‘ಉಜ್ವಲಾ ಯೋಜನೆ’ಯಡಿ 35 ಫಲಾನುಭವಿಗಳಿಗೆ ಸಿಲಿಂಡರ್ ವಿತರಣೆ

Public TV
1 Min Read
CYLINDER ckikodi 1

ಚಿಕ್ಕೋಡಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮಹತ್ವಕಾಂಕ್ಷೆ ‘ಉಜ್ವಲಾ ಯೋಜನೆ’ಯಡಿ 35 ಫಲಾನುಭವಿಗಳಿಗೆ ಉಚಿತ ಗ್ಯಾಸ್ ಸಿಲಿಂಡರ್‍ಗಳನ್ನು ವಿತರಿಸುವ ಕಾರ್ಯಕ್ರಮವನ್ನು ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಮತಕ್ಷೇತ್ರದ ಭೋಜ ಗ್ರಾಮದಲ್ಲಿ ಜರುಗಿತು.

modi 2

ಮುಜರಾಯಿ, ಹಜ್ ಮತ್ತು ವಕ್ಫ್ ಇಲಾಖೆಯ ಸಚಿವರಾದ ಶಶಿಕಲಾ ಜೊಲ್ಲೆ ಹಾಗೂ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಅವರ ಅನುಪಸ್ಥಿತಿಯಲ್ಲಿ ಊರಿನ ಹಿರಿಯರಿಗೆ ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಮುಖಂಡರು ಗ್ಯಾಸ್ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಿಂದ ಸಾಕಷ್ಟು ಅನುಕೂಲವಾಗಲಿದೆ ಎಂದು ಫಲಾನುಭವಿಗಳು ಸಂತಸ ವ್ತಕ್ತಪಡಿಸಿದರು. ಇದನ್ನೂ ಓದಿ: ‘ನನ್ನ ಹೆಸರು ಸಲ್ಮಾನ್ ಖಾನ್’ ಎಂದು ಹಾಲಿವುಡ್ ನಟನಿಗೆ ಪರಿಚಯ ಮಾಡಿಕೊಂಡ ಸಲ್ಲು

CYLINDER ckikodi

ಬಿಜೆಪಿ ಮುಖಂಡ ಸಾತಗೌಡ ಪಾಟೀಲ್ ಈ ಕುರಿತು ಮಾತನಾಡಿ, ಕೇಂದ್ರ ಸರ್ಕಾರ ಇಂತಹ ಹತ್ತು ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ. ಜನಸಾಮಾನ್ಯರು ಇವುಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿಕೊಂಡರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯರು ಸೇರಿದಂತೆ ಊರಿನ ಮುಖಂಡರು ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *