ಕುಮಾರಸ್ವಾಮಿ ಬಗ್ಗೆ ನಾನು ಮಾತನಾಡಲ್ಲ, ನಾನು ಹಿಜಬ್ ಬಗ್ಗೆ ಮಾತನಾಡಿದ್ದು ನಿಜ: ಸಿದ್ದರಾಮಯ್ಯ

Public TV
2 Min Read
siddaramaiah

ಬೆಂಗಳೂರು: ಕುಮಾರಸ್ವಾಮಿ ಬಗ್ಗೆ ನಾನು ಮಾತನಾಡಲ್ಲ. ನಾನ್ಯಾಕೆ ಅವರ ಬಗ್ಗೆ ಮಾತನಾಡಲಿ. ನಾನು ಹಿಜಬ್ ವಿವಾದದ ಬಗ್ಗೆ ಮಾತನಾಡಿದ್ದು ನಿಜ ಎಂದು ಬೆಂಗಳೂರಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಡಿಕೆಶಿ ಮತ್ತು ಸಿದ್ದರಾಮಯ್ಯಗೆ ಮುಖ್ಯಮಂತ್ರಿಯಾಗುವ ಹುಚ್ಚು ಎಂಬ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯು ಅವರು, ಆ ಕುಮಾರಸ್ವಾಮಿ ಬಗ್ಗೆ ನಾನು ಮಾತನಾಡಲ್ಲ. ನಾನು ಹಿಜಬ್ ಬಗ್ಗೆ ಮಾತನಾಡಿದ್ದು ನಿಜ. ಆದರೆ ಈಗ ಕುಮಾರಸ್ವಾಮಿ ಬಗ್ಗೆ ಮಾತನಾಡಲ್ಲ. ಅವರು ಯಾರು ನನ್ನ ಬಗ್ಗೆ ಮಾತನಾಡೋಕೆ. ಅವರದ್ದು ಒಂದು ರಾಜಕೀಯ ಪಕ್ಷದ ನಾಯಕರು, ನಾನು ಅವರ ಬಗ್ಗೆ ಮಾತನಾಡಲ್ಲ, ನಾನ್ಯಾಕೆ ಅವರ ಬಗ್ಗೆ ಮಾತನಾಡಲಿ ಎಂದ ಸಿದ್ದರಾಮಯ್ಯ ಹೇಳಿದ್ದಾರೆ. ಇದನ್ನೂ ಓದಿ: ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಇನ್ನಿಲ್ಲ

siddaramaiah 4

ಸಿಎಂ ಇಬ್ರಾಹಿಂ ಅಸಮಾಧಾನ ವಿಚಾರವಾಗಿ, ಇಬ್ರಾಹಿಂ ಪಾರ್ಟಿ ಬಿಡಲ್ಲ, ಅವರು ಏನಾದ್ರು ಮಾಡ್ಲಿ ಸಂಬಂಧ ಇಲ್ಲ. ಅವರು ಪಕ್ಷ ಬಿಡಲ್ಲ, ಹೆಚ್.ಸಿ.ಮಹದೇವಪ್ಪ ಮಾತಾಡಿದ್ದಾರೆ. ಕೋಪ ಕಡಿಮೆ ಆಗ್ಲಿ, ಅಮೇಲೆ ಭೇಟಿ ಮಾಡುತ್ತೇನೆ. ವಿಪಕ್ಷ ನಾಯಕ ಸ್ಥಾನ ಸಿಕ್ಕಿಲ್ಲ ಅಂತ ಕೋಪ ಇರುತ್ತದೆ. ವೀರೇಂದ್ರ ಪಾಟೀಲ್ ಜೊತೆ ಕಾಂಗ್ರೆಸ್ ಜೊತೆ ಹೋಗಿದ್ದ, ಆಗ ನಾನು ಕಾಂಗ್ರೆಸ್‍ನಲ್ಲಿ ಇರಲಿಲ್ಲ. ನಾನು ಆಗ ಇಲ್ಲ ಅಂದ್ಮೇಲೆ ನಾನೇಕೆ ಆಗಿನ ಘಟನೆ ಬಗ್ಗೆ ಮಾತಾಡಲಿ ಎಂದಿದ್ದಾರೆ. ಇದನ್ನೂ ಓದಿ: ಕನ್ನಡಕ್ಕೂ ದನಿಗೂಡಿಸಿದ್ದ ಲತಾ ಮಂಗೇಶ್ಕರ್

CM IBRAHIM

ಸಿ.ಎಂ ಇಬ್ರಾಹಿಂ ನನ್ನ ಸ್ನೇಹಿತ. ಅವನು ಎಲ್ಲೂ ಹೋಗಲ್ಲ ಅನ್ನೋ ವಿಶ್ವಾಸವಿದೆ. ಕಾಂಗ್ರೆಸ್‍ಲ್ಲಿ ಸಿದ್ದು ನೆಮ್ಮದಿಯಾಗಿಲ್ಲ ಎಂಬ ಇಬ್ರಾಹಿಂ ಹೇಳಿಕೆ ವಿಚಾರ ಕಾಮಾಲೆ ಕಣ್ಣಿನವರಿಗೆ ಕಾಣೋದೆಲ್ಲ ಹಳದಿ ಬಿಡಿ. ನನ್ನ ಭಾಷಣ ಕೇಳಲು ಸಿದ್ದರಾಮಯ್ಯ ಮೋಟರ್ ಸೈಕಲ್‍ನಲ್ಲಿ ಬರ್ತಿದ್ದ ಎಂಬ ಇಬ್ರಾಹಿಂ ಹೇಳಿಕೆ ವಿಚಾರ, ನಾನು ಇಬ್ರಾಹಿಂ ಭಾಷಣ ಕೇಳಲು ಹೋಗಿದ್ದು ನಿಜ. ಟೌನ್ ಹಾಲ್‍ನಲ್ಲಿ ಭಾಷಣ ಕೇಳಲು ಹೋಗಿದ್ದೆ. ಇದನ್ನ ನಾನೇ ಇಬ್ರಾಹಿಂಗೆ ಹೇಳಿದ್ದೆ ಆಗ ವಿಧ್ಯಾರ್ಥಿ ನಾನು, ಆಗ ಸೈಕಲ್ಲೇ ಇರಲಿಲ್ಲ ಮೋಟರ್ ಸೈಕಲ್ ಎಲ್ಲಿತ್ತು? ಎಂದು ಪ್ರಶ್ನೆ ಮಾಡಿದ್ದಾರೆ.

CM IBRAHIM HDK

ಸಂಡೇ ಕೂಲ್ ಆಗಿಯೇ ಇರಬೇಕಲ್ಲವಾ? ನಾನು ಯಾವಾಗಲೂ ಕೂಲ್ ಆಗಿಯೇ ಇರುತ್ತೇನೆ. ನಾನು ತಲೆಕೆಡಿಸಿಕೊಳ್ಳೋದು ಯಾವಾಗ ಎಂದರೆ ಸಮಾಜದಲ್ಲಿ ಡಿಸ್ಟರ್ಬ್ ಆದಾಗ, ಇಲ್ಲ ಅಂದ್ರೆ ನಾನು ಯಾವಾಗಲೂ ಕೂಲ್ ಆಗಿರುತ್ತೇನೆ ಎಂದು ಹೇಳಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *