denies and continues to bat
Cricket

ಬೆನ್‌ ಸ್ಟೋಕ್ಸ್‌ ಡ್ರಾ ಆಫರ್‌ ರಿಜೆಕ್ಟ್‌ – ಬ್ಯಾಟಿಂಗ್‌ ಮುಂದುವರಿಸಿ ಚಮಕ್‌ ಕೊಟ್ಟ ಜಡೇಜಾ, ಸುಂದರ್‌

Public TV
By Public TV
8 hours ago
Mallikarjun Kharge 3
Districts

ಕಷ್ಟ ಪಟ್ಟಿದ್ದು ನಾನು, ಕೃಷ್ಣ ಸಿಎಂ ಆದ್ರು – ಮುಖ್ಯಮಂತ್ರಿ ಸ್ಥಾನ ಸಿಗದಿದ್ದಕ್ಕೆ ಖರ್ಗೆ ಬಹಿರಂಗ ಬೇಸರ

Public TV
By Public TV
8 hours ago
Ravindra Jadeja Washington Sundar
Cricket

ಜಡೇಜಾ, ಸುಂದರ್‌ ಅಜೇಯ ಶತಕ – ಡ್ರಾದಲ್ಲಿ ಟೆಸ್ಟ್‌ ಅಂತ್ಯ

Public TV
By Public TV
8 hours ago
Chikkamagaluru Elephant Attack
Chikkamagaluru

ಚಿಕ್ಕಮಗಳೂರು | ಆನೆ ದಾಳಿಗೆ ವೃದ್ಧ ಬಲಿ – 4 ದಿನಗಳ ಅಂತರದಲ್ಲಿ ಇಬ್ಬರು ಸಾವು

Public TV
By Public TV
9 hours ago
turmeric leaves Kadabu
Food

Nagara Panchami 2025 –  ಹಬ್ಬಕ್ಕೆ ಸ್ಪೆಷಲ್‌ ಸಾಂಪ್ರದಾಯಿಕ ಅರಿಶಿನ ಎಲೆಯ ಸಿಹಿ ಕಡುಬು ಮಾಡಿ ಸವಿಯಿರಿ

Public TV
By Public TV
9 hours ago
Lakshmi Hebbalkar
Belgaum

ರಾಹುಲ್‌ ಗಾಂಧಿ ಜೊತೆ ಯುವಕರು ಸೈನಿಕರಾಗಿ ಕೆಲಸ ಮಾಡಬೇಕು: ಲಕ್ಷ್ಮಿ ಹೆಬ್ಬಾಳ್ಕರ್

Public TV
By Public TV
9 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?