Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: KIADBಯಿಂದ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | KIADBಯಿಂದ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ

Bengaluru City

KIADBಯಿಂದ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ

Public TV
Last updated: February 15, 2022 6:00 pm
Public TV
Share
3 Min Read
Murugesh Nirani
SHARE

-ವಿಧಾನಪರಿಷತ್‍ನಲ್ಲಿ ಬೃಹತ್ ಮತ್ತು ಕೈಗಾರಿಕೆ ಸಚಿವ ನಿರಾಣಿ ಘೋಷಣೆ
-2022ರ ನ.2ರಿಂದ 4ವರೆಗೆ ಜಾಗತಿಕ ಹೂಡಿಕೆದಾರರ ಸಮಾವೇಶ
-ವಿದೇಶಿ ನೇರ ಬಂಡವಾಳ ಹೂಡಿಕೆ ಆಕರ್ಷಣೆಯಲ್ಲಿ ಕರ್ನಾಟಕ ಮೊದಲ ಸ್ಥಾನ
-ಎನ್‍ಜಿಇಎಫ್ ಆಸ್ತಿ ಪರಭಾರೆ ಇಲ್ಲ

ಬೆಂಗಳೂರು: ಬೆಂಗಳೂರಿನ ಆಚೆಗೂ ಕೈಗಾರಿಕಾ ಪ್ರದೇಶಗಳನ್ನು ವಿಸ್ತರಿಸುವ ನಿಟ್ಟಿನಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಎಂಟು ಜಿಲ್ಲೆಗಳಲ್ಲಿ ಹೊಸ ಕೈಗಾರಿಕಾ ಪ್ರದೇಶಗಳನ್ನು ಅಭಿವೃದ್ಧಿಪಡಿಸಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಘೋಷಿಸಿದರು.

ಮಂಗಳವಾರ ವಿಧಾನಪರಿಷತ್‍ನಲ್ಲಿ ಜೆಡಿಎಸ್ ಸದಸ್ಯ ರಮೇಶ್‍ಗೌಡ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, 2022-23ರಲ್ಲಿ ಕೈಗಾರಿಕಾ ಪ್ರದೇಶಗಳನ್ನು ಅಭಿವೃದ್ಧಿಪಡಿಸಲು ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಹೇಳಿದರು. ಇದರಲ್ಲಿ ಪ್ರಮುಖವಾಗಿ ರಾಮನಗರದ ಹಾರೋಹಳ್ಳಿ 5ನೇ ಹಂತ, ಚಿಕ್ಕಬಳ್ಳಾಪುರದ ಗೌರಿಬಿದನೂರು 3ನೇ ಹಂತ, ತುಮಕೂರಿನ ಮಧುಗಿರಿ ಕೈಗಾರಿಕಾ ಪ್ರದೇಶ, ಕೋಲಾರದ ಜಕ್ಕಸಂದ್ರ 2ನೇ ಹಂತ, ಮಂಡ್ಯದ ಕುದುರೆಗುಂಡಿ ಕೈಗಾರಿಕಾ ಪ್ರದೇಶ, ಹಾಸನದ ಅರಸೀಕೆರೆ ಕೈಗಾರಿಕಾ ಪ್ರದೇಶ, ಹಾಸನ ಮತ್ತು ಯಾದಗಿರಿಯ ಕಡೇಚೂರು 2ನೇ ಹಂತ, ಓಬಳಾಪುರ ಕೈಗಾರಿಕಾ ಪ್ರದೇಶವನ್ನು ಅಭಿವೃದ್ಧಿಪಡಿಸಲಿದೆ ಎಂದು ಹೇಳಿದರು.

vidhana parishad

ಈ ಕೈಗಾರಿಕಾ ಪ್ರದೇಶಗಳು ಅಭಿವೃದ್ಧಿಯಾದರೆ ರಾಜ್ಯಕ್ಕೆ ದೊಡ್ಡ ಮಟ್ಟದಲ್ಲಿ ಬಂಡವಾಳ ಹರಿದುಬರಲಿದ್ದು, ಕೈಗಾರಿಕೆಗಳ ಪುನಶ್ಚೇತನ ಮತ್ತು ಹೆಚ್ಚು ಉದ್ಯೋಗ ಸೃಷ್ಟಿ ಆಗಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು. ಇದನ್ನೂ ಓದಿ: ಸುಳ್ಳು ಭರವಸೆಗಳನ್ನು ಕೇಳಬೇಕಿದ್ದರೆ ಮೋದಿ, ಕೇಜ್ರಿವಾಲ್ ಮಾತು ಕೇಳಿ: ರಾಹುಲ್ ಗಾಂಧಿ

ಜೆಡಿಎಸ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಅವರ ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಸಚಿವ ನಿರಾಣಿಯವರು, ರಾಜ್ಯದಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶವನ್ನು ನವೆಂಬರ್ 2 ರಿಂದ 4, 2022 ರವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದು ಪ್ರಕಟಿಸಿದರು.

murugesh nirani

ಕರ್ನಾಟಕವು ಈವರೆಗೆ ಒಟ್ಟು 1,02,866 ಕೋಟಿ ರೂ. ಹೂಡಿಕೆಗಳನ್ನು ಆಕರ್ಷಿಸಿದೆ. 2021ರ ಹಣಕಾಸು ವರ್ಷದ ಏಪ್ರಿಲ್-ಸೆಪ್ಟೆಂಬರ್ ಅವಧಿಯಲ್ಲಿ ಶೇ. 46ರಷ್ಟು ವಿದೇಶಿ ಬಂಡವಾಳ ಹೂಡಿಕೆಯನ್ನು ಆಕರ್ಷಿಸಿ ಇಡೀ ದೇಶದಲ್ಲಿಯೇ ಕರ್ನಾಟಕ ಮೊದಲ ಸ್ಥಾನದಲ್ಲಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಹೂಡಿಕೆಗಳನ್ನು ಆಕರ್ಷಿಸುವ ಮತ್ತು ರಾಜ್ಯದಲ್ಲಿ ಕೈಗಾರಿಕಾ ಬೆಳವಣಿಗೆಯನ್ನು ಉತ್ತೇಜಿಸುವ ಉದ್ದೇಶದಿಂದ ಕೈಗಾರಿಕಾ 2020-25 ನೀತಿಯನ್ನು ಜಾರಿಗೆ ತಂದಿದ್ದೇವೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಆಸ್ಟ್ರೇಲಿಯಾದ ಮ್ಯಾಕ್ಸ್‌ವೆಲ್ ತಮಿಳುನಾಡಿನ ಅಳಿಯ – ಆಮಂತ್ರಣ ಪತ್ರಿಕೆ ವೈರಲ್

ಬೆಂಗಳೂರು ನಗರ, ಮುಂಬೈ, ಗುಜರಾತ್ ಸೇರಿದಂತೆ ವಿವಿಧ ಭಾಗಗಳಲ್ಲಿ ಮೈಸೂರ್ ಲ್ಯಾಂಪ್ ಲಿಮಿಟೆಡ್‍ಗೆ 249.10 ಕೋಟಿ ಆಸ್ತಿಯಿದ್ದು, ಎನ್‍ಜಿಇಎಫ್ ಲಿ.,ನ ನೂರಾರು ಕೋಟಿ ರೂ. ಮೌಲ್ಯದ ಆಸ್ತಿ ಇದೆ. ಆದರೆ, ಇದನ್ನು ಪರಭಾರೆ ಮಾಡುವ ಯಾವುದೇ ಉದ್ದೇಶ ಸರ್ಕಾರಕ್ಕೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ಮೈಸೂರು ಲ್ಯಾಂಪ್ಸ್‌ಗೆ ನಗರದ ಮಲ್ಲೇಶ್ವರಂನ ಪಶ್ಚಿಮ ಹಳೇ ತುಮಕೂರು ರಸ್ತೆಯಲ್ಲಿ 21 ಎಕರೆ 6.73 ಗುಂಟೆ ಭೂಮಿ ಮತ್ತು ಕಟ್ಟಡಗಳಿವೆ. ರಾಜ್‍ಮಹಲ್ ವಿಲಾಸ್ ಬಡಾವಣೆಯ 2ನೇ ಹಂತದಲ್ಲಿ ಎಚ್‍ಐಜಿ ಬಂಗಲೆ 307 ಚದರ.ಮೀ ವಿಸ್ತೀರ್ಣವಿದೆ. ಅದೇ ಜಾಗದಲ್ಲಿ 309 ಚದರ ಮೀಟರ್ ಮತ್ತೊಂದು ನಿವೇಶನವಿದೆ ಎಂದರು. ಇದನ್ನೂ ಓದಿ: ಈಶಾನ್ಯ ಭಾರತದವರ ಜೀವನ ಶೈಲಿಯ ಮೇಲೆ ಬಿಜೆಪಿ ಹಸ್ತಕ್ಷೇಪ: ಪ್ರಿಯಾಂಕಾ ಗಾಂಧಿ

ಮುಂಬೈನ ಪೊರ್ಲಿ ಪ್ರದೇಶದ ಟಿವಿ ಇಂಡಸ್ಟ್ರಿಯಲ್ ಎಸ್ಟೇಟ್‍ನಲ್ಲಿ 79 ಚದರ ಅಡಿ ಕಟ್ಟಡವಿದೆ. ಅಹಮದಾಬಾದ್‍ನಗರದ ನವರಂಗ್ ವೃತ್ತದಲ್ಲಿ ಜಿಟಿ ಅಸೋಸಿಯೇಷನ್ ಸಮುಚ್ಚಯದ 8ನೆ ಹಂತಸ್ತಿನಲ್ಲಿ 1043 ಚದರ ಅಡಿ ಕಟ್ಟಡ, ನೆಲಮಹಡಿಯಲ್ಲಿ 300 ಅಡಿ ಜಾಗ ಇದೆ. ಈ ಸ್ಥಿರಾಸ್ತಿಗಳ ಒಟ್ಟು ಮೌಲ್ಯ 249.10 ಕೋಟಿ ಎಂದು ಅಂದಾಜಿಸಲಾಗಿದೆ ಎಂದರು.

ಎನ್‍ಜಿಇಎಫ್‍ನ ಸಂಸ್ಥೆಗೆ ಬೆಂಗಳೂರಿನ ಕೆಆರ್‌ಪುರಂ ತಾಲೂಕಿನ ಬಯ್ಯಪ್ಪನಹಳ್ಳಿ ಮತ್ತು ಬೆನ್ನಿಗಾನಹಳ್ಳಿ ಗ್ರಾಮಗಳಲ್ಲಿ 119.60 ಎಕರೆ ಜಮೀನು ಇದ್ದು ಇದರಲ್ಲಿ 105 ಎಕರೆ ಕಾಂಪೌಂಡ್‍ನೊಳಗೆ ಉಳಿದ ಜಮೀನು ಕಾಂಪೌಂಡ್‍ನ ಹೊರಗೆ ಇದೆ. ಇದನ್ನು ಖಚಿತಪಡಿಸಿಕೊಳ್ಳಲು ಭೂಮಾಪನ ಕಂದಾಯ ವ್ಯವಸ್ಥೆ ಹಾಗೂ ಭೂ ದಾಖಲೆ ಇಲಾಖೆಗಳನ್ನು ಕೋರಲಾಗಿದೆ. ಕಚ್ಚಾ ಮಾಲಾಗಿ ಉಪಯೋಗಿಸುತ್ತಿದ್ದ 14.57 ಕೆಜಿ ಬೆಳ್ಳಿ , 5.5 ಕೆಜಿ ಮಿಶ್ರ ಲೋಹದ ಚರಾಸ್ತಿ ಸಹ ಇದೆ ಎಂದು ವಿವರಿಸಿದರು. ಇದನ್ನೂ ಓದಿ: ಯುವಕರಿಗೆ ಉದ್ಯೋಗ, ಬಡವರಿಗೆ 1 ಕೆಜಿ ಉಚಿತ ತುಪ್ಪ: ಅಖಿಲೇಶ್ ಯಾದವ್ ಭರವಸೆ

ಮೈಸೂರು ಲ್ಯಾಂಪ್ಸ್ ಜಾಗದಲ್ಲಿ ಬೆಂಗಳೂರಿನ ಇತಿಹಾಸ, ರಾಜ್ಯದ ಆಹಾರ ಪದ್ದತಿ ಸೇರಿದಂತೆ ಹಲವಾರು ಐತಿಹಾಸಿಕ ಯೋಜನೆಗಳನ್ನು ಜಾರಿಗೊಳಿಸಲು “ಬೆಂಗಳೂರು ಬೆಳಕು” ಎಂಬ ಕಾರ್ಯಕ್ರಮ ರೂಪಿಸಲಾಗಿದೆ. ಈ ಜಾಗದ ಹಸರೀಕರಣ ಹಾಗೂ ವಿವಿಧ ಯೋಜನೆಗಳಿಗಾಗಿ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ 7 ಮಂದಿ ಐಎಎಸ್ ಅಕಾರಿಗಳು, 5 ಖಾಸಗಿ ವ್ಯಕ್ತಿಗಳನ್ನು ಒಳಗೊಂಡ ಟ್ರಸ್ಟ್ ರಚಿಸಲಾಗಿದೆ. ಯಾವುದೇ ಕಾರಣಕ್ಕೂ ಜಾಗವನ್ನು ಪರಭಾರೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

TAGGED:bengaluruIndustrial AreaKIADBMurugesh niraniಕೆಐಎಡಿಬಿಕೈಗಾರಿಕಾ ಪ್ರದೇಶಬೆಂಗಳೂರುಮುರುಗೇಶ್ ನಿರಾಣಿ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Pakistan PM Shehbaz Sharif gets trolled over post on US Iran ceasefire Donald Trump
Latest

ಅಮೆರಿಕ – ಇರಾನ್‌ ಮಧ್ಯೆ 2ನೇ ಹಂತದ ಮಾತುಕತೆಗೆ ಪ್ರಸ್ತಾಪ – ಮುಖಭಂಗ ತಪ್ಪಿಸಲು ಪಾಕ್‌ ಶತಪ್ರಯತ್ನ

Public TV
By Public TV
44 minutes ago
Donald Trump Strait Of Hormuz
Latest

ಹಾರ್ಮುಜ್‌ಗೆ ಬಂದ್ರೆ ಕತೆ ಮುಗಿಸಿಬಿಡ್ತೀನಿ – ದಿಗ್ಬಂಧನ ಮುರಿಯುವ ಯಾವ್ದೇ ಪ್ರಯತ್ನ ಬೇಡ: ಟ್ರಂಪ್‌ ಬಿಗ್‌ ವಾರ್ನಿಂಗ್‌

Public TV
By Public TV
1 hour ago
Modi
Districts

ನಾಳೆ ಮತ್ತೆ ಮಂಡ್ಯಕ್ಕೆ ಮೋದಿ ಭೇಟಿ – ಪ್ರಧಾನಿಗಳ ಸ್ವಾಗತಕ್ಕೆ ಮೈಸೂರು ಪೇಟ; ಏನಿದರ ವಿಶೇಷ?

Public TV
By Public TV
1 hour ago
Koppal Love Jihad
Crime

ಕೊಪ್ಪಳ ಲವ್ ಜಿಹಾದ್‌ಗೆ ಟ್ವಿಸ್ಟ್ – ಆರೋಪಿಗೆ ಅಂತರಾಜ್ಯ ಲಿಂಕ್, ಹೈಫೈ ಜೀವನಕ್ಕಾಗಿ ಬುಕ್ಕಿಗಳಿಂದ ಆರ್ಥಿಕ ಸಹಾಯ

Public TV
By Public TV
2 hours ago
ICC Womens t20 world cup 2026
Cricket

Women’s T20 WC 2026 | ಈವರೆಗಿನ ಗರಿಷ್ಠ 81.8 ಕೋಟಿ ಬಹುಮಾನ ಮೊತ್ತ ಘೋಷಿಸಿದ ICC

Public TV
By Public TV
2 hours ago
APMC 3
Bengaluru City

AMPC ಮಳಿಗೆ ಹಸ್ತಾಂತರದಲ್ಲಿ ಭಾರೀ ಗೋಲ್ಮಾಲ್‌ ಆರೋಪ – ಸಚಿವ ಶಿವಾನಂದ ಪಾಟೀಲ್ ವಿರುದ್ಧ ಲೋಕಾಯುಕ್ತಕ್ಕೆ ದೂರು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?