ಹನುಮಂತ ಹುಟ್ಟಿದ ನಾಡಿಗೆ ಸಚಿವ ಸ್ಥಾನ ನೀಡಬೇಕು: ಪರಣ್ಣ ಮುನವಳ್ಳಿ

Public TV
1 Min Read
PARANNA MUNAVALLI 1

ಕೊಪ್ಪಳ: ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ. ನಾನು ಎರಡು ಬಾರಿ ಶಾಸಕನಾಗಿ ಆಯ್ಕೆ ಆಗಿದ್ದೇನೆ ಎಂದು ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಹೇಳಿದ್ದಾರೆ.

BJP Flag Final 6

ಗಂಗಾವತಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಎರಡು ಬಾರಿ ಶಾಸಕನಾಗಿ ಆಯ್ಕೆ ಆಗಿದ್ದೇನೆ. ಇಲ್ಲಿನ ಜನರ ಆಶಯ ಈಡೇರಿಸಲು ಅಧಿಕಾರ ಬೇಕು. ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ವರಿಷ್ಠರಿಗೆ ನಾನು ಕಳಕಳಿಯಿಂದ ಮನವಿ ಮಾಡಿದ್ದೇನೆ ಎಂದರು.

PARANNA MUNAVALLI 2

ಹನುಮಂತ ಹುಟ್ಟಿದ ನಾಡಿಗೆ ಸಚಿವ ಸ್ಥಾನ ನೀಡಬೇಕು ಎಂದು ಮನವಿ ಮಾಡಿದ್ದೇನೆ. ಗಂಗಾವತಿ ಐತಿಹಾಸಿಕ ಹಿನ್ನೆಲೆ ಇರುವ ಕ್ಷೇತ್ರವಾಗಿದ್ದು, ಹನುಮಂತ ಹುಟ್ಟಿದ ನಾಡಿದು. ಇಲ್ಲಿಗೆ ಸಚಿವ ಸ್ಥಾನ ನೀಡಬೇಕು. ಒಂದು ಜಿಲ್ಲೆಗೆ ಎರಡು ಸಚಿವ ಸ್ಥಾನ ನೀಡಿದರೆ ತಪ್ಪೇನು ಎಂದು ಅವರು ಪ್ರಶ್ನಿಸಿದ ಅವರು, ಕೆಲ ಜಿಲ್ಲೆಗೆ 6 ಸಚಿವ ಸ್ಥಾನ ನೀಡಿದ್ದಾರೆ. ನಾನಂತೂ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ. ಈ ಬಗ್ಗೆ ಸಿಎಂ ಗಮನಕ್ಕೆ ತಂದಿದ್ದೇನೆ ಎಂದರು. ಇದನ್ನೂ ಓದಿ: ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬಂದರೆ ಉದ್ಯೋಗ ಖಚಿತ: ಅಖಿಲೇಶ್ ಯಾದವ್

bommai 7

ಸಂಪುಟ ಪುನಾರಚನೆ ಸರ್ಕಸ್ ಬೆನ್ನಲ್ಲೇ ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಸಿಎಂ ಹೊರಟ ಬೆನ್ನಲ್ಲೇ ಹೊಸ ದೋಸ್ತು ತಮಡ ಕೂಡ ಇಂದು ದೆಹಲಿಗೆ ತೆರಳಲಿದೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

Share This Article
Leave a Comment

Leave a Reply

Your email address will not be published. Required fields are marked *