ಬೆಳೆಗಳಿಗೆ ನೀರು ಹಾಯಿಸಲು ಹೋದ ರೈತರ ಮೇಲೆ ಕಾಡಾನೆ ದಾಳಿ

Public TV
1 Min Read
Elephant 768x427 1

ಮೈಸೂರು: ಬೆಳೆಗಳಿಗೆ ನೀರು ಹಾಯಿಸಲು ಹೋದ ರೈತರ ಮೇಲೆ ಕಾಡಾನೆಯೊಂದು ದಾಳಿ ಮಾಡಿದ ಘಟನೆ ಎಚ್.ಡಿ.ಕೋಟೆ ತಾಲೂಕಿನ ಅಣ್ಣೂರು ಹೊಸಳ್ಳಿಯಲ್ಲಿ ನಡೆದಿದೆ.

ರವೀಂದ್ರ (55), ರವಿ (45) ಗಾಯಗೊಂಡ ರೈತರು. ಆನೆಯು ಕಳೆದ ರಾತ್ರಿ ಜಮೀನಿನಲ್ಲಿ ಬೆಳೆಗಳಿಗೆ ನೀರಾಯಿಸುತ್ತಿದ್ದಾಗ ದಾಳಿ ನಡೆಸಿದೆ. ಈ ವೇಳೆ ಕಾಡಾನೆ ದಾಳಿಯಿಂದ ರೈತ ರವೀಂದ್ರ ಚೀರಾಟವನ್ನು ಆಲಿಸಿ ಟಾರ್ಚ್ ಬೆಳಕು ನೀಡುತ್ತಿದ್ದಂತೆಯೇ ಆನೆಯು ಸ್ಥಳದಿಂದ ಪಾರಾಗಿದೆ. ಇದನ್ನೂ ಓದಿ: ಕೋರ್ಟ್ ತೀರ್ಪು ಬರೋವರೆಗೂ ಪರೀಕ್ಷೆ ಮುಂದೂಡಿ – ಹಿಜಬ್ ಹೋರಾಟಗಾರ್ತಿಯರು

vlcsnap 2022 02 23 20h14m29s914

ಆನೆ ದಾಳಿಯಿಂದ ಗಾಯಗೊಂಡಿದ್ದ ರೈತರನ್ನು ಗ್ರಾಮಸ್ಥರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅರಣ್ಯ ಅಧಿಕಾರಿಗಳು ಆಸ್ಪತ್ರೆಗೆ ಆಗಮಿಸಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *