Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಿಕ್ಷಣ ಸಂಸ್ಥೆಗಳ ಬಳಿ ಪೊಲೀಸರಿಗೇನು ಕೆಲಸ, ಮಕ್ಕಳನ್ನು ಹೆದರಿಸೋದ್ಯಾಕೆ: ಸಿದ್ದರಾಮಯ್ಯ ಪ್ರಶ್ನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಶಿಕ್ಷಣ ಸಂಸ್ಥೆಗಳ ಬಳಿ ಪೊಲೀಸರಿಗೇನು ಕೆಲಸ, ಮಕ್ಕಳನ್ನು ಹೆದರಿಸೋದ್ಯಾಕೆ: ಸಿದ್ದರಾಮಯ್ಯ ಪ್ರಶ್ನೆ

Karnataka

ಶಿಕ್ಷಣ ಸಂಸ್ಥೆಗಳ ಬಳಿ ಪೊಲೀಸರಿಗೇನು ಕೆಲಸ, ಮಕ್ಕಳನ್ನು ಹೆದರಿಸೋದ್ಯಾಕೆ: ಸಿದ್ದರಾಮಯ್ಯ ಪ್ರಶ್ನೆ

Public TV
Last updated: February 18, 2022 10:59 pm
Public TV
Share
3 Min Read
siddaramaiah 6
SHARE

ಬೆಂಗಳೂರು: ಶಿಕ್ಷಣ ಸಂಸ್ಥೆಗಳ ಬಳಿ ಪೊಲೀಸರಿಗೇನು ಕೆಲಸ. ಪೊಲೀಸರ ಮೂಲಕ ಚಿಕ್ಕ ಮಕ್ಕಳನ್ನು ಹೆದರಿಸುವುದು ಯಾಕೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜೊತೆ ಜಂಟಿ ಸುದ್ದಿಗೋಷ್ಠಿ ನಡೆಸಿದ ಅವರು, ಕೇಸ್, ಹಾಕ್ತೀವಿ, ಅರೆಸ್ಟ್ ಮಾಡ್ತೀವಿ ಎಂಬ ಚಿಕ್ಕ ಮಕ್ಕಳನ್ನು ಹೆದರಿಸೋದು ಯಾಕೆ? ಇದೇನು ಪ್ರಜಾಪ್ರಭುತ್ವವೋ ಅಥವಾ ಸರ್ವಾಧಿಕಾರವೋ? ಸರ್ಕಾರವೇ ಇದನ್ನು ಇತ್ಯರ್ಥ ಮಾಡಬಹುದಿತ್ತು, ನ್ಯಾಯಾಲಯದ ಮೆಟ್ಟಿಲು ಹತ್ತಲು ಅವಕಾಶವೇ ಕೊಡಬಾರದಿತ್ತು. ಸರ್ಕಾರ ಮುಸ್ಲಿಂ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿತಗೊಳಿಸುವ ದುರುದ್ದೇಶದಿಂದ ವಿವಾದದ ಆರಂಭದಲ್ಲೇ ಅಲಕ್ಷ್ಯ ತೋರಿದ ಕಾರಣಕ್ಕೆ ಇಂದು ದೊಡ್ಡದಾಗಿದೆ. ವಿದ್ಯಾರ್ಥಿಗಳು ಸಮವಸ್ತ್ರ ವಿರೋಧಿಸಿಲ್ಲ. ಸಮವಸ್ತ್ರದೊಂದಿಗೆ ಮೊದಲಿನಿಂದಲೂ ಹಿಜಬ್ ಧರಿಸುತ್ತಿದ್ದಾರೆ. ಅದಕ್ಕೆ ಅವಕಾಶ ಕೊಡಿ ಎಂದು ಕೇಳುತ್ತಿದ್ದಾರೆ. ವಿದ್ಯಾರ್ಥಿಗಳ ಮೇಲೆ ಎಫ್‌ಐಆರ್ ದಾಖಲು ಮಾಡುತ್ತಿರುವುದು ತಪ್ಪು. ಇದಕ್ಕೆಲ್ಲ ಸರ್ಕಾರವೇ ಕಾರಣ ಎಂದು ಆರೋಪಿಸಿದರು. ಇದನ್ನೂ ಓದಿ: ವಿದ್ಯಾರ್ಥಿನಿಗೆ ಶರ್ಟ್ ಬಿಚ್ಚಿಕೊಡಲು ಮುಂದಾದ ಕಾಫಿನಾಡಿನ ಸರ್ಕಲ್ ಇನ್ಸ್‌ಪೆಕ್ಟರ್

CKM POLICE 4

ಸಂಘ ಪರಿವಾರದವರು ಅನಗತ್ಯವಾಗಿ ಹಿಜಬ್ ವಿವಾದವನ್ನು ಹುಟ್ಟುಹಾಕಿದ್ದಾರೆ. ಹಿಜಬ್ ಧರಿಸುವುದು ನಿನ್ನೆ ಮೊನ್ನೆ ಆರಂಭವಾದುದ್ದಲ್ಲ, ಬಹಳ ವರ್ಷಗಳಿಂದ ನಡೆದುಕೊಂಡು ಬಂದಿದೆ. ಕೆಲವರು ಧರಿಸುತ್ತಾರೆ, ಕೆಲವರು ಧರಿಸಲ್ಲ. ಅದು ಮುಸ್ಲಿಂ ವಿದ್ಯಾರ್ಥಿಗಳ ವೈಯಕ್ತಿಕ ಆಯ್ಕೆ. ಹಿಜಬ್ ಧರಿಸುವುದರಿಂದ ಇತರರಿಗೆ ಯಾವ ತೊಂದರೆ ಕೂಡ ಆಗಲ್ಲ. ಈ ವಿಚಾರ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ, ನ್ಯಾಯಾಲಯ ಇದನ್ನು ಗಂಭೀರವಾಗಿ ಪರಿಗಣಿಸಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಧರ್ಮದ ಸಂಪ್ರದಾಯದ ಪ್ರಕಾರ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್, ಬೌದ್ಧರು, ಜೈನರು ತಮ್ಮ ಧಾರ್ಮಿಕ ನಂಬಿಕೆಗಳನ್ನು ಆಚರಿಸಿಕೊಂಡು ಬರುತ್ತಿದ್ದಾರೆ. ಈವರೆಗೆ ಯಾವ ತಕರಾರು ಇರಲಿಲ್ಲ. ಇದಕ್ಕೆ ಸಂವಿಧಾನ ಕೂಡ ಅವಕಾಶ ನೀಡಿದೆ. ಇದು ವ್ಯಕ್ತಿಯ ಮೂಲಭೂತ ಹಕ್ಕಾಗಿದೆ. ಇದಕ್ಕೆ ಯಾರೂ ಅಡ್ಡಿಪಡಿಸಬಾರದು. ಮುಸ್ಲಿಮರು ಇತ್ತೀಚೆಗೆ ಶಿಕ್ಷಣದ ಕಡೆಗೆ ಒಲವು ತೋರಿ ಶಾಲಾ ಕಾಲೇಜಿಗೆ ಬರುತ್ತಿದ್ದಾರೆ. ಮೊದಲೆಲ್ಲ ಮುಸ್ಲಿಂ ಹೆಣ್ಣು ಮಕ್ಕಳು ಶಿಕ್ಷಣ ಪಡೆಯುವ ಪ್ರಮಾಣ ಕಡಿಮೆಯಿತ್ತು, ಸಂಘ ಪರಿವಾರದವರು ಹಿಜಬ್ ವಿವಾದ ಮಾಡಿ ಮುಸ್ಲಿಂ ಸಮುದಾಯದ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿತರಾಗಿಸುವ ಹುನ್ನಾರ ಮಾಡಿದ್ದಾರೆ. ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಯಾರಿಗೂ ಈ ರೀತಿ ಮಾಡಬಾರದು, ಶಿಕ್ಷಣ ಮೂಲಭೂತ ಹಕ್ಕಾಗಿದೆ. ಮನಮೋಹನ್ ಸಿಂಗ್ ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆ ತಂದಿತ್ತು. ಆ ಮೂಲಕ ಪ್ರತಿಯೊಬ್ಬರಿಗೂ ಶಿಕ್ಷಣದ ಅವಕಾಶ ನೀಡಿದೆ ಎಂದರು. ಇದನ್ನೂ ಓದಿ: ಸಮವಸ್ತ್ರ ಜಾರಿ ಸಿ.ಡಿ.ಸಿ ನಿರ್ಧಾರ ಅಂದ್ರು ಎಜಿ- ಸೋಮವಾರ ಹೈಕೋರ್ಟ್‍ಗೆ ಮಧ್ಯಂತರ ಅರ್ಜಿ

hijab Empress College

ಹಿಜಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ನಲ್ಲಿ ಮಧ್ಯಂತರ ತೀರ್ಪು ಬಂದಿದೆ. ಶಾಲಾಭಿವೃದ್ಧಿ ಸಮಿತಿ ಇರುವ ಶಾಲೆಗಳಲ್ಲಿ ಅವರು ಒಂದು ಸಮವಸ್ತ್ರ ನೀತಿ ರೂಪಿಸಿದ್ದರೆ ಅಲ್ಲಿ ಮಾತ್ರ ಈ ಆದೇಶ ಅನ್ವಯವಾಗುತ್ತೆ ಎಂದು ಹೈಕೋರ್ಟ್ ತೀರ್ಪಿನಲ್ಲಿ ಹೇಳಿದೆ. ಎಲ್ಲರಿಗೂ ಇದು ಅನ್ವಯವಾಗಲ್ಲ. ಚಾಮರಾಜನಗರದಲ್ಲಿ ಸಚಿವ ಅಶ್ವಥ್ ನಾರಾಯಣ ಅವರು ಈ ಸಮವಸ್ತ್ರ ನೀತಿ ಪದವಿ ಕಾಲೇಜುಗಳಿಗೆ ಅನ್ವಯವಾಗಲ್ಲ ಎಂದು ಹೇಳಿದ್ದಾರೆ. ಅಲ್ಪಸಂಖ್ಯಾತ ಕಲ್ಯಾಣ ಮತ್ತು ವಕ್ಫ್ ಇಲಾಖೆಯ ಕಾರ್ಯದರ್ಶಿ ಮಣಿವಣ್ಣನ್ ಎಂಬುವವರು ಮೊನ್ನೆ 16 ನೇ ತಾರೀಖು ಸುತ್ತೋಲೆ ಹೊರಡಿಸಿದ್ದು, ಅದರಲ್ಲಿ ಹೈಕೋರ್ಟ್ ಆದೇಶವನ್ನು ಉಲ್ಲೇಖಿಸಿ, ಮೇಲ್ಕಂಡ ಆದೇಶವು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಅಧೀನದಲ್ಲಿನ ವಸತಿ ಶಾಲಾ ಕಾಲೇಜುಗಳು, ಮೌಲಾನಾ ಆಜಾದ್ ಮಾದರಿ ಶಾಲೆಗಳು (ಆಂಗ್ಲ ಮಾಧ್ಯಮ) ಶಾಲೆಗಳಿಗೂ ಅನ್ವಯವಾಗುತ್ತದೆ ಎಂದಿದ್ದಾರೆ. ಮೊದಲನೆಯದಾಗಿ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಲ್ಲಿ ಶಾಲಾಭಿವೃದ್ಧಿ ಸಮಿತಿಯೇ ಇರುವುದಿಲ್ಲ, ಶಾಲಾಭಿವೃದ್ಧಿ ಕಮಿಟಿ ಇಲ್ಲದಿದ್ದಾಗ ಸಮವಸ್ತ್ರ ನೀತಿ ರೂಪಿಸುವುದು ಯಾರು? ಹೀಗಿದ್ದಾಗ ನ್ಯಾಯಾಲಯದ ಆದೇಶ ಪಾಲನೆ ಎಲ್ಲಿ ಸಾಧ್ಯ? ಈ ಸುತ್ತೋಲೆ ಸಂಪೂರ್ಣ ನ್ಯಾಯಾಲಯದ ಆದೇಶ ಉಲ್ಲಂಘನೆಯಾಗುತ್ತದೆ ಎಂದು ತಿಳಿಸಿದರು.

TAGGED:bengaluruHijabpolicesiddaramaiahಪೊಲೀಸ್ಬೆಂಗಳೂರುಸಿದ್ದರಾಮಯ್ಯಹಿಜಬ್
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

police rape accused
Crime

ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪೊಲೀಸ್ ಅಧಿಕಾರಿಗೆ 20 ವರ್ಷ ಜೈಲು ಶಿಕ್ಷೆ

Public TV
By Public TV
3 minutes ago
DK Shivakumar
Bengaluru City

ದೆಹಲಿ ನಾಯಕರ ಸೂಚನೆ ಮೇರೆಗೆ ಕ್ರಮ, ವೈಯಕ್ತಿಕ ವಿಚಾರ ಏನಿಲ್ಲ: ಡಿಕೆಶಿ

Public TV
By Public TV
23 minutes ago
Vachanand Shri
Davanagere

`ಮಸಾಜ್ ಪ್ರಿಯ’ ವಚನಾನಂದ ಶ್ರೀಗಳಿಗೆ ಹೆಚ್ಚಿದ ಸಂಕಷ್ಟ – ಮಕ್ಕಳ ಕಲ್ಯಾಣ ಸಮಿತಿಗೆ ಹಾಸ್ಟೆಲ್ ವಿದ್ಯಾರ್ಥಿಗಳಿಂದ್ಲೇ ದೂರು

Public TV
By Public TV
52 minutes ago
Nida Khan TCS
Crime

ನಾನು ತುಂಬು ಗರ್ಭಿಣಿ: ಜಾಮೀನಿಗೆ ಕೋರ್ಟ್‌ ಮೊರೆ ಹೋದ ಟಿಸಿಎಸ್‌ ‘ಮತಾಂತರ’ ಆರೋಪಿ ನಿದಾ ಖಾನ್‌

Public TV
By Public TV
2 hours ago
Harivansh
Latest

ರಾಜ್ಯಸಭೆಯ ಉಪಾಧ್ಯಕ್ಷರಾಗಿ ಹರಿವಂಶ್ ಸತತ 3ನೇ ಬಾರಿಗೆ ಅವಿರೋಧ ಪುನರಾಯ್ಕೆ

Public TV
By Public TV
2 hours ago
CRIME
Bengaluru City

ವಾಸ್ತು ಹೆಸರಲ್ಲಿ ಗರ್ಭಿಣಿಗೆ ಲೈಂಗಿಕ ದೌರ್ಜನ್ಯ  – ಇತ್ತ ಬಟ್ಟೆ ಬಿಚ್ಕೊಂಡು ನಿನ್ಮೇಲೆ ಕೇಸ್ ಹಾಕ್ತೀನಿ, ಮಹಿಳೆಯಿಂದ್ಲೇ ಗುರೂಜಿಗೆ ಬೆದರಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?