Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2A ಸೇರಿಸುವ ವಿಚಾರ ನಿಷ್ಪಕ್ಷಪಾತ ವರದಿ ನೀಡುತ್ತೇನೆ: ಜಯಪ್ರಕಾಶ್ ಹೆಗ್ಡೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2A ಸೇರಿಸುವ ವಿಚಾರ ನಿಷ್ಪಕ್ಷಪಾತ ವರದಿ ನೀಡುತ್ತೇನೆ: ಜಯಪ್ರಕಾಶ್ ಹೆಗ್ಡೆ

Bengaluru City

ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2A ಸೇರಿಸುವ ವಿಚಾರ ನಿಷ್ಪಕ್ಷಪಾತ ವರದಿ ನೀಡುತ್ತೇನೆ: ಜಯಪ್ರಕಾಶ್ ಹೆಗ್ಡೆ

Public TV
Last updated: February 15, 2022 6:10 pm
Public TV
Share
2 Min Read
panchamasali
SHARE

ಬೆಂಗಳೂರು: ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2 ಎಗೆ ಸೇರಿಸಬೇಕು, ಸೇರಿಸಬಾರದು ಎಂಬುದರ ವಿಚಾರವಾಗಿ ಈಗಾಗಲೇ ಪರ – ವಿರೋಧ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಮಗ್ರ ಅಧ್ಯಯನ ನಡೆಸಿ ನಿಷ್ಪಕ್ಷಪಾತ ವರದಿಯನ್ನು ಸಲ್ಲಿಸಲಿದೆ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ ಭರವಸೆ ನೀಡಿದರು.

ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2 ಎಗೆ ಸೇರಿಸಬಾರದು. ಕೇಂದ್ರ ಸರ್ಕಾರದ ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಗೆ ಕರ್ನಾಟಕದ 70 ಜಾತಿ – ಉಪಜಾತಿಗಳನ್ನು ಸೇರ್ಪಡೆಗೊಳಿಸಬೇಕು ಮತ್ತು ಸ್ಥಳೀಯ ಚುನಾವಣೆಗಳಲ್ಲಿ ಅತಿ ಹಿಂದುಳಿದ ವರ್ಗಗಳಿಗೂ ಮೀಸಲಾತಿ ನೀಡಬೇಕು ಹಾಗೂ ಹೆಚ್. ಕಾಂತರಾಜ್ ವರದಿಯನ್ನು ಜಾರಿಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ, ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯಿಂದ ಮನವಿ ಸಲ್ಲಿಸಲಾಯಿತು.

ಮನವಿ ಸ್ವೀಕರಿಸಿ ಮಾತನಾಡಿದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ ಅವರು, ಪ್ರವರ್ಗ 2 ಎಗೆ ಪಂಚಮಸಾಲಿ ಸಮುದಾಯವನ್ನು ಸೇರಿಸುವ ವರದಿಯನ್ನು ಈಗಾಗಲೇ ತಿರಸ್ಕರಿಸಲಾಗಿದೆ. ಈ ಬಗ್ಗೆ ಮತ್ತೆ ಪರ ವಿರೋಧ ಮಾತುಗಳು ಕೇಳಿಬರುತ್ತಿವೆ. ಎರಡು ಬಣಗಳ ಅಭಿಪ್ರಾಯಗಳನ್ನು ಸಂಗ್ರಹಿಸಿ ಪಾರದರ್ಶಕ ವರದಿಯನ್ನು ನೀಡುವುದಾಗಿ ಹೇಳಿದರು.

panchama sali

ಇನ್ನು ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷರಾದ ಎಮ್. ಸಿ. ವೇಣುಗೋಪಾಲ್ ಮಾತನಾಡಿ, ಹಿಂದುಳಿದ ವರ್ಗಗಳ ಕೇಂದ್ರ ಸರ್ಕಾರದ ಮೀಸಲಾತಿ ಪಟ್ಟಿಗೆ ಕರ್ನಾಟಕದ 70 ಜಾತಿ- ಉಪಜಾತಿಗಳನ್ನು ಸೇರಿಸಬೇಕು ಮತ್ತು ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2ಎಗೆ ಸೇರಿಸಬಾರದು ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಮನವಿ ಸಲ್ಲಿಸಿದ್ದೇವೆ. ಆಯೋಗದ ಅಧ್ಯಕ್ಷರು ನಮ್ಮ ಮನವಿಗೆ ಸ್ಪಂದಿಸಿದ್ದಾರೆ. ಅಲ್ಲದೆ ಅತಿ ಹಿಂದುಳಿದ ವರ್ಗಗಳಿಗೆ ಸೂಕ್ತ ನ್ಯಾಯ ನೀಡುವ ಭರವಸೆಯನ್ನು ನೀಡಿದ್ದಾರೆ ಎಂದರು. ಇದನ್ನೂ ಓದಿ: ಅಧಿಕಾರಿಗಳು, ಗುತ್ತಿಗೆದಾರರ ನಿರ್ಲಕ್ಷ್ಯಕ್ಕೆ ಕೂಲಿಕಾರ್ಮಿಕ ಬಲಿ

ಪಂಚಮಸಾಲಿ ಸಮುದಾಯವು ವೀರಶೈವ-ಲಿಂಗಾಯಿತದ ಉಪಜಾತಿಯಾಗಿರುವುದರಿಂದ ಅಂತಹ ಉಪಜಾತಿಯನ್ನು ಮುಖ್ಯಜಾತಿಯಿಂದ ಬೇರ್ಪಡಿಸಿ ಬೇರೊಂದು ಪ್ರವರ್ಗಕ್ಕೆ ವರ್ಗಾಯಿಸುವುದು ಸರ್ವೋಚ್ಛ ನ್ಯಾಯಲಯ ಇಂದ್ರಾ ಸಹಾನಿ ಪ್ರಕರಣದಲ್ಲಿ ನೀಡಿರುವ ತೀರ್ಪಿಗೆ ವಿರುದ್ಧವಾಗಿರುತ್ತದೆ ಎಂದರು.

ಈ ಹಿನ್ನೆಲೆಯಲ್ಲಿ ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2ಎ ಗೆ ಸೇರಿಸುವುದು ಸರಿಯಲ್ಲ. ಇದರಿಂದ ಅತಿ ಹಿಂದುಳಿದ ವರ್ಗಗಳಿಗೆ ಅನ್ಯಾಯವಾಗುತ್ತದೆ. ಒಂದು ವೇಳೆ ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2ಎಗೆ ಸೇರಿಸಿದರೆ ರಾಜ್ಯಾದ್ಯಂತ ಹೋರಾಟ ನಡೆಸುವುದಾಗಿ ಎಮ್. ಸಿ. ವೇಣುಗೋಪಾಲ್ ಹೇಳಿದರು. ಇದನ್ನೂ ಓದಿ: ಅಧಿಕಾರಿಗಳು, ಗುತ್ತಿಗೆದಾರರ ನಿರ್ಲಕ್ಷ್ಯಕ್ಕೆ ಕೂಲಿಕಾರ್ಮಿಕ ಬಲಿ

1992ರ ಮಂಡಲ್ ಆಯೋಗದ ವರದಿಯಂತೆ ಕರ್ನಾಟಕದ 323 ಜಾತಿ-ಉಪಜಾತಿಗಳನ್ನು ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರಿಸಲಾಗಿತ್ತು. ಆನಂತರದಲ್ಲಿ 283 ಜಾತಿ-ಉಪಜಾತಿಗಳನ್ನು ಮೀಸಲಾತಿ ಪಟ್ಟಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸು ಮಾಡಲಾಯಿತು. ಆದರೂ ಸುಮಾರು 70 ಜಾತಿ ಉಪಜಾತಿಗಳು ರಾಜ್ಯ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿದ್ದರೂ, ಕೇಂದ್ರದ ಪಟ್ಟಿಯಲ್ಲಿ ಸೇರಿಸಲಾಗಿಲ್ಲ. ಹೀಗಾಗಿ ಈ ವರ್ಗಗಳ ಸರ್ವಾಂಗೀಣ ಅಭಿವೃದ್ಧಿಗೆ ಅನುಕೂಲವಾಗಲು, ಕೇಂದ್ರದ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಇವುಗಳನ್ನು ಸೇರಿಸಬೇಕು ಎಮ್. ಸಿ. ವೇಣುಗೋಪಾಲ್ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯರು ಹಾಗೂ ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಪ್ರಧಾನ ಕಾರ್ಯದರ್ಶಿ ಎಂ. ನಾಗರಾಜು, ಖಜಾಂಚಿ ಎಲ್.ಎ ಮಂಜುನಾಥ್ ಸೇರಿದಂತೆ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

TAGGED:bengaluruJayaprakash hegdePanchamasali 2Aಜಯಪ್ರಕಾಶ್ ಹೆಗ್ಡೆಪಂಚಮಸಾಲಿಬೆಂಗಳೂರು
Share This Article
Facebook Whatsapp Whatsapp Telegram

Cinema news

ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories
Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories

You Might Also Like

CET Exam Staff who cut Janavara and threw it dustbin Chikkaballapura
Chikkaballapur

CET Exam| ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಎಸೆದ ಸಿಬ್ಬಂದಿ

Public TV
By Public TV
13 minutes ago
Delhi Capitals Net Bowler Sahil Parakh injured
Cricket

ಪ್ರಾಕ್ಟೀಸ್ ವೇಳೆ ಚೆಂಡು ಬಡಿದು ಡೆಲ್ಲಿ ಕ್ಯಾಪಿಟಲ್ಸ್ ಆಟಗಾರನಿಗೆ ಗಂಭೀರ ಗಾಯ – ಆಸ್ಪತ್ರೆಗೆ ರವಾನೆ

Public TV
By Public TV
32 minutes ago
Vinay Kulkarni 1 1
Bengaluru City

ಯೋಗೇಶ್ ಗೌಡ ಕೊಲೆ ಕೇಸ್ – ಜೀವಾವಧಿ ಶಿಕ್ಷೆ ತೀರ್ಪಿಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ

Public TV
By Public TV
48 minutes ago
Mallikarjun Kharge DK Shivakumar DK Suresh
Bengaluru City

ದೆಹಲಿ ಅಂಗಳದಲ್ಲಿ ಡಿಕೆ ಬ್ರದರ್ಸ್ ಪವರ್ ಗೇಮ್ – ಹೈಕಮಾಂಡ್ ಮುಂದೆ 2 ದಿನ, 2 ಭೇಟಿ, 2 ಖಡಕ್ ಷರತ್ತು!

Public TV
By Public TV
1 hour ago
HR Ranganath
Bengaluru City

AI ಕಾಲದಲ್ಲಿ ನಾಳೆ ಏನಾಗುತ್ತೆ ಅಂತ ಹೇಳೋದೇ ಕಷ್ಟ, ಜೋತಿಷ್ಯಿಗಳಂತೆ ಭವಿಷ್ಯವನ್ನು ಊಹೆ ಮಾಡ್ಬೇಕು: ಹೆಚ್.ಆರ್ ರಂಗನಾಥ್

Public TV
By Public TV
2 hours ago
Condom
Latest

ಇರಾನ್‌ ಯುದ್ಧ- ಕಾಂಡೋಮ್‌ ಬೆಲೆ ಭಾರೀ ಏರಿಕೆಯಾಗುವ ಸಾಧ್ಯತೆ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?