Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Karnataka

ಹತ್ಯೆ ಅಪರಾಧಿಗಳು ಯಾವುದೇ ಸಂಘಟನೆ ಆಗಿದ್ದರೂ ಗಲ್ಲು ಶಿಕ್ಷೆ ವಿಧಿಸಿ: ಸಿದ್ದರಾಮಯ್ಯ

Public TV
Last updated: February 21, 2022 12:49 pm
Public TV
Share
3 Min Read
Siddaramaiah 1
SHARE

ಬೆಂಗಳೂರು: ಶಿವಮೊಗ್ಗದ ಭಜರಂಗದಳದ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಆಪರಾಧಿಗಳು ಯಾವುದೇ ಸಂಘಟನೆಗೆ ಸೇರಿದ್ದರೂ ಅವರನ್ನು ಸರ್ಕಾರ ಬಂಧಿಸಿ ಗಲ್ಲು ಶಿಕ್ಷೆಯಾಗುವಂತೆ ಕ್ರಮ ಕೈಗೊಳ್ಳಲಿ ಎಂದು ವಿಧಾನಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ವಿಧಾನಸೌಧದ ಬಳಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಈ ಘಟನೆಯನ್ನು ಗಮನಿಸಿದರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದು ಸ್ಪಷ್ಟವಾಗುತ್ತದೆ. ಗೃಹ ಸಚಿವರ ಸ್ವಂತ ಜಿಲ್ಲೆಯಲ್ಲಿಯೇ ಕೊಲೆ ನಡೆದಿದೆ. ಹೀಗಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಕೂಡಲೇ ರಾಜಿನಾಮೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: 2 ವರ್ಷದ ಹಿಂದೆಯೇ 10 ಲಕ್ಷಕ್ಕೆ ಸುಪಾರಿ ಕೊಟ್ಟಿದ್ದರು: ಮೃತನ ಸಂಬಂಧಿ ಹೇಳಿಕೆ

shivamogga 4

ಮಾಧ್ಯಮ ಪ್ರತಿನಿಧಿಗಳಿಗೆ ಸಿದ್ದರಾಮಯ್ಯ ಅವರು ಹೇಳಿದ್ದು: ನಾವು ಅಹಿಂಸೆಯಲ್ಲಿ ನಂಬಿಕೆ ಇಟ್ಟವರು. ಯಾರದ್ದೇ ಕೊಲೆಯಾದರೂ ತಪ್ಪಿತಸ್ಥರಿಗೆ ಕಠಿಣವಾದ ಶಿಕ್ಷೆಯಾಗಬೇಕು. ಹರ್ಷ ಅವರ ಕೊಲೆಯನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಕೊಲೆ ಮಾಡಿದವರಿಗೆ ಗಲ್ಲು ಶಿಕ್ಷೆಯಾಗಬೇಕು.

ಆರೋಪಿಗಳು ಯಾವುದೇ ಸಮುದಾಯ, ಸಂಘಟನೆಗೆ ಸೇರಿದ್ದರೂ ಸರ್ಕಾರ ಕಠಿಣವಾದ ಕ್ರಮ ಕೈಗೊಳ್ಳಬೇಕು. ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಈಶ್ವರಪ್ಪ, ಯುಡಿಯೂರಪ್ಪ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಜಿಲ್ಲೆ ಇದು. ಇದು ಏನನ್ನು ಸೂಚಿಸುತ್ತದೆ. ಕಾನೂನು ಸುವ್ಯವಸ್ಥೆ ರಾಜ್ಯದಲ್ಲಿ ಹಾಳಾಗಿರುವುದಕ್ಕೆ ಇದು ಉದಾಹರಣೆ. ಈಶ್ವರಪ್ಪ, ಆರಗ ಜ್ಞಾನೇಂದ್ರ ಇದಕ್ಕೆ ಜವಾಬ್ದಾರರು.

ಪೊಲೀಸರು ಅಪರಾಧಿಗಳನ್ನು ಮೊದಲು ಬಂಧಿಸಿ ಕಠಿಣವಾದ ತನಿಖೆ ಮಾಡಲಿ. ಬೆಂಗಳೂರಿನಲ್ಲಿ ಕುಳಿತು ಕಾಂಗ್ರೆಸ್ ಅಥವಾ ಯಾರ ಮೇಲೋ ಆರೋಪ ಮಾಡುವುದಲ್ಲ. ಆರೋಪಿಗಳು ಯಾರೇ ಆಗಿದ್ದರೂ ಬಂಧಿಸಿ ಶಿಕ್ಷೆಗೆ ಒಳಪಡಿಸಲಿ. ಗೃಹ ಸಚಿವರು ಶಿವಮೊಗ್ಗ ಜಿಲ್ಲೆಯವರೇ ಆಗಿರುವುದರಿಂದ ಘಟನೆ ಹಿನ್ನೆಲೆಯಲಿ ಅವರು ರಾಜಿನಾಮೆ ಕೊಡಬೇಕು. ಆದರೆ, ಅವರು ಭಂಡರು. ರಾಜಿನಾಮೆ ಕೊಡುವುದಿಲ್ಲ. ನಮ್ಮ ಸರ್ಕಾರ ಇದ್ದಾಗ ಕೆ.ಜೆ. ಜಾರ್ಜ್ ಅವರು ರಾಜಿನಾಮೆ ಕೊಟ್ಟಿದ್ದರು. ರಾಜಿನಾಮೆ ಕೊಡುವುದೇ ಇಲ್ಲ ಎಂದು ಹೇಳಿದರೆ ಜನರೇ ತಕ್ಕ ಪಾಠ ಕಲಿಸುತ್ತಾರೆ. ಇದನ್ನೂ ಓದಿ: ಯುವಕನ ಕೊಲೆ ಪ್ರಕರಣ- ಓರ್ವ ಆರೋಪಿ ವಶಕ್ಕೆ, ನಾಲ್ವರಿಗಾಗಿ ಹುಡುಕಾಟ

shivamogga 3

ಸದನ ನಡೆಸಲು ಕಾಂಗ್ರೆಸ್‍ನವರಿಗೆ ಆಸಕ್ತಿ ಇಲ್ಲ ಎಂಬ ಸಚಿವ ಅಶೋಕ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು, ರಾಷ್ಟ್ರಧ್ವಜಕ್ಕೆ ಅವಮಾನ ಆಗುವಂಥ ಹೇಳಿಕೆ ನೀಡಿದಾಗ ಕಾಂಗ್ರೆಸ್ಸಿಗರು ಪ್ರತಿಭಟನೆ ನಡೆಸುತ್ತಾರೆ ಎಂದು ಬಿಜೆಪಿಯವರಿಗೆ ಗೊತ್ತು. 40 ಪರ್ಸೆಂಟ್ ಕಮಿಷನ್, ಬಿಟ್ ಕಾಯಿನ್ ಹಗರಣದ ಬಗ್ಗೆ ನಾವು ಪ್ರಸ್ತಾಪ ಮಾಡುತ್ತೇವೆ ಎಂಬ ಕಾರಣಕ್ಕೆ ಸದನ ನಡೆಯುವುದು ಅವರಿಗೂ ಇಷ್ಟವಿಲ್ಲ. ಹೀಗಾಗಿಯೇ ಈಶ್ವರಪ್ಪ ಅವರಿಂದ ರಾಜಿನಾಮೆ ಕೊಡಿಸುತ್ತಿಲ್ಲ. ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಸಚಿವ ಅಶೋಕ್ ಅವರು ಸಂಧಾನಕ್ಕೆ ಬಂದಾಗ ಈಶ್ವರಪ್ಪ ಅವರಿಂದ ರಾಜಿನಾಮೆ ಕೊಡಿಸಿ, ನಾವು ಸದನಕ್ಕೆ ಹಾಜರಾಗುತ್ತೇವೆ ಎಂದು ಹೇಳಿದ್ದೆವು.

ದೇಶದ ಗೌರವದ ಸಂಕೇತವಾದ ರಾಷ್ಟ್ರಧ್ವಜಕ್ಕೆ ಈಶ್ವರಪ್ಪ ಅವರು ಅವಮಾನ ಮಾಡಿದಾಗ ಸುಮ್ಮನೆ ಕೂರಲು ಆಗುವುದಿಲ್ಲ ಎಂದಿದ್ದೆವು. ಆದರೆ, ಅದಕ್ಕೆ ಅವರು ಒಪ್ಪಲು ತಯಾರಿಲ್ಲ. ರಾಜ್ಯದ ಜನರ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲು ಬಿಜೆಪಿಯವರಿಗೇ ಕಾಳಜಿ ಇಲ್ಲ. ಈಶ್ವರಪ್ಪ ಅವರು ರಾಜಿನಾಮೆ ಕೊಟ್ಟಿದ್ದರೆ ಅಥವಾ ಅವರನ್ನು ಸಂಪುಟದಿಂದ ವಜಾ ಮಾಡಿದ್ದರೆ ನಾವೇಕೆ ಧರಣಿ ಮಾಡುತ್ತಿದ್ದೆವು. ಜೆಡಿಎಸ್ ಶಾಸಕರು ನಮ್ಮ ವಿರುದ್ಧ ಪ್ರತಿಭಟನೆ ಮಾಡಲಿ, ಇದಕ್ಕೆ ನಮ್ಮ ತಕರಾರು ಇಲ್ಲ. ನಾವು ನಮ್ಮ ಜವಾಬ್ದಾರಿ ನಿರ್ವಹಿಸುತ್ತಿದ್ದೇವೆ. ಅವರಿಗೆ ತೊಂದರೆ ಕೊಡುವುದು ನಮ್ಮ ಉದ್ದೇಶವಲ್ಲ.

ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿರುವಾಗ ಮೌನದಿಂದ ಇರಲು ಸಾಧ್ಯವೇ ? ಒಂದು ವೇಳೆ ಸದನವನ್ನು ಅನಿರ್ದಿಷ್ಟ ಅವಧಿಗೆ ಮುಂದೂಡಿದರೆ ನಾವು ಜನತಾ ನ್ಯಾಯಾಲಯಕ್ಕೆ ಹೋಗುತ್ತೇವೆ ಎಂದು ಸಿದ್ದರಾಮಯ್ಯ ಅವರು ಹೇಳಿದರು.

TAGGED:hindu workerHome Minister araga jnanendraMurdershivamoggasiddaramaiahಕೊಲೆಗೃಹ ಸಚಿವ ಆರಗ ಜ್ಞಾನೇಂದ್ರಶಿವಮೊಗ್ಗಸಿದ್ದರಾಮಯ್ಯಹಿಂದೂ ಕಾರ್ಯಕರ್ತ
Share This Article
Facebook Whatsapp Whatsapp Telegram

Cinema Updates

Sydney Sweeney
ಸ್ನಾನ ಮಾಡಿದ ನೀರನ್ನು ಸೋಪ್ ಮಾಡಿ 8 ಡಾಲರ್‌ಗೆ ಮಾರಾಟ ಮಾಡ್ತಿದ್ದಾಳೆ ಸಿಡ್ನಿ ಸ್ವೀನಿ!
11 hours ago
Darshan
ಕೊನೆಗೂ `ದಾಸ’ನಿಗೆ ವಿದೇಶಕ್ಕೆ ತೆರಳಲು ಅನುಮತಿ ಕೊಟ್ಟ ಕೋರ್ಟ್
13 hours ago
sanjana anand
ರಶ್ಮಿಕಾ, ಶ್ರೀಲೀಲಾ ಬಳಿಕ ತೆಲುಗಿನತ್ತ ಸಂಜನಾ ಆನಂದ್
14 hours ago
dhruva sarja sudeep
ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾದಲ್ಲಿ ಸುದೀಪ್?
14 hours ago

You Might Also Like

Bengaluru Amruthahalli Spa Attack Kavya And Nisha
Bengaluru City

ಅಮೃತಹಳ್ಳಿ ಸ್ಪಾದಲ್ಲಿ ಲೇಡಿ ಗ್ಯಾಂಗ್‌ನಿಂದ ಅಟ್ಯಾಕ್ – ಬಂಧಿತ ಆರೋಪಿ ಕಾವ್ಯಳಿಗಿದೆ ರೌಡಿಸಂ ಲಿಂಕ್

Public TV
By Public TV
10 minutes ago
Submarines
Latest

ಯುದ್ಧ ಹಡಗು, ಜಲಾಂತರ್ಗಾಮಿಗಳ ಸೂಕ್ಷ್ಮ ಮಾಹಿತಿಯನ್ನ ಪಾಕ್‌ಗೆ ರವಾನಿಸ್ತಿದ್ದ ಮೆಕ್ಯಾನಿಕಲ್ ಎಂಜಿನಿಯರ್ ಅರೆಸ್ಟ್‌!

Public TV
By Public TV
16 minutes ago
Hemavati Reservior
Districts

ಹಾಸನದಲ್ಲಿ ಮುಂದುವರಿದ ಮಳೆ – ಹೇಮಾವತಿ ಜಲಾಶಯಕ್ಕೆ 7,992 ಕ್ಯೂಸೆಕ್ ಒಳಹರಿವು

Public TV
By Public TV
48 minutes ago
Mangaluru 3
Dakshina Kannada

ಮೊಂಟೆಪದವು ಗುಡ್ಡಕುಸಿತಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ – ಪಿಡಿಓ ಇತರ ಅಧಿಕಾರಿಗಳ ವಿರುದ್ಧ ದೂರು

Public TV
By Public TV
50 minutes ago
Kodagu 1
Crime

ಕೊಡಗು | ಪೊನ್ನಂಪೇಟೆ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆ

Public TV
By Public TV
1 hour ago
Covid Positive
Bengaluru City

ಬೆಂಗಳೂರಿನಲ್ಲಿ 150ರ ಗಡಿ ದಾಟಿದ ಕೋವಿಡ್ ಆಕ್ಟೀವ್ ಕೇಸ್

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?