Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಮೋದಿಯನ್ನು ಹತ್ಯೆ ಮಾಡಲೆಂದೇ ಉಗ್ರರಿಂದ ಆಸ್ಪತ್ರೆಯಲ್ಲಿ ಬಾಂಬ್‌ ಸ್ಫೋಟ!

Public TV
Last updated: February 19, 2022 8:39 am
Public TV
Share
2 Min Read
Narendra Modi
SHARE

– ವಿಶೇಷ ನ್ಯಾಯಾಲಯದಿಂದ ತೀರ್ಪು ಪ್ರಕಟ
– 38 ಮಂದಿಗೆ ಗಲ್ಲು ಶಿಕ್ಷೆ, 11 ಮಂದಿಗೆ ಜೀವಾವಧಿ ಶಿಕ್ಷೆ

ಅಹಮದಾಬಾದ್‌: ಅಂದಿನ ಗುಜರಾತ್‌ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡಲೆಂದೇ ಉಗ್ರರು ಆಸ್ಪತ್ರೆಯಲ್ಲಿ ಬಾಂಬ್‌ ಸ್ಫೋಟ ಮಾಡಿದ್ದರು ಎಂಬ ವಿಚಾರ ಕೋರ್ಟ್‌ ತೀರ್ಪಿನಲ್ಲಿ ಪ್ರಸ್ತಾಪವಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡಲು ಉಗ್ರರು ಸಂಚು ರೂಪಿಸಿದ್ದರು. ಇತರೇ ಸ್ಥಳಗಳಲ್ಲಿ ನಡೆದ ಸ್ಫೋಟದಲ್ಲಿ ಮೃತಪಟ್ಟವರನ್ನು ಮತ್ತು ಗಾಯಗೊಂಡವರನ್ನು ನೋಡಲು ಮೋದಿ ಆಸ್ಪತ್ರೆಗೆ ಭೇಟಿ ನೀಡಿಯೇ ನೀಡುತ್ತಾರೆ ಎನ್ನುವುದು ಉಗ್ರರಿಗೆ ಗೊತ್ತಿತ್ತು. ಈ ಕಾರಣಕ್ಕೆ ಮೋದಿ ಹತ್ಯೆಗೆ ಆಸ್ಪತ್ರೆಗಳೇ ಸೂಕ್ತ ಸ್ಥಾನ ಎಂಬ ನಿರ್ಧಾರಕ್ಕೆ ಬಂದಿದ್ದ ಉಗ್ರರು ಆಸ್ಪತ್ರೆಗಳನ್ನು ಗುರಿಯಾಗಿಸಿ ಕೃತ್ಯ ಎಸಗಿದ್ದರು ಎಂಬ ಅಂಶ ತೀರ್ಪಿನಲ್ಲಿ ಉಲ್ಲೇಖವಾಗಿದೆ ಎಂದು ಹೇಳಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ 164 ಮಂದಿ ಹೇಳಿಕೆ ನೀಡಿದ್ದು, ಇಂಡಿಯನ್‌ ಮುಜಾಹಿದ್ದೀನ್‌ ಸಂಘಟನೆಯನ್ನು ನಿಷೇಧ ಮಾಡಿದ್ದಕ್ಕೆ ಸಾಮೂಹಿಕ ಹತ್ಯೆ ಎಸಗಲು ಸಂಚು ರೂಪಿಸಿದ್ದರು ಎಂದು ವರದಿಯಾಗಿದೆ.  ಇದನ್ನೂ ಓದಿ: ಉಗ್ರ ಸಂಘಟನೆಗೆ ರಹಸ್ಯ ಮಾಹಿತಿ ಸೋರಿಕೆ – IPS ಅಧಿಕಾರಿ ಅರೆಸ್ಟ್

bomb blast

38 ಉಗ್ರರಿಗೆ ಗಲ್ಲು ಶಿಕ್ಷೆ:
ಗುಜರಾತಿನ ಅಹಮದಾಬಾದ್‌ನಲ್ಲಿ ಸರಣಿ ಬಾಂಬ್‌ ಸ್ಫೋಟ ನಡೆಸಿ 56 ಮಂದಿಯನ್ನು ಬಲಿ ಪಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂಡಿಯನ್‌ ಮುಜಾಹಿದೀನ್‌ ಉಗ್ರ ಸಂಘಟನೆಗೆ ಸೇರಿದ 38 ಮಂದಿಗೆ ವಿಶೇಷ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದರೆ 11 ಮಂದಿಗೆ ಜೀವಾವಧಿ ಶಿಕ್ಷೆ ನೀಡಿದೆ.

ಅಪರೂಪದಲ್ಲಿ ಅಪರೂಪದ ಪ್ರಕರಣ ಎಂದು ಬಣ್ಣಿಸಿರುವ ಕೋರ್ಟ್‌ ತನ್ನ 7 ಸಾವಿರ ಪುಟಗಳ ತೀರ್ಪಿನಲ್ಲಿ 38 ಜನರನ್ನು ಸಾಯುವವರೆಗೂ ನೇಣಿಗೇರಿಸಬೇಕು ಮತ್ತು 11 ಜನರು ಅಜೀವ ಜೀವಾವಧಿ ಶಿಕ್ಷೆ ಅನುಭವಿಸಬೇಕು ಎಂದು ಹೇಳಿದೆ. ಇದನ್ನೂ ಓದಿ: ಇನ್‍ಸ್ಟಾಗ್ರಾಮ್‍ನಲ್ಲಿ ಹಿಜಬ್ ತೆಗೆದು ರೀಲ್ಸ್ ಹಾಕ್ತಾರೆ, ಈಗ ತೆಗೆಯೋಕಾಗಲ್ವಾ..?- ವಿದ್ಯಾರ್ಥಿಗಳು

48 ಮಂದಿಗೆ ಒಟ್ಟು 2.85 ಲಕ್ಷ ರೂ. ಮತ್ತು ಓರ್ವ ದೋಷಿಗೆ 2.88 ಲಕ್ಷ ರೂ. ಘಟನೆಯಲ್ಲಿ ಮಡಿದವರಿಗೆ ತಲಾ 1 ಲಕ್ಷ ರೂ., ಗಂಭೀರವಾಗಿ ಗಾಯಗೊಂಡವರಿಗೆ ತಲಾ 50 ಸಾವಿರ ರೂ. ಮತ್ತು ಸಾಮಾನ್ಯ ಗಾಯಕ್ಕೆ ತುತ್ತಾದವರಿಗೆ ತಲಾ 25 ಸಾವಿರ ರೂ. ಪರಿಹಾರವನ್ನು ನ್ಯಾಯಾಲಯ ಪ್ರಕಟಿಸಿದೆ.

court order law

ಅಹಮದಾಬಾದ್‌ ಕ್ರೈಂ ಬ್ರಾಂಚ್‌ನ ಅಧಿಕಾರಿಗಳ ತಂಡ ಪ್ರಕರಣದ ಕುರಿತು ವಿಸ್ತೃತ ತನಿಖೆ ನಡೆಸಿ ಚಾರ್ಜ್‌ಶೀಟ್‌ ಸಲ್ಲಿಸಿತ್ತು ತರದ ದಿನಗಳಲ್ಲಿ ಒಟ್ಟು 9 ನ್ಯಾಯಾಧೀಶರು ಪ್ರಕರಣದ ವಿಚಾರಣೆ ನಡೆಸಿದ್ದರು. ಈ ಪೈಕಿ 2017ರಲ್ಲಿ ವಿಚಾರಣೆ ಹೊಣೆ ವಹಿಸಿಕೊಂಡ ನ್ಯಾ.ಎ.ಆರ್‌.ಪಟೇಲ್‌ ಇದೀಗ ತೀರ್ಪು ಪ್ರಕಟಿಸಿದ್ದಾರೆ.

ಜುಲೈ 26, 2008 ರಂದು ಅಹಮದಾಬಾದ್‍ನಲ್ಲಿರುವ ಸಿವಿಲ್ ಆಸ್ಪತ್ರೆ, ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಷನ್ ನಡೆಸುತ್ತಿರುವ ಎಲ್‍ಜಿ ಆಸ್ಪತ್ರೆ, ಬಸ್‍ಗಳು, ನಿಲ್ಲಿಸಿದ ಬೈಸಿಕಲ್‍ಗಳು, ಕಾರುಗಳು ಮತ್ತು ಇತರ ಸ್ಥಳಗಳು ಸೇರಿದಂತೆ ವಿವಿಧ ಸ್ಥಳಗಳಲ್ಲಿ 22 ಬಾಂಬ್‍ಗಳನ್ನು ಸ್ಫೋಟಿಸಲಾಗಿತ್ತು. ಈ ಘಟನೆಯಲ್ಲಿ 56 ಜನರು ಸಾವನ್ನಪ್ಪಿದರು. ಸುಮಾರು 200 ಮಂದಿ ಗಾಯಗೊಂಡಿದ್ದರು. ಕೆಲವು ಮಾಧ್ಯಮ ಸಂಸ್ಥೆಗಳಿಗೆ ಕಳುಹಿಸಲಾದ ಇಮೇಲ್‍ಗಳಲ್ಲಿ, ಇಂಡಿಯನ್ ಮುಜಾಹಿದೀನ್ (ಐಎಂ) ಸಂಘಟನೆಯು ಈ ದಾಳಿಯ ಹೊಣೆಯನ್ನು ಹೊತ್ತುಕೊಂಡಿತ್ತು. 2002ರ ಗೋಧ್ರೋತ್ತರ ದಂಗೆಗೆ ಪ್ರತಿಯಾಗಿ ಈ ದಾಳಿಯನ್ನು ನಡೆಸಿದ್ದೇವೆ ಎಂದು ದೋಷಿಗಳು ವಿಚಾರಣೆ ವೇಳೆ ಹೇಳಿಕೊಂಡಿದ್ದರು.

TAGGED:AhmedabadAhmedabad Blastbjpnarendra modiಅಹಮದಾಬಾದ್‌ ಸ್ಫೋಟನರೇಂದ್ರ ಮೋದಿಬಾಂಬ್ ಸ್ಫೋಟ
Share This Article
Facebook Whatsapp Whatsapp Telegram

Cinema Updates

Mangli 2
ಬರ್ತ್‌ಡೇ ಪಾರ್ಟಿಯಲ್ಲಿ ಇದ್ದಿದ್ದು ಬರೀ ಲೋಕಲ್‌ ಡ್ರಿಂಕ್ಸ್‌ ಮಾತ್ರ – ಮಂಗ್ಲಿ ಸ್ಪಷ್ಟನೆ
1 hour ago
Singer Mangli
ಮಂಗ್ಲಿ ಬರ್ತ್‍ಡೇ ಪಾರ್ಟಿ ಮೇಲೆ ದಾಳಿ – ಮಾದಕ ವಸ್ತು ಪತ್ತೆ, ಪೊಲೀಸರಿಗೆ ಆವಾಜ್ ಹಾಕಿದ ಗಾಯಕಿ!
17 hours ago
Katrina Kaif
ಭಾರತದ ಜೊತೆ ಸಂಘರ್ಷ ನಡೆಸಿದ್ದ ಮಾಲ್ಡೀವ್ಸ್‌ ಪ್ರವಾಸೋದ್ಯಮಕ್ಕೆ ಕತ್ರಿನಾ ಕೈಫ್‌ ರಾಯಭಾರಿ
1 day ago
ZEE Kannada 2
ಹೊಸ ಅಧ್ಯಾಯಕ್ಕೆ ʻಜೀ ಕನ್ನಡʼ ಮುನ್ನುಡಿ…
2 days ago

You Might Also Like

Siddaramaiah and Chandrababu Naidu
Bengaluru City

ರಾಜ್ಯದ ತೋತಾಪುರಿ ಮಾವು ಬೆಲೆ ಕುಸಿತ – ಆಂಧ್ರ ಸಿಎಂಗೆ ಸಿದ್ದರಾಮಯ್ಯ ಪತ್ರ

Public TV
By Public TV
12 minutes ago
USA Pakistan
Latest

ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಪಾಕ್‌ ಮಹಾನ್‌ ಪಾಲುದಾರ; ಪಾಕ್‌ ಹೊಗಳಿದ ಅಮೆರಿಕ

Public TV
By Public TV
9 minutes ago
sambhajinagar
Latest

ಮಹಾರಾಷ್ಟ್ರ | ಭಾರೀ ಮಳೆ ಗಾಳಿಗೆ ಪ್ರವೇಶ ದ್ವಾರ ಕುಸಿದು ಮೂವರು ಬಲಿ

Public TV
By Public TV
58 minutes ago
Weather 1
Bengaluru City

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ – ಜೂ.15 ರವರೆಗೆ ಭಾರೀ ಮಳೆ ಮುನ್ಸೂಚನೆ

Public TV
By Public TV
1 hour ago
Bellary ED Raid
Bellary

ಗಣಿ ನಾಡಲ್ಲಿ ‘ಕೈ’ ನಾಯಕರ ಬೆವರಿಳಿಸಿದ ಇಡಿ – ಮಹತ್ವದ ದಾಖಲೆಗಳು ವಶಕ್ಕೆ

Public TV
By Public TV
1 hour ago
KRS Toll Price Hike
Districts

ಕೆಆರ್‌ಎಸ್ ವೀಕ್ಷಣೆಗೆ ಬರುವ ಪ್ರವಾಸಿಗರ ಜೇಬಿಗೆ ಕತ್ತರಿ – 500 ಮೀ. ಸೇತುವೆ ದಾಟಲು 200 ರೂ.

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?