ಕಾಂಗ್ರೆಸ್‌ ನಾಯಕರು ಸತ್ಯಕ್ಕೆ ದೂರವಾದ ಆರೋಪಗಳ 3ನೇ ಅಲೆ ಮುಂದುವರಿಸಿದ್ದಾರೆ: ಸುಧಾಕರ್‌

Public TV
1 Min Read
delhi sudhakar

ಬೆಂಗಳೂರು: ಕೊರೊನಾ ಪ್ರಕರಣ ನಿರ್ವಹಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪಗಳನ್ನು ಮಾಡುತ್ತಿರುವ ಕಾಂಗ್ರೆಸ್‌ ನಾಯಕರ ವಿರುದ್ಧ ಆರೋಗ್ಯ ಸಚಿವ ಡಾ. ಕೆ.ಸುಧಾಕರ್‌ ಟೀಕಾಪ್ರಹಾರ ನಡೆಸಿದ್ದಾರೆ.

ಟ್ವೀಟ್‌ ಮೂಲಕ ಕಾಂಗ್ರೆಸ್‌ ವಿರುದ್ಧ ಕಿಡಿಕಾರಿರುವ ಸುಧಾಕರ್‌ ಅವರು, ಕಾಂಗ್ರೆಸ್‌ ನಾಯಕರ ಆರೋಪಗಳನ್ನು ಸತ್ಯಕ್ಕೆ ದೂರವಾದವು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‍ನಿಂದ ಹೊರಬಂದಿದ್ದೇನೆ ಮತ್ತೆ ವಾಪಸ್ ಹೋಗುವ ಪ್ರಶ್ನೆಯೇ ಇಲ್ಲ ಎಂದು ಶಾಪ ಹಾಕಿದ: ಇಬ್ರಾಹಿಂ

ಟ್ವೀಟ್‌ನಲ್ಲೇನಿದೆ?
ಸಾಂಕ್ರಾಮಿಕದ ಸಂದರ್ಭದಲ್ಲಿ ಸರ್ಕಾರಕ್ಕೆ ಸಹಕಾರ ನೀಡುವುದು ಬಿಟ್ಟು ರಾಜಕೀಯ ಲಾಭ ಪಡೆಯಲು ವಿನಾಕಾರಣ ಟೀಕೆ ಮಾಡುವುದು ಎಷ್ಟು ಸರಿ? ಕೊರೊನಾ ಎಂಬುದೇ ಇಲ್ಲ, ಅದು ಬಿಜೆಪಿ ಸೃಷ್ಟಿ ಎನ್ನುವ ಅಧ್ಯಕ್ಷರು ಒಂದು ಕಡೆ. ಕೊರೊನಾ ನಿಯಂತ್ರಣದ ಬಗ್ಗೆ ಮಾತನಾಡುವ ಪ್ರತಿಪಕ್ಷ ನಾಯಕರು ಇನ್ನೊಂದು ಕಡೆ. ಇದರಲ್ಲಿ ಕಾಂಗ್ರೆಸ್ ಪಕ್ಷದ ನಿಲುವೇನು?

SIDDRAMAIHA 2

ಇದಕ್ಕೆ ಮುಖ್ಯ ಕಾರಣ ಲಸಿಕಾಕರಣ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಸಹಕಾರದಿಂದ ರಾಜ್ಯದಲ್ಲಿ 18 ಮೇಲ್ಪಟ್ಟ ವಯೋಮಾನದವರಿಗೆ 100% ಮೊದಲ ಡೋಸ್ ಪೂರೈಸಿದ್ದು, 87.6% ಜನರಿಗೆ ಎರಡೂ ಡೋಸ್ ನೀಡಲಾಗಿದೆ. ಆರೋಗ್ಯ ಹಾಗೂ ಮುಂಚೂಣಿ ಕಾರ್ಯಕತರು, ಹಿರಿಯ ನಾಗರೀಕರಲ್ಲಿ 51% ಫಲಾನುಭವಿಗಳಿಗೆ ಮುನ್ನೆಚ್ಚರಿಕೆ ಡೋಸ್ ನೀಡಲಾಗಿದೆ. ಇದನ್ನೂ ಓದಿ: ಗಂಡಂದಿರನ್ನು ಕಟ್ಟಿ ಹಾಕಿ ಹೆಂಡತಿಯರನ್ನು ರೇಪ್ ಮಾಡಿದ್ರು: ಸಿದ್ದರಾಮಯ್ಯ

ಜವಾಬ್ದಾರಿಯುತ ಸ್ಥಾನದಲ್ಲಿರುವ ಕಾಂಗ್ರೆಸ್ ನಾಯಕರು ತಮ್ಮ ನಿರಾಧಾರ, ಸತ್ಯಕ್ಕೆ ದೂರವಾದ ಆರೋಪಗಳ ಮೂರನೇ ಅಲೆಯನ್ನು ಮುಂದುವರೆಸಿರುವುದು ವಿಷಾದಕರ. ಕರ್ನಾಟಕದಲ್ಲಿ ಕೋವಿಡ್ ಮರಣ ಪ್ರಮಾಣ ಕೇವಲ 1% ಇದ್ದು, ಮೂರನೇ ಅಲೆಯಲ್ಲಿ 1.9% ಜನ ಸೋಂಕಿತರು ಮಾತ್ರ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ ಎಂದು ಟ್ಟಿಟ್ಟರ್‌ನಲ್ಲಿ ಕಾಂಗ್ರೆಸ್‌ ನಾಯಕರ ವಿರುದ್ಧ ಹರಿಹಾಯ್ದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *