Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತುಂಗಾಭದ್ರಾ ಆರತಿಯಿಂದ ಹರಿಹರದ ಗತವೈಭವ ಮರಳಿ ಪಡೆಯುವ ಗುರಿ: ವಚನಾನಂದ ಸ್ವಾಮೀಜಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ತುಂಗಾಭದ್ರಾ ಆರತಿಯಿಂದ ಹರಿಹರದ ಗತವೈಭವ ಮರಳಿ ಪಡೆಯುವ ಗುರಿ: ವಚನಾನಂದ ಸ್ವಾಮೀಜಿ

Bengaluru City

ತುಂಗಾಭದ್ರಾ ಆರತಿಯಿಂದ ಹರಿಹರದ ಗತವೈಭವ ಮರಳಿ ಪಡೆಯುವ ಗುರಿ: ವಚನಾನಂದ ಸ್ವಾಮೀಜಿ

Public TV
Last updated: February 19, 2022 4:08 pm
Public TV
Share
3 Min Read
Vachanananda Swamiji Tunganadi
SHARE

– ಹರಿಹರ ನಗರದ ಸರ್ವತೋಮುಖ ಅಭಿವೃದ್ದಿಯ ಗುರಿ

ಬೆಂಗಳೂರು: ಹರಿಹರದ ಗತವೈಭವವನ್ನು ಮರಳಿ ಪಡೆಯುವ ಹಾಗೂ ದೇಶದಲ್ಲೇ ಹಿಂದೂಗಳ ಪ್ರಮುಖ ಯಾತ್ರಾಸ್ಥಳವನ್ನಾಗಿಸುವ ಗುರಿಯನ್ನು ಹೊಂದಿದ್ದೇವೆ ಎಂದು ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಜಗದ್ಗುರು ಶ್ರೀ ಶ್ರೀ ಶ್ರೀ ವಚನಾನಂದ ಮಹಾಸ್ವಾಮೀಜಿಗಳು ಹೇಳಿದರು.

ಇಂದು ಬೆಂಗಳೂರಿನ ಶ್ವಾಸಯೋಗ ಕೇಂದ್ರದಲ್ಲಿ ಫೆಬ್ರವರಿ 20 2022 ರಂದು ಸಿಎಂಗಳಿಂದ ನಡೆಯಲಿರುವ 108 ತುಂಗಾಭದ್ರಾ ಆರತಿ ಮಂಟಪಗಳ ‘ಶಿಲಾನ್ಯಾಸ ಕಾರ್ಯಕ್ರಮ’ದ ಮಾಹಿತಿ ಹಾಗೂ ಕಾನ್ಸೆಪ್ಟ್ ವೀಡಿಯೋವನ್ನು ಬಿಡುಗಡೆಗೊಳಿಸಿ ಮಾಧ್ಯಮಗಳೊಂದಿಗೆ ಮಾತನಾಡಿದರು. ಈ ವೇಳೆ ಅವರು, ಉತ್ತರಕ್ಕೆ ಗಂಗೆಯ ರೀತಿ ದಕ್ಷಿಣ ಭಾರತಕ್ಕೆ ತುಂಗಾ ನದಿ ಪವಿತ್ರ ಎನಿಸಿದೆ. ಗಂಗಾ ಸ್ನಾನ-ತುಂಗಾ ಪಾನ ಎನ್ನುವ ಉಕ್ತಿಯೂ ಇದೆ ಎಂದು ಮಾತನಾಡಿದರು.  ಇದನ್ನೂ ಓದಿ:  ನ್ಯಾಯಾಲಯ ಆದೇಶಕ್ಕೆ ಧಾರ್ಮಿಕ ಮುಖಂಡರಿಂದ ಬೆಂಬಲ: ರಾಯಚೂರಿನಲ್ಲಿ ಗಲಾಟೆ ಇಲ್ಲ

Vachanananda Swamiji Tunganadi 2

ಗಂಗಾರತಿಯ ರೀತಿಯಲ್ಲಿಯೇ ತುಂಗಾರತಿಯನ್ನು ಏಕೆ ಆರಂಭಿಸಬಾರದು ಎನ್ನುವ ವಿಷಯ ನಮ್ಮ ಮನಸ್ಸಿಗೆ ಬಂದಿತ್ತು. ಈ ಯೋಚನೆ ಬರುತ್ತಿದ್ದಂತೆ, ಹರಿಹರ ಪಂಚಮಸಾಲಿ ಜಗದ್ಗುರು ಪೀಠದ ಬಳಿಯಿರುವ ತುಂಗಾ ತಟದಲ್ಲಿ ತುಂಗಾರತಿಯನ್ನು ಆರಂಭಿಸಲು ಯೋಚಿಸಿದೆವು. ಜೊತೆಗೆ ಗಂಗೆಯಂತೆ ತುಂಗಾ ನದಿಯನ್ನೂ ಶುಚಿಗೊಳಿಸಬೇಕು ಎನ್ನುವ ಮಹತ್ವಾಕಾಂಕ್ಷೆ ಬಂದಾಗ ಭಕ್ತಗಣದೊಂದಿಗೆ ಸೇರಿ ತುಂಗಾ ನದಿಯನ್ನು ಶುಚಿಗೊಳಿಸುವ, ನಮಾಮಿ ತುಂಗೆ ಯೋಜನೆಗೆ ಚಾಲನೆ ನೀಡಿದೆವು ಎಂದು ವಿವರಿಸಿದರು.

ಪ್ರತಿ ನಿತ್ಯ ಸೂರ್ಯಾಸ್ತವಾದ ನಂತರ ಗಂಗೋತ್ರಿ, ರುದ್ರಪ್ರಯಾಗ ದೇವಪ್ರಯಾಗ, ಋಷಿಕೇಶ, ಹರಿದ್ವಾರ ಸೇರಿದಂತೆ ನೂರಾರು ಪವಿತ್ರ ಗಂಗಾ ತಟಗಳಲ್ಲಿ ಗಂಗಾರತಿ ನಡೆಯುವ ರೀತಿಯಲ್ಲಿಯೇ ನಮ್ಮ ತುಂಗಾ ನದಿ ತಟದಲ್ಲೂ ತುಂಗಾರತಿ ಪ್ರಾರಂಭಿಸಬೇಕು. ಹೇಗೆ ಮನಮೋಹಕ ಗಂಗಾರತಿ ಲಕ್ಷಾಂತರ ಭಕ್ತರನ್ನು ಸೆಳೆಯಿತೋ ಹಾಗೆ, ತುಂಗಾರತಿ ಕೂಡ ನಾಡಿನ ಭಕ್ತರನನು ಸೆಳೆಯಬೇಕು ಎನ್ನುವುದು ನಮ್ಮ ಇಚ್ಛೆಯಾಗಿತ್ತು ಎಂದರು.

ಈ ಹಿನ್ನೆಲೆಯಲ್ಲಿ ನಾವು ಮಾಡಿದ ಮನವಿಗೆ ಸೂಕ್ತವಾಗಿ ಕರ್ನಾಟಕ ಸರ್ಕಾರ ಸ್ಪಂದಿಸಿದೆ. ಅಲ್ಲದೇ, 30 ಕೋಟಿ ರೂಪಾಯಿಗಳ ಅನುದಾನವೂ ನೀಡಿದ್ದು, ಭಾನುವಾರ ಫೆಬ್ರವರಿ 20 2022 ರಂದು ಮುಖ್ಯಮಂತ್ರಿಗಳು ಈ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.

Vachanananda Swamiji Tunganadi 1

ಏನಿದು ‘ತುಂಗಾಭದ್ರಾ ಆರತಿ’ ಯೋಜನೆ?
ಹರಿಹರದ ತುಂಗಭದ್ರಾ ನದಿ ತಟದಲ್ಲಿನ ರಾಘವೇಂದ್ರ ಶ್ರೀಗಳ ದೇವಸ್ಥಾನದಿಂದ ಹರಿಹರೇಶ್ವರ ದೇವಸ್ಥಾನದ ಮಧ್ಯದಲ್ಲಿ ತುಂಗಾ ಮಂಟಪಗಳನ್ನು ನಿರ್ಮಾಣ ಮಾಡುವ ಯೋಜನೆ ಇದಾಗಿದೆ. ಇದಕ್ಕೆ 30 ಕೋಟಿ ರೂ. ಖರ್ಚಾಗಬಹುದೆಂದು ಅಂದಾಜಿಸಲಾಗಿದೆ. 108 ಮಂಟಪ ನಿರ್ಮಾಣ, ಗಂಗಾ ಆರತಿಯಂತೆ ಪ್ರತಿನಿತ್ಯ ತುಂಗಾಭದ್ರಾ ಆರತಿ, ಪೂಜೆ ನಡೆಸುವ ಯೋಜನೆ ಇದಾಗಿದೆ ಎಂದು ವಿವರಿಸಿದರು.

ಉತ್ತರ ಮತ್ತು ದಕ್ಷಿಣ ಕರ್ನಾಟಕ ಒಂದುಗೂಡಿಸುವ ಮಹತ್ವದ ಯೋಜನೆ ಇದಾಗಿರಲಿದೆ. ಇದಕ್ಕೆ ಈಗಾಗಲೇ ಅನುದಾನ ಬಿಡುಗಡೆ ಆಗಿದ್ದು, ಯೋಜನೆಯ ನೀಲೀ ನಕ್ಷೆಯನ್ನು ಅಂತಿಮಗೊಳಿಸಲಾಗಿದೆ. ಅಲ್ಲದೆ, ಫೆಬ್ರವರಿ 20 ರಂದು ಮುಖ್ಯಮಂತ್ರಿಗಳು ಇದಕ್ಕೆ ಚಾಲನೆ ನೀಡಲಿದ್ದಾರೆ ಎಂದು ಹೇಳಿದರು.

ಗತವೈಭವ ಮರಳಿಸುವ ಗುರಿ!
ತುಂಗಾಭದ್ರಾ ಆರತಿಯ ಅನುಷ್ಠಾನದಿಂದ ಹರಿಹರ ನಗರ ಹಾಗೂ ತುಂಗಾಭದ್ರಾ ನದಿ ಹರಿಯುವ ಎಲ್ಲ ಕಡೆಯೂ ಪ್ರವಾಸೋದ್ಯಮ, ಉದ್ಯೋಗಾವಕಾಶ ಹಾಗೂ ಗತವೈಭವವನ್ನು ಮರಳಿಸುವ ಗುರಿಯನ್ನು ನಾವು ಹೊಂದಿದ್ದೇವೆ. ಹೇಗೆ ವಾರಣಾಸಿ ಕಾರಿಡಾರ್‍ನಲ್ಲಿ ಗಂಗಾನದಿ ಹರಿಯುವ ಎಲ್ಲ ಕಡೆಯೂ ಗಂಗಾ ಆರತಿ ನಡೆಯುವಂತೆ ತುಂಗಾಭದ್ರಾ ನದಿ ಹರಿಯುವ ಎಲ್ಲೆಡೆಯೂ ಆರತಿ ಕಾರ್ಯಕ್ರಮ ನಡೆಯಬೇಕು. ಈ ಮೂಲಕ ಜೀವ ನದಿಯನ್ನು ಸ್ವಚ್ಚವಾಗಿಟ್ಟುಕೊಳ್ಳುವ ಹಾಗೂ ಅದರ ಸುತ್ತಮುತ್ತಲಿನ ನಗರಗಳ ಸರ್ವತೋಮುಖ ಅಭಿವೃದ್ದಿಯಾಗುವುದು ನಮ್ಮ ಉದ್ದೇಶ ಮತ್ತು ಗುರಿಯಾಗಿದೆ ಎಂದು ಹೇಳಿದರು. ಇದನ್ನೂ ಓದಿ:  ಪಂಜಾಬ್ ಚುನಾವಣೆಗೂ ಮುನ್ನಾ ದಿನ 12,430 ಹೊಸ ಸ್ಮಾರ್ಟ್ ತರಗತಿ ಉದ್ಘಾಟಿಸಿದ ಕೇಜ್ರಿವಾಲ್

BASAVARJ BOMMAI 2 1

ತುಂಗಾಭದ್ರಾ ನದಿ ಹರಿಯುವ ಎಲ್ಲ ಸ್ಥಳಗಳಲ್ಲಿಯೂ ಕೂಡಾ ನಾವು ಪ್ರವಾಸೋದ್ಯಮ, ಉದ್ಯೋಗಾವಕಾಶ ಹೆಚ್ಚಿಸುವುದು ಮತ್ತು ದೇಶದ ಪ್ರಮುಖ ಹಿಂದೂಯಾತ್ರಾ ಸ್ಥಳಗಳಲ್ಲಿ ಒಂದಾಗಿ ಗುರುತಿಸುವಂತೆ ಮಾಡುವುದು ನಮ್ಮ ಉದ್ದೇಶವಾಗಿದೆ. ಈ ಕಾರ್ಯಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ನಮ್ಮ ಅಭಿನಂದನೆಗಳನ್ನು ತಿಳಿಸಿದರು.

TAGGED:BangalorehariharaTunganadivachanananda swamijiತುಂಗಾನದಿಬೆಂಗಳೂರುವಚನಾನಂದ ಸ್ವಾಮೀಜಿಹರಿಹರ
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Mohamad Safa
Latest

ಇರಾನ್‌ ಮೇಲೆ ಪರಮಾಣು ದಾಳಿಗೆ ಸಿದ್ಧತೆ: ವಿಶ್ವಸಂಸ್ಥೆಯ ರಾಜತಾಂತ್ರಿಕ ರಾಜೀನಾಮೆ

Public TV
By Public TV
59 minutes ago
DAVANAGERE CRIME
Crime

ಹೊನ್ನಾಳಿಯಲ್ಲಿ ಸಿನಿಮೀಯ ರೀತಿಯ ದರೋಡೆ – ಕಾರು ಅಡ್ಡಗಟ್ಟಿ 38 ಲಕ್ಷ ರಾಬರಿ

Public TV
By Public TV
1 hour ago
Vaibhav Sooryavanshi
Cricket

15 ಎಸೆತಗಳಲ್ಲಿ ಫಿಫ್ಟಿ ಹೊಡೆದು 15ನೇ ವರ್ಷದ ಹುಟ್ಟುಹಬ್ಬ ಆಚರಿಸಿದ ಸೂರ್ಯವಂಶಿ – ರಾಯಲ್ಸ್‌ಗೆ ಭರ್ಜರಿ ಜಯ

Public TV
By Public TV
1 hour ago
Medical student commits suicide by jumping from apartment in Mangaluru
Crime

ಗೆಳತಿಯ ಅಪಾರ್ಟ್‌ಮೆಂಟ್‌ನಿಂದ ಜಿಗಿದು ಮೆಡಿಕಲ್‌ ವಿದ್ಯಾರ್ಥಿ ಆತ್ಮಹತ್ಯೆ

Public TV
By Public TV
2 hours ago
Amit Shah 4
Latest

ಇಂದಿರಾ ಗಾಂಧಿಗೆ ಎಡಪಂಥೀಯ ಗುಂಪುಗಳ ಬೆಂಬಲ, ರಾಹುಲ್‌ ನಕ್ಸಲ್‌ ಬೆಂಬಲಿಗರೊಂದಿಗೆ ವೇದಿಕೆ ಹಂಚಿಕೊಳ್ತಾರೆ: ಅಮಿತ್‌ ಶಾ

Public TV
By Public TV
3 hours ago
Mahavir Jayanti procession Burude case tableau attracts attention Belagavi
Belgaum

ಮಹಾವೀರ ಜಯಂತಿ ಮೆರವಣಿಗೆ – ಗಮನ ಸೆಳೆದ ಬುರುಡೆ ಕೇಸ್‌ ಟ್ಯಾಬ್ಲೋ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?