ಕೈ ತಪ್ಪಿದ್ದಕ್ಕೆ ಅಸಮಾಧಾನ ಇಲ್ಲ, ತುಮಕೂರು ಸಿಕ್ಕಿದ್ರೆ ಖುಷಿಯಾಗ್ತಿತ್ತು: ಮಾಧುಸ್ವಾಮಿ

Public TV
1 Min Read
madhuswamy 1

ತುಮಕೂರು: ನನಗೆ ಉಸ್ತುವಾರಿ ತಪ್ಪಿದ್ದರಿಂದ ಯಾವುದೇ ರೀತಿಯ ಅಸಮಾಧಾನವಿಲ್ಲ. ಆದರೆ ತುಮಕೂರು ಕೊಟ್ಟಿದ್ರೆ ಸಂತೋಷವಾಗುತ್ತಿತ್ತು ಎಂದು ಜೆ.ಸಿ.ಪುರದ ನಿವಾಸದಲ್ಲಿ ಸಚಿವ ಮಾಧುಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

ಉಸ್ತುವಾರಿ ಹಂಚಿಕೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನಗೆ ಉಸ್ತುವಾರಿ ತಪ್ಪಿದ್ದರಿಂದ ಯಾವುದೇ ರೀತಿಯ ಅಸಮಾಧಾನವಿಲ್ಲ. ಆದರೆ ತುಮಕೂರು ಜಿಲ್ಲೆ ಕೊಟ್ಟಿದ್ರೆ ಸಂತೋಷ ಆಗ್ತಿತ್ತು. ಇನ್ನು ಏಳೆಂಟು ತಿಂಗಳಲ್ಲಿ ಚುನಾವಣೆ ಪರ್ವ ಪ್ರಾರಂಭವಾಗುತ್ತೆ. ಬೇರೆ ಜಿಲ್ಲೆಗೆ ಹೋಗಿ ನಾವು ಏನೂ ಮಾಡಕಾಗಲ್ಲ. ತವರು ಜಿಲ್ಲೆ ಉಸ್ತುವಾರಿ ಕೊಡದೇ ಇರುವುದು ಒಂದು ಹೊಸ ಪ್ರಯೋಗ. ಇದನ್ನು ರಾಮಕೃಷ್ಣ ಹೆಗಡೆ ಅವರ ಕಾಲದಲ್ಲಿ ಮಾಡಿದ್ರು. ಆಗ ಅದು ವಿಫಲ ಆಯ್ತು ಎಂದು ವಿವರಿಸಿದರು. ಇದನ್ನೂ ಓದಿ: ಬೊಮ್ಮಾಯಿ ಸರ್ಕಾರಕ್ಕೆ 6 ತಿಂಗಳು – ರಿಪೋರ್ಟ್ ಕಾರ್ಡ್ ತರಿಸಿಕೊಂಡ ಹೈಕಮಾಂಡ್!

ತುಮಕೂರು; ಪ್ರಸಾದ ಸೇವಿಸಿ ಓರ್ವ ಬಾಲಕ ಸಾವು, 20 ಮಂದಿ ಅಸ್ವಸ್ಥ | udayavani

ಬೇರೆ ಜಿಲ್ಲೆಯಲ್ಲಿ ಸ್ಥಳೀಯ ಸಮಸ್ಯೆಗಳ ಬಗ್ಗೆ ಗೊತ್ತಾಗದೇ ಇರೋದ್ರಿಂದ, ಅಲ್ಲಿ ನಾವು ಬೇರೆಯವರ ಮೇಲೆ ಅವಲಂಬನೆಯಾಗ ಬೇಕಾಗುತ್ತೆ. ಇಲ್ಲ ಅಂದ್ರೆ ಅಧಿಕಾರಿಗಳು ಹೇಳಿದ ಹಾಗೆ ಕೇಳಬೇಕಾಗುತ್ತೆ. ಆರಂಭದಲ್ಲಿ ಹಾಸನ ಜಿಲ್ಲೆ ಉಸ್ತುವಾರಿ ಕೆಲಸ ಮಾಡಿದ್ದೆ, ಅದು ಹತ್ತಿರದ ಜಿಲ್ಲೆ ಅಂತಾ ಮಾಡಿದ್ದೆ. ತುಮಕೂರು ಜಿಲ್ಲೆ ಉಸ್ತುವಾರಿ ನನಗೆ ತೃಪ್ತಿ ತಂದಿದೆ. ಪಕ್ಷ ಭೇದ ಮರೆತು ಎಲ್ಲ ಶಾಸಕರ ಕ್ಷೇತ್ರದಲ್ಲೂ ಒಳ್ಳೆಯ ಕೆಲಸ ಮಾಡಿದ್ದೀನಿ ಎಂದು ಸಂತೋಷ ವ್ಯಕ್ತಪಡಿಸಿದರು.

BJP Flag Final 6

ಉಸ್ತುವಾರಿ ಸಚಿವರು ಹತ್ತಿರದಲ್ಲಿರಬೇಕು. ಜಿಲ್ಲಾಡಳಿತದ ಜೊತೆ ವಾರಕ್ಕೆ ಒಂದೆರಡು ಬಾರಿಯಾದರೂ ಸ್ಪಂದಿಸುವ ರೀತಿ ಇರಬೇಕು. ಯಾವುದೋ ಒಂದು ಕೆಡಿಪಿ ಸಭೆಗೆ ಮಾತ್ರ ಸೀಮಿತವಾಗುವುದು, ನ್ಯಾಷನಲ್ ಪ್ರೋಗ್ರಾಂನಲ್ಲಿ ಧ್ವಜಾರೋಹಣ ಮಾಡೋದು ಅಷ್ಟೇ ಆದ್ರೆ ಬೇರೆ ಜಿಲ್ಲೆಗೆ ಹೋಗಿ ಮಾಡಬಹುದು. ಆದ್ರೆ ಪ್ರತಿ ಜಿಲ್ಲೆಯಲ್ಲಿ ನಾಯಕತ್ವದ ಅಗತ್ಯವಿದೆ ಎಂದು ತಿಳಿಸಿದರು. ಇದನ್ನೂ ಓದಿ: ಶ್ರೀರಂಗಪಟ್ಟಣದಲ್ಲಿ ಎಸಿಬಿ ಬಲೆಗೆ ಬಿದ್ದ ಸರ್ವೇ ಅಧಿಕಾರಿ!

Share This Article
Leave a Comment

Leave a Reply

Your email address will not be published. Required fields are marked *