Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬಿಜೆಪಿಯಲ್ಲಿ ಉಸ್ತುವಾರಿ ಸಚಿವರ ಕಿತ್ತಾಟ – ಮಾಧುಸ್ವಾಮಿ, ಸೋಮಣ್ಣ, ಎಂಟಿಬಿಗೆ ಅಸಮಾಧಾನ

Public TV
Last updated: January 25, 2022 12:24 pm
Public TV
Share
1 Min Read
BJP MINISTERS
SHARE

ಬೆಂಗಳೂರು: ಬಿಜೆಪಿ ಸರ್ಕಾರ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಮಾಡಿದ ಬೆನ್ನಲ್ಲೇ ಕೆಲ ಸಚಿವರು ಅಸಮಾಧಾನ ಹೊರಹಾಕಿದ್ದಾರೆ. ಪ್ರಮುಖವಾಗಿ ಸಚಿವರಾದ ಎಂಟಿಬಿ ನಾಗರಾಜ್, ವಿ.ಸೋಮಣ್ಣ, ಮಾಧುಸ್ವಾಮಿ ಸೇರಿದಂತೆ ಕೆಲ ಸಚಿವರು ಕ್ಯಾತೆ ತೆಗೆದಿದ್ದಾರೆ.

basvaraj bommai

ಚಿಕ್ಕಬಳ್ಳಾಪುರ ಉಸ್ತುವಾರಿಗೆ ಸಚಿವರಾಗಿರುವ ಎಂಟಿಬಿ ನಾಗರಾಜ್ ನನಗೆ ಬೆಂಗಳೂರು ಗ್ರಾಮಾಂತರದ ಉಸ್ತುವಾರಿ ಬೇಕೆಂದು ಪಟ್ಟು ಹಿಡಿದಿದ್ದಾರೆ. ಅಲ್ಲದೆ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮಾತುಕತೆ ಕೂಡ ನಡೆಸಿದ್ದಾರೆ. ಇನ್ನೊಂದೆಡೆ ಜಿಲ್ಲೆಯ ಪೂರ್ವಾಪರ ಗೊತ್ತಿಲ್ಲದೆ ಜವಾಬ್ದಾರಿ ನಿರ್ವಹಿಸಲು ಇಷ್ಟ ಇಲ್ಲ. ಸಿಎಂ ನನ್ನ ಜೊತೆ ಮಾತಾಡಿಯೇ ನಿರ್ಧಾರ ತೆಗೆದುಕೊಂಡಿದ್ದಾರೆ. ಉಸ್ತುವಾರಿ ಕೈತಪ್ಪಿದ್ದಕ್ಕೆ ಯಾವುದೇ ರಾಜಕೀಯ ಇಲ್ಲ. ಏನೂ ಗೊತ್ತಿಲ್ಲದ ಜಿಲ್ಲೆಗೆ ಹೋಗಿ ಏನು ಪ್ರಯೋಜನ..? ಹೀಗಾಗಿ ಬೇರೆ ಜಿಲ್ಲೆಗೆ ಹೋಗಲು ನಿರಾಕರಿಸಿದ್ದೇನೆ. ತುಮಕೂರು ಉಸ್ತುವಾರಿ ಕೊಟ್ಟಿದ್ರೆ ಒಳ್ಳೇ ಕೆಲಸ ಮಾಡಬಹುದಿತ್ತು ಎಂದು ಸಚಿವ ಮಾಧುಸ್ವಾಮಿ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಬೆಂಗಳೂರು ನಗರಕ್ಕೆ ಸಿಎಂ ಸೇರಿ ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ ಪ್ರಕಟ – ಯಾರಿಗೆ ಯಾವ ಜಿಲ್ಲೆ?

ಉಸ್ತುವಾರಿ ಹಂಚಿಕೆ ವಿಚಾರವಾಗಿ ಸಚಿವ ಸೋಮಣ್ಣ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ನಾನೂ ಬೆಂಗಳೂರು ಉಸ್ತುವಾರಿ ಕೇಳಿದ್ದೆ ಅದು ಯಾರಿಗೂ ಕೊಟ್ಟಿಲ್ಲ. ಆದರೆ ಬೇರೆ ಯಾರಿಗೂ ಕೊಟ್ಟಿಲ್ಲ ಅಂದ್ರೆ ಅದು ಸಿಎಂ ಬಳಿ ಇರೋದೇ ಸೂಕ್ತ. ವರಿಷ್ಠರ ಸೂಚನೆ ಮೇರೆಗೆ ಸಿಎಂ ಈ ನಿರ್ಧಾರ ಮಾಡಿದ್ದಾರೆ. ಬೇರೆ ಬೇರೆ ರಾಜ್ಯಗಳಲ್ಲಿ ಈ ರೀತಿಯ ಪ್ರಯೋಗ ಮಾಡಲಾಗಿದೆ. ಅದರಂತೆ ನಮ್ಮಲ್ಲೂ ಮಾಡಿದ್ದಾರೆ. ಈ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ. ವರಿಷ್ಠರು, ಹೈಕಮಾಂಡ್ ತೀರ್ಮಾನ ಮಾಡಿ ಹಂಚಿಕೆ ಮಾಡಿದ್ದಾರೆ. ಯಾವ ಲೆಕ್ಕಾಚಾರದಲ್ಲಿ ಬೇರೆ ಬೇರೆ ಜಿಲ್ಲೆ ಹಂಚಿಕೆ ಮಾಡಲಾಗಿದೆ ಗೊತ್ತಿಲ್ಲ ಆದರೆ ತವರು ಜಿಲ್ಲೆ ಸಿಕ್ಕಿಲ್ಲ ಅಂದಮೇಲೆ ಬೆಂಗಳೂರು ನಗರ ಉಸ್ತುವಾರಿ ಸಿಎಂ ಬಳಿ ಇರೋದೇ ಸೂಕ್ತ ಎಂದು ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಸೋಮಣ್ಣ ಮಾತನಾಡಿದ್ದಾರೆ. ಇದನ್ನೂ ಓದಿ: ವರಿಷ್ಠರ ಸೂಚನೆ ಮೇರೆಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಸೋಮಣ್ಣ

TAGGED:Basavaraj BommaiMadhuswamymtb nagarajV.Somannaಎಂಟಿಬಿ ನಾಗಾರಾಜ್ಮಾಧುಸ್ವಾಮಿವಿ.ಸೋಮಣ್ಣ
Share This Article
Facebook Whatsapp Whatsapp Telegram

Cinema Updates

Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
1 hour ago
Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
20 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
20 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
21 hours ago

You Might Also Like

Raichur PDO
Districts

ಕಾಮಗಾರಿ, ಸಾಮಗ್ರಿಗಳ ಖರೀದಿ ಬಿಲ್‌ನಲ್ಲಿ ಲಕ್ಷ ಲಕ್ಷ ಹಣ ಗೋಲ್ಮಾಲ್‌ – ಇಬ್ಬರು ಪಿಡಿಓ ಅಮಾನತು

Public TV
By Public TV
25 minutes ago
Pratik Joshi Family
Latest

ಲಂಡನ್‌ನಲ್ಲಿ ಭವಿಷ್ಯದ ಕನಸು ಕಟ್ಟಿ ವಿಮಾನದಲ್ಲಿ ಹಾರಿದ್ದ ಒಂದೇ ಕುಟುಂಬದ ಐವರು ದುರಂತ ಅಂತ್ಯ

Public TV
By Public TV
35 minutes ago
Modi
Latest

Ahmedabad | ವಿಮಾನ ದುರಂತ ನಡೆದ ಸ್ಥಳಕ್ಕೆ ಇಂದು ಮೋದಿ ಭೇಟಿ

Public TV
By Public TV
1 hour ago
bus accident
Bengaluru Rural

ತಿರುಪತಿಯಿಂದ ಬರುತ್ತಿದ್ದ ಆಂಧ್ರ ಬಸ್‌, ಲಾರಿ ನಡುವೆ ಭೀಕರ ಅಪಘಾತ – ಮೂವರು ಸ್ಥಳದಲ್ಲೇ ಸಾವು

Public TV
By Public TV
2 hours ago
Ahmedabad Planecrash 5
Latest

ಅಹಮದಾಬಾದ್‌ ವಿಮಾನ ದುರಂತದಲ್ಲಿ 241 ಮಂದಿ ಸಾವು, ಪವಾಡ ಸದೃಶವಾಗಿ ಏಕೈಕ ಪ್ರಯಾಣಿಕ ಪಾರು: ಏರ್‌ ಇಂಡಿಯಾ

Public TV
By Public TV
2 hours ago
pat cummins
Cricket

ಕಮ್ಮಿನ್ಸ್‌ ಬೆಂಕಿ ಬೌಲಿಂಗ್‌ – 218 ರನ್‌ ಮುನ್ನಡೆಯಲ್ಲಿ ಆಸ್ಟ್ರೇಲಿಯಾ

Public TV
By Public TV
10 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?