ಕಲಬುರಗಿ: ಕೊರೊನಾ ನಿಯಮಗಳನ್ನ ಉಲ್ಲಂಘಿಸಿ ನಾಲವಾರದ ಕೋರಿಸಿದ್ದೇಶ್ವರ ಜಾತ್ರೆ ರಥೋತ್ಸವ ನಡೆಸಿದ ಆಡಳಿತ ಮಂಡಳಿ ಸೇರಿದಂತೆ ಹತ್ತಕ್ಕೂ ಅಧಿಕ ಜನರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನಲ್ಲಿ ಕೊರೊನಾ ನಿಯಮಗಳನ್ನ ಉಲ್ಲಂಘಿಸಿ ನಾಲವಾರದ ಕೋರಿಸಿದ್ದೇಶ್ವರ ಜಾತ್ರೆ ರಥೋತ್ಸವ ನಡೆಸಲಾಗಿತ್ತು. ಈ ಪರಿಣಾಮ ಆಡಳಿತ ಮಂಡಳಿ ಸೇರಿದಂತೆ ಹತ್ತಕ್ಕೂ ಅಧಿಕ ಜನರ ವಿರುದ್ಧ ಕೇಸ್ ದಾಖಲು ಮಾಡಲಾಗಿದೆ ಎಂದು ವಾಡಿ ಠಾಣೆ ಪೊಲೀಸರು ಹೇಳಿದ್ದಾರೆ. ಇದನ್ನೂ ಓದಿ: ಪಕ್ಷದ ನಾಯಕರು ಬೇರೆ ಪಕ್ಷದ ಸದಸ್ಯರ ಆಂತರಿಕ ವಿಚಾರದಲ್ಲಿ ಹೇಳಿಕೆ ಕೊಡಬಾರದು: ಡಿಕೆಶಿ
ಜಿಲ್ಲೆಯಲ್ಲಿ ಕೊರೊನಾ ಮೂರನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ, ಜಿಲ್ಲಾಡಳಿತ ಜಾತ್ರೆ, ರಥೋತ್ಸವ ಸೇರಿದಂತೆ ಧಾರ್ಮಿಕ ಕಾರ್ಯಕ್ರಮಗಳಿಗೆ ನಿರ್ಬಂಧ ಹೇರಿ ಆದೇಶ ಹೊರಡಿಸಿತ್ತು. ಆದರೂ ಜಿಲ್ಲಾಡಳಿತದ ನಿಷೇಧದ ಮಧ್ಯೆಯೂ ಕೋರಿಸಿದ್ದೇಶ್ವರ ದೇಗುಲ ಆಡಳಿತ ಮಂಡಳಿ ಜಾತ್ರೆ ಮತ್ತು ರಥೋತ್ಸವ ನಡೆಸಲಾಗಿತ್ತು.
ಜಾತ್ರೆಯಲ್ಲಿ ಕೊರೊನಾ ನಿಯಮಾವಳಿಗಳನ್ನು ಗಾಳಿಗೆ ತೂರಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿದ್ದರು. ಅಲ್ಲದೆ ರಥೋತ್ಸವ ವೇಳೆಯಲ್ಲಿ ಭಾರೀ ನೂಕುನುಗ್ಗಲು ಸಂಭವಿಸಿ ಹಲವು ಜನರು ಗಾಯಗೊಂಡಿದ್ದರು. ಹೀಗಾಗಿ ಆಡಳಿತ ಮಂಡಳಿ ಮುಖ್ಯಸ್ಥರು, ಸದಸ್ಯರು ಸೇರಿದಂತೆ ಹತ್ತಕ್ಕೂ ಅಧಿಕ ಜನರ ವಿರುದ್ಧ ವಾಡಿ ಠಾಣೆ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಪತಿಯನ್ನು ಹರಾಜಿಗಿಟ್ಟು, ಯಾವುದೇ ಕಾರಣಕ್ಕೂ Exchange ಇಲ್ಲವೆಂದ ಪತ್ನಿ..!